Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅಲ್ಲದೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1,600 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಗೃಹರಕ್ಷಕ ದಳ, ಪೌರರಕ್ಷಣೆ ಮತ್ತು ಎಸ್ಡಿಆರ್ಎಫ್ ಅಧಿಕಾರಿ, ಸಿಬ್ಬಂದಿಗಳಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಇಲಾಖೆಯು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿ, ರಾಜ್ಯಕ್ಕೆ ಗೌರವ ಸಂಪಾದನೆ ಮಾಡಿರುದನ್ನು ರಾಜ್ಯ ಸರ್ಕಾರ ಮತ್ತು ಜನಸಮುದಾಯ ಗಮನಿಸಿದೆ ಎಂದು ಹೇಳಿದರು. ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶಿಸ್ತಿನ ಸಿಪಾಯಿಗಳು. ಪೊಲೀಸ್ ಇಲಾಖೆಯ ಜೊತೆಜೊತೆಯಾಗಿ ಅಷ್ಟೇ ಶಿಸ್ತನ್ನು ಕಾಪಾಡಿಕೊಂಡು…
ಬೆಂಗಳೂರು: ನಗರದ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ರಾಷ್ಟ್ರದ ಏಕತೆಗೆ ಭಂಗ ಬರುವಂತ ಚಟುವಟಿಕೆಗಳು ನಡೆಯುತ್ತಿವೆ ಎಂಬುದಾಗಿ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದನು. ಈ ದೂರು ಆಧರಿಸಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು, ಬೆಂಗಳೂರಿನ ಅಬ್ದುಲ್ ರಹೀಮ್ ಅವರ ಪುತ್ರ ಅಬ್ದುಲ್ ರಜಾಕ್ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಅವರು ವ್ಯಾಸಂಗ ಮಾಡುತ್ತಿರುವಂತ ಸಾಮರ್ ಇಂಟರ್ ನ್ಯಾಷನರ್ ಇಸ್ಲಾಮಿಕ್ ಶಾಲೆಯಲ್ಲಿ ಕಾನೂನಿಗೆ ವಿರುದ್ಧವಾಗಿ ನಡೆಯುತ್ತಿರುವಂತ ಅವ್ಯವಹಾರಗಳ ಬಗ್ಗೆ ಸೂಕ್ತ ಕ್ರಮಕ್ಕೆ ಪತ್ರದಲ್ಲಿ ಕೋರಿದ್ದಾರೆ ಎಂದಿದ್ದಾರೆ. ದಿನಾಂಕ 24-11-2019ರಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಮುಸ್ಲೀಂ ಜನಾಂಗದವರ ಚರಿತ್ರೆಯನ್ನು ವಿವರಿಸುವ ಸಂದರ್ಭದಲ್ಲಿ ರಾಷ್ಟ್ರವನ್ನು ಮುಸಲ್ಮಾನ್ ಆಡಳಿತಕ್ಕೆ ಒಳಪಡಿಸಬೇಕಾದ ಅತ್ಯಗತ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಅಲ್ಲದೇ ಚರ್ಚೆಗೆ ಒಳಪಡಿಸುವಂತೆಯೂ…
ಬೆಂಗಳೂರು: ಬಡವರ ಹೊಟ್ಟೆಯ ಮೇಲೆ ಕಾಂಗ್ರೆಸ್ ಸರ್ಕಾರ ಹೊಡೆದಿದೆ. ಸ್ವಾರ್ಥಕ್ಕಾಗಿ ಕೂಲಿ ಕಾರ್ಮಿಕರ ಭವಿಷ್ಯವನ್ನು ಬಲಿ ಕೊಡುತ್ತಿದೆ ಎಂಬುದಾಗಿ ಜೆಡಿಎಸ್ ತೀವ್ರ ವಾಗ್ಧಾಳಿ ನಡೆಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜಾತ್ಯಾತೀತ ಜನತಾ ದಳ ಪಕ್ಷವು, ಗ್ರಾಮೀಣ ಜನರ ಉದ್ಯೋಗಕ್ಕೆ ಗ್ರಹಣ ಹಿಡಿಸಿದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಯೋಜನೆಗೆ ಅಡ್ಡಿ ಪಡಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಗ್ರಾಮೀಣ ಭಾಗದ ಜನರ ಉದ್ಯೋಗವನ್ನು ಕಸಿಯುತ್ತಿದೆ ಎಂಬುದಾಗಿ ಗುಡುಗಿದೆ. ಮನರೇಗಾ ಯೋಜನೆಯಲ್ಲಿ ನಕಲಿ ಜಾಬ್ ಕಾರ್ಡ್ ಸೃಷ್ಟಿಸಿ ಹಣ ಲೂಟಿ ಹೊಡೆಯುತ್ತಿದ್ದ ಕಾಂಗ್ರೆಸ್ಸಿಗರು, ತಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿಕೊಳ್ಳಲು ಕೂಲಿ ಕಾರ್ಮಿಕರ ಉದ್ಯೋಗಕ್ಕೂ ಕುತ್ತು ತಂದು, ಅವರ ಭವಿಷ್ಯಕ್ಕೆ ಕೊಳ್ಳಿ ಹಿಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದೆ. ಕೇಂದ್ರ ಸರ್ಕಾರದ ಮೇಲಿನ ದ್ವೇಷ ರಾಜಕಾರಣಕ್ಕಾಗಿ ಗ್ರಾಮೀಣ ಭಾಗದ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸಿದ್ಧರಾಮಯ್ಯ ಸರ್ಕಾರದ ನಡೆ ಖಂಡನೀಯ ಅಂತ ಹೇಳಿದೆ. https://twitter.com/JanataDal_S/status/2026185951958171740
ಬೆಂಗಳೂರು: ‘ಅಭಯ ಹಸ್ತ’ದ ಮೂಲಕ 1,000 ಆರೋಗ್ಯ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಇದರಿಂದ ನಮ್ಮ ಆರೋಗ್ಯ ವ್ಯವಸ್ಥೆ ಇನ್ನಷ್ಟು ಬಲಗೊಂಡಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಭಯ ಹಸ್ತ ಕಾರ್ಯಕ್ರಮದಲ್ಲಿ 1000 ಆರೋಗ್ಯ ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದಂತ ಅವರು, ಮಧ್ಯಮ ವರ್ಗ, ಕೆಳಮಧ್ಯಮ ವರ್ಗ ಹಾಗೂ ಬಡಜನರು ನಮ್ಮ ಸರ್ಕಾರಿ ಆಸ್ಪತ್ರೆಗಳ ಮೇಲೆ ಅಪಾರ ನಂಬಿಕೆ ಇಟ್ಟು ಬರುತ್ತಾರೆ. ಆದ್ದರಿಂದ ಸರ್ಕಾರಿ ಸೇವೆ ಎಂದರೆ ಕೇವಲ ಉದ್ಯೋಗವಲ್ಲ, ಅದು ಜನಸೇವೆಯ ಜವಾಬ್ದಾರಿ ಎಂಬುದನ್ನು ಆರೋಗ್ಯ ಇಲಾಖೆ ಕುಟುಂಬಕ್ಕೆ ಸೇರ್ಪಡೆಯಾದ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು. ನಮ್ಮ ಸರ್ಕಾರ ವಿವಿಧ ಜನಪರ ಯೋಜನೆಗಳ ಮೂಲಕ ಗುಣಮಟ್ಟದ ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುತ್ತಿದೆ. ಆ ಸೇವೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ನಮ್ಮ ಆರೋಗ್ಯ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾಗರಿಕರಿಗೆ ಸದೃಢ ಬದುಕು ಕಲ್ಪಿಸುವುದರ ಜೊತೆಗೆ ಸಶಕ್ತ ಕರ್ನಾಟಕ ನಿರ್ಮಾಣದತ್ತ ನಮ್ಮ ಪ್ರಯಾಣ ದಿಟ್ಟವಾಗಿ ಸಾಗುತ್ತಿದೆ…
ಧಾರವಾಡ: ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಯುವಜನತೆ ಬೀದಿಗೆ ಇಳಿದಿದ್ದಾರೆ. ಪೊಲೀಸರ ವಿರೋಧದ ನಡುವೆಯೂ ಯುವಕರು ಪ್ರತಿಭಟನೆಗೆ ಇಳಿದಿದ್ದು, ಬ್ಯಾರಿಕೇಡ್ ಲೆಕ್ಕಿಸದೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಯುವಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಜಯನಗರ ವೃತ್ತದ ಕಡೆಗೆ ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಯುವಕರು ಪ್ರತಿಭಟನಾ ರ್ಯಾಲಿಯಲ್ಲಿ ಸಾಗುತ್ತಿದ್ದಾರೆ. ಎಕೆಎಸ್ಎ, ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಪ್ರತಿಭಟನಾ ನಿರತ ಯುವಕರನ್ನು ತಡೆಯೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬ್ಯಾರಿಕೇಡ್ ಹಾಕಿ ಯುವಕರನ್ನು ತಡೆಯೋದಕ್ಕೆ ಮುಂದಾದ ಪೊಲೀಸರ ಪ್ರಯತ್ನ ವಿಫಲವಾಗಿದೆ. ಬ್ಯಾರಿಕೇಡ್ ತಳ್ಳಿಕೊಂಡು ಯುವಕರು ಧಾರವಾಡದ ಜಯನಗರ ವೃತ್ತದ ಕಡೆಗೆ ತಮ್ಮ ಪ್ರತಿಭಟನಾ ರ್ಯಾಲಿಯನ್ನು ಮುಂದುವರೆಸಿದ್ದಾರೆ. ಬ್ಯಾರಿಕೇಡ್ ಹಾಕಿದಂತ ವೇಳೆಯಲ್ಲಿ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದಕ್ಕೂ ಕಾರಣವಾಯಿತು. ಮಾತಿನ ಚಕಮಕಿ ನಡೆದು ಉದ್ರಿಕ್ತತೆಯೂ ಉಂಟಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್…
ನವದೆಹಲಿ: ದೇಶದಲ್ಲಿ ಮತ್ತೊಂದು ಆತಂಕಕಾರಿ ಘಟನೆ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಚಾರ್ಟರ್ಡ್ ವಿಮಾನವೊಂದು ಇದ್ದಕ್ಕಿದ್ದಂತೆ ರಾಡಾರ್ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಮೂಲಗಳು ತಿಳಿಸಿವೆ. ಜಾರ್ಖಂಡ್ನ ರಾಂಚಿ ವಿಮಾನ ನಿಲ್ದಾಣದಿಂದ ಉಡ್ಡಯನಗೊಂಡ ಕೆಲವೇ ಕ್ಷಣಗಳಲ್ಲಿ ಚಾರ್ಟರ್ಡ್ ವಿಮಾನವೊಂದು ರಾಡಾರ್ ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ಮೂಲಗಳು ತಿಳಿಸಿವೆ. ಘಟನೆಯ ವಿವರಗಳು: ವೈದ್ಯಕೀಯ ಸೇವೆಗಾಗಿ ನಿಯೋಜನೆ: ಇದು ತುರ್ತು ವೈದ್ಯಕೀಯ ಸೇವೆಗಾಗಿ (Medical Flight) ಬಳಸಲಾಗುತ್ತಿದ್ದ ವಿಮಾನವಾಗಿದ್ದು, ರಾಂಚಿಯಿಂದ ಹೊರಟ ತಕ್ಷಣ ಮುಂದಿನ ನಿಯಂತ್ರಣ ಕೇಂದ್ರದೊಂದಿಗೆ (Control Station) ಯಶಸ್ವಿಯಾಗಿ ಸಂಪರ್ಕ ಸಾಧಿಸಿತ್ತು. ಸಂಪರ್ಕ ಕಡಿತ: ಮುಂದಿನ ಹಂತದ ಸಮನ್ವಯಕ್ಕಾಗಿ (Coordination) ವಿಮಾನವನ್ನು ಹಸ್ತಾಂತರಿಸಿದ ನಂತರ, ಇದ್ದಕ್ಕಿದ್ದಂತೆ ವಿಮಾನದೊಂದಿಗಿನ ಸಂಪರ್ಕ ಕಡಿತಗೊಂಡಿದೆ. ರಾಡಾರ್ನಿಂದ ಕಣ್ಮರೆ: ವಿಮಾನವು ರಾಂಚಿ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯೊಂದಿಗೆ ಪುನಃ ಸಂಪರ್ಕ ಸಾಧಿಸಲು ವಿಫಲವಾಗಿದ್ದು, ಪ್ರಸ್ತುತ ರಾಡಾರ್ನಿಂದ ನಾಪತ್ತೆಯಾಗಿದೆ. ತಕ್ಷಣದ ಕ್ರಮಗಳು: ರಾಂಚಿ ವಿಮಾನ ನಿಲ್ದಾಣದ ಮೂಲಗಳ…
ನಿಮ್ಮ ಲೈಂಗಿಕ ಜೀವನವನ್ನು (Sex Life) ನೈಸರ್ಗಿಕವಾಗಿ ಸುಧಾರಿಸಲು ಮತ್ತು ನಿಮ್ಮ ಒಟ್ಟಾರೆ ಜೀವನದ ಉತ್ಸಾಹವನ್ನು ಹೆಚ್ಚಿಸಲು ಕೆಲವು ಸರಳ ಹಾಗೂ ಪರಿಣಾಮಕಾರಿ ಸಲಹೆಗಳು ಇಲ್ಲಿವೆ. ಇವು ಕೇವಲ ದೈಹಿಕ ಬದಲಾವಣೆಗಳಲ್ಲದೆ, ಮಾನಸಿಕ ಆರೋಗ್ಯವನ್ನೂ ಒಳಗೊಂಡಿವೆ. ನೈಸರ್ಗಿಕವಾಗಿ ಲೈಂಗಿಕ ಜೀವನ ಸುಧಾರಿಸಲು 6 ಅದ್ಭುತ ಸಲಹೆಗಳು 1. ನಿಯಮಿತ ವ್ಯಾಯಾಮ ಮತ್ತು ಯೋಗ ವ್ಯಾಯಾಮವು ಕೇವಲ ದೇಹದ ತೂಕ ಇಳಿಸಲು ಮಾತ್ರವಲ್ಲ, ಅದು ರಕ್ತಪರಿಚಲನೆಯನ್ನು ಉತ್ತಮಗೊಳಿಸುತ್ತದೆ. ರಕ್ತದ ಹರಿವು ಸರಿಯಾಗಿದ್ದಾಗ ಕಾಮದ್ರವ್ಯಗಳು ಮತ್ತು ಅಂಗಾಂಗಗಳ ಕಾರ್ಯಕ್ಷಮತೆ ಹೆಚ್ಚುತ್ತದೆ. ಕೇಗಲ್ ವ್ಯಾಯಾಮ (Kegel Exercises): ಇದು ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಶ್ರೋಣಿಯ ಸ್ನಾಯುಗಳನ್ನು (Pelvic Muscles) ಬಲಪಡಿಸಲು ಸಹಾಯ ಮಾಡುತ್ತದೆ. 2. ಒತ್ತಡ ನಿಯಂತ್ರಣ (Stress Management) ಮಾನಸಿಕ ಒತ್ತಡವು ಲೈಂಗಿಕ ಆಸಕ್ತಿಯನ್ನು (Libido) ಕುಂಠಿತಗೊಳಿಸುವ ಪ್ರಮುಖ ಅಂಶವಾಗಿದೆ. ಅತಿಯಾದ ಒತ್ತಡದಿಂದ ದೇಹದಲ್ಲಿ ‘ಕಾರ್ಟಿಸೋಲ್’ ಹಾರ್ಮೋನ್ ಹೆಚ್ಚಾಗಿ, ಲೈಂಗಿಕ ಹಾರ್ಮೋನ್ಗಳ ಮಟ್ಟ ಕಡಿಮೆಯಾಗುತ್ತದೆ. ದಿನಕ್ಕೆ 10-15 ನಿಮಿಷಗಳ ಕಾಲ ಧ್ಯಾನ (Meditation) ಅಥವಾ…
ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಬದಲಾಯಿಸಿ ವಿಬಿಜಿ ರಾಮ್ ಜಿ ಎಂದು ನಾಮಕರಣ ಮಾಡುವ ಮೂಲಕ ಜನಪರ, ಬಡವರ ಪರವಾಗಿದ್ದ ಕಾರ್ಯಕ್ರಮವನ್ನು ಬುಡಮೇಲು ಮಾಡುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ನರೇಗಾ ಬಚಾವ್ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಬಡವರು, ಕಾರ್ಮಿಕರಿಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹೆಸರಿನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿತ್ತು. ಅಂದಿನಿಂದ ಇಂದಿನವರೆಗೆ ಕೋಟ್ಯಂತರ ಬಡಜನರು ಇದರ ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿದ್ದರು. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮನರೇಗಾ ಹೆಸರನ್ನು ಬದಲಿಸಿ ವಿಬಿಜಿ ರಾಮ್ ಜಿ ಹೆಸರಿನಲ್ಲಿ ಯೋಜನೆಯನ್ನು ಜಾರಿಗೆ ತರಲು ಹೊರಟಿದೆ ಎಂದು…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐಟಿ ವಿಭಾಗವು National Informatics Centre(NIC) ಸಹಯೋಗದೊಂದಿಗೆ, ನಗರ ಪಾಲಿಕೆಗಳಡಿ ಕಾರ್ಯನಿರ್ವಹಿಸುವ ಜಿಪಿಎಸ್ ತಂಡದ ವಿಶೇಷ ಮನೆ-ಮನೆ ಭೇಟಿ ಮೂಲಕ ಆಸ್ತಿ ತೆರಿಗೆ ಮರುಪರಿಶೀಲನೆ ಕಾರ್ಯವನ್ನು 2ನೇ ಹಂತದಲ್ಲಿ ಯಶಸ್ವಿಯಾಗಿ ನಡೆಸಿದೆ. ಈ ಹಂತದಲ್ಲಿ ಸುಮಾರು 13,600 ಆಸ್ತಿಗಳ ಮಾಲೀಕರು ಕಳೆದ ಸರಾಸರಿ 5 ವರ್ಷಗಳಿಂದ ಕಡಿಮೆ ತೆರಿಗೆ ಪಾವತಿಸಿರುವುದು ಪತ್ತೆಯಾಗಿದೆ. ಪ್ರತಿ ವರ್ಷಕ್ಕೆ ಪ್ರತ್ಯೇಕವಾಗಿ ನೀಡಲಾದ ನೋಟಿಸ್ಗಳನ್ನು ಒಳಗೊಂಡಂತೆ ಒಟ್ಟು ಸುಮಾರು 67,000 ನೋಟಿಸ್ಗಳನ್ನು ಜಾರಿಗೊಳಿಸಲಾಗಿದೆ. ಈ ಮರುಪರಿಶೀಲನೆಯಿಂದ ಸುಮಾರು 318 ಕೋಟಿ ರೂ.ಗಳ ತೆರಿಗೆ ತಪ್ಪು ಪಾವತಿ(evasion) ಪತ್ತೆಯಾಗಿದೆ. ಮೊದಲ ಮತ್ತು ಎರಡನೇ ಹಂತಗಳನ್ನು ಸೇರಿಸಿ ಒಟ್ಟು 23,600 ಆಸ್ತಿಗಳಿಂದ 688 ಕೋಟಿ ರೂ.ಗಳ ವಸೂಲಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ನೋಟಿಸ್ ಮತ್ತು ಪಾವತಿ ಮಾಹಿತಿ: * ಸಂಬಂಧಿತ ನಾಗರಿಕರಿಗೆ ಶೋ ಕಾಸ್ ನೋಟಿಸ್ಗಳನ್ನು ಜಾರಿಗೊಳಿಸಲಾಗಿದ್ದು, SMS ಹಾಗೂ IVRS ಮುಖಾಂತರವೂ ಮಾಹಿತಿ ಕಳುಹಿಸಲಾಗಿದೆ. * ನೋಟಿಸ್ ಪಡೆದ ನಾಗರಿಕರು 15 ದಿನಗಳೊಳಗಾಗಿ ಆನ್ಲೈನ್…
ಮಂಡ್ಯ : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಗುರುವಾರದಂದು ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದಾರೆ. ಈ ಘಟನೆಯಿಂದ ಕುಪಿತಗೊಂಡಿದ್ದ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಯುವಕನ ಮನೆಗೆ ಬೆಂಕಿ ಹಚ್ಚುವ ವೇಳೆ ಯುವಕನ ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣವೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ದಳದವರು ಆಗಮಿಸುವಷ್ಟರಲ್ಲಿ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್…














