Author: kannadanewsnow09

ಬೆಂಗಳೂರು: ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ನಟನೆಯ ಸಿನಿಮಾ ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜೀವ್‌ ಗೌಡಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್‌ ನೀಡಿದ್ದಾರೆ. 7 ದಿನಗಳ ಒಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಕೆಪಿಸಿಸಿ ನೋಟಿಸ್‌ನಲ್ಲಿ ಏನಿದೆ? ತಾವು ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಸಭೆಯೊಂದಕ್ಕೆ ಸಂಬಂಧಪಟ್ಟಂತೆ ಬ್ಯಾನರ್‌ಗಳನ್ನು ಹಾಕಿರುವ ಬಗ್ಗೆ ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನಡೆಸುವಾಗ ವ್ಯಕ್ತಿಗತ ನಿಂದನೆ ಮಾಡಿ, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದನೆ ಮಾಡಿರುವ ವಿಷಯಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ ಎಂದಿದೆ. ತಮ್ಮ ಈ ವರ್ತನೆ ಹಾಗೂ ತಾವು ಸದರಿ ನಗರಸಭೆ ಪೌರಾಯುಕ್ತರೊಂದಿಗೆ ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತದೆ. ತಾವು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ್ದೀರೆಂದು ತಿಳಿದು ನೋಟಿಸ್‌ ನೀಡಲಾಗಿದೆ. ಈ ನೋಟಿಸ್‌ ನೀಡಿದ ಒಂದು ವಾರದ ಒಳಗಾಗಿ ಸೂಕ್ತ ಸಮಜಾಯಿಷಿ ನೀಡಬೇಕು. ಇಲ್ಲವಾದರೆ, ಈ ಬಗ್ಗೆ ಶಿಸ್ತು ಸಮಿತಿಯು ಮುಂದಿನ ಶಿಸ್ತು ಕ್ರಮ…

Read More

ಬೆಂಗಳೂರು: ವಾಣಿಜ್ಯ ಸಂಕೀರ್ಣದ ಮಳಿಗೆದಾರರು ನವೀಕರಣಕ್ಕಾಗಿ ಮಳಿಗೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ GBA ಸೂಚಿಸಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 280 ಬಿಬಿಎಸ್ 2023 (ಇ) 6 ಆಸ್ತಿ ನಿರ್ವಹಣೆ ನಿಯಮಗಳು-2024 ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ದಿ: 01-01-2025 ರಂತೆ ಹೊಸ ನಿಯಮ ಜಾರಿಗೆ ಬಂದಿರುತ್ತದೆ. ಪಾಲಿಕೆಯ ಮಾಲೀಕತ್ವಕ್ಕೆ ಒಳಪಟ್ಟಿರುವ ಜಯನಗರ ನಾಲ್ಕನೇ ಬಡಾವಣೆಯಲ್ಲಿರುವ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ವಾಣಿಜ್ಯ ಸಂಕೀರ್ಣದಲ್ಲಿನ 251 ಮಳಿಗೆಗಳು ಮತ್ತು ಜಯನಗರ 4ನೇ `ಟಿ ‘ ಬ್ಲಾಕ್‌ನ ಮಾರುಕಟ್ಟೆ ಕಟ್ಟಡದಲ್ಲಿನ 39 ಮಳಿಗೆಗಳ ನವೀಕರಣದ ಅವಧಿಯು ಮುಕ್ತಾಯಗೊಂಡಿರುವುದರಿಂದ, ಕರ್ನಾಟಕ ಸರ್ಕಾರ ಅಧಿಸೂಚನೆ ಸಂಖ್ಯೆ:ನಅಇ 280 ಬಿಬಿಎಸ್ 2023 (ಇ) ದಿನಾಂಕ:01-01-2025ರ ನಿಯಮಾವಳಿಯಂತೆ ಸದರಿ ಮಳಿಗೆಗಳ ಗುತ್ತಿಗೆಯನ್ನು ನಿಯಮ 8 ರಂತೆ ಇನ್ನೊಂದು ಅವಧಿಗೆ ನವೀಕರಿಸಲು ಅವಕಾಶ ಕಲ್ಪಿಸಿ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಹಾಗೂ ಈ ಸಂಬಂಧ ಪ್ರತಿಯೊಂದು ಮಳಿಗೆಯ ಮಳಿಗೆದಾರರಿಗೆ ಪ್ರತ್ಯೇಕ ಸೂಚನಾ ಪತ್ರವನ್ನು ನೀಡಲಾಗಿರುವಂತೆ, ಈಗಾಗಲೇ ಹಲವಾರು ಮಳಿಗೆದಾರರು ಅರ್ಜಿಯೊಂದಿಗೆ…

Read More

ಕಾರವಾರ: ಯಲ್ಲಾಪುರದ ಮಾಜಿ ಶಾಸಕ ವಿಎಸ್ ಪಾಟೀಲ್ ಅವರ ಡಬಲ್ ಬ್ಯಾರಲ್ ಬಂದೂಕನ್ನೇ ಕಳ್ಳರು ಕದ್ದೊಯ್ದಿರೋದಾಗಿ ತಿಳಿದು ಬಂದಿದೆ. ಮಾಜಿ ಶಾಸಕ ವಿಎಸ್ ಪಾಟೀಲ್ ಅವರು ತಮ್ಮ ಆತ್ಮ ರಕ್ಷಣೆಗಾಗಿ ಡಬಲ್ ಬ್ಯಾರಲ್ ಬಂದೂಕು ಇರಿಸಿಕೊಂಡಿದ್ದರು. ಇಂತಹ ಬಂದೂಕು ಕಳ್ಳತನವಾಗಿರೋದಾಗಿ 15 ದಿನಗಳ ನಂತ್ರ ಮಾಜಿ ಶಾಸಕ ವಿಎಸ್ ಪಾಟೀಲ್ ಮುಂಡಗೋಡು ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಅಂದಹಾಗೇ ವಿಎಸ್ ಪಾಟೀಲ್ ಅವರು ತಮ್ಮ ಆತ್ಮ ರಕ್ಷಣೆಗಾಗಿ ಸುಮಾರು 40,000 ಮೌಲ್ಯದ ಡಬಲ್ ಬ್ಯಾರಲ್ ಬಂದೂಕು ಇರಿಸಿಕೊಂಡಿದ್ದರು. ಈ ಬಂದೂಕನ್ನು ಮುಂಡಗೋಡ ತಾಲ್ಲೂಕಿನ ಅಂದಲಗಿ ಗ್ರಾಮದಲ್ಲಿ ಇರುವಂತ ಜಮೀನಿನ ತೋಟದ ಮನೆಯಲ್ಲಿ ಇರಿಸಿದ್ದರು. ಇದನ್ನೇ ಕಳ್ಳತನ ಮಾಡಲಾಗಿದೆ. ಡಿಸೆಂಬರ್.31ರಂದು ಡಬಲ್ ಬ್ಯಾರಲ್ ಬಂದೂಕು ಕಾಣದೇ ಇರೋದು ಮಾಜಿ ಶಾಸಕ ವಿಎಸ್ ಪಾಟೀಲ್ ಅವರ ಗಮನಕ್ಕೆ ಬಂದಿತ್ತು. ಆದರೇ ಅವರು ಎಲ್ಲೋ ಇರಬೇಕು ಎಂಬುದಾಗಿ ಸುಮ್ಮನಾಗಿದ್ದರು. ಆ ಬಳಿಕ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಮುಂಡಗೋಡ ಠಾಣೆಯ ಪೊಲೀಸರಿದೆ ಕಳ್ಳತನದ ಬಗ್ಗೆ…

Read More

ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಡಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ ರೀತಿಯಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನವು ಇಂದು ವಿಶೇಷ ವಿಸ್ಮಯಕ್ಕೆ ಕಾರಣವಾಯಿತು. ಗವಿಗಂಗಾಧರೇಶ್ವರನನ್ನು ಸೂರ್ಯರಶ್ಮಿ ಸ್ಪರ್ಷಿಸಿದ್ದು, ಭಾಸ್ಕರನ ಕಿರಣಗಳಲ್ಲಿ ಶಿವಲಿಂಗ ಕಂಗೊಳಿಸಿದ್ದನ್ನು ಕಂಡು ಭಕ್ತರು ಪುಳಕಿತರಾದರು. ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿವೆ. ವರ್ಷಕ್ಕೆ ಸಂಕ್ರಾಂತಿ ಹಬ್ಬದ ದಿನದಂದೇ ಈ ಒಂದು ವಿಸ್ಮಯ ಹಾಗೂ ಕೌತುಕ ಘಟನೆ ನಡೆದದ್ದನ್ನು ಕಂಡು ಭಕ್ತರು ಕಣ್ತುಂಬಿಕೊಂಡರು. ಇಂದು ಸಂಜೆ 5.02ರಿಂದ 5.30ರವ ವೇಳೆಯಲ್ಲಿ ಸೂರ್ಯರಶ್ಮಿ ಶಿವನಿಗೆ ನಮಿಸಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಭವಿಷ್ಯ ಹೇಳಲಾಗುವುದು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿತ್ತು. ಆನಂತರ…

Read More

ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಡಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ ರೀತಿಯಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನವು ಇಂದು ವಿಶೇಷ ವಿಸ್ಮಯಕ್ಕೆ ಕಾರಣವಾಯಿತು. ಗವಿಗಂಗಾಧರೇಶ್ವರನನ್ನು ಸೂರ್ಯರಶ್ಮಿ ಸ್ಪರ್ಷಿಸಿದ್ದು, ಭಾಸ್ಕರನ ಕಿರಣಗಳಲ್ಲಿ ಶಿವಲಿಂಗ ಕಂಗೊಳಿಸಿದ್ದನ್ನು ಕಂಡು ಭಕ್ತರು ಪುಳಕಿತರಾದರು. ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿವೆ. ವರ್ಷಕ್ಕೆ ಸಂಕ್ರಾಂತಿ ಹಬ್ಬದ ದಿನದಂದೇ ಈ ಒಂದು ವಿಸ್ಮಯ ಹಾಗೂ ಕೌತುಕ ಘಟನೆ ನಡೆದದ್ದನ್ನು ಕಂಡು ಭಕ್ತರು ಕಣ್ತುಂಬಿಕೊಂಡರು. ಇಂದು ಸಂಜೆ 5.02ರಿಂದ 5.30ರವ ವೇಳೆಯಲ್ಲಿ ಸೂರ್ಯರಶ್ಮಿ ಶಿವನಿಗೆ ನಮಿಸಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಭವಿಷ್ಯ ಹೇಳಲಾಗುವುದು. ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿತ್ತು. ಆನಂತರ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನು ಉಸಿರುಗಟ್ಟಿಸಿ ಪಾಪಿ ಪತಿಯೊಬ್ಬ ಕೊಲೆಗೈದ ಘಟನೆ ಭದ್ರಾವತಿಯ ಬೊಮ್ಮನಕಟ್ಟೆಯ ಪಂಡರಹಳ್ಳಿ ಕ್ಯಾಂಪ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಪಂಡರಹಳ್ಳಿ ಕ್ಯಾಂಪ್ ನಲ್ಲಿ ಜನವರಿ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಕೊಲೆಯನ್ನು ಪತಿ ಮಾಡಿದ್ದಾನೆ. ಪತ್ನಿ ಕೊಂದು ತನಗೇನು ಗೊತ್ತಿಲ್ಲದಂತೆ ಪತಿ ಗೋಪಿ ವರ್ತಿಸುತ್ತಿದ್ದನಂತೆ. ಡಿ.ಬಿ ಹಳ್ಳಿ ಲಂಬಾಣಿ ಸಮುದಾಯದ ಚಂದನಾಬಾಯಿ, ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪ್ರೀತಿಸಿ ವಿವಾಹವಾಗಿದ್ದರು. 2 ಗಂಡು ಮಕ್ಕಳು ಕೂಡ ಆಗಿದ್ದರು. ಹೀಗಿದ್ದರೂ ಮತ್ತೊಬ್ಬಳ ಜೊತೆಗೆ ಗೋಪಿ ಲವ್ ನಲ್ಲಿ ಬಿದ್ದಿದ್ದನಂತೆ. ಹೀಗಾಗಿ ಮೊದಲ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.

Read More

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಸೇರಿದಂತೆ ಇತರೆ ಕಾರಣಕ್ಕಾಗಿ ಲಕ್ಕುಂಡಿ ಗ್ರಾಮವನ್ನೇ ಸ್ಥಳಾಂತರಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್, ಲಕ್ಕುಂಡಿ ಗ್ರಾಮ ಸ್ಥಳಾಂತರದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿಸಿದ್ದಾರೆ. ಲಕ್ಕುಂಡಿ ಗ್ರಾಮದ 16 ಹೊಸ ದೇವಾಲಯಗಳು, ಬಾವಿಗಳನ್ನು ರಕ್ಷಿತ ದೇವಾಲಯ, ಬಾವಿಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಇದೀಗ ನಿಧಿ ಸಿಕ್ಕ ನಂತ್ರ, ಲಕ್ಕುಂಡಿ ಗ್ರಾಮ ಸ್ಥಳಾಂತರದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ. https://kannadanewsnow.com/kannada/union-minister-h-d-kumaraswamys-important-statement-on-entering-state-politics/ https://kannadanewsnow.com/kannada/a-complaint-has-been-filed-against-sandalwood-actress-karunya-ram-on-charges-of-fraud/

Read More

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ಅವರು ತನ್ನ ತಂಗಿಯ ವಿರುದ್ಧ ವಂಚನೆ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ನಟಿ ಕಾರುಣ್ಯ ರಾಮ್ ವಿರುದ್ಧವೂ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಬೆಂಗಳೂರಿನ ಪ್ರತಿಭಾ ಎಂಬ ಮಹಿಳೆ ನಟಿ ಕಾರುಣ್ಯ ರಾಮ್ ವಿರುದ್ಧ ವಂಚನೆ ಆರೋಪದಡಿ ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸ್ಟುಡಿಯೋ ಹಾಗೂ ಬ್ಯುಸಿನೆಸ್ ಗೆ ಹಣ ಶಾರ್ಟೇಜ್ ಇದೆ ಎಂಬುದಾಗಿ 3 ಲಕ್ಷ ರೂಪಾಯಿ ಹಡೆ ಪಡೆದಿದ್ದಾರೆ. ನಟಿ ಕಾರುಣ್ಯ ರಾಮ್ ಅವರು ಪಡೆದಿರುವಂತ ಹಣವನ್ನು ವಾಪಾಸ್ ಕೇಳಿದರೇ ಧಮ್ಕಿ ಹಾಕುತ್ತಿದ್ದಾರೆ. ನಟಿ ಕಾರುಣ್ಯ ರಾಮ್ ಹಾಗೂ ಅವರ ಸಹೋದರಿ ಸಮೃದ್ಧಿ ರಾಮ್ ಇಬ್ಬರೂ ಸೇರಿ ನನಗೆ ಮೋಸ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/a-terrible-tragedy-in-the-state-on-the-occasion-of-makar-sankranti-two-boys-drown-in-a-pond-in-front-of-their-father-and-die/ https://kannadanewsnow.com/kannada/union-minister-h-d-kumaraswamys-important-statement-on-entering-state-politics/

Read More

ಬಾಗಲಕೋಟೆ: ಮಕರ ಸಂಕ್ರಾಂತಿಯಂದೇ ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದೆ. ಮಕರ ಸಂಕ್ರಾಂತಿಯ ಪ್ರಯುಕ್ತ ಕೊಳದಲ್ಲಿ ಸ್ನಾನಕ್ಕೆ ಹೋಗಿದ್ದಂತ ಇಬ್ಬರು ಮಕ್ಕಳು ನೀರಲ್ಲಿ ತಂದೆಯ ಎದುರೇ ಮುಳುಗಿ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆಯ ಜಾಲಿಕಟ್ಟೆಯಲ್ಲಿ ನಡೆದಿದೆ. ಬಾಗಲಕೋಟೆ ತಾಲ್ಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲಿನ ಕ್ವಾರಿಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಸ್ನಾನಕ್ಕೆ ಮನೋಜ್(17) ಹಾಗೂ ಪ್ರಮೋದ್ ಬಡಿಗೇರ(17) ಇಳಿದಿದ್ದರು. ಆದರೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇದೇ ವೇಳೆ ಮತ್ತೋರ್ವ ನೀರಲ್ಲಿ ಮುಳುಗುತಿದ್ದವನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇದೀಗ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/a-shocking-incident-in-the-state-brother-stabs-brother-with-knife-over-old-enmity/ https://kannadanewsnow.com/kannada/union-minister-h-d-kumaraswamys-important-statement-on-entering-state-politics/

Read More

ಹುಬ್ಬಳ್ಳಿ: ನಗರದಲ್ಲಿ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಅಣ್ಣನ ಮೇಲೆ ತಮ್ಮನೊಬ್ಬ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದಂತ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಮಲ್ಲೇಶ್ ಪೂಜಾರಿ(42) ಎಂಬಾತನ ಮೇಲೆ ತಮ್ಮನೇ ಹಲ್ಲೆ ಮಾಡಿದ್ದಾನೆ. ಚಾಕುವಿನಿಂದ ಇರಿದಂತ ತಮ್ಮ ಪ್ರದೀಪ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಕುವನಿಂದ ಬರೋಬ್ಬರಿ 7 ಬಾರಿ ಅಣ್ಣ ಮಲ್ಲೇಶ್ ಪೂಜಾರಿ ಇರಿದು ಕೊಲ್ಲಲು ತಮ್ಮ ಪ್ರದೀಪ್ ಯತ್ನಿಸಿದ್ದಾನೆ. ಮನೆಯ ಎದುರು ಕುಡಿದ ಅಮಲಿನಲ್ಲಿ ಕೂತಿದ್ದಾಗ ಈ ಘಟನೆ ನಡೆದಿದೆ. ಏಕಾಏಕಿ ಬಂದು ಜಗಳ ತೆಗೆದು ಚಾಕುವಿನಿಂದ ಇರಿದು ಪ್ರದೀಪ್ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದಂತ ಮಲ್ಲೇಶ್ ನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/west-bengal-cm-mamata-banerjee-suffers-setback-in-supreme-court-fir-lodged-against-ed-officials-stays/

Read More