Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಅಭಿಯಾನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಮಟ್ಟದ (ಆನೇಕಲ್ & ಬೆಂಗಳೂರು ಉತ್ತರ ತಾಲ್ಲೂಕು) ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯು ಜನವರಿ 21, 2026 ರಂದು ನಡೆಯಲಿದ್ದು, ರೈತರು ಮತ್ತು ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ಸ್ಪರ್ಧಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಒಂದೇ ತಿನಿಸು (ಸಸ್ಯಹಾರಿ ತಿನಿಸುಗಳು ಮಾತ್ರ) ಸಿಹಿ, ಖಾರ ಮತ್ತು ಮರೆತು ಹೋದ ಖಾದ್ಯಗಳ ತಿಸಿಸು ಮಾಡಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವರು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಹೆಸರಿನೊಂದಿಗೆ ಜನವರಿ 18, 2026ರೊಳಗೆ ಇ-ಮೇಲ್ : jdablr14@gmail.com ಗೆ ಕಳುಹಿಸಬಹುದು . ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲೇ ತಯಾರಿಸಿ ಜನವರಿ 21, 2026 ರಂದು (ಬುಧವಾರ) ಬೆಳಿಗ್ಗೆ 11 ಗಂಟೆಗೆ ಕೃಷಿ ಸಂಕೀರ್ಣ, ಜಂಟಿ ಕೃಷಿ ನಿರ್ದೇಶಕರ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಡಾಕ್ಟರ್ ಇಲ್ಲದ ಕಾಲದಲ್ಲಿ ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟು. ಆಯುರ್ವೇದದ ಈ ದಿನಚರಿ ಪಾಲನೆ ಮಾಡಿದವರು ನೂರಾರು ವರ್ಷ ಕಾಯಿಲೆ ಇಲ್ಲದೇ ಬದುಕಿದರು. ನೂರರ ಸಮೀಪದಲ್ಲೂ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರು. ಆಯುರ್ವೇದದ ಪ್ರಕಾರ ದಿನಚರಿ (Daily Routine) ಎಂದರೆ ಕೇವಲ ಕೆಲಸ ಮಾಡುವುದಲ್ಲ, ಅದು ಪ್ರಕೃತಿಯೊಂದಿಗೆ ನಮ್ಮ ದೇಹವನ್ನು ಹೊಂದಿಸಿಕೊಳ್ಳುವ ವಿಧಾನವಾಗಿದೆ. ಆಯುರ್ವೇದದ ಪ್ರಕಾರ ನಿಮ್ಮ ದಿನವನ್ನು ಹೇಗೆ ಕಳೆಯಬೇಕು ಎಂಬ ಮಾಹಿತಿ ಇಲ್ಲಿದೆ: 1. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು (Early Morning) ಸೂರ್ಯೋದಯಕ್ಕೆ ಸುಮಾರು 1.5 ಗಂಟೆಗಳ ಮೊದಲು (ಅಂದರೆ ಬೆಳಿಗ್ಗೆ 4:30 ರಿಂದ 5:30 ರ ನಡುವೆ) ಏಳುವುದು ಅತ್ಯುತ್ತಮ. ಈ ಸಮಯದಲ್ಲಿ ವಾತಾವರಣವು ಶುದ್ಧವಾಗಿರುತ್ತದೆ ಮತ್ತು ಮನಸ್ಸು ಶಾಂತವಾಗಿರುತ್ತದೆ. 2. ಮುಖ ಪ್ರಕ್ಷಾಲನ ಮತ್ತು ಹಲ್ಲುಜ್ಜುವುದು ಕಣ್ಣುಗಳು: ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಿ. ಹಲ್ಲುಜ್ಜುವುದು: ಕಹಿ ಅಥವಾ ಒಗರು ರುಚಿಯ ಗಿಡಮೂಲಿಕೆಗಳ ಪುಡಿ ಅಥವಾ ಪೇಸ್ಟ್ ಬಳಸಿ. ನಾಲಿಗೆ ಸ್ವಚ್ಛತೆ: ನಾಲಿಗೆಯ ಮೇಲಿರುವ ಬಿಳಿ…
ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು. 2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು…
ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಬ್ಯಾನರ್ ತೆರವು ವಿಚಾರವಾಗಿ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನಲೆಯಲ್ಲಿ ಪೌರಾಯುಕ್ತೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಭೀತಿಯಿಂದಾಗಿ ಚಿಂತಾಮಣಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದಂತ ನ್ಯಾಯಾಲಯವು, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಂದಹಾಗೇ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಅವರಿಗೆ ರಾಜೀವ್ ಗೌಡ ದೂರವಾಣಿ ಕರೆ ಮಾಡಿ ಬ್ಯಾನರ್ ತೆರವು ವಿಚಾರವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಧಮ್ಕಿ ಹಾಕಿದಂತ ಆಡಿಯೋ ವೈರಲ್ ಆಗಿತ್ತು. ರಾಜೀವ್ ಗೌಡ ಅವರ ನಡೆಯ ಬಗ್ಗೆ ವ್ಯಾಪಕ ಟೀಕೆ,…
ಬಳ್ಳಾರಿ: ಜಿಲ್ಲೆಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದಂತ ರಾಜಶೇಖರ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರೆ ಮುಖಂಡರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಬಿಜೆಪಿ ಪಕ್ಷದಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜಶೇಖರ ಅವರದ್ದು ಸ್ಪಷ್ಟವಾದ ಕೊಲೆ. ಕಾಂಗ್ರೆಸ್ ಪಕ್ಷದವರೇ ಗುಂಡು ಹಾರಿಸಿ ಕೊಂದಿದ್ದಾರೆ. ಈ ಕುಟುಂಬ ಬಡತನದಲ್ಲಿದ್ದು, ನಾವು ಎಲ್ಲರೂ ಅವರ ನೋವಿಗೆ ಸ್ಪಂದಿಸಲು ಬಂದಿದ್ದೇವೆ ಎಂದರು. ಸಿಎಂ ಸಿದ್ಧರಾಮಯ್ಯ ಅವರು ಈ ವಿಚಾರವನ್ನು ತಮಾಷೆಯಾಗಿ ನೋಡದೇ ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ಸತ್ಯಾಸತ್ಯತೆ ಹೊರ ಬರೋದಕ್ಕೆ ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದರು. ನಾವು ಇವತ್ತು ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ- ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ಧನ ರೆಡ್ಡಿ, ಪ್ರಮುಖರು ಸೇರಿ ಬಡ ಕುಟುಂಬದವರನ್ನು ಭೇಟಿ ಮಾಡಿದ್ದೇವೆ. ಅವರ…
ಯಾದಗಿರಿ: ಯಾದಗಿರಿ ನಗರದ ಬಸವೇಶ್ವರ ಗಂಜ್ ಬಳಿ ಮಾಜಿ ಸಚಿವ ರಾಜೂಗೌಡ ತೆರಳುತ್ತಿದ್ದಂತ ಕಾರು ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಕೂದಲೆಳೆಯ ಅಂತರದಲ್ಲಿ ರಾಜೂಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ನಗರದ ಬಸವೇಶ್ವರ ಗಂಜ್ ಬಳಿಯಲ್ಲಿ ಮಾಜಿ ಸಚಿವ ರಾಜೂಗೌಡ ಪ್ರಯಾಣಿಸುತ್ತಿದ್ದಂತ ಫಾರ್ಚುನರ್ ಕಾರಿಗೆ ಹಿಂಬದಿಯಿಂದ ಡಿಪ್ಪರ್ ಲಾರಿಯೊಂದು ಡಿಕ್ಕಿಯಾಗಿದೆ. ಈ ಡಿಕ್ಕಿಯ ರಬಸಕ್ಕೆ ಫಾರ್ಚೂನರ್ ಕಾರಿನ ಹಿಂಬದಿ ನಜ್ಜುಗುಜ್ಜಾಗಿದೆ. ಮಾಜಿ ಸಚಿವ ರಾಜೂಗೌಡ ಕಾರಿಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಗುದ್ದಿ ಉಂಟಾದ ಅಪಘಾತದಲ್ಲಿ ಸಣ್ಣಪುಟ್ಟ ಗಾಯದೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಶಾಖಪಟ್ಟಣಂ ನಲ್ಲಿ ನಡೆದ ಸಿಸಿಎಲ್ ನಲ್ಲಿ ಭಾಗವಹಿಸಿ ಹೈದರಾಬಾದ್ ಮಾರ್ಗವಾಗಿ ಸುರಪುರಕ್ಕೆ ಕಾರ್ನಲ್ಲಿ ಬರುತ್ತಿರುವಾಗ ಸುಮಾರು 2 ಗಂಟೆಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಕೊಡೆಕಲ್ ಬಸವಣ್ಣ, ತಂದೆ ತಾಯಿ ಹಾಗೂ ಕ್ಷೇತ್ರದ ಜನರ ಆಶೀರ್ವಾದದಿಂದಾಗಿ ಯಾವುದೇ ಹಾನಿಯಾಗಿಲ್ಲ ಎಂದು ರಾಜೂಗೌಡ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://kannadanewsnow.com/kannada/government-orders-appointment-of-administrative-officers-for-gram-panchayats-whose-terms-have-expired-in-the-state/
ಬಳ್ಳಾರಿ: ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ಯಾವಾಗಲೂ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಳ್ಳಾರಿಯಲ್ಲಿ ಪೋಸ್ಟರ್ ಹಾಕುವ ವಿಚಾರದಲ್ಲಿ ನಡೆದ ಗಲಾಟೆ ವಿರೋಧಿಸಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಶೆಡ್ಡು ಹೊಡೆದು ಸಂಗ್ರಾಮಕ್ಕೆ ತಯಾರಾಗಬೇಕು. ಕಾಂಗ್ರೆಸ್ ನ ಎರಡೂವರೆ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಿನ ನಿತ್ಯ ಕೊಲೆ ರೇಪು ಸುದ್ದಿ ಕೇಳಿ ಸಾಕಾಗಿದೆ. ಹಲವಾರು ರೀತಿಯಲ್ಲಿ ಪೊಲಿಸರ ದಬ್ಬಾಳಿಕೆ ಇಡೀ ರಾಜ್ಯದಲ್ಲಿ ಇದೆ. ಬಳ್ಳಾರಿಯಲ್ಲಿ ಈ ಘಟನೆ ಆಗಲು ಎರಡು ಕಾರಣ ಜನಾರ್ದನ ರೆಡ್ಡಿ ಕೋರ್ಟಿನ ಆದೇಶದ ಪ್ರಕಾರ ಬಳ್ಳಾರಿಗೆ ಬಂದಿದ್ದರಿಂದ ತಮಗೆ ಉಳಿಗಾಲವಿಲ್ಲ ಎಂದು, ಜನಾರ್ದರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ರಾಮುಲು…
ಬೆಂಗಳೂರು: ರಾಜ್ಯದಲ್ಲಿ ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಶಾಲಾ ದಾಖಲಾತಿಯಲ್ಲಿ ಜಾತಿಯನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ ಪಂಗಡದ ಜಾತಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯು ಆಡಳಿತ ಇಲಾಖೆಯಾಗಿದ್ದು ಮತ್ತು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಹಿಂದುಳಿದ ವರ್ಗಗಳ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ ಕಾಯ್ದೆಯಂತೆ ಜಾತಿ ಪಮಾಣ ಪತ್ರಗಳನ್ನು ನೀಡಲಾಗುತ್ತಿರುವುದರಿಂದ ಈ ಬಗ್ಗೆ ಸ್ಪಷ್ಟಿಕರಣ. ನೀಡಲು ಸಮಾಜ ಕಲ್ಯಾಣ ಇಲಾಖೆ ಸೂಕ್ತ ಪ್ರಾಧಿಕಾರವಾಗಿರುತ್ತದೆ ಎಂದು ತಿಳಿಸಿ ಮಾರ್ಗದರ್ಶನ ಹಾಗೂ ಸ್ಪಷ್ಟಿಕರಣ ನೀಡುವಂತೆ ಕೋರಲಾಗಿರುತ್ತದೆ ಎಂದು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ರವರು ತಿಳಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದಂತೆ, ಈ ಕೆಳಕಂಡ ಆದೇಶ ಮತ್ತು ಸುತ್ತೋಲೆಗಳಲ್ಲಿ ಜಾತಿ ತಿದ್ದುಪಡಿ ಕುರಿತು ಮಾರ್ಗದರ್ಶನ ನೀಡಿರುವ ಕುರಿತು ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:- ಇಡಿ…
ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆಯಲ್ಲಿ ಶಿವಲಿಂಗ ಪೀಠದ ಪ್ರಾಶ್ಚಾವಶೇಷ ಪತ್ತೆಯಾಗಿದೆ. ಆ ಮೂಲಕ ಉತ್ಖನನದ ವೇಳೆ ಮತ್ತಷ್ಟು ಪ್ರಾಚೀನ ಅವಶೇಷಗಳು ಪತ್ತೆಯಾಗೋ ಸಾಧ್ಯತೆ ಇದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನದ ವೇಳೆಯಲ್ಲಿ ಶಿವಲಿಂಗ ಪೀಠದ ಪ್ರಾಶ್ಚಾವಶೇಷ ಪತ್ತೆಯಾಗಿದೆ. ಇದಲ್ಲದೇ ಒಡೆದ ಮಣ್ಣಿನ ಮಡಕೆಯ ಚೂರುಗಳು ಕೂಡ ಪತ್ತೆಯಾಗಿವೆ. ಉತ್ಖನನದ ವೇಳೆಯಲ್ಲಿ ಕುತೂಹಲದಿಂದ ಕಾರ್ಮಿಕರು ಸಿಕ್ಕ ವಸ್ತುಗಳನ್ನು ಸಂಗ್ರಹಿಸುತ್ತಿದ್ದಾರೆ. ಇನ್ನೂ ಹಲವು ಪ್ರಾಚೀನ ವಸ್ತುಗಳು ಸಿಗುವ ನಿರೀಕ್ಷೆಯಿದ್ದು ಉತ್ಖನನ ಕಾರ್ಯವನ್ನು ಮುಂದುವರೆಸಲಾಗಿದೆ. https://kannadanewsnow.com/kannada/8-08-lakh-fine-collected-from-4353-people-who-travelled-without-tickets-in-ksrtc-buses/
ಬೆಂಗಳೂರು: ನಗರದಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 4353 ಪ್ರಯಾಣಿಕರಿಂದ ಬರೋಬ್ಬರಿ 8.08 ಲಕ್ಷ ದಂಡವನ್ನು ವಸೂಲಿ ಮಾಡಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿAದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿ 4207 ಪ್ರಕರಣಗಳನ್ನು ಪತ್ತೆಹಚ್ಚಿ, 4353 ಟಿಕೇಟ್ ರಹಿತ ಪ್ರಯಾಣಿಕರಿಂದ 8,08,704/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ. https://kannadanewsnow.com/kannada/excise-dc-lokayukta-arrested-while-accepting-bribe-of-rs-25-lakh-in-bengaluru/














