Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು; ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿಯಲ್ಲಿ ಗೋಲ್ ಮಾಲ್ ಬಗ್ಗೆ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಸುದ್ದಿ ಪ್ರಕಟವಾದ ಎರಡೇ ದಿನದಲ್ಲಿ ಕಲ್ಮನೆ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ್ದಂತ ತನಿಖಾಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದರು. ಆ ಬಳಿಕ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಹಾಗಾದ್ರೇ ತನಿಖಾಧಿಕಾರಿಗಳ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಸಂಪೂರ್ಣ ರಿಪೋರ್ಟ್ ಮುಂದಿದೆ ಓದಿ. ನಿಮ್ಮ ಕನ್ನಡ ನ್ಯೂಸ್ ನೌ ಕೆಲ ತಿಂಗಳ ಹಿಂದೆ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಈ ಸುದ್ದಿಯ ಬೆನ್ನಲ್ಲೇ ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದರ ಬಗ್ಗೆಯೂ ವರದಿ ಮಾಡಿತ್ತು. ಆ ಬಳಿಕ ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಇಂದು ಇಂಚಿಂಚೂ…
ವಿಷ್ಣುವನ್ನು ಶ್ರೀಹರಿ, ವೆಂಕಟೇಶ್ವರ, ಲಕ್ಷ್ಮೀ ಪತಿ ಹೀಗೆ ನಾನಾ ಹೆಸರುಗಳಿಂದ ಕರೆಯುತ್ತಾರೆ. ಶ್ರೀಹರಿಯನ್ನು ಆತನಿಗೆ ಪ್ರಿಯವಾದ ಹೂವುಗಳಿಂದ ಪೂಜಿಸಿದರೆ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ, ಮರಣಾ ನಂತರ ವೈಕುಂಠ ಪ್ರಾಪ್ತವಾಗುತ್ತದೆ, ಪಾಪಗಳಿಂದ ಮುಕ್ತಿ ದೊರೆಯುತ್ತದೆ ಎನ್ನುವ ನಂಬಿಕೆಯಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಹಾಗಾದರೆ, ಶ್ರೀಹರಿ ವಿಷ್ಣುವಿಗೆ ಪ್ರಿಯವಾದ ಹೂವುಗಳಾವುವು..? ವಿಷ್ಣು ಪೂಜೆಯಲ್ಲಿ ಮರೆಯದೇ ಈ ಹೂವುಗಳನ್ನು ಬಳಸಿ.. ಚಂಪಾ ಹೂವು: ಚಂಪಾ ಹೂವು ಭಗವಾನ್ ವಿಷ್ಣು ಮತ್ತು ಶ್ರೀ ಕೃಷ್ಣನಿಗೆ ಬಹಳ ಪ್ರಿಯವಾದ ಹೂವುಗಳಾಗಿದೆ. ಗುರುವಾರದಂದು ಶ್ರೀಹರಿಯನ್ನು ಪೂಜಿಸುವಾಗ ಆತನಿಗೆ ಪೂಜೆಯಲ್ಲಿ ಚಂಪಾ ಹೂವುಗಳನ್ನು ಅರ್ಪಿಸಿದರೆ ವೈಕುಂಠ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಆದ್ದರಿಂದ ಶ್ರೀಹರಿಯನ್ನು ಪೂಜಿಸುವಾಗ ಒಂದಾದರೂ ಚಂಪಾ ಹೂವನ್ನು ಆತನಿಗೆ ಅರ್ಪಿಸಿ. ಅಶೋಕ…
ಮಂಗಳೂರು: ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಉಮೇಶ್ ಪಂಬದ ಸನ್ಮಾನ ಸಮಿತಿ, ಜಾರಪ್ಪ ಪಂಬದ ಸಂಸ್ಮರಣಾ ಸಮಿತಿ ಮತ್ತು ಅರಸು ಧರ್ಮ ಜಾರಂದಾಯ, ಬಂಟ ಮತ್ತು ವಾರಾಹಿ ದೇವಸ್ಥಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ್ತಿತರರನ್ನು ಸನ್ಮಾನಿಸಿ ಮಾತನಾಡಿದರು. ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ ಎಂಬುದು ಸದಾ ಕಾಲದ ನಂಬಿಕೆಯೇ ಆಗಿದೆ ಎಂದರು. ಸರ್ಕಾರಿ ಕೆಲಸವನ್ನು ಬಿಟ್ಟು ಉಮೇಶ್ ಪಂಬದ ಅವರು ದೈವದ ಚಾಕರಿಗೆ ನಿಂತು, ದೈವವಾಡುವ ನುಡಿಗಳನ್ನಾಡುತ್ತಲೇ ಪರೋಕ್ಷವಾಗಿ ಹಲವು ಕುಟುಂಬಗಳಿಗೆ ಸಂತೈಸುವ ಶಕ್ತಿಯಾಗಿದ್ದಾರೆ. ಇಂಥವರನ್ನು ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಅತ್ಯಂತ ಔಚಿತ್ಯಪೂರ್ಣ ಸಂಗತಿ ಎಂದರು. ದೈವವೆಂಬುದು ಕುಟುಂಬದ ಬೆನ್ನಿಗೆ ಸದಾ…
ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ಭೇಟೆ ಮುಂದುವರೆಸಿದ್ದಾರೆ. ಹೈದರಾಬಾದಿನ ಲಾಡ್ಜ್ ನಲ್ಲಿ ತರೆಮರೆಸಿಕೊಂಡಿದ್ದಂತ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಪೊಲೀಸರು ಕಿಂಗ್ ಪಿನ್ ರವಿ, ಪೊಲೀಸ್ ಪೇದೆ ಅಣ್ಣಪ್ಪ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದರಿಂದಾಗಿ ಬಹುತೇಕ ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. https://kannadanewsnow.com/kannada/stpi-established-in-davangere-land-allotment-order-copy-handed-over/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/
ದಾವಣಗೆರೆ; ಜಿಲ್ಲೆಯಲ್ಲಿ ಸಾಫ್ ವೇರ್ಟೆಕ್ನಾಲಜಿ ಪಾರ್ಕ್ (ಎಸ್ಟಿಪಿಐ) ಸ್ಥಾಪಿಸಲು ಉದ್ದೇಶಿಸಿ, ಕಾಯ್ದಿರಿಸಿದ ಭೂ ಮಂಜೂರಾತಿ ಆದೇಶದ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ನಿರ್ದೇಶನದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿಯವರು ಅಧಿಕೃತವಾಗಿ ಬೆಂಗಳೂರಿನಲ್ಲಿ ಹಸ್ತಾಂತರ ಮಾಡಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್-2025ನ 2ನೇ ದಿನದಂದು ಎಸ್ಟಿಪಿಐನ ಸೆಂಟ್ರಲ್ ಡೈರೆಕ್ಟರ್ ಜನರಲ್ ಅರವಿಂದ್ ಅವರಿಗೆ ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ವಿಷನ್ ದಾವಣಗೆರೆ ತಂಡದ ಸದಸ್ಯರ ಸಮಕ್ಷಮ ಅಧಿಕೃತವಾಗಿ ಎಸ್ ಟಿಪಿಐ ಸ್ಥಾಪನೆಗಾಗಿ ಭೂ ಮಂಜೂರಾತಿ ಪತ್ರ ಹಸ್ತಾಂತರಿಸಿದರು. ಎಸ್ಟಿಪಿಐ ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕ ಸಂಜಯ್ ತ್ಯಾಗಿ ಹಾಗೂ ತಂಡದವರು ಕಳೆದ ಎರಡು ತಿಂಗಳ ಹಿಂದೆ ದಾವಣಗೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ದಾವಣಗೆರೆ ನಗರಕ್ಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ಲಗತ್ತಾಗಿರುವ ವಡ್ಡಿನಹಳ್ಳಿಯಲ್ಲಿ ಕಾಯ್ದಿರಿಸಿದ 2 ಎಕರೆ ಜಮೀನನ್ನು ಎಸ್ ಟಿಪಿಐ ಸ್ಥಾಪಿಸಲು ಸೂಕ್ತವಾಗಿದೆ ಎಂಬ ಆಶಯವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಆ ಜಾಗವನ್ನು…
ಬೆಂಗಳೂರು: ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ ಮಾರ್ಗ ಬದಲಾವಣೆ ಮಾಡಲಾಗುವುದು/ ನಿಯಂತ್ರಿಸಲಾಗುವುದು: ರೈಲುಗಳ ರದ್ದತಿ: ದಿನಾಂಕ 25.11.2025 ರಂದು ರೈಲು ಸಂಖ್ಯೆ 66563 ಯಶವಂತಪುರ- ಹೊಸೂರು ಮೆಮು, ರೈಲು ಸಂಖ್ಯೆ 66585 ಯಶವಂತಪುರ- ಹೊಸೂರು ಮೆಮು ಮತ್ತು ರೈಲು ಸಂಖ್ಯೆ 06591 ಯಶವಂತಪುರ- ಹೊಸೂರು ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು. ದಿನಾಂಕ 25.11.2025 ರಂದು ರೈಲು ಸಂಖ್ಯೆ 66564 ಹೊಸೂರು – ಯಶವಂತಪುರ ಮೆಮು, ರೈಲು ಸಂಖ್ಯೆ 66586 ಹೊಸೂರು – ಯಶವಂತಪುರ ಮೆಮು ಮತ್ತು ರೈಲು ಸಂಖ್ಯೆ 06592 ಹೊಸೂರು – ಯಶವಂತಪುರ ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು. ರೈಲುಗಳ ಮಾರ್ಗ ಬದಲಾವಣೆ: ದಿನಾಂಕ 25.11.2025ರಂದು ಹೊರಡುವ ರೈಲು ಸಂಖ್ಯೆ 12677 ಎಸ್.ಎಂ.ವಿ.ಟಿ. ಬೆಂಗಳೂರು – ಎರ್ನಾಕುಲಂ ಎಕ್ಸ್ಪ್ರೆಸ್ ರೈಲು ಎಸ್.ಎಂ.ವಿ.ಟಿ. ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟ್ಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ…
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಸ್ಥಾಪನೆಯಾಗಿ 25 ವರ್ಷಗಳು ತುಂಬಿವೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವವನ್ನು ಆಚರಣೆ ಮಾಡಲಾಯಿತು. ಬೃಹತ್ ಸಮಾವೇಶದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಳ್ಳಿ ಹಬ್ಬದ ಸಂಭ್ರಮದ ಕಾರಣದಿಂದಾಗಿ ಬೆಳ್ಳಿ ನಾಣ್ಯವನ್ನು ಕೂಡ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ವೈಎಸ್ ವಿ ದತ್ತ, ಟಿ.ಎ ಶರವಣ, ಹೆಚ್.ಎಂ ರಮೇಶ್ ಗೌಡ ಸೇರಿದಂತೆ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು. ರೈತ ಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ, ಜೆಡಿಎಸ್ ಶಾಲು ತಿರುಗಿಸುವ ಮೂಲಕ ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ನಾಯಕರು ರಜತ ಮಹೋತ್ಸವವನ್ನು ಸಂಭ್ರಮಾಚರಣೆ ಮಾಡಿದರು. ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ಗಣ್ಯರು ದೀಪ…
ಬೆಂಗಳೂರು : “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ: “ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು…
ಶಿವಮೊಗ್ಗ : ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕಾಗಿದೆ. ಪತ್ರಕರ್ತರು ವರದಿ ಮಾಡಿದರೇ, ಪತ್ರಿಕಾ ವಿತರಕರು ಮನೆಮನೆಗೆ ಪತ್ರಿಕೆ ತಲುಪಿಸುವ ಕೆಲಸ ಮಾಡುತ್ತಾರೆ ಎಂದು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್ ಎನ್. ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ಸಂಘದ ವತಿಯಿಂದ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಮಹೇಶ್ ಹೆಗಡೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದ ಅವರು, ಸರ್ಕಾರ ಪತ್ರಕರ್ತರಿಗೆ ಎಲ್ಲ ಸೌಲಭ್ಯ ನೀಡಿದಂತೆ ಪತ್ರಿಕಾ ವಿತರಕರಿಗೂ ಎಲ್ಲ ಸೌಲಭ್ಯ ನೀಡಬೇಕು. ಉಚಿತ ವಿಮಾ ಯೋಜನೆ, ಬಸ್ ಯೋಜನೆ ಸಹ ವಿತರಕರಿಗೆ ಸಿಗಬೇಕು. ಸರ್ಕಾರ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ, ವಿತರಕರ ಸಮಸ್ಯೆಗಳಿಗೆ ಪತ್ರಕರ್ತರ ಸಂಘ ಸದಾ ಸ್ಪಂದಿಸುತ್ತಾ ಬರುತ್ತಿದೆ. ಪತ್ರಕರ್ತರು ಮತ್ತು ವಿತರಕರು ಒಂದೆ ನಾಣ್ಯದ ಎರಡು ಮುಖವಿದ್ದಂತೆ. ಸರ್ಕಾರ ಇಬ್ಬರಿಗೂ ಸಮಾನ ಸೌಲಭ್ಯ ನೀಡಬೇಕು.…














