Author: kannadanewsnow09

ಬೆಂಗಳೂರು; ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿರುವುದಾಗಿ ಸ್ಪರ್ಶ್ ಆಸ್ಪತ್ರೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿದ್ದು, ಅಕ್ಟೋಬರ್.23ರಂದು ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಶಾಮನೂರು ಶಿವಶಂಕರಪ್ಪ ಅವರು ಬಹು ಅಂಗಾಂಗ ವೈಫಲ್ಯದಿಂದ ಸಂಜೆ 6.20ಕ್ಕೆ ನಿಧನರಾಗಿರುವುದಾಗಿ ತಿಳಿಸಿದೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವಂತ ಸ್ಪರ್ಶ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. https://kannadanewsnow.com/kannada/the-last-rites-of-shamanur-shivashankarappa-will-be-performed-in-davangere-tomorrow/ https://kannadanewsnow.com/kannada/dogital-arrest-man-1-crore/

Read More

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ. ಇಂದು ನಿಧನರಾದಂತ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ ಎಂಬುದಾಗಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಶಿವಶಂಕರಪ್ಪ ಅವರ ಪುತ್ರಿಯರು ಬೆಂಗಳೂರಲ್ಲೇ ಇದ್ದು ಎಸ್ ಎಸ್ ಮಲ್ಲಿಕಾರ್ಜುನ್ ಅವರ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಅವರು ಬಂದ ನಂತ್ರ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ದಾವಣಗೆರೆಯಲ್ಲಿ ಎಲ್ಲಿ? ಎಷ್ಟೊತ್ತಿಗೆ ನಾಳೆ ನಡೆಸಬೇಕು ಎಂಬ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. https://kannadanewsnow.com/kannada/holiday-declared-for-all-colleges-of-davangere-university-tomorrow-following-the-death-of-shamanur-shivashankarappa/ https://kannadanewsnow.com/kannada/dogital-arrest-man-1-crore/

Read More

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ನಾಳೆ ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ನಾಳೆ ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಸಂತಾಪ ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಸಂತಾಪ ಸೂಚಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು ಸಮಾಜಕ್ಕೆ ಸಲ್ಲಿಸಿದ ಅಮೂಲ್ಯ…

Read More

ಬೆಂಗಳೂರು: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಸಂತಾಪ ಸೂಚಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು ಸಮಾಜಕ್ಕೆ ಸಲ್ಲಿಸಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಮತ್ತು ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. ನನ್ನ ಸಂಬಂಧಿಯೂ ಆಗಿದ್ದ ಅವರು, ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಾಗಿ ಪಕ್ಷದಲ್ಲಿ ತಳಮಟ್ಟದಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಬಾಪುಜಿ ಶಿಕ್ಷಣ ಸಂಸ್ಥೆಯನ್ನು ಅತ್ಯಂತ ಎತ್ತರಕ್ಕೆ ಕಟ್ಟಿ ಬೆಳೆಸಿದವರು. ದೊಡ್ಡ ದಾನಿಗಳಾಗಿದ್ದ ಅವರು, ಶ್ರೀಶೈಲ ಕ್ಷೇತ್ರ ಅಭಿವೃದ್ಧಿಗೆ ಮತ್ತು ಉಳವಿ ಕ್ಷೇತ್ರದ ಅಭಿವೃದ್ಧಿಗೆ, ಗುಡ್ಡಾಪುರ ದಾನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅವರು ಬಹಳಷ್ಟು ಶ್ರಮಿಸಿದ್ದರು ಎಂದಿದ್ದಾರೆ. ಅತ್ಯಂತ…

Read More

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ನಾಳೆ ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ನಾಳೆ ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ. ಅಂದಹಾಗೇ 6 ಸಲ ಶಾಸಕರು ಹಾಗೂ ಒಂದು ಸಲ ಸಂಸದರಾಗಿಯೂ ಶಾಮನೂರು ಶಿವಶಂಕರಪ್ಪ ಆಯ್ಕೆಯಾಗಿದ್ದರು. 1997ರಲ್ಲಿ ರಾಜೀನಾಮೆ ನೀಡಿದ್ದಂತ ಅವರು, ದಾವಣಗೆರೆ ಸಂಸದರಾಗಿಯೂ ಆಯ್ಕೆಯಾಗಿದ್ದರು. 1999ರ ಲೋಕಸಭೆಯ ಮಧ್ಯಂತರ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಸೋಲು ಕಂಡಿದ್ದರು. ಐದು ದಶಕಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಬಾರಿ ಮಾತ್ರವೇ ಸೋಲು ಕಂಡಿದ್ದರು. 2004, 2008, 2013, 2018, 2023ರಲ್ಲಿ ಶಾಮನೂರು ಶಿವಶಂಕರಪ್ಪ ಅವರು ಶಾಸಕರಾಗಿ ಆಯ್ಕೆಯಾಗಿದ್ದರೇ, 1997ರಲ್ಲಿ ಸಂಸದರಾಗಿದ್ದರು. 1994ರಲ್ಲಿ ಕಾಂಗ್ರೆಸ್ ನಿಂದ ದಾವಣಗೆರೆ ವಿಧಾನಸಭೆಗೆ ಟಿಕೆಟ್ ಪಡೆದು ಕಣಕ್ಕೆ…

Read More

ನವದೆಹಲಿ: ನಾಡಿನ ಹಿರಿಯ ರಾಜಕಾರಣಿ, ಮಾಜಿ ಮಂತ್ರಿಗಳು, ಉದ್ಯಮಿಯೂ ಆಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಶೋಕ ಸಂದೇಶ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು ಎಂದು ತಿಳಿಸಿದ್ದಾರೆ. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಕೇಂದ್ರ ಸಚಿವರು ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು…

Read More

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದಿದ್ದಾರೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/CMofKarnataka/status/2000215539734749379 https://kannadanewsnow.com/kannada/the-mortal-remains-of-shamanur-shivashankarappa-will-be-sent-to-davangere-tomorrow-afternoon/ https://kannadanewsnow.com/kannada/dogital-arrest-man-1-crore/

Read More

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಜತೆಯಿಂದ ನಿಧನರಾದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ 1 ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ. ದಾವಣಗೆರೆಯ ಬಾಪೂಜಿ ಸಂಸ್ಥೆಯ ಎಂಬಿಎ ಕಾಲೇಜು ಆವರಣದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. https://kannadanewsnow.com/kannada/sagar-mla-gopalakrishna-belur-condoles-the-death-of-senior-congress-leader-shamanur-shivashankarappa/ https://kannadanewsnow.com/kannada/dogital-arrest-man-1-crore/

Read More

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ವಯೋಸಜಹತೆಯಿಂದ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪವನ್ನು ಸೂಚಿಸಿದ್ದಾರೆ. ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ಜಿಲ್ಲೆಯ ಮುತ್ಸದ್ದಿ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು ಎಂದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಶಿವಶಂಕರಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 6 ಬಾರಿ ಶಾಸಕರಾಗಿ, ಮಂತ್ರಿಯಾಗಿಯೂ ಸೇವೆಯನ್ನು ಶಾಮನೂರು ಶಿವಶಂಕರಪ್ಪ ಸಲ್ಲಿಸಿದ್ದಾರೆ. ಅವರ ನಿಧನಕ್ಕೆ ಹೃದಯಾಂತರಾಳದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಬಂದು ಬಳಗ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/minister-eshwar-khandre-condoles-the-death-of-senior-leader-shamanur-shivashankarappa/ https://kannadanewsnow.com/kannada/dogital-arrest-man-1-crore/

Read More

ನವದೆಹಲಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ತೋಟಗಾರಿಕಾ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ…

Read More