Author: kannadanewsnow09

ಬೆಂಗಳೂರು: ನಗರದಲ್ಲಿ ಲಾಲ್ ಬಾಗ್ ಫಲ ಪುಷ್ಪದ ಮಾದರಿಯಲ್ಲೇ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ಧವಾಗಿದೆ. ನವೆಂಬರ್.27ರಿಂದ ಡಿಸೆಂಬರ್.7ರವರೆಗೆ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ. ಜಗದೀಶ್ ಅವರು, ಕಬ್ಬನ್ ಪಾರ್ಕ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವೀಕ್ಷಣೆಗೆ ಲಭ್ಯವಿರಲಿದೆ ಎಂದರು. ಮಕ್ಕಳ ದಿನಾಚರಣೆಯ ಸಲುವಾಗಿ ಮಕ್ಕಳ ಹಬ್ಬದ ರೀತಿಯಲ್ಲಿ ಕಬ್ಬನ್ ಪಾರ್ಕ್ ನಲ್ಲಿ ಪುಷ್ಪ ಪ್ರದರ್ಶನ ನಡೆಯಲಿದೆ. ಪ್ರತಿ ದಿನವೂ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತದೆ. ಹಾಡು, ಸಂಗೀತಗಳನ್ನು ಆಯೋಜಿಸಲಾಗಿದೆ. ಮಕ್ಕಳನ್ನು ಆಕರ್ಷಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. 100 ಮಳಿಗೆಗಳು ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನದಲ್ಲಿ ಇರಲಿವೆ. ಬೀಜ, ಸಸಿಗಳು ದೊರೆಯಲಿವೆ ಎಂದು ಹೇಳಿದರು. ವಿವಿಧ ಬಗೆಯ ಹೂವುಗಳಿಂದ ಹಂಪಿ ರಥ ನಿರ್ಮಿಸಲಾಗುತ್ತಿದೆ. ಪುಷ್ಪ…

Read More

ನವದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಿದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದ್ದರು. ಬಂಧಿತ ಆರೋಪಿಯನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂತಹ ಆರೋಪಿಯನ್ನು 11 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. 2022 ರಿಂದ ತಲೆಮರೆಸಿಕೊಂಡಿರುವ ಅಮೆರಿಕ ಮೂಲದ ಅನ್ಮೋಲ್ ಬಿಷ್ಣೋಯ್, ಜೈಲಿನಲ್ಲಿರುವ ತನ್ನ ಸಹೋದರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಭಯೋತ್ಪಾದನಾ ಸಿಂಡಿಕೇಟ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟ 19 ನೇ ಆರೋಪಿ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿತ್ತು. ಪ್ರಕರಣದ ತನಿಖೆಯಲ್ಲಿ 2020-2023 ರ ಅವಧಿಯಲ್ಲಿ ದೇಶದಲ್ಲಿ ನಡೆದ ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಗೊತ್ತುಪಡಿಸಿದ ವೈಯಕ್ತಿಕ ಭಯೋತ್ಪಾದಕ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾನೆ ಎಂದು ದೃಢಪಟ್ಟ ನಂತರ ಮಾರ್ಚ್ 2023 ರಲ್ಲಿ ಎನ್‌ಐಎ ಅನ್ಮೋಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ ಎಂದು ಅದು ಹೇಳಿತ್ತು. ಇಂದು ಅಮೇರಿಕಾದಿಂದ ಗಡಿಪಾರಾಗಿ ಭಾರತಕ್ಕೆ ಬಂದಂತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್…

Read More

ಬೆಂಗಳೂರು: ನಗರದಲ್ಲಿ ನೀರು ಸೋರಿಕೆ ತಡೆಯೋದಕ್ಕೆ ಜಲಮಂಡಳಿಯಿಂದ ಕ್ರಾಂತಿಕಾರಕ ಹಜ್ಜೆ ಇರಿಸಲಾಗಿದೆ.ಬ್ಲೂ ಪ್ರೋರ್ಸ್ ವಿಶೇಷ ದಳ ಆರಂಭ ಮಾಡಲಾಗುತ್ತಿದೆ. ಅಲ್ಲದೇ ರೋಬೋಟಿಕ್ ಮತ್ತು ಎಐ ತಂತ್ರಜ್ಞಾನ ಅಳವಡಿಸಲು ಮುಂದಾಗಿದೆ. ನೀರಿನ ಸೋರಿಕೆ ತಡೆಯಲು ಮತ್ತು ಅನಧಿಕೃತ ನೀರು ಹಾಗೂ ಒಳಚರಂಡಿ (ಸೀವೇಜ್) ಸಂಪರ್ಕಗಳನ್ನು ಪತ್ತೆ ಹಚ್ಚಲು ಬೆಂಗಳೂರು ಜಲಮಂಡಳಿ ವಿನೂತನ ಕಾರ್ಯಕ್ರಮ ರೂಪಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ತನ್ನ ಪ್ರತಿಯೊಂದು ಉಪವಿಭಾಗಕ್ಕೆ ಒಂದು ವಿಶೇಷ ‘ಬ್ಲೂ ಫೋರ್ಸ್’ ತಂಡವನ್ನು ರಚಿಸಿದೆ. ಈ ವಿಶೇಷ ದಳವು ಈ ವಾರದಿಂದಲೇ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಅಕ್ರಮ ನೀರು ಮತ್ತು ಒಳಚರಂಡಿ ಸಂಪರ್ಕಗಳನ್ನು ಪತ್ತೆಹಚ್ಚುವುದು, ಅನಧಿಕೃತವಾಗಿ ನೀರು ಸೋರುವಿಕೆ ಮತ್ತು ಬೈಪಾಸ್ ಸಂಪರ್ಕಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು, ನೀರಿನ ಸೋರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟವನ್ನು ತಡೆಗಟ್ಟುವುದು ಮತ್ತು ನೀರಿನ ನ್ಯಾಯಯುತ ವಿತರಣೆ ಖಚಿತಪಡಿಸುವುದು ಈ ವಿಶೇಷ ದಳದ ಉದ್ದೇಶವಾಗಿದೆ. ಸೋರಿಕೆಯ ನಿಖರ ಸ್ಥಳವನ್ನು ಪತ್ತೆಹಚ್ಚಲು ಮತ್ತು ಅನಗತ್ಯ ರಸ್ತೆ ತೋಡುವಿಕೆಗೆ ಕಡಿವಾಣ ಹಾಕಲು ರೋಬೋಟಿಕ್ ತಂತ್ರಜ್ಞಾನ ಸಂಸ್ಥೆಯೊಂದಿಗೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯ ಎದುರೇ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಆರೋಪಿಯೊಬ್ಬ ಯತ್ನಿಸಿದ್ದಾನೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯಕ್ಕೆ ಆಸ್ತಿ ವಿಚಾರಕ್ಕಾಗಿ ಮೀನಾಕ್ಷಿ ರಾಮಚಂದ್ರ ಶಿಂಧೆ ಎಂಬುವರು ಆಗಮಿಸಿದ್ದರು. ಇದೇ ಕೇಸ್ ಸಂಬಂಧ ಕೋತನಟ್ಟಿ ಗ್ರಾಮದ ಬಾಬಾ ಸಾಹೇಬ್ ಚೌಹಾಣ್ ಕೂಡ ಹಾಜರಾಗಿದ್ದರು. ಆಸ್ತಿ ವಿಚಾರಕ್ಕಾಗಿ ಸೋದರತ್ತೆಯ ಜೊತೆಗೆ ಬಾಬು ಸಾಹೇಬ್ ಅನೇಕ ಬಾರಿ ಜಗಳ ಕೂಡ ಆಡಿದ್ದರಂತೆ. ಮಂಗಳವಾರದಂದು ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಂತ ಬಾಬಾ ಸಾಹೇಬ್ ಸಿಟ್ಟಿನಿಂದ ಕುಡುಗೋಲಿನಿಂದ ಮೀನಾಕ್ಷಿ ಮೇಲೆ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದಂತ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಕ್ಷಣಕಾಲ ನಡೆದಂತ ಈ ಘಟನೆಯಿಂದ ಕೋರ್ಟ್ ಆವರಣದಲ್ಲಿ ಆತಂಕವನ್ನೂ ಮೂಡಿಸಿತ್ತು. ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದಂತ ಆರೋಪಿ ಬಾಬಾ ಸಾಹೇಬ್ ಬಂಧಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/mahesh-hegde-elected-unopposed-as-the-president-of-sagar-taluk-kuwj-association/ https://kannadanewsnow.com/kannada/cm-siddaramaiahs-bumper-gift-to-sagar-again-green-signal-to-undertake-development-work-worth-rs-50-crore/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಕಾರಣ, ಜನರ ಹೃದಯಗಳನ್ನು ಹಾಗೂ ಅವರ ನಾಯಕತ್ವದ ಮೇಲಿನ ನಂಬಿಕೆಯನ್ನು ಗೆಲ್ಲುವುದನ್ನು ಮುಂದುವರಿಸಿದ್ದಾರೆ. ಮಾರ್ನಿಂಗ್ ಕನ್ಸಲ್ಟ್‌ನ ಪಟ್ಟಿಯು ನವೆಂಬರ್ 6 ರಿಂದ 12, 2025 ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿದೆ. “ರೇಟಿಂಗ್‌ಗಳು ಸಮೀಕ್ಷೆ ಮಾಡಿದ ಪ್ರತಿ ದೇಶದ ವಯಸ್ಕರಲ್ಲಿ ಏಳು ದಿನಗಳ ಸರಳ ಚಲಿಸುವ ಸರಾಸರಿ ವೀಕ್ಷಣೆಗಳನ್ನು ಪ್ರತಿಬಿಂಬಿಸುತ್ತವೆ” ಎಂದು ಮಾರ್ನಿಂಗ್ ಕನ್ಸಲ್ಟ್ ವರದಿ ತಿಳಿಸಿದೆ. ಶೇ. 71 ರಷ್ಟು ಅನುಮೋದನೆ ರೇಟಿಂಗ್ ಹೊಂದಿರುವ ಮೋದಿ ನಂತರ, ಜಪಾನಿನ ಪ್ರಧಾನಿ ಸನೇ ತಕೈಚಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವವರ ಶೇಕಡಾ 63 ರಷ್ಟು ಅನುಮೋದನೆಯನ್ನು ಪಡೆದಿದ್ದಾರೆ, ಆದರೆ ದಕ್ಷಿಣ ಕೊರಿಯಾದ ಲೀ ಜೇ ಮ್ಯುಂಗ್ ಶೇ. 58 ರಷ್ಟು ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ನಾಲ್ಕನೇ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾದ ಜೇವಿಯರ್ ಮಿಲಿ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಗಮನಾರ್ಹವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More

ಬೆಂಗಳೂರು: ನಗರದಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬೋದಕ್ಕೆ ಕೊಂಡೊಯ್ಯುತ್ತಿದ್ದಂತ ವಾಹನವನ್ನು ಅಡ್ಡಗಟ್ಟಿ ಆರ್ ಬಿ ಐ ಅಧಿಕಾರಿಗಳೆಂದು ಪರಿಶೀಲನೆ ನೆಪದಲ್ಲಿ 7.11 ಕೋಟಿ ಹಣವನ್ನು ತಮ್ಮ ವಾಹನಕ್ಕೆ ತುಂಬಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಾಹನದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವಂತ ಜಯದೇವ ಡೈರಿ ಸರ್ಕಲ್ ನಲ್ಲಿ ಈ ಬೆಚ್ಚಿ ಬೀಳಿಸೋ ರಾಬರಿ ನಡೆದಿದೆ. 7 ರಿಂದ 8 ಮಂದಿ ಇನ್ನೋವಾ ಕಾರಿನಲ್ಲಿ ಬಂದಿದ್ದಾರೆ. ತಾವು ಆರ್ ಬಿಐ ಅಧಿಕಾರಿಗಳು ಎಂಬುದಾಗಿ ವಾಹನ ಅಡ್ಡಗಟ್ಟಿದ್ದಾರೆ. ವಾಹನ ಪರಿಶೀಲನೆಗೆ ಇಳಿದಿದ್ದಾರೆ. ಆ ಬಳಿಕ ಎಟಿಎಂ ವಾಹನದ ಸಿಬ್ಬಂದಿಗಳನ್ನು ಬೆದರಿಸಿ ಅವರ ವಾಹನದಲ್ಲಿದ್ದಂತ 7.11 ಕೋಟಿ ಹಣವನ್ನು ತಮ್ಮ ಕಾರಿಗೆ ಶಿಫ್ಟ್ ಮಾಡಿಕೊಂಡು ಸ್ಥಳದಿಂದ ಕಾಲ್ ಕಿತ್ತಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಂತ ಜಯನಗರ ಠಾಣೆಯ ಪೊಲೀಸರು ವಿಚಾರಣೆ ನಡೆಸುವ…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹೇಶ್ ಹೆಗಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್ ನೇತೃತ್ವದಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಹೇಶ್ ಹೆಗಡೆ, ಉಪಾಧ್ಯಕ್ಷರಾಗಿ ರವಿನಾಯ್ಡು, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಕುಮಾರ್ ಗುಡಿಗಾರ್ ಹಾಗೂ ಖಜಾಂಚಿಯಾಗಿ ಗಿರೀಶ್ ಆರ್ ರಾಯ್ಕರ್ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದಂತ ನೂತನ ಅಧ್ಯಕ್ಷರಾದಂತ ಮಹೇಶ್ ಹೆಗಡೆ ಅವರು, ನನಗೆ ಹೊಸದೊಂದು ಜವಾಬ್ದಾರಿಯನ್ನು ಹೊರಿಸಲಾಗಿದೆ. ಈವರೆಗೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈಗ ಅಧ್ಯಕ್ಷರಾಗಿ ನಿಮ್ಮೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕೆಲಸ ಮಾಡಲಿದ್ದೇನೆ. ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದಂತ ಎಲ್ಲಾ ಸದಸ್ಯರಿಗೆ ಧನ್ಯವಾದಗಳು ಅಂತ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಲೋಕೇಶ್ ಕುಮಾರ್…

Read More

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಗಣ್ಯಾತಿಗಣ್ಯರು ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ತಮ್ಮ ಕಚೇರಿಗೆ ತೆರಳಲು ಹಾಗೂ ದೈನಂದಿನ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ಏರಿಳಿವ ತೇರಿನ ನಿರ್ವಾಹಕ ( ಲಿಫ್ಟ್ ಆಪರೇಟರ್ ) ಆಗಿ 32 ವರ್ಷಗಳಿಗೂ ಹೆಚ್ಚು ಕಾಲ ಅಳಿಲು ಸೇವೆ ಸಲ್ಲಿಸಿ ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದ ಕೃಷ್ಣಪ್ಪ ಇನ್ನಿಲ್ಲ. ಜುಲೈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಿದ್ದ ಕೃಷ್ಣಪ್ಪ ತಮ್ಮ ಪಿಂಚಣಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ಸಲ್ಲಿಸಲು ನಿನ್ನೆಯಷ್ಟೇ ವಿಧಾನ ಸೌಧಕ್ಕೆ ಆಗಮಿಸಿದ್ದರು. ಇಂದು ಮತ್ತೆ ಬರುವುದಾಗಿ ತಮ್ಮ ಗೆಳೆಯರಿಗೆ ತಿಳಿಸಿದ್ದರು.‌ಆದರೆ, ರಾತ್ರಿ ಮಲಗಿದವರು ಬಹುಶಃ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಬೆಳಿಗ್ಗೆ ಏಳಲೇ ಇಲ್ಲ ಎಂದು ಅವರ ಸಹವರ್ತಿಗಳು ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ನಡೆಯುವ ಕಾರ್ಯಕ್ರಮ ಮತ್ತು ಕಾರ್ಯ ಕಲಾಪಗಳು ಹಾಗೂ ಸಭೆ ಮತ್ತು ಸಮಾರಂಭಗಳ ವರದಿ ಮಾಡುವ ಮಾಧ್ಯಮದವರಿಗೂ ಕೃಷ್ಣಪ್ಪ ಅತ್ಯಂತ ಪರಿಚಿತರಾಗಿದ್ದರು. https://kannadanewsnow.com/kannada/alert-those-who-use-unwashed-pillows-beware-they-contain-more-dangerous-bacteria-than-toilet-seats/ https://kannadanewsnow.com/kannada/cm-siddaramaiahs-bumper-gift-to-sagar-again-green-signal-to-undertake-development-work-worth-rs-50-crore/

Read More

ನವದೆಹಲಿ: ವಾಟ್ಸಾಪ್ ನಮ್ಮ ದೈನಂದಿನ ಜೀವನದಲ್ಲಿ ಎಷ್ಟು ಬಿಗಿಯಾಗಿ ಹೆಣೆದುಕೊಂಡಿದೆ ಎಂದರೆ, ಅನೇಕ ಜನರಿಗೆ, ಅದು ಇಲ್ಲದೆ ಒಂದು ದಿನವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯ. ಆದರೇ ಇದೀಗ ಬರೋಬ್ಬರಿ 3.5 ಬಿಲಿಯನ್ ಪೋನ್ ನಂಬರ್ ವಾಟ್ಸ್ ಆಪ್ ದೋಷದಿಂದ ಬಹಿರಂಗಗೊಂಡಿರುವುದಾಗಿ ತಿಳಿದು ಬಂದಿದೆ. ನಾವು ಕುಟುಂಬದೊಂದಿಗೆ ಮಾತನಾಡುವ, ಫೋಟೋಗಳನ್ನು ಹಂಚಿಕೊಳ್ಳುವ, ಕೆಲಸವನ್ನು ಸಂಘಟಿಸುವ ಮತ್ತು ವ್ಯವಹಾರಗಳನ್ನು ನಡೆಸುವ ವಿಧಾನ ಇದು. ಆದರೆ ಹೊಸ ವರದಿಯೊಂದು ಗಂಭೀರ ಭದ್ರತಾ ಲೋಪವನ್ನು ಬಹಿರಂಗಪಡಿಸಿದೆ, ಅದು ಆ ಅನುಕೂಲತೆಯೊಂದಿಗೆ ಎಷ್ಟು ಅಪಾಯ ಬರುತ್ತದೆ ಎಂಬುದನ್ನು ತೋರಿಸುತ್ತದೆ. ಭದ್ರತಾ ಸಂಶೋಧಕರ ಪ್ರಕಾರ, ವಾಟ್ಸಾಪ್‌ನಲ್ಲಿನ ಒಂದು ಸರಳ ದೋಷವು ಸುಮಾರು 3.5 ಬಿಲಿಯನ್ ಬಳಕೆದಾರರ ಫೋನ್ ಸಂಖ್ಯೆಗಳನ್ನು ವೇದಿಕೆಯಿಂದ ಹಿಂತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಆಘಾತಕಾರಿ ಭಾಗ? ದುರ್ಬಲತೆ ಹೊಸದಲ್ಲ. ವಾಟ್ಸಾಪ್‌ನ ಪೋಷಕ ಕಂಪನಿಯಾದ ಮೆಟಾಗೆ 2017 ರಲ್ಲಿ ಈ ನಿಖರವಾದ ಸಮಸ್ಯೆಯ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು ಮತ್ತು ಇನ್ನೂ ಅದನ್ನು ಸರಿಪಡಿಸಲು ವಿಫಲವಾಗಿದೆ ಎಂದು ವರದಿಯಾಗಿದೆ. ವಿಯೆನ್ನಾ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗದೊಂದಿಗೆ…

Read More

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ KSRTC ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆಯನ್ನು ಹಾಗೂ ಸಿಬ್ಬಂದಿಗಳ ನೂತನ ವಸತಿ ಗೃಹಗಳ ಉದ್ಘಾಟನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಾರಿಗೆ ಸಚಿವರು, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. 2025ರಲ್ಲಿ ರೂ.19.87 ಕೋಟಿ ವೆಚ್ಚದಲ್ಲಿ ಒಂದು ಎಕರೆ 20 ಗುಂಟೆ ನಿವೇಶನದಲ್ಲಿ ಆಧುನಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಚಿಕ್ಕಮಗಳೂರು ಸಾರಿಗೆ ವಿಭಾಗಕ್ಕೆ ಸೇರಿರುವ ಪ್ರಮುಖ ಸ್ಥಳಗಳಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ 1. ಅರಸೀಕೆರೆಯಲ್ಲಿ 01 ಎಕರೆ 7.5 ಗುಂಟೆ ವಿಸ್ತೀರ್ಣದಲ್ಲಿ ರೂ 1958 .00 ಲಕ್ಷಗಳ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ ದಿನಾಂಕ:26-07-2025 ರಂದು…

Read More