Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : “ಈ ವರ್ಷ ನಾಡಪ್ರಭು ಕೆಂಪೇಗೌಡ ಜಯಂತಿಯಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಶ್ವ ಪರಿಸರ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಗಿಡ ನೆಟ್ಟ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ. ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು” ಎಂದು ಕರೆ ಕೊಟ್ಟರು.

Read More

ಲೈಂಗಿಕ ಆರೋಗ್ಯ ಮತ್ತು ಉತ್ಸಾಹವು ಮಾನವನ ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಪ್ರಮುಖ ಭಾಗವಾಗಿದೆ. ಇಂದಿನ ಒತ್ತಡದ ಜೀವನಶೈಲಿ, ತಪ್ಪು ಆಹಾರ ಪದ್ಧತಿಯಿಂದಾಗಿ ಅನೇಕರಲ್ಲಿ ಕಾಮೋತ್ತೇಜನ ಅಥವಾ ಲೈಂಗಿಕ ಆಸಕ್ತಿ (Sex Drive) ಕಡಿಮೆಯಾಗುತ್ತಿರುತ್ತದೆ. ಆದರೆ, ನಾವು ದಿನನಿತ್ಯ ಸೇವಿಸುವ ಕೆಲವು ನೈಸರ್ಗಿಕ ಆಹಾರಗಳು ದೇಹದಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸಿ, ಹಾರ್ಮೋನ್‌ಗಳನ್ನು ಸಮತೋಲನದಲ್ಲಿಡುವ ಮೂಲಕ ಕಾಮೋತ್ತೇಜನವನ್ನು ನೈಸರ್ಗಿಕವಾಗಿ ಹೆಚ್ಚಿಸಬಲ್ಲವು. ಖ್ಯಾತ ಮಾಧ್ಯಮ ಸಂಸ್ಥೆ ‘ಎನ್‌ಡಿಟಿವಿ’ (NDTV) ಪ್ರಕಟಿಸಿರುವ ವರದಿಯ ಆಧಾರದ ಮೇಲೆ, ನಿಮ್ಮ ಲೈಂಗಿಕ ಜೀವನವನ್ನು ಮತ್ತಷ್ಟು ಮಧುರವಾಗಿಸಬಲ್ಲ ಮತ್ತು ಲೈಂಗಿಕ ಆಸಕ್ತಿಯನ್ನು ಹೆಚ್ಚಿಸಬಲ್ಲ 7 ಅದ್ಭುತ ಆಹಾರಗಳ ವಿವರ ಇಲ್ಲಿದೆ: 1. ಪಾಲಕ್ ಸೊಪ್ಪು (Spinach): ಪಾಲಕ್ ಸೊಪ್ಪಿನಲ್ಲಿ ಮೆಗ್ನೀಸಿಯಮ್ (Magnesium) ಸಮೃದ್ಧವಾಗಿದೆ. ಇದು ದೇಹದಲ್ಲಿನ ರಕ್ತನಾಳಗಳ ಉರಿಯೂತವನ್ನು ಕಡಿಮೆ ಮಾಡಿ, ರಕ್ತ ಪರಿಚಲನೆಯನ್ನು ಸುಗಮಗೊಳಿಸುತ್ತದೆ. ದೇಹದಲ್ಲಿ ರಕ್ತದ ಹರಿವು ಉತ್ತಮವಾಗಿದ್ದರೆ ಲೈಂಗಿಕ ಅಂಗಗಳಿಗೆ ಅಗತ್ಯವಿರುವ ರಕ್ತ ಪೂರೈಕೆಯಾಗಿ, ಲೈಂಗಿಕ ಪ್ರಚೋದನೆ ಮತ್ತು ಆಸಕ್ತಿ ನೈಸರ್ಗಿಕವಾಗಿ ಹೆಚ್ಚಾಗುತ್ತದೆ. 2.…

Read More

ಬೆಂಗಳೂರು: ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರುಡ್‌ಸೆಟ್ (RUDSET) ಸಂಸ್ಥೆಯು 38 ದಿನಗಳ ಉಚಿತ ‘ಕಂಪ್ಯೂಟರ್ ಟ್ಯಾಲಿ’ (Computer Tally) ತರಬೇತಿಯನ್ನು ಆಯೋಜಿಸಿದೆ. ಈ ವಸತಿ ಸಹಿತ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಹಾಗೂ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಈ ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿ ಎಂದಿನಿಂದ ಆರಂಭ? ತರಬೇತಿ ಅವಧಿ: 38 ದಿನಗಳು ಆರಂಭವಾಗುವ ದಿನಾಂಕ: ಜೂನ್ 16 ರಿಂದ ತರಬೇತಿ ತರಗತಿಗಳು ಅಧಿಕೃತವಾಗಿ ಶುರುವಾಗಲಿವೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ವಯೋಮಿತಿ: ಆಸಕ್ತ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು. ಭಾಷಾ ಜ್ಞಾನ: ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಸರಾಗವಾಗಿ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು. ಆದ್ಯತೆ: ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್‌ ಹಾಗೂ ಬಿಪಿಎಲ್‌ (BPL) ರೇಷನ್ ಕಾರ್ಡ್‌…

Read More

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು “ತಾಯಿ ಭೂಮಿಯ ಮುಂದೆ ಇರುವ ಸವಾಲುಗಳು – ಹವಾಮಾನ ಬದಲಾವಣೆ” ಎಂಬ ವಿಷಯದೊಂದಿಗೆ 15 ಮೇ 2026ರಿಂದ 05 ಜೂನ್ 2026ರವರೆಗೆ ನಡೆದ ವಿಶ್ವ ಪರಿಸರ ದಿನಾಚರಣೆ–2026 ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅಭಿಯಾನದ ಉದ್ದೇಶವು ರೈಲ್ವೆ ಸಿಬ್ಬಂದಿ, ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದಾಗಿತ್ತು. ಈ ಅಭಿಯಾನವನ್ನು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಉದ್ಘಾಟಿಸಿ, ಪರಿಸರ ಪ್ರತಿಜ್ಞೆಯನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬೋಧಿಸಿದರು. ಮೈಸೂರು, ದಾವಣಗೆರೆ, ಶಿವಮೊಗ್ಗ ಟೌನ್, ಹರಿಹರ, ಅರಸೀಕೆರೆ, ಸಕಲೇಶಪುರ, ಕಬಕ ಪುತ್ತೂರು, ಅಶೋಕಪುರಂ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಅಭಿಯಾನಗಳು, ಪ್ಲಾಸ್ಟಿಕ್ ವಿರೋಧಿ ಜಾಗೃತಿ ಕಾರ್ಯಕ್ರಮಗಳು, ಜಾಥಾಗಳು ಹಾಗೂ ಮನೆ ಮನೆಗೆ ಭೇಟಿ ನೀಡಿ ಕಸದ ವಿಂಗಡಣೆ ಮತ್ತು ಸರಿಯಾದ ವಿಲೇವಾರಿ ಕುರಿತು ಜಾಗೃತಿ ಮೂಡಿಸಲಾಯಿತು. ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಜೀವನ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ 110 ಕೆ.ವಿ ವಿದ್ಯುತ್ ಕೇಂದ್ರದ ಹತ್ತಿರ ಎಫ್-8 ಮಾರಿಕಾಂಬ ಮಾರ್ಗದ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ದಿನಾಂಕ: 06.06.2026ರ ಶನಿವಾರದಂದು ಸಾಗರ ಪಟ್ಟಣ ಹಾಗೂ ಗ್ರಾಮೀಣ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಕೈಕೊಡುವ ಪ್ರದೇಶಗಳ ವಿವರ: ಸಾಗರ ಪಟ್ಟಣ ವ್ಯಾಪ್ತಿ (ಎಫ್-7 ಮಾರ್ಗ): ಮಂಗಳಳಬೀಸು, ಚಂದ್ರಮಾವಿನಕೊಪ್ಪ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಚ್.ಬಿ ಇಂಡಸ್ಟ್ರಿಯಲ್ ವಸಹಾತು, ಅಗ್ರಹಾರ, ಹೆರಿಗೆ ಆಸ್ಪತ್ರೆ ಸುತ್ತಮುತ್ತ, ಬೆಳ್ಳಲಮಕ್ಕಿ, ಬಸವನಹೊಳೆ, ಜಂಬುಗಾರು, ತ್ಯಾಗರ್ತಿ ಕ್ರಾಸ್, ಎಫ್-8 ಮಾರಿಕಾಂಬ, ಶ್ರೀ ನಗರ, ರಾಮಪುರ ಬಡಾವಣೆ, ಸೊರಬ ರಸ್ತೆ, ವರದಾ ರಸ್ತೆ, ಗಣಪತಿ ದೇವಸ್ಥಾನ ರಸ್ತೆ, ತಿಲಕ್ ರಸ್ತೆ, ಮಾರ್ಕೆಟ್ ರಸ್ತೆ, ಶ್ರೀ ಟಾಕೀಸ್ ರಸ್ತೆ, ಎಫ್-15 ಆರ್.ಎಂ.ಸಿ, ಅನಾಲೆಕೊಪ್ಪ,…

Read More

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಸರ್ಜರಿ ನಡೆಸಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ (DC) ಸೇರಿದಂತೆ ಇಬ್ಬರು ಪ್ರಮುಖ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಜೂನ್ 5, 2026ರಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಪರವಾಗಿ ಸರ್ಕಾರದ ಜಂಟಿ ಕಾರ್ಯದರ್ಶಿ (ಸೇವೆಗಳು-1) ಟಿ. ಮಹಾಂತೇಶ್ ಅವರು ಈ ವರ್ಗಾವಣೆ ಆದೇಶಕ್ಕೆ ಸಹಿ ಹಾಕಿದ್ದಾರೆ. ಜೆ. ಜಗದೀಶ್ ಅವರಿಗೆ ಹೊಸ ಹೊಣೆ: ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಜಿ., IAS (KN: 2012) ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ (Greater Bengaluru Area) ನೂತನ ಕಮಿಷನರ್ (ಆಯುಕ್ತರು) ಆಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ: ಸಹಕಾರ ಸಂಘಗಳ ನೋಂದಣಾಧಿಕಾರಿಯಾಗಿದ್ದ (Registrar for Cooperative Societies) ಕಾಂತರಾಜು ಪಿ.ಎಸ್., IAS (KN: 2019) ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಶ್ರೀ ಜಗದೀಶ್ ಜಿ.…

Read More

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಗುಣಕಾರಿ, ಜೀವಸತ್ವಗಳು ಮತ್ತು ಪೋಷಕಾಂಶಗಳ ಗಣಿ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಪ್ರಕೃತಿಯ ಈ ಅದ್ಭುತ ಕೊಡುಗೆ ಎಲ್ಲರ ದೇಹ ಪ್ರಕೃತಿಗೆ ಹೊಂದುವುದಿಲ್ಲ. ಕೆಲವು ನಿರ್ದಿಷ್ಟ ಆರೋಗ್ಯ ಸಮಸ್ಯೆ ಇರುವವರು ಅಥವಾ ವಿಶೇಷ ಸಂದರ್ಭಗಳಲ್ಲಿ ಪಪ್ಪಾಯಿ ಹಣ್ಣನ್ನು ತಿಂದರೆ ಅದು ಅಮೃತವಾಗುವ ಬದಲು ವಿಷವಾಗುವ ಸಾಧ್ಯತೆ ಇರುತ್ತದೆ. ಯಾವ 5 ರೀತಿಯ ವ್ಯಕ್ತಿಗಳು ಪಪ್ಪಾಯಿ ಹಣ್ಣನ್ನು ತಿನ್ನಬಾರದು ಮತ್ತು ಅದರಿಂದಾಗುವ ಆರೋಗ್ಯದ ಅಪಾಯಗಳೇನು ಎಂಬುದರ ವಿವರವಾದ ಲೇಖನ ಇಲ್ಲಿದೆ: ರುಚಿಯಾದ ಮತ್ತು ಆರೋಗ್ಯಕರವಾದ ಪಪ್ಪಾಯಿ ಹಣ್ಣು ಜೀರ್ಣಕ್ರಿಯೆ ಸುಧಾರಿಸಲು, ತೂಕ ಇಳಿಸಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಸಹಕಾರಿ. ಆದರೆ, ವೈದ್ಯಕೀಯ ಸಂಶೋಧನೆಗಳ ಪ್ರಕಾರ, ಕೆಲವು ಆರೋಗ್ಯ ಪರಿಸ್ಥಿತಿಗಳಲ್ಲಿ ಪಪ್ಪಾಯಿ ಸೇವನೆ ಮಾಡುವುದು ಅಪಾಯವನ್ನು ತಂದೊಡ್ಡಬಹುದು. ಆ 5 ವರ್ಗದ ಜನರು ಯಾರು ಇಲ್ಲಿದೆ ಮಾಹಿತಿ: 1. ಗರ್ಭಿಣಿಯರು (Pregnant Women) ಗರ್ಭಿಣಿಯರು, ವಿಶೇಷವಾಗಿ ಆರಂಭಿಕ ತಿಂಗಳುಗಳಲ್ಲಿ, ಹಸಿ ಅಥವಾ ಅರೆಬೆಂದ ಪಪ್ಪಾಯಿ ಹಣ್ಣನ್ನು ತಿನ್ನಲೇಬಾರದು.…

Read More

ಬೆಂಗಳೂರು/ದಾವಣಗೆರೆ: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿ, ನಕಲಿ ಆಡಿಯೋವನ್ನು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳ ವಿರುದ್ಧ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾಗಿದೆ. ಸಿರಾಜ್ ಎಂಬುವವರು ಈ ಕುರಿತು ಅಧಿಕೃತವಾಗಿ ದೂರು ದಾಖಲಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರಿನಲ್ಲೇನಿದೆ? ರಾಜಕೀಯ ಷಡ್ಯಂತ್ರದ ಆರೋಪ: ದೂರುದಾರರಾದ ಸಿರಾಜ್ ಅವರು, “ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ನನ್ನ ವಿರುದ್ಧ ವ್ಯವಸ್ಥಿತವಾಗಿ ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಇದರ ಭಾಗವಾಗಿಯೇ ನಮ್ಮಿಬ್ಬರ ಹೆಸರನ್ನು ಬಳಸಿ ಸೃಷ್ಟಿಸಲಾಗಿರುವ ಸಂಪೂರ್ಣ ನಕಲಿ (Fake) ಆಡಿಯೋ ಒಂದನ್ನು ಕೆಲವು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈ ಮೂಲಕ ಸಾರ್ವಜನಿಕವಾಗಿ ನಮಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗುತ್ತಿದೆ” ಎಂದು ದೂರಿನಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ. ಕಠಿಣ ಕ್ರಮಕ್ಕೆ ಆಗ್ರಹ: ನಮ್ಮ ತೇಜೋವಧೆ ಮಾಡಲು ಈ ರೀತಿ ನಕಲಿ…

Read More

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ತನ್ನ 12ನೇ ತರಗತಿಯ ಫಲಿತಾಂಶೋತ್ತರ ಸೇವೆಗಳ ಪೋರ್ಟಲ್ ಅನ್ನು ಗುರಿಯಾಗಿಸಿಕೊಂಡು ನಡೆದಿರುವ ವ್ಯವಸ್ಥಿತ ಮತ್ತು ಸಂಘಟಿತ ಸೈಬರ್ ದಾಳಿಗಳ ಕುರಿತು ದೆಹಲಿ ಪೊಲೀಸರ ‘ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟಜಿಕ್ ಆಪರೇಷನ್ಸ್’ (IFSO) ಘಟಕಕ್ಕೆ ಶುಕ್ರವಾರ ಅಧಿಕೃತ ದೂರು ದಾಖಲಿಸಿದೆ. ಆನ್‌ಸ್ಕ್ರೀನ್ ಮಾರ್ಕಿಂಗ್ (OSM) ವ್ಯವಸ್ಥೆಯ ಮೂಲಕ ಮೌಲ್ಯಮಾಪನ ಮಾಡಲಾದ ಉತ್ತರ ಪತ್ರಿಕೆಗಳ ಮರು-ಮೌಲ್ಯಮಾಪನ ಮತ್ತು ಅಂಕಗಳ ಪರಿಶೀಲನೆಗಾಗಿ ಜೂನ್ 2 ರಂದು ಈ ಪೋರ್ಟಲ್ ಅನ್ನು ಪ್ರಾರಂಭಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳಿಂದ ಈ ಪ್ಲಾಟ್‌ಫಾರ್ಮ್ ಮೇಲೆ ಸರಣಿ ಸೈಬರ್ ದಾಳಿಗಳು ನಡೆಯುತ್ತಿವೆ ಎಂದು ಸಿಬಿಎಸ್‌ಇ ತಿಳಿಸಿದೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವ ಸಂಚು ದೇಶ ಮತ್ತು ವಿದೇಶಗಳ ವಿವಿಧ ಐಪಿ (IP) ವಿಳಾಸಗಳಿಂದ ಭಾರಿ ಪ್ರಮಾಣದ ದುರುದ್ದೇಶಪೂರಿತ ಟ್ರಾಫಿಕ್ (Malicious Traffic) ಹರಿಸುವ ಮೂಲಕ ಈ ದಾಳಿ ನಡೆಸಲಾಗಿದೆ. “ವೆಬ್‌ಸೈಟ್ ಅನ್ನು ನಿಷ್ಕ್ರಿಯಗೊಳಿಸುವುದು, ಅರ್ಹ ವಿದ್ಯಾರ್ಥಿಗಳಿಗೆ ಪೋರ್ಟಲ್ ಲಭ್ಯವಾಗದಂತೆ ತಡೆಯುವುದು ಮತ್ತು ರಾಷ್ಟ್ರ…

Read More

ಬೆಂಗಳೂರು: “ನಾನು ಮುಖ್ಯಮಂತ್ರಿಯಾದ ಮೇಲೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆಯ ಉಸ್ತುವಾರಿಯನ್ನು ನೀಡುತ್ತೇನೆ ಎಂದು ಮಾತು ಕೊಟ್ಟಿದ್ದು ನಿಜ” ಎಂಬುದನ್ನು ಸಿಎಂ ಡಿ.ಕೆ. ಶಿವಕುಮಾರ್ ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮಗೆ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರ ನಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಅಧಿಕೃತ ಪ್ರತಿಕ್ರಿಯೆ ನೀಡಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ಧ, ರಾಮಲಿಂಗಾರೆಡ್ಡಿ ಜೊತೆ ಮಾತನಾಡ್ತೇನೆ: ಈ ಕುರಿತು ವಿವರಣೆ ನೀಡಿದ ಡಿ.ಕೆ. ಶಿವಕುಮಾರ್, “ಹಿಂದೆ ಅವರಿಗೆ ಸಾರಿಗೆ ಇಲಾಖೆ ನೀಡಿದಾಗ ನಾನು ಮತ್ತು ನನ್ನ ಸಹೋದರ (ಡಿ.ಕೆ. ಸುರೇಶ್) ಹೋಗಿ ಅವರ ಮನವೊಲಿಸಿದ್ದೆವು. ನಂತರ ಕೆ. ಸುಧಾಕರ್ ಅವರ ಬಳಿ ಇದ್ದ ಮುಜರಾಯಿ ಇಲಾಖೆಯನ್ನೂ ತೆಗೆದುಕೊಟ್ಟಿದ್ದು ನಿಜ. ಆದರೆ ಈ ಬಾರಿ ಹೈಕಮಾಂಡ್ ವರಿಷ್ಠರು ತೀರ್ಮಾನ ಕೈಗೊಂಡಿದ್ದು, ಕೃಷ್ಣಬೈರೇಗೌಡ ಅವರಿಗೆ ಬೆಂಗಳೂರು ಅಭಿವೃದ್ಧಿ ಇಲಾಖೆಯನ್ನು ಹಂಚಿಕೆ ಮಾಡಿದ್ದಾರೆ” ಎಂದರು. “ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು…

Read More