Subscribe to Updates
Get the latest creative news from FooBar about art, design and business.
Author: kannadanewsnow09
ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ತಮ್ಮ ಅಧಿಕೃತ ಆಸ್ತಿ ವಿವರಗಳನ್ನು ಅಫಿಡವಿಟ್ ಮೂಲಕ ಘೋಷಿಸಿಕೊಂಡಿದ್ದಾರೆ. ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ಪುತ್ರರಾಗಿರುವ ಉಮೇಶ್ ಮೇಟಿ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ. ಉಮೇಶ್ ಮೇಟಿ ಅವರ ಆಸ್ತಿ ವಿವರ: ಸ್ಥಿರಾಸ್ತಿ: ಉಮೇಶ್ ಮೇಟಿ ಅವರ ಹೆಸರಿನಲ್ಲಿರುವ ಮನೆ, ನಿವೇಶನ ಮತ್ತು ಜಮೀನಿನ ಒಟ್ಟು ಮೌಲ್ಯ 5.30 ಕೋಟಿ ರೂಪಾಯಿ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಚರಾಸ್ತಿ: 200 ಗ್ರಾಂ ಚಿನ್ನಾಭರಣ ಸೇರಿದಂತೆ ಇವರ ಚರಾಸ್ತಿಯ ಒಟ್ಟು ಮೌಲ್ಯ 85.03 ಲಕ್ಷ ರೂಪಾಯಿಗಳಾಗಿವೆ. ನಗದು ಮತ್ತು ವಾಹನ: ಉಮೇಶ್ ಮೇಟಿ ಅವರ ಬಳಿ 21.49 ಲಕ್ಷ ರೂಪಾಯಿ ನಗದು ಹಣವಿದೆ. ಇನ್ನು ವಾಹನಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ ಮೂರು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನ ಇರುವುದಾಗಿ ಘೋಷಿಸಿದ್ದಾರೆ. ಸಾಲ:…
ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು (Ballot Paper) ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ ಈ ವಿಧೇಯಕವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಯಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ ಸದನದಿಂದ ಹೊರನಡೆದರು. ಸರ್ಕಾರದ ವಾದ: ಇವಿಎಂ ಮೇಲೆ ನಂಬಿಕೆ ಕುಂದುತ್ತಿದೆ ಮಸೂದೆಯ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಪ್ರಕ್ರಿಯೆಯ ಬಗ್ಗೆ ದೇಶಾದ್ಯಂತ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದು ಸಮರ್ಥಿಸಿಕೊಂಡರು. ಮತದಾನದ ವ್ಯತ್ಯಾಸ: ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಗೆ ಶೇ. 58.22 ರಷ್ಟಿದ್ದ ಮತದಾನ ರಾತ್ರಿ ವೇಳೆಗೆ ಶೇ. 68.02 ಕ್ಕೆ ಏರಿಕೆಯಾಗಿದೆ. ಕೇವಲ 5 ಗಂಟೆಗಳಲ್ಲಿ 50 ಲಕ್ಷ ಮತಗಳು…
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಹಣಕಾಸು ವರ್ಷದ ಮೂರನೇ ಹಾಗೂ ಅಂತಿಮ ಕಂತಿನ ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಒಟ್ಟು 14,767.89 ಕೋಟಿ ರೂ. ಮೊತ್ತದ ಈ ಪೂರಕ ಅಂದಾಜನ್ನು ಸದನದ ಮುಂದೆ ಇಟ್ಟಿದ್ದಾರೆ. ಈ ಪೈಕಿ ಕೇಂದ್ರ ಸರ್ಕಾರದ ಸಹಾಯಧನ ಮತ್ತು ಮೀಸಲು ನಿಧಿಯನ್ನು ಹೊರತುಪಡಿಸಿ, ರಾಜ್ಯದ ಸಂಚಿತ ನಿಧಿಯಿಂದ ಹೊರಹೋಗುವ ನಿವ್ವಳ ನಗದು ಮೊತ್ತ 8,120.99 ಕೋಟಿ ರೂ. ಗಳಾಗಿವೆ. ಇಲಾಖಾವಾರು ಹಂಚಿಕೆಯ ಪ್ರಮುಖ ವಿವರಗಳು: ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತಾತ್ಮಕ ವೆಚ್ಚಗಳಿಗಾಗಿ ಪ್ರಮುಖ ಇಲಾಖೆಗಳಿಗೆ ಈ ಕೆಳಗಿನಂತೆ ಅನುದಾನ ಮೀಸಲಿಡಲಾಗಿದೆ: ಇಂಧನ ಇಲಾಖೆ: ರಾಜಸ್ವ ಲೆಕ್ಕದಲ್ಲಿ ಅತಿ ಹೆಚ್ಚು ಅಂದರೆ 5,760 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ನೀರಾವರಿ ಇಲಾಖೆ: ಬಂಡವಾಳ ಲೆಕ್ಕದಲ್ಲಿ 1,226 ಕೋಟಿ ರೂ. ಪೂರಕ ಅಂದಾಜು ಮಾಡಲಾಗಿದೆ. ಕಂದಾಯ ಇಲಾಖೆ: ರಾಜಸ್ವ ಲೆಕ್ಕದಲ್ಲಿ 735.97 ಕೋಟಿ ರೂ. ಹಾಗೂ…
ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು (Ballot Paper) ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ ಈ ವಿಧೇಯಕವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಯಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ ಸದನದಿಂದ ಹೊರನಡೆದರು. ಸರ್ಕಾರದ ವಾದ: ಇವಿಎಂ ಮೇಲೆ ನಂಬಿಕೆ ಕುಂದುತ್ತಿದೆ ಮಸೂದೆಯ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಪ್ರಕ್ರಿಯೆಯ ಬಗ್ಗೆ ದೇಶಾದ್ಯಂತ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದು ಸಮರ್ಥಿಸಿಕೊಂಡರು. ಮತದಾನದ ವ್ಯತ್ಯಾಸ: ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಗೆ ಶೇ. 58.22 ರಷ್ಟಿದ್ದ ಮತದಾನ ರಾತ್ರಿ ವೇಳೆಗೆ ಶೇ. 68.02 ಕ್ಕೆ ಏರಿಕೆಯಾಗಿದೆ. ಕೇವಲ 5 ಗಂಟೆಗಳಲ್ಲಿ 50 ಲಕ್ಷ ಮತಗಳು…
ಬೆಂಗಳೂರು: ವಂದಾಲ ಹಾಗೂ ಬಸವನ ಬಾಗೇವಾಡಿ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (ಎಲ್ಸಿ ಸಂಖ್ಯೆ 62) ಕಾಮಗಾರಿಗಳ ಹಿನ್ನೆಲೆ ಭಾಗಶಃ ರದ್ದುಗೊಂಡಿದ್ದ ಕೆಳಕಂಡ ರೈಲುಗಳನ್ನು ಇದೀಗ ತಮ್ಮ ನಿಯಮಿತ ಮಾರ್ಗದಲ್ಲಿ ಎಂದಿನಂತೆ ಸಂಚರಿಸಲು ಪುನಃಸ್ಥಾಪಿಸಲಾಗಿದೆ. ರೈಲು ಸಂಖ್ಯೆ 07329 ಎಸ್ಎಸ್ಎಸ್ ಹುಬ್ಬಳ್ಳಿ–ವಿಜಯಪುರ ವಿಶೇಷ ರೈಲು, ಮಾರ್ಚ್ 24ರಂದು, ಬಾಗಲಕೋಟೆ–ವಿಜಯಪುರ ನಡುವಿನ ಭಾಗಶಃ ರದ್ದತಿ ಹಾಗೂ ಬಾಗಲಕೋಟೆಯಲ್ಲಿ ಅಂತ್ಯಗೊಳ್ಳುವಂತೆ ತಿಳಿಸಲಾಗಿತ್ತು. ಇದೀಗ ಈ ರೈಲು ತನ್ನ ಪೂರ್ಣ ನಿಯಮಿತ ಮಾರ್ಗವಾದ ಎಸ್ಎಸ್ಎಸ್ ಹುಬ್ಬಳ್ಳಿ–ವಿಜಯಪುರದವರೆಗೆ ಸಂಚರಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 07330 ವಿಜಯಪುರ–ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು, ಮಾರ್ಚ್ 25ರಂದು ವಿಜಯಪುರ–ಬಾಗಲಕೋಟೆ ನಡುವೆ ಭಾಗಶಃ ರದ್ದತಿ ಹಾಗೂ ವಿಜಯಪುರ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗುವಂತೆ ತಿಳಿಸಲಾಗಿತ್ತು. ಇದೀಗ ಈ ರೈಲೂ ತನ್ನ ಪೂರ್ಣ ನಿಯಮಿತ ಮಾರ್ಗವಾದ ವಿಜಯಪುರ–ಎಸ್ಎಸ್ಎಸ್ ಹುಬ್ಬಳ್ಳಿವರೆಗೆ ಸಂಚರಿಸಲಿದ್ದು, ಪ್ರಯಾಣಿಕರಿಗೆ ಸಂಪೂರ್ಣ ಸೇವೆ ನೀಡಲಿದೆ. https://kannadanewsnow.com/kannada/billionaire-onlyfans-owner-leonid-radvinsky-passes-away/ https://kannadanewsnow.com/kannada/epfo-to-clear-rs-10181-crore-unclaimed-balance-via-new-auto-settlement-feature-for-inactive-accounts/
ಲಂಡನ್: ಜಗತ್ಪ್ರಸಿದ್ಧ ಸಬ್ಸ್ಕ್ರಿಪ್ಷನ್ ಆಧಾರಿತ ಅಡಲ್ಟ್ ಕಂಟೆಂಟ್ ಪ್ಲಾಟ್ಫಾರ್ಮ್ ‘ಓನ್ಲಿಫ್ಯಾನ್ಸ್’ (OnlyFans) ಮಾಲೀಕ ಲಿಯೋನಿಡ್ ರಾಡ್ವಿನ್ಸ್ಕಿ (43) ಅವರು ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ದೀರ್ಘಕಾಲದವರೆಗೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅವರು ಸೋಮವಾರ (ಮಾರ್ಚ್ 23, 2026) ಶಾಂತಿಯುತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಕಂಪನಿ ಅಧಿಕೃತವಾಗಿ ತಿಳಿಸಿದೆ. ಮುಖ್ಯಾಂಶಗಳು: ಯಶಸ್ವಿ ಉದ್ಯಮಿ: ಉಕ್ರೇನಿಯನ್-ಅಮೆರಿಕನ್ ಉದ್ಯಮಿಯಾದ ರಾಡ್ವಿನ್ಸ್ಕಿ, 2018 ರಲ್ಲಿ ಓನ್ಲಿಫ್ಯಾನ್ಸ್ನ ಮಾತೃ ಸಂಸ್ಥೆಯಾದ ‘ಫೆನಿಕ್ಸ್ ಇಂಟರ್ನ್ಯಾಷನಲ್’ ಅನ್ನು ಸ್ವಾಧೀನಪಡಿಸಿಕೊಂಡಿದ್ದರು. ಭಾರಿ ಬೆಳವಣಿಗೆ: ಅವರ ನೇತೃತ್ವದಲ್ಲಿ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಈ ಪ್ಲಾಟ್ಫಾರ್ಮ್ ಸ್ಫೋಟಕ ಬೆಳವಣಿಗೆಯನ್ನು ಕಂಡಿತು. ಅಡಲ್ಟ್ ಪರ್ಫಾರ್ಮರ್ಗಳು ಮತ್ತು ಸೆಲೆಬ್ರಿಟಿಗಳು ನೇರವಾಗಿ ಹಣ ಗಳಿಸಲು ಇದು ದೊಡ್ಡ ವೇದಿಕೆಯಾಗಿ ಹೊರಹೊಮ್ಮಿತು. ಆರ್ಥಿಕ ಲಾಭ: ಕಳೆದ ವರ್ಷವೊಂದರಲ್ಲೇ ಈ ಸಂಸ್ಥೆಯು 701 ಮಿಲಿಯನ್ ಡಾಲರ್ ಡಿವಿಡೆಂಡ್ (ಲಾಭಾಂಶ) ಘೋಷಿಸಿ ದಾಖಲೆ ಬರೆದಿತ್ತು. ಬ್ರಿಟನ್ ಮೂಲದ ಖಾಸಗಿ ಕಂಪನಿಯೊಂದರಿಂದ ಅತಿ ಹೆಚ್ಚು ಲಾಭಾಂಶ ಪಡೆದ ಉದ್ಯಮಿಗಳಲ್ಲಿ ರಾಡ್ವಿನ್ಸ್ಕಿ ಒಬ್ಬರಾಗಿದ್ದರು. ಭವಿಷ್ಯದ ಪ್ರಶ್ನೆ: ನಿಧನಕ್ಕೂ ಮುನ್ನ ರಾಡ್ವಿನ್ಸ್ಕಿ…
ಬೆಂಗಳೂರು : ಮುಂದಿನ ಜೂನ್ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದರು. ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ನಾನು ಈ…
ಬೆಂಗಳೂರು: ಕೊತ್ತನೂರು ಗ್ರಾಮದ ಆರ್ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಕಬಳಿಕೆ ಮಾಡುತ್ತಿರುವುದನ್ನು ಸರಕಾರ ತಕ್ಷಣ ತಡೆಯಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಆಗ್ರಹಿಸಿದೆ. ಪಾರ್ಕ್ ಗೆ ಸೇರಿದ ಜಾಗವನ್ನು ಕೆಲವು ವ್ಯಕ್ತಿಗಳು ಆಕ್ರಮವಾಗಿ ಕಬಳಿಕೆ ಮಾಡಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ. ಇದಕ್ಕೆ ಅನಧಿಕೃತವಾಗಿ ಜಿಬಿಎಯಿಂದ ಖಾತೆಯನ್ನು ಸಹ ಸೃಷ್ಟಿಸಿದ್ದಾರೆ. ಇದು ಸಾರ್ವಜನಿಕ ಆಸ್ತಿ ಎಂಬುದು ಸಾರ್ವಜನಿಕರಿಗೆ ಚೆನ್ನಾಗಿ ತಿಳಿದಿದ್ದು, ಕೆಲವು ಪ್ರಭಾವಿ ರಾಜಕೀಯ ವ್ಯಕ್ತಿಗಳ ಹೆಸರು ದುರುಪಯೋಗ ಮಾಡಿಕೊಂಡು ಈ ರೀತಿಯಲ್ಲಿ ಕಬಳಕೆ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಮೇಲು ನೋಟಕ್ಕೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬಂದಿದ್ದು, ರಾಜ್ಯ ಸರ್ಕಾರ ಕೂಡ ಪರೋಕ್ಷವಾಗಿ ಸಾಥ್ ನೀಡುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಕ್ರಮ ಜರುಗಿಸಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಜಿಬಿಎ ಬೆಂಗಳೂರು ದಕ್ಷಿಣ ವಲಯಕ್ಕೆ ದೂರು ನೀಡಿ…
ಮಂಡ್ಯ : ಬೇಸಿಗೆ ಕಾಲ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು. ಮದ್ದೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಸಾಧ್ಯತೆ ಇದೆ. ಈಗಾಗಲೇ ಆತಗೂರು ಹೋಬಳಿಯ ಹೂತಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಕಂಡು ಬಂದಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮೀಪದ ಖಾಸಗಿ ಕೊಳವೆ ಬಾವಿಗಳಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು. ಇದಕ್ಕಾಗಿ ತಾಲೂಕು ಆಡಳಿತ ಬಳಿ 40 ಲಕ್ಷ ಕ್ಕೂ ಹೆಚ್ಚು ಅನುದಾನವಿದ್ದು, ಎಲ್ಲ ಗ್ರಾಮಗಳಲ್ಲೂ ಸೂಕ್ತ ವ್ಯವಸ್ಥೆ ಮಾಡಬೇಕು. ನೀರಿನ ಲಭ್ಯತೆ, ಕೊರತೆಯ ವಸ್ತು ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ…
ಶಿವಮೊಗ್ಗ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ, ಅದರಲ್ಲೂ ವಿಶೇಷವಾಗಿ ಸ್ಥಳೀಯ ಮಟ್ಟದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಇಂದು ಅತಂತ್ರ ಸ್ಥಿತಿಗೆ ತಲುಪಿವೆ. ಕರ್ನಾಟಕ ಸರ್ಕಾರವು ಇತ್ತೀಚೆಗೆ ಅನುಮೋದಿಸಿರುವ ‘ನೂತನ ಜಾಹೀರಾತು ನೀತಿ – 2026’ ಸ್ಥಳೀಯ ಪತ್ರಿಕೆಗಳ ಪಾಲಿಗೆ ಮರಣಶಾಸನವಾಗಲಿದೆ ಎಂಬ ಭೀತಿ ಎದುರಾಗಿದೆ. ಈ ನೀತಿಯನ್ನು ಕೈಬಿಡಬೇಕು ಅಥವಾ ಮರುಪರಿಶೀಲಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲ್ಲೂಕು ಘಟಕವು ಎಸಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದೆ. ಇಂದಿನ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮನವಿಯಲ್ಲಿ ಉಲ್ಲೇಖವೇನು? 1. ಅಸ್ತಿತ್ವಕ್ಕೆ ಎದುರಾದ ಅಪಾಯ: ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ನೂತನ ಜಾಹೀರಾತು ನೀತಿಯನ್ನು ಘೋಷಿಸಿದ್ದರು. ಇದು ಯಥಾವತ್ತಾಗಿ ಜಾರಿಗೆ ಬಂದರೆ, ವರ್ಷಗಳಿಂದ ನಾಡು-ನುಡಿ ಮತ್ತು ಸ್ಥಳೀಯ ಸಮಸ್ಯೆಗಳ ಧ್ವನಿಯಾಗಿರುವ ಸಣ್ಣ ಪತ್ರಿಕೆಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ನೀತಿಯು ವಾಸ್ತವಕ್ಕೆ ದೂರವಾಗಿದ್ದು, ಸಣ್ಣ ಪತ್ರಿಕೆಗಳ ಮೇಲೆ…














