Author: kannadanewsnow09

ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗದ ಹಕ್ಕನ್ನು ಖಾತರಿಗೊಳಿಸಿದ ಈ ಯೋಜನೆ ದೇಶ-ವಿದೇಶದ ಆರ್ಥಿಕ ತಜ್ಞರ ಶ್ಲಾಘನೆಯನ್ನು ಪಡೆದಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು, ಆದರೆ ನರೇಂದ್ರ ಮೋದಿ ಅವರ ಸರ್ಕಾರದಡಿ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು…

Read More

ಬೆಂಗಳೂರು : ಮೊಟರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್–2025ರಲ್ಲಿ ಬೆಳ್ಳಿ ಪ್ರಶಸ್ತಿ ಪಡೆದು ಕರ್ನಾಟಕಕ್ಕೆ ರಾಷ್ಟ್ರೀಯ ಗೌರವ ತಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ). ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮೊಟರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್–2025ರಲ್ಲಿ “ಇವಿ ಬಸ್ ಅಳವಡಿಕೆಗೆ ಅತ್ಯುತ್ತಮ ನಗರ” ವಿಭಾಗದಲ್ಲಿ ಬೆಳ್ಳಿ ಪ್ರಶಸ್ತಿ ಪಡೆದು, ಕರ್ನಾಟಕ ಸರ್ಕಾರಕ್ಕೆ ರಾಷ್ಟ್ರಮಟ್ಟದ ಗೌರವವನ್ನು ತಂದುಕೊಟ್ಟಿದೆ. ಸಾರ್ವಜನಿಕ ವಿದ್ಯುತ್ ಸಾರಿಗೆಯಲ್ಲಿ ಬೆಂಗಳೂರಿನ ನಾಯಕತ್ವವನ್ನು ಈ ಪ್ರಶಸ್ತಿ ಸ್ಪಷ್ಟವಾಗಿ ಗುರುತಿಸಿದೆ. ಈಗಾಗಲೇ 1,700ಕ್ಕೂ ಹೆಚ್ಚು ವಿದ್ಯುತ್ ಬಸ್‌ಗಳನ್ನು ಕಾರ್ಯಾಚರಣೆಗೆ ತಂದು, ಮುಂದಿನ ಹಂತದಲ್ಲಿಯೂ ಇವಿ ಬಸ್ ಸೇವೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಸಾಧನೆಗೆ ಈ ಗೌರವ ಲಭಿಸಿದೆ. ದತ್ತಾಂಶ ಆಧಾರಿತ ಯೋಜನೆ, ಒಪ್ಪಂದಾಧಾರಿತ ಖರೀದಿ ವ್ಯವಸ್ಥೆ ಹಾಗೂ ಸಮಗ್ರ ಬಹುಮಾಧ್ಯಮ ಸಾರ್ವಜನಿಕ ಸಾರಿಗೆ ದೃಷ್ಟಿಕೋನವು ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. ಈ ಪ್ರಶಸ್ತಿಯನ್ನು ಡಿಸೆಂಬರ್ 16, 2025ರಂದು ನವದೆಹಲಿಯ ಟ್ರಾವಂಕೋರ್ ಪ್ಯಾಲೇಸ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಕುಶಾಲಪ್ಪ ಎಂ. ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕಿದ್ವಾಯಿ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದ ರೋಗಿಗಳನ್ನು ಕರೆತರಲು ಕಷ್ಟವಾಗುತ್ತಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಸಹಯೋಗದೊಂದಿಗೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ. ಕಲ್ಬುರ್ಗಿಯಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು 1990ರಲ್ಲಿ ಸ್ಥಾಪಿಸಲಾಗಿದ್ದು, ಸದರಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದ್ದು, ಸಿವಿಲ್ ಕಾಮಗಾರಿಯು ಪ್ರಗತಿಯಲ್ಲಿದೆ. ಮೈಸೂರು, ತುಮಕೂರು, ಶಿವಮೊಗ್ಗ, ಬೆಳಗಾವಿ ಈ ಜಿಲ್ಲೆಗಳಲ್ಲಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ರಾಯಚೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಹಾಗೂ ಬೀದರ್ ವೈದ್ಯಕೀಯ ವಿಜ್ಞಾನಗಳ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 05 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು. ಪರಿಷತ್ತಿನಲ್ಲಿ ಡಿ.16ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿರುತ್ತದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ’ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪಸ್ಪಂದನ ವಾಹನ ಹಾಗೂ ಡೋನ್ ಒಳಗೊಂಡಂತೆ ಇತರೆ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 5922 ವಿದ್ಯಾರ್ಥಿಗಳು RTE ಅಡಿಯಲ್ಲಿ ಪ್ರವೇಶಾವಕಾಶ ಸೌಲಭ್ಯ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ನಿಯಮ-4ರ ತಿದ್ದುಪಡಿಯಲ್ಲಿ ಉಪನಿಯಮ-7 ರನ್ವಯ ವಾರ್ಡ್‍ಗಳ ಮರು ವಿಂಗಡಣೆಯಾಗಿದ್ದು, ಆಯಾ ವಾರ್ಡ್ ಗಳಲ್ಲಿ ಸರ್ಕಾರಿ /ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ 12(1)(ಸಿ) ರನ್ವಯ ಪ್ರವೇಶಾತಿ ಅನ್ವಯಿಸುವುದಿಲ್ಲ. ರಾಜ್ಯದಲ್ಲಿ ಕನ್ನಡ ಭಾಷೆ ಕಲಿಕಾ ಅಧಿನಿಯಮ, 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷೆ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ ಹಾಗೂ ಸಂಚಿತ ನಿಧಿಯಿಂದಾಗಲಿ, ಸರ್ಕಾರದ ಅನುದಾನದಿಂದಾಗಲಿ ಇವರಿಗೆ ವೇತನ ಪಾವತಿಸಿರುವುದಿಲ್ಲ, ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು. ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ‘ಖಾಸಗಿ ಭೂ ಮಾಪಕರ ಸೇವೆ’ ಗೆ ಅವಕಾಶವಿದ್ದು ಕಳೆದ ಹಲವು ದಶಕಗಳಿಂದ ಖಾಸಗಿ ಭೂಮಾಪಕರು ಅಧಿಕೃತವಾಗಿ ಭೂದಾಖಲೆಗಳ ಹಾಗೂ ಭೂಮಾಪನ ಇಲಾಖೆಯ ನಿಯಮಗಳಿಗುಣವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ರಾಜ್ಯದ ಭೂದಾಖಲೆಗಳ ಹಾಗೂ ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ ಸರ್ಕಾರಿ ಭೂಮಾಪಕರ ಹುದ್ದೆಗಳನ್ನು ‘ಒಂದು ಬಾರಿಯ ವಿಶೇಷ ನೇಮಕಾತಿ” ಉಪಕ್ರಮದಲ್ಲಿ ಸೇವಾನುಭವದ ಆಧಾರದಲ್ಲಿ ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡುವ ಸಂಬಂಧ ಇಲಾಖಾ ಮಟ್ಟದಲ್ಲಿ ಹಾಗೂ ಸಚಿವರ ಹಂತದಲ್ಲಿ ನಡೆದ ಸಭೆಯಲ್ಲಿ…

Read More

ಮಗಳು……… ಯಾವಾಗ ಮಗಳು ತಾಯಿಯಾದಳೋ,ಯಾವಾಗ ಮಗಳ ಪಯಣ ತಾಯಿಯ ಪಯಣದಲ್ಲಿ ಬದಲಾಯಿತೋ ಗೊತ್ತಿಲ್ಲ, ಯಾವಾಗ ಮಗಳು ದೊಡ್ಡವಳಾಗಿಬಿಟ್ಟಳೋ ಗೊತ್ತಿಲ್ಲ, ಮಗಳು ವರ್ತಮಾನ, ಮಗಳು ಭವಿಷ್ಯ, ಮಗಳು ಎಂದರೆ ಬೆಲೆ ಕಟ್ಟಲಾಗದಂಥವಳು….. ಮಗಳು ಮದುವೆ ಮಂಟಪದಿಂದ ಅತ್ತೆಯ ಮನೆಗೆ ಹೋಗುತ್ತಾಳೆ, ಆಗ ಆಕೆ ಬೇರೆಯವಳಾಗಿ ಕಾಣುವುದಿಲ್ಲ, ಆದರೆ, ಆಕೆ ತವರುಮನೆಗೆ ಬಂದಾಗ ಮುಖ ತೊಳೆದು ಎದುರಿಗೇ ಇರುವ ಟವೆಲ್ ನ ಬದಲಿಗೆ ತನ್ನ ಬ್ಯಾಗಿನಲ್ಲಿರುವ ಕರವಸ್ತ್ರದಿಂದ ಮುಖ ಒರೆಸಿಕೊಂಡಾಗ, ಆಕೆ ಬೇರೆಯವಳಾಗಿ ಕಾಣುತ್ತಾಳೆ, ಆಕೆ ಅಡುಗೆ ಮನೆಯಲ್ಲಿ ಬಾಗಿಲಲ್ಲಿ ಅಪರಿಚಿತಳಾಗಿ ನಿಂತಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ವಾಷಿಂಗ್ ಮಷೀನ್ ಬಳಸಲೇ, ಫ್ಯಾನ್ ಹಾಕಲೇ ಎಂದಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಟೇಬಲ್ ಮೇಲೆ ಊಟ ಬಡಿಸಿದ್ದಾಗಲೂ ಆಕೆ ಮುಚ್ಚಳ ತೆಗೆದು ನೋಡುವುದಿಲ್ಲ, ಆಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ದುಡ್ಡು ಎಣಿಸುತ್ತಿದ್ದಾಗ ದೃಷ್ಟಿಯನ್ನು ಆಕಡೆ ಈಕಡೆ ತಿರುಗಿಸಿದಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಮಾತುಮಾತಿಗೂ ತಮಾಷೆ ಮಾಡಿ ನಗುವ ನಾಟಕ ಮಾಡುತ್ತಿರುವಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಹಾಗೂ…

Read More

ಒಂದು ದಿನ ಒಂದು ಕೋರ್ಟಿನಲ್ಲಿ ಜಡ್ಜ್ ಮುಂದೆ ಒಂದು ಕೇಸ್ ಬಂದಿತ್ತು. ಒಬ್ಬ ಫಿರ್ಯಾದಿ ತಂದ ಕೇಸ್ ಹೀಗಿತ್ತು. ಒಬ್ಬ ಮಾಮೂಲಿ ಅರ್ಚಕ, ದೇವಸ್ಥಾನದಲ್ಲಿ ಮಂಗಳಾರತಿ ತಟ್ಟೆಯ ಪುಡಿಗಾಸಿನಿಂದ ಬದುಕುವವನು, ಸರ್ಕಾರಕ್ಕೆ ಯಾವುದೇ ತೆರಿಗೆ ಕಟ್ಟದೇ ಕೆಲವೇ ಸಮಯದಲ್ಲಿ ಶ್ರೀಮಂತನಾದ ಎಂದರೆ ಅವನು ಅಕ್ರಮ ರೀತಿಯಲ್ಲಿ ಧನಸಂಪಾದನೆ ಮಾಡಿರಬೇಕು. ಆದ್ದರಿಂದ ಆ ಅರ್ಚಕನ ಅಕ್ರಮ ಸಂಪಾದನೆಯ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಶಿಕ್ಷೆ ವಿಧಿಸಬೇಕೆಂದು ಪ್ರಾರ್ಥನೆ. ‘ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…

Read More

ಶಿವಮೊಗ್ಗ: ಸಾಗರವನ್ನು ಜಿಲ್ಲೆ ಮಾಡುವಂತೆ ಒತ್ತಾಯ, ಹೋರಾಟ, ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಿದೆ. ನಾಳೆ ಸಾಗರ ಬಂದ್ ಕೂಡ ಮಾಡೋದಕ್ಕೆ ಸಾಗರ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಹಿ ಗಾರ್ಮೆಂಟ್ಸ್ ನಿಂದ ನೌಕರರಿಗೆ ರಜೆಯನ್ನು ಘೋಷಿಸಲಾಗಿದೆ. ಸಾಗರ ಜಿಲ್ಲಾ ಹೋರಾಟ ಸಮಿತಿಯು ಸಾಗರ ಜಿಲ್ಲೆ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಕಳೆದ 12 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ, ಆಗ್ರಹ ಮಾಡಿದರೂ ಸರ್ಕಾರ, ಜನಪ್ರತಿನಿಧಿಗಳು, ಯಾವುದೇ ರೀತಿ ಸ್ಪಂದನೆ ಮಾಡಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದೆ. ಐತಿಹಾಸಿಕತೆಗೆ ಸಾಕ್ಷಿ ಸಾಗರ ಸಾಗರ ಪಟ್ಟಣವು ಐತಿಹಾಸಿಕ ನಗರವಾಗಿದ್ದು, ಸಾಗರ ತಾಲ್ಲೂಕಿನ ಕೆಳದಿ ಸಂಸ್ಥಾನವು ಕ್ರಿ.ಶ 1499ರಿಂದ 1763ರವರೆಗೆ ಸುಮಾರು 265 ವರ್ಷಗ ಕಾಲ ಅರಸರಾದ ಚೌಡಪ್ಪ ನಾಯಕರಿಂದ ಸದಾಶಿವ ನಾಯಕರ, ಶಿವಪ್ಪ ನಾಯಕ, ಕೆಳದಿ ಚೆನ್ನಮ್ಮಾಜಿ ಒಟ್ಟು 19 ರಾಜಮಹಾರಾಜರು 13 ಜಿಲ್ಲೆಗಳನ್ನು ಒಳಗೊಂಡು ಆಡಳಿತ ನಡೆಸಿದ ಇತಿಹಾಸವಿದೆ. ಸಾಗರ ಪ್ರಾಂತ್ಯವು ಕೆಳದಿ ಸಂಸ್ಥಾನ ಆಡಳಿತ ನಡೆಸಿದ ಐತಿಹಾಸಿಕ…

Read More

ಬೆಳಗಾವಿ ಸುವರ್ಣಸೌಧ: ಇಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಇಂದು ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ (2ನೇ ತಿದ್ದುಪಡಿ) ವಿಧೇಯಕ, ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಇಂದಿನ ಸುವರ್ಣ ವಿಧಾನಸಭೆದಲ್ಲಿ ನಡೆಯುತ್ತಿರುವಂತ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. https://kannadanewsnow.com/kannada/good-news-for-those-waiting-for-food-security-in-the-state-food-security-is-available-even-with-minimal-documentation/ https://kannadanewsnow.com/kannada/ipl-2026-auction-full-list-of-sold-players/

Read More