Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗುಂಡು ಹಾರಿಸಿ ಪತ್ನಿಯನ್ನೇ ಪತಿಯೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್ ಬಳಿಯಲ್ಲಿ ಈ ದುಷ್ಕೃತ್ಯವನ್ನು ನಡೆಸಲಾಗಿದೆ. ಏಕಾಏಕಿ ಗನ್ ತೆಗೆದು ಪತ್ನಿ ಮೇಲೆ ಪತಿ ಫೈರಿಂಗ್ ಮಾಡಿದ್ದಾನೆ. ನಡು ರಸ್ತೆಯಲ್ಲೇ ಗುಂಡು ಹಾರಿಸಿ ಪತ್ನಿಯನ್ನು ಬಾಲಮುರುಗನ್ ಎಂಬಾತ ಹತ್ಯೆಗೈದಿದ್ದಾನೆ. ಅಂದಹಾಗೇ ಕೋರ್ಟ್ ನಲ್ಲಿ ದಂಪತಿಗಳ ವಿವಾಹ ವಿಚ್ಚೇಧನ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಇಬ್ಬರೂ ವಿಚಾರಣೆ ಮುಗಿಸಿಕೊಂಡು ಬಂದಿದ್ದರು. ಈ ವೇಳೆಯಲ್ಲಿ ಬಾಲಮುರುಗನ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ಬಾಲಮುರುಗನ್ ತನ್ನ ಬಳಿಯಿದ್ದಂತ ಗನ್ ತೆಗೆದು ಪತ್ನಿಗೆ ಹೊಡೆದಿದ್ದಾರೆ. ಇದರಿಂದಾಗಿ ಬಾಲಮುರುಗನ್ ಪತ್ನಿ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾಗಡಿರೋಡ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಗುಡ್ ನ್ಯೂಸ್ ಅನ್ನು ನಿಗಮ ನೀಡಿದೆ. ಅಂತರ ನಿಗಮ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು, 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ:01-01-2026 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, ದಿನಾಂಕ:31-01-2026 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ (ಪತಿ-ಪತ್ನಿ/ಅಂಗವಿಕಲ/ತೀವ್ರತರಹದ ಅನಾರೋಗ್ಯ ಒಳಗೊಂಡಂತೆ) ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದೆ. ಸದರಿ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಛೇರಿ/ವಿಭಾಗ/ಘಟಕದ/ತರಬೇತಿ ಕೇಂದ್ರ/ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಕೋರಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು.. https://kannadanewsnow.com/kannada/menstrual-leave-for-female-employees-of-the-transport-department-ksrtc-official-order/ https://kannadanewsnow.com/kannada/attention-bengaluru-residents-here-are-the-details-of-our-metro-feeder-bus-services/ https://kannadanewsnow.com/kannada/good-news-for-the-people-of-bengaluru-air-conditioned-vajra-bmtc-buses-start-operating-on-this-route/
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪರಸ್ಪರ ಸಹಕಾರದೊಂದಿಗೆ ಮೆಟ್ರೋ ಪ್ರಯಾಣಿಕರಿಗೆ ಸುಗಮ ಮತ್ತು ಪರಿಣಾಮಕಾರಿ ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವ ಉದ್ದೇಶದಿಂದ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿವೆ. ಈ ಸೇವೆಗಳು ಮೆಟ್ರೋ ನಿಲ್ದಾಣಗಳಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿವೆ. ಬಿಎಂಟಿಸಿ ವತಿಯಿಂದ ಆರಂಭಿಸಲಾದ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರಗಳು ಈ ಕೆಳಗಿನಂತಿವೆ: ಜ್ಞಾನಭಾರತಿ ಮೆಟ್ರೋ ನಿಲ್ದಾಣ – ಭಾರತ್ನಗರ 2ನೇ ಹಂತ ಮಾರ್ಗ: ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಮುದ್ದೈಯನಪಾಳ್ಯ ಜಂಕ್ಷನ್, ಭಾರತ್ನಗರ 1ನೇ ಹಂತ, ಬ್ಯಾಡರಹಳ್ಳಿ ಮೂಲಕ ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ ಹೊರಡುವ ಸಮಯ: 06.25, 07.40, 08.50, 10.30, 14.05, 15.05, 16.20, 18.10, 19.35, 20.55 ಭಾರತ್ನಗರ 2ನೇ ಹಂತದಿಂದ ಹೊರಡುವ ಸಮಯ: 05.50, 07.00, 08.15, 09.30, 11.10, 14.30, 15.40, 17.15, 18.50, 20.15 ಕೆ.ಆರ್.…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೂತನ ಹವಾನಿಯಂತ್ರಿತ ವಜ್ರ ಮಾರ್ಗಸಂಖ್ಯೆ ವಿ-ಎಂಎಫ್-5 ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ದಿನಾಂಕ 24.12.2025 ರಿಂದ ಜಾರಿಗೆ ಬರುವಂತೆ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ದಿಂದ ಇಂದಿರಾ ನಗರ ಪೋಲಿಸ್ ಸ್ಟೇಷನ್, ಮಿಲಿಟರಿ ಬ್ರಿಡ್ಜ್, ಕೋರಮಂಗಲ ವಾಟರ್ ಟ್ಯಾಂಕ್, ಮಡಿವಾಳ, ಮಾರ್ಗವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ಗೆ ನೂತನವಾಗಿ ಹವಾನಿಯಂತ್ರಿತ ಸಾರಿಗೆಗಳನ್ನು ಮಾರ್ಗಸಂಖ್ಯೆ – ವಿ-ಎಂಎಫ್-5 ರಲ್ಲಿ 04 ಕಾರ್ಯಾಚರಣೆಗೊಳಿಸಲಾಗುವುದು. ವಿವರಗಳು ಕೆಳಕಂಡಂತಿದೆ. ಮಾರ್ಗಸಂಖ್ಯೆ ವಿ-ಎಂಎಫ್-5 ವೇಳಾಪಟ್ಟಿ (ನಿರ್ಗಮನ ನಮಯ) ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಸೆಂಟ್ರಲ್ ಸಿಲ್ಕ್ ಬೋರ್ಡ್ 0515, 0550, 0700, 0745, 0915, 1010, 1040, 1110, 1205, 1235, 1310, 1340, 1530, 1600, 1645, 1715, 1805,1835,…
ನವದೆಹಲಿ : ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ(Treatment and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು. “ಬೆಂಗಳೂರು ದೇಶದ ಮಹಾನಗರಗಳಲ್ಲಿ ಒಂದಾಗಿದ್ದು, ಇಲ್ಲಿ ಅನೇಕ ನಗರಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಾಕಿ ಉಳಿದಿರುವ ಅನುಮತಿ ನೀಡಬೇಕು” ಎಂದು ಪತ್ರದಲ್ಲಿ ತಿಳಿಸಿದ್ದಾರೆ. “ಮೆಟ್ರೋ 2ನೇ ಹಂತದ…
ಮುಂಬೈ : ವೈದ್ಯಕೀಯ ಲೋಕದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ. ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ (ಎಚ್ಎನ್ಆರ್ಎಫ್ಹೆಚ್) ಹಾಗೂ ಧೀರೂಭಾಯಿ ಅಂಬಾನಿ ಆಕ್ಯುಪೇಷನಲ್ ಹೆಲ್ತ್ (ಡಿಎಒಎಚ್) ಹಾಗೂ ಜಾಮ್ ನಗರದಲ್ಲಿನ ಸಮುದಾಯ ಕೇಂದ್ರದ ಸಹಯೋಗದಲ್ಲಿ ಟೆಲಿ- ರೊಬೋಟಿಕ್ ಸರ್ಜರಿ ಕಾರ್ಯಕ್ರಮ ಆರಂಭಿಸಿದೆ. ಇದಕ್ಕೆ ಸಂಪೂರ್ಣ ಬಲ ಸಿಕ್ಕಿರುವುದು ರಿಲಯನ್ಸ್ ಜಿಯೋದಿಂದ. ಭಾರತದಲ್ಲಿನ ರಿಮೋಟ್ ಶಸ್ತ್ರಕ್ರಿಯೆ ಚಿಕಿತ್ಸೆಗೆ ಈ ಉಪಕ್ರಮ ಹೊಸ ಯುಗದಂತೆ ದಾಖಲಾಗಿದೆ. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ಪರಿಣತ ಸರ್ಜನ್ ಗಳು ಇನ್ನು ಮುಂದೆ ತಾವಿರುವ ಸ್ಥಳದಿಂದಲೇ ದೇಶದಾದ್ಯಂತ ಇರುವ ಸಹಯೋಗಿ ಆರೋಗ್ಯಸೇವೆ ಕೇಂದ್ರಗಳಲ್ಲಿ ರೊಬೋಟಿಕ್ ನೆರವಿನ ಸರ್ಜರಿಗಳನ್ನು ಮಾಡಬಹುದು ಹಾಗೂ ಮಾರ್ಗದರ್ಶನ ನೀಡಬಹುದು. ಮೆಟ್ರೋ- ಮೆಟ್ರೋಯೇತರ ಪ್ರದೇಶಗಳಲ್ಲಿ ಇರುವಂಥ ರೋಗಿಗಳಿಗೆ ಕೂಡ ಸ್ಪೆಷಲೈಸ್ಡ್, ತುಂಬ ಸೂಕ್ಷ್ಮವಾದ ಚಿಕಿತ್ಸೆಯನ್ನು ನೇರವಾಗಿ ತರಲಾಗಿದೆ. ಉತ್ಕೃಷ್ಟ ದರ್ಜೆಯ ಚಿಕಿತ್ಸೆಗಳನ್ನು ಪಡೆಯುವುದಕ್ಕೆ ದೂರದ ಪ್ರದೇಶ ಎಂಬುದು ರೋಗಿಗಳ ಪಾಲಿಗೆ ದೊಡ್ಡ ತಡೆಯಾಗಿತ್ತು, ಈ ಕಾರ್ಯಕ್ರಮವು ಅದನ್ನು ತೊಡೆದುಹಾಕಿದೆ.ಪ್ರಯಾಣ ಮಾಡಬೇಕು ಎಂಬ ಅಗತ್ಯವಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ…
ಶಿವಮೊಗ್ಗ: ಜಿಲ್ಲೆಯ ಹೊಸನಗರದ ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರನ್ನು ಒಳಗೊಂಡಂತೆ ದೇವಸ್ಥಾನ ಸಮಿತಿ ರಚನೆಗೊಂಡಿತ್ತು. ಈ ಸಮಿತಿಯು ಸೋಮವಾರದಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕಲಗೋಡು ರತ್ನಾಕರ್ ಪ್ರಸ್ತುತ ವರ್ಷದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರವು ಸ್ಥಾನ ಪಡೆದಿದ್ದು ನಮಗೆಲ್ಲರಿಗೂ ಅತ್ಯಂತ ಖುಷಿಯ ವಿಷಯವಾಗಿದೆ. ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಸಮಿತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಬೇಕಾದ ಎಲ್ಲಾ ರೀತಿಯ ಯೋಜನೆಯನ್ನು ಸಿದ್ಧಪಡಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಸಾಮಾನ್ಯ ಸಭೆಯ ನಂತರ ಸಾಗರ – ಹೊಸನಗರ ಕ್ಷೇತ್ರದ…
ಬೆಂಗಳೂರು: ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಈ ಯೋಜನೆಗಳನ್ನು ಜಾರಿಗೆ ನೀಡಿದ್ದರೂ, ಇನ್ನೂ ಒಬ್ಬ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನ ಸಿಗಲಿಲ್ಲ. ಇದಕ್ಕೆ ಕಠಿಣ ಷರತ್ತುಗಳು ಕಾರಣವಾಗಿವೆ ಎನ್ನುವುದನ್ನು ವಿವರಿಸಿದ್ದಾರೆ. ಇದಕ್ಕೆ ತಕ್ಷಣವೇ ಸ್ಪಂಧಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆ ನೀಡಿದ್ದಾರೆ. ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಮಾತ್ರವೇ ಸೀಮಿತ ಮಾಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮಾನ್ಯತೆ ಪಡೆದಿರುವ ಪತ್ರಿಕೆಯಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದ್ದು, ಎಂಸಿಸಿ ಯಲ್ಲಿ ಸೀಟು ಸಿಕ್ಕಿರುವವರು ಮೂಲ ದಾಖಲೆಗಳನ್ನು ಹಿಂಪಡೆಯಲು ಡಿ.24ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 3,164 ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಸೀಟು ಹಂಚಿಕೆ ಮಾಡಿದ್ದು, ಸದರಿ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶ ಪ್ರಕಟಣೆ ನಂತರ ಕೆಲವರು ಎಂಸಿಸಿ ಯಲ್ಲಿ ಸೀಟು ಸಿಕ್ಕಿದ್ದು, ಅಲ್ಲಿಯದೇ ಇಷ್ಟ ಎನ್ನುವವರು ಮೂಲ ದಾಖಲೆಗಳ ಸಮೇತ ಕೆಇಎ ಸೀಟು ಬಿಟ್ಟು ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕೆ ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಳ್ಳಲಾಗುವುದು. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ಮೂಲ ದಾಖಲೆ ವಾಪಸ್ ಪಡೆದವರನ್ನು ಬಿಟ್ಟು ಹೊಸದಾಗಿ ಸೀಟು ಹಂಚಿಕೆ ಮಾಡಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಸೇವಾ ನಿರತ ಅಭ್ಯರ್ಥಿಗಳ…
ಶಿವಮೊಗ್ಗ: ಅತಿ ಹೆಚ್ಚು ಅಂಕ ಪಡೆದ ಅಂಕ ಪಟ್ಟಿಗಳು ನಮ್ಮ ಎದುರಿಗಿವೆ. ಆದರೆ ಕೌಶಲ್ಯವಿಲ್ಲದೇ ಇದ್ದರೆ ಸ್ಪರ್ಧಾ ಜಗತ್ತನ್ನು ಎದುರಿಸಲು ಸಾಧ್ಯವಿಲ್ಲ ಆ ದೃಷ್ಟಿಯಲ್ಲಿ ಯುವಜನರು ಸಜ್ಜಾಗಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲೆಯ ಸಂಸದ ಬಿವೈ ರಾಘವೇಂದ್ರ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ‘ಸುವರ್ಣ ಸಾಗರ’ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಅಭಿಯಾನದ ಸಂದರ್ಭ. ನಾವು ಓದಿದ ಶಾಲೆಯನ್ನು ಸದಾ ನೆನಪಿಸಿಕೊಳ್ಳುವ ಮನಸುಗಳ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರಿ ಶಾಲಾಕಾಲೇಜುಗಳ ಅಭಿವೃದ್ದಿಗೆ ಸರ್ಕಾರ ಅಗತ್ಯ ಸೌಲಭ್ಯ ಕೊಡುತ್ತದೆ. ಆದರೆ ನಮ್ಮ ಪಾತ್ರ ಏನು ಎನ್ನುವ ಕುರಿತು ವಿದ್ಯಾರ್ಥಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಶಾಲಾ-ಕಾಲೇಜುಗಳು ವ್ಯಕ್ತಿತ್ವ ನಿರ್ಮಾಣದ ಕೇಂದ್ರವಾಗಿರುತ್ತದೆ. ಹದಿಹರೆಯದ ವಯಸ್ಸಿನಲ್ಲಿ ಅನೇಕ ತಪ್ಪುಗಳು ನಡೆಯುತ್ತದೆ. ಆದರೆ ನಿಮ್ಮ ಭವಿಷ್ಯವನ್ನು ಸದಾ ನೆನಪಿನಲ್ಲಿ ಇರಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಾಗ…














