Author: kannadanewsnow09

ಬೆಂಗಳೂರು : ವಿಧಾನಸೌಧದ ಎದುರಿಗಿರೋ ಗಾರ್ಡನ್ ‌ನಲ್ಲಿ ಇವತ್ತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು, ಪತ್ರಕರ್ತರ ಜೊತೆ ವಿಧಾನಸೌಧದ ಗಾರ್ಡನ್ ನಲ್ಲಿ ಊಟ ಸವಿಯುತ್ತ, ಉಭಯ ಕುಶಲೋಪರಿ ವಿಚಾರಿಸುತ್ತ ಕೆಲ ಹೊತ್ತು ಕಳೆದರು. ಸಚಿವರದು ಸಂತೋಷದ ಸರಳತೆ ಸಚಿವ ಲಾಡ್‌ ಅವರು ಸದಾ ಸರಳತೆಗೆ ಆದ್ಯತೆ ನೀಡುವುದು ಗಮನಿಸಬೇಕಾದ ಅಂಶ. ಅವರು ಕ್ಷೇತ್ರದಲ್ಲಾಗಲಿ, ಬೇರೆಡೆಯಾಗಲಿ ಪ್ರವಾಸ ಹೋದ ವೇಳೆ, ಕಾರ್ಯಕ್ರಮಕ್ಕೆ, ಸಭೆಗಳಿಗೆ ತೆರಳುವ ವೇಳೆ ತಾನೊಬ್ಬ ಸಚಿವ ಎಂಬ ಹಮ್ಮು ಬಿಮ್ಮಿಲ್ಲದೆ ಜನರೊಂದಿಗೆ ಬೆರೆಯುತ್ತಾರೆ, ಅವರ ಕಷ್ಟಗಳನ್ನು ಆಲಿಸುತ್ತಾರೆ, ಧನಸಹಾಯ ಮಾಡುತ್ತಾರೆ. ಸಚಿವ ಲಾಡ್‌ ಅವರು, ಊಟದ ವಿಷಯದಲ್ಲಂತೂ ಇನ್ನೂ ಸರಳತೆ ತೋರುತ್ತಾರೆ. ಜನಸಾಮಾನ್ಯರು ಎಲ್ಲೇ ಸಿಗಲಿ ಅವರ ಬುತ್ತಿಯನ್ನು ಹಂಚಿಕೊಳ್ಳುತ್ತಾರೆ, ಅವರೊಂದಿಗೆ ಉಪಾಹಾರ ಸೇವಿಸುತ್ತಾರೆ. ರಸ್ತೆ ಬದಿಯಲ್ಲಿ ಯಾರೇ ಸಿಗಲಿ ಅವರನ್ನು ಮಾತನಾಡಿಸಿ ಕಷ್ಟಗಳನ್ನು ಅರಿಯುತ್ತಾರೆ. ಚಹಾ ಅಂಗಡಿಯಲ್ಲಿ ತಾವೇ ಮುಂದೆ ನಿಂತು ಚಹಾ ತಯಾರಿಸುತ್ತಾರೆ. ಜೊತೆಯಲ್ಲಿದ್ದವರಿಗೆ ತಾವೇ ಊಟ ಬಡಿಸುತ್ತಾರೆ.…

Read More

ಶಿವಮೊಗ್ಗ : ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಿಷನ್ ಸುರಕ್ಷಾ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳಿಗಾಗಿ ಹಾಗೂ ಸಮಾಜಕ್ಕಾಗಿ ಮಾಡುತ್ತಿರುವ ಸೇವೆ ಎಂದು ತಿಳಿದು ನಿಯಮಿತವಾಗಿ ಈ ಕಾರ್ಯ ನಿರ್ವಹಣೆಯಲ್ಲಿ ತೊಡಗಬೇಕೆಂದರು. ಮಕ್ಕಳ ಜೀವನ ಅತ್ಯಮೂಲ್ಯವಾಗಿದ್ದು ಅವರನ್ನು ನಾವು ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಇತರೆ ಅಪರಾಧಗಳಿಂದ ರಕ್ಷಣೆ ಮಾಡಿ, ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ಮಾಡಬೇಕು. ಪೋಕ್ಸೊ ಪ್ರಕರಣ ಆಗದಂತೆ, ಮಾದಕ ವಸ್ತುಗಳಿಂದ ಮಕ್ಕಳನ್ನು ದೂರವಿರುವಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಮಗುವಿನ ಬೆಳವಣಿಗೆ ಹಾಗೂ ಶೈಕ್ಷಣಿಕ ಅವಕಾಶಗಳನ್ನು…

Read More

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. 1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17…

Read More

ಶ್ರೀ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರವನ್ನು ಶ್ರೀ ಗುರುಜಗನ್ನಾಥ ದಾಸರು ಸಾಮಾನ್ಯ ಜನರ ಮನೋವಾಂಚ್ಯಾರ್ಥಗಳೆಲ್ಲಾ ಪೂರ್ಣಗೊಳ್ಳಲಿ ಹಾಗೂ ಪ್ರತ್ಯೇಕವಾಗಿ ಸ್ತ್ರೀಯರಿಗೆ ಸಕಲ ಭಾಗ್ಯಗಳನ್ನು ಅನುಗ್ರಹಿಸುವ ಶ್ರೇಷ್ಠವಾದ ಸ್ತೋತ್ರವನ್ನು ಅರ್ಪಿಸಿದ್ದಾರೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಪ್ರತಿ ದಿನ ” ಶ್ರೀ ರಾಘವೇಂದ್ರಾಯ ನಮಃ ” ಎಂದು ೧೦೮(108) ಬಾರಿ ಯಾರು ಸ್ತುತಿಸುತ್ತಾರೋ ಅವರಿಗೆ ಸಕಲ ಅಭೀಷ್ಟಗಳು ಲಭಿಸುವುದು . ಗುರುರಾಜಾಷ್ಟಾಕ್ಷರಂ ಸ್ಯಾತ್ ಮಹಾಪಾತಕನಾಶನಂ । ಏಕೈಕಮಕ್ಷರಮ್ ಚಾತ್ರ ಸರ್ವಕಾಮ್ಯಾರ್ಥ ಸಿದ್ಧಿಮ್ ।।೧।। ಅರ್ಥ : ಶ್ರೀ ಮದ್ರಾಘವೇಂದ್ರತೀರ್ಥ ಗುರುಸಾರ್ವಭೌಮರ ‘ ಶ್ರೀ ರಾಘವೇಂದ್ರಾಯ ನಮಃ ‘ ಎಂಬ ಅಷ್ಟಾಕ್ಷರ ಮಂತ್ರವು ಮಹಾಪಾತಕಗಳನ್ನು ಕಳೆಯುವಂಥದಾಗಿದೆ. ಇದರಲ್ಲಿರುವ ಒಂದೊಂದು ಅಕ್ಷರವು ಸರ್ವಕಾಮ್ಯಾರ್ಥಗಳನ್ನು ಕೊಡುವಂಥದಾಗಿದೆ. ರಕಾರೋಚ್ಚಾರಣಮಾತ್ರೇಣ ರೋಗಹಾನಿರ್ನ ಸಂಶಯಃ ।…

Read More

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನಿಗಮದ ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ (ಸ್ಲೀಪರ್) ಬಸ್ಸುಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಿಳಾ ಸಾಧಕಿಯರಿಗೆ ಗೌರವ: ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಇಂದು ಮಹತ್ತರ ಸಾಧನೆ ಮಾಡುತ್ತಿದ್ದಾರೆ. ಇಸ್ರೋ ಮತ್ತು ಸಿ.ಎಸ್.ಐ.ಆರ್-ಎನ್ಎಎಲ್ ಸಂಸ್ಥೆಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ, ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್‌ಗಾಗಿ ‘ದೃಷ್ಟಿ’ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಪದ್ಮಶ್ರೀ ಪುರಸ್ಕೃತ ಡಾ. ಶುಭ ವಿ. ಅವರ ಸಾಧನೆಯನ್ನು ಕೊಂಡಾಡಿದರು. ಸಾರಿಗೆ ನಿಗಮದಲ್ಲಿ ಮಹಿಳಾ ಶಕ್ತಿ: ಉದ್ಯೋಗಾವಕಾಶ: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 1.04 ಲಕ್ಷ ಸಿಬ್ಬಂದಿಗಳಿದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ (ನಿರ್ವಾಹಕರು, ತಾಂತ್ರಿಕ ಮತ್ತು ಆಡಳಿತ) ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…

Read More

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ನಿವಾಸಿಗಳಆದಂತ ಶ್ರೀಧರ ಮರಕಡ, ಜನಾರ್ಧನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದಂತ ಮತ್ತೋರ್ವ ವ್ಯಕ್ತಿ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/officials-raid-hotels-in-yadgir-46-illegal-domestic-cylinders-seized/ https://kannadanewsnow.com/kannada/pm-kisan-22nd-installment-money-released-check-if-it-has-reached-your-account-like-this/

Read More

ಯಾದಗಿರಿ: ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಲೆದೂರಿರುವ ಬೆನ್ನಲ್ಲೇ, ಹೋಟೆಲ್‌ ಉದ್ಯಮದಲ್ಲಿ ಅಡ್ಡದಾರಿ ಹಿಡಿದಿರುವ ಮಾಲೀಕರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ಯಾದಗಿರಿಯ ವಿವಿಧ ಹೋಟೆಲ್‌ ಮತ್ತು ಕಾನಾವಳಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಬಳಸುತ್ತಿದ್ದ 46 ಗೃಹಬಳಕೆಯ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದಿಯ ಮುಖ್ಯಾಂಶಗಳು: ಅಕ್ರಮ ಬಳಕೆ: ನಿಯಮದ ಪ್ರಕಾರ ಹೋಟೆಲ್, ಕ್ಯಾಂಟೀನ್ ಮತ್ತು ಕಾನಾವಳಿಗಳಲ್ಲಿ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್‌ಗಳನ್ನೇ ಬಳಸಬೇಕು. ಆದರೆ, ಯಾದಗಿರಿಯ ಹಲವು ಹೋಟೆಲ್‌ಗಳಲ್ಲಿ ಲಾಭದ ಉದ್ದೇಶಕ್ಕಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ವಿಶೇಷ ಡ್ರೈವ್: ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಹೋಟೆಲ್‌ಗಳಿಂದ ಹಿಡಿದು ಗಾಂಧಿ ಚೌಕ, ಹಳೆ ಬಸ್ ನಿಲ್ದಾಣ ಮತ್ತು ಹೊಸ ಬಸ್ ನಿಲ್ದಾಣದವರೆಗಿನ ಎಲ್ಲಾ ಹೋಟೆಲ್‌ಗಳಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು: ತಪಾಸಣೆ ವೇಳೆ ಅಧಿಕಾರಿಗಳು ಒಟ್ಟು 46 ಡೊಮೆಸ್ಟಿಕ್ (ಗೃಹಬಳಕೆ) ಸಿಲಿಂಡರ್‌ಗಳನ್ನು ಸೀಜ್ ಮಾಡಿದ್ದಾರೆ. ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಅಕ್ರಮ ಕಂಡುಬರದಿದ್ದರೂ, ಸಣ್ಣ ಹೋಟೆಲ್ ಮತ್ತು…

Read More

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟಿನ ಗುಂಡ್ಯ ಸಮೀಪದಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/withdraw-criminal-case-against-kannada-activists-mlc-ramesh-babu-demands-govt/ https://kannadanewsnow.com/kannada/investors-lose-rs-5-87-trillion-in-a-day-as-markets-tumble-heres-why/

Read More

ಬೆಂಗಳೂರು: ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಕನ್ನಡ ಚಳವಳಿಗಾರರು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸಭಾಪತಿಗಳಿಗೆ ಪತ್ರ ಬರೆದಿರುವ ಅವರು, ಶೂನ್ಯ ವೇಳೆಯಲ್ಲಿ ಈ ಸಾರ್ವಜನಿಕ ಮಹತ್ವದ ವಿಷಯವನ್ನು ಪ್ರಸ್ತಾಪಿಸಲು ಅನುಮತಿ ಕೋರಿದ್ದಾರೆ. ಸುದ್ದಿಯ ಪ್ರಮುಖ ಅಂಶಗಳು: ರಾಜ್ಯೋತ್ಸವ ಪ್ರಶಸ್ತಿ ನೀಡಲು ಮನವಿ: ಕನ್ನಡ ನಾಡು-ನುಡಿಗಾಗಿ ದಶಕಗಳಿಂದ ಹೋರಾಡುತ್ತಿರುವ ವಾಟಾಳ್ ನಾಗರಾಜ್ ಅವರೂ ಸೇರಿದಂತೆ ಅನೇಕ ಮಹನೀಯರಿಗೆ ಇದುವರೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿಲ್ಲ. ಅಂತಹ ಸಾಧಕರನ್ನು ಗುರುತಿಸಿ ಗೌರವಿಸಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿವೇಶನ ಮತ್ತು ಜಮೀನು ಮಂಜೂರಾತಿ: ದಶಕಗಳಿಂದ ಕನ್ನಡದ ಅಸ್ಮಿತೆಗಾಗಿ ಶ್ರಮಿಸುತ್ತಿರುವ ಕನ್ನಡ ಸಂಘ ಸಂಸ್ಥೆಗಳಿಗೆ ಸರ್ಕಾರವು ನಿವೇಶನ ಅಥವಾ ಜಮೀನು ಮಂಜೂರು ಮಾಡುವ ಮೂಲಕ ಆರ್ಥಿಕ ಶಕ್ತಿ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.…

Read More

ಬೆಂಗಳೂರು: ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಿದ್ದೇವೆ. ನಾವು ಅವೈಜ್ಞಾನಿಕ ನಡೆಗಳಿಗೆಲ್ಲ ಅವಕಾಶವನ್ನು ನೀಡುವುದಿಲ್ಲ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಯಾವುದೇ ಅಭಿವೃದ್ಧಿ ಕೆಲಸಕ್ಕೆ ಮೀಸಲಿಟ್ಟ ಹಣವನ್ನು ಮನಬಂದಂತೆ ಬಳಸಲು ಸಾಧ್ಯವಿಲ್ಲ. ಹೊಸ ಆಸ್ಪತ್ರೆಗಳ ನಿರ್ಮಾಣದ ವಿಚಾರದಲ್ಲಿ ಕೆಲವೊಂದು ನಿರ್ದಿಷ್ಟ ನಿಯಮಗಳಿವೆ ಎಂದರು. ​ಆಸ್ಪತ್ರೆಗಳನ್ನು ಅಥವಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಾಗ ಆಯಾ ಭಾಗದ ಜನಸಂಖ್ಯೆ ಮತ್ತು ಅಲ್ಲಿನ ಆರೋಗ್ಯ ಸೇವೆಯ ಅಗತ್ಯತೆಯನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆಯೇ ಹೊರತು, ಯಾವುದೇ ಒಂದು ಜಾತಿಯ ಜನರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕಾಗಿ ಆಸ್ಪತ್ರೆಗಳನ್ನು ನಿರ್ಮಿಸಲು ಬರುವುದಿಲ್ಲ. ಒಟ್ಟಾರೆಯಾಗಿ, ಜನಸಾಮಾನ್ಯರ ಹಿತದೃಷ್ಟಿ ಮತ್ತು ಅಧಿಕೃತ ನಿಯಮಗಳೇ ಇಲ್ಲಿ ಅಂತಿಮ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/us-military-plane-crashes-in-iraq-four-killed/ https://kannadanewsnow.com/kannada/investors-lose-rs-5-87-trillion-in-a-day-as-markets-tumble-heres-why/

Read More