Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ ಟೌನ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಚೂರಿಯಿಂದ ಇರಿದು ಕೊಲೆ ಮಾಡಿದ ಮುಖ್ಯ ಆರೋಪಿ ಮಂಜು ಯಾನೆ ಟೀಪುಡಿ ಮಂಜು ಹಾಗೂ ಕೊಲೆ ಕೃತ್ಯವನ್ನು ಕೌಟಂಬಿಕ ಕಲಹವೆಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮೃತನ ಪತ್ನಿ ಚೈತ್ರಾ ಬಂಧಿತ ಆರೋಪಿಗಳಾಗಿದ್ದಾರೆ. ಸಾಗರ ಪಟ್ಟಣದ ಜೆ.ಪಿ. ನಗರದ ನಿವಾಸಿ ಪರಶುರಾಮ್ (40) ಕೊಲೆಯಾದ ದುರ್ದೈವಿ. ಈ ಕುರಿತಂತೆ ಮೇ 26 ರಂದು ಪೊಲೀಸ್ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ಮಂಜು ಹಾಗೂ ಚೈತ್ರಾ ನಡುವೆ ಅನೈತಿಕ ಸಂಬಂಧವಿತ್ತು. ಈ ವಿಷಯ ಪರಶುರಾಮ್‌ಗೆ ತಿಳಿದು, ದಂಪತಿ ನಡುವೆ ಆಗಾಗ್ಗೆ ಭೀಕರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಮೇ 15 ರ ರಾತ್ರಿ ಕೂಡ…

Read More

ಶಿವಮೊಗ್ಗ: ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿಗಳ ತೀವ್ರ ಕೊರತೆ ಮತ್ತು ಕನಿಷ್ಠ ಮೂಲಭೂತ ಸೌಲಭ್ಯಗಳ ಲೋಪವನ್ನು ಖಂಡಿಸಿ, ನಾಗರೀಕ ವೇದಿಕೆ ವತಿಯಿಂದ ಮಂಗಳವಾರ ವೈದ್ಯಾಧಿಕಾರಿಗಳಿಗೆ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು. ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವೇದಿಕೆ ಎಚ್ಚರಿಸಿದೆ. ಶಾಸಕರ ಘೋಷಣೆಗಳು ಕೇವಲ ಕಾಗದದ ಮೇಲಿವೆ: ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ನಾಗರೀಕ ವೇದಿಕೆಯ ಅಧ್ಯಕ್ಷರಾದ ಎಂ. ರಾಜಶೇಖರ್, “ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಬಡ ರೋಗಿಗಳು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಸ್ಥಳೀಯ ಶಾಸಕರು ಪ್ರತಿ ಸಭೆಯಲ್ಲೂ ವೈದ್ಯರ ನೇಮಕ ಹಾಗೂ ಆಸ್ಪತ್ರೆಗೆ ಕೋಟ್ಯಂತರ ಅನುದಾನ ಬರುತ್ತಿದೆ ಎಂದು ಹೇಳುತ್ತಾರೆಯೇ ವಿನಃ, ಅದ್ಯಾವುದೂ ಇಂದಿನವರೆಗೂ ಅನುಷ್ಠಾನಕ್ಕೆ ಬಂದಂತೆ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಬಡ ರೋಗಿಗಳು: ಆಸ್ಪತ್ರೆಯ ದುಸ್ಥಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ರಾಜಶೇಖರ್, “ಇಲ್ಲಿನ ಎಕ್ಸ್‌ರೇ ಯಂತ್ರಗಳು ಅತ್ಯಂತ ಹಳೆಯದಾಗಿದ್ದು, ನಿಖರವಾದ ವರದಿ ಬರುತ್ತಿಲ್ಲ. ಆಸ್ಪತ್ರೆಗೆ ಹೊಸ ತಂತ್ರಜ್ಞಾನದ ಸಿ.ಟಿ. ಸ್ಕ್ಯಾನಿಂಗ್…

Read More

ಬೆಂಗಳೂರು: ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ವಿಶೇಷ ರೈಲಿನ ಸಮಯವನ್ನು 26.05.2026 ರಿಂದ 15.06.2026 ರವರೆಗೆ ಪರಿಷ್ಕರಿಸಲಾಗಿದೆ. ಅದರಂತೆ, ರೈಲು (06269) ಈಗಿರುವ 00:35/00:45 ಗಂಟೆಗಳ ಸಮಯಕ್ಕೆ ಬದಲಾಗಿ 00:20/00:30 ಗಂಟೆಗೆ ಕೆಎಸ್ಆರ್ ಬೆಂಗಳೂರಿಗೆ ಆಗಮಿಸಿ/ನಿರ್ಗಮಿಸಲಿದೆ. II. ರೈಲುಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಪುಣೆ ವಿಭಾಗದ ದೌಂಡ್-ಮನ್ಮಾಡ್ ರೈಲು ಮಾರ್ಗದ ವಿಸಾಪುರ-ರಂಜನ್ಗಾಂವ್ ರೋಡ್-ಸರೋಲಾ ನಿಲ್ದಾಣಗಳ ನಡುವೆ ಹಳಿ ದ್ವಿಗುಣಗೊಳಿಸುವ (ಡಬ್ಲಿಂಗ್) ಕಾಮಗಾರಿ ಸಲುವಾಗಿ, ಮಧ್ಯ ರೈಲ್ವೆಯು ಈ ಕೆಳಗಿನ ರೈಲು ಸೇವೆಗಳ ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ ಎಂದು ಸೂಚಿಸಿದೆ. ಅದರ ವಿವರಗಳು ಈ ಕೆಳಗಿನಂತಿವೆ: ಈ ರೈಲುಗಳ ಮಾರ್ಗ ಬದಲಾವಣೆ: 1. ಮೇ 27 ಮತ್ತು 29, 2026 ರಂದು ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12627 ಕೆಎಸ್ಆರ್ ಬೆಂಗಳೂರು – ನವದೆಹಲಿ ಕರ್ನಾಟಕ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲು ಸೋಲಾಪುರ, ಕುರ್ದುವಾಡಿ, ಲಾತೂರ್ ರೋಡ್, ಪರ್ಭಣಿ, ಅಂಕೈ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು (ಜಾತಿ ಜನಗಣತಿ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಸ್ವೀಕರಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಅವರು ಮುಖ್ಯಮಂತ್ರಿಗಳಿಗೆ ವರದಿಯನ್ನು ಹಸ್ತಾಂತರಿಸಿದರು. ಹಿರಿಯ ಸಚಿವರು ಹಾಗೂ ಗಣ್ಯರ ಉಪಸ್ಥಿತಿ: ವರದಿ ಸ್ವೀಕರಿಸುವ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ ಶಾಸಕರು ಉಪಸ್ಥಿತರಿದ್ದು, ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಶಾಸಕರುಗಳಾದ ಕೋನರೆಡ್ಡಿ, ನರೇಂದ್ರಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು. ಆಯೋಗದ ಪದಾಧಿಕಾರಿಗಳ ಹಾಜರಾತಿ: ವರದಿ ಸಲ್ಲಿಕೆಯ ವೇಳೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ. ಸಿ.ಎಂ. ಕುಂದಗೋಳ, ಡಾ.…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಯೋಗದ ಕಾರ್ಯದರ್ಶಿಯವರು ಈ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪರೀಕ್ಷೆಗಳು ಒಟ್ಟು ಮೂರು ಹಂತಗಳಲ್ಲಿ ಜುಲೈ 17 ರಿಂದ ಆಗಸ್ಟ್ 08 ರವರೆಗೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಯ ಪ್ರಮುಖ ವಿವರಗಳು: ಪ್ರಥಮ ಹಂತದ ಪರೀಕ್ಷೆಗಳು: ಜುಲೈ 17, 2026 ರಿಂದ ಜುಲೈ 19, 2026 ರವರೆಗೆ (ಜಿಲ್ಲಾ ಕೇಂದ್ರಗಳಲ್ಲಿ). ದ್ವಿತೀಯ ಹಂತದ ಪರೀಕ್ಷೆಗಳು: ಜುಲೈ 21, 2026 ರಿಂದ ಜುಲೈ 31, 2026 ರವರೆಗೆ (ವಿಭಾಗೀಯ ಕೇಂದ್ರಗಳಾದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗದಲ್ಲಿ ನಡೆಯಲಿವೆ. ಜುಲೈ 25 ಮತ್ತು 26 ರ ಪರೀಕ್ಷೆಗಳನ್ನು ಹೊರತುಪಡಿಸಿ). ತೃತೀಯ ಹಂತದ ಪರೀಕ್ಷೆಗಳು: ಆಗಸ್ಟ್ 03, 2026 ರಿಂದ ಆಗಸ್ಟ್ 08, 2026 ರವರೆಗೆ (ಕೇವಲ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿವೆ). ಇಲಾಖಾ ಪರೀಕ್ಷೆಗಳ ವಿವರವಾದ ವೇಳಾಪಟ್ಟಿ 1. ಪ್ರಥಮ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು (ಜಾತಿ ಜನಗಣತಿ ವರದಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಸ್ವೀಕರಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್. ನಾಯಕ್ ಅವರು ಮುಖ್ಯಮಂತ್ರಿಗಳಿಗೆ ವರದಿಯನ್ನು ಹಸ್ತಾಂತರಿಸಿದರು. ಹಿರಿಯ ಸಚಿವರು ಹಾಗೂ ಗಣ್ಯರ ಉಪಸ್ಥಿತಿ: ವರದಿ ಸ್ವೀಕರಿಸುವ ಸಂದರ್ಭದಲ್ಲಿ ಸರ್ಕಾರದ ಪ್ರಮುಖ ಸಚಿವರುಗಳು ಹಾಗೂ ಶಾಸಕರು ಉಪಸ್ಥಿತರಿದ್ದು, ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ. ಮಹದೇವಪ್ಪ, ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಶಾಸಕರುಗಳಾದ ಕೋನರೆಡ್ಡಿ, ನರೇಂದ್ರಸ್ವಾಮಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು. ಆಯೋಗದ ಪದಾಧಿಕಾರಿಗಳ ಹಾಜರಾತಿ: ವರದಿ ಸಲ್ಲಿಕೆಯ ವೇಳೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ. ಸಿ.ಎಂ. ಕುಂದಗೋಳ, ಡಾ.…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರ ಅಪಾರ ಅಭಿಮಾನಿಗಳು ಸಿದ್ಧರಾಮಯ್ಯ ನಿವಾಸದ ಮುಂದೆ ಜಮಾವಣೆಗೊಂಡಿದ್ದು, ನಮ್ಮ ಸಿದ್ಧರಾಮಯ್ಯ ಅವರಿಗೆ ಅನ್ಯಾಯವಾಗಿದೆ. ಅವರನ್ನು ಸಿಎಂ ಆಗಿಯೇ ಮುಂದುವರೆಸುವಂತೆ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿನ ದಿಢೀರ್ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ತಿರುವುಗಳು ಘಟಿಸುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡುವಂತ ವಿಷಯವನ್ನು ತಿಳಿದಂತ ಅವರ ಅಪಾರ ಅಭಿಮಾನಿಗಳು, ಬೆಂಗಳೂರಿನ ನಿವಾಸದ ಮುಂದೆ ಜಮಾವಣೆಗೊಂಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ನಿವಾಸದ ಮುಂದೆ ಜಮಾಯಿಸಿರುವಂತ ಅಭಿಮಾನಿಗಳು, ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿಯೇ ಮುಂದುವರೆಸಬೇಕು. ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಬಾರದು ಎಂಬುದಾಗಿ ಒತ್ತಾಯಿಸಿದರು. ಇನ್ನೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುತ್ತಿರೋದಕ್ಕೆ ಕಾರಣವೇ ಕಾಂಗ್ರೆಸ್ ಹೈಕಮಾಂಡ್ ಆಗಿದೆ. ಇದು ಸರಿಯಲ್ಲ. ಇದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂಬುದಾಗಿಯೂ ಆಕ್ರೋಶವನ್ನು ಹೊರಹಾಕಿದ್ದಾರೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ಅಹಿಂದ ಮುಖಂಡರು ಸಭೆ ನಡೆಸಿ, ಸಿಎಂ ಸಿದ್ಧರಾಮಯ್ಯ…

Read More

ನವದೆಹಲಿ: ಸೆಂಟ್ರಲ್ ರೈಲ್ವೆ (Central Railway) ವ್ಯಾಪ್ತಿಯ ರೈಲ್ವೆ ನಿಲ್ದಾಣಗಳಲ್ಲಿನ ಸಣ್ಣ ಸ್ಥಿರ ಕ್ಯಾಟರಿಂಗ್ ಮಳಿಗೆಗಳಲ್ಲಿ (Minor Static Catering Stalls) ಮಾರಾಟವಾಗುವ ಆಹಾರ ಪದಾರ್ಥಗಳ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ನೂತನ ದರ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ಈ ನೂತನ ದರಗಳು ಮುಂಬರುವ ಜೂನ್ 1 ರಿಂದ ಜಾರಿಗೆ ಬರಲಿವೆ. ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳನ್ನು ಅವಲಂಬಿಸಿರುವ ಸಾವಿರಾರು ದೈನಂದಿನ ಪ್ರಯಾಣಿಕರು ಮತ್ತು ದೂರದೂರುಗಳಿಗೆ ಪ್ರಯಾಣಿಸುವವರ ಜೇಬಿಗೆ ಇದು ನೇರ ಪರಿಣಾಮ ಬೀರಲಿದೆ. ​ರೈಲ್ವೆ ಆಡಳಿತ ಮಂಡಳಿಯ ಪ್ರಕಾರ, ಸೆಂಟ್ರಲ್ ರೈಲ್ವೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕ್ಯಾಟರಿಂಗ್ ಮಳಿಗೆಗಳಲ್ಲಿ ಆಹಾರದ ವೆಚ್ಚವನ್ನು ಏಕರೂಪಗೊಳಿಸುವ (Standardise) ಉದ್ದೇಶದಿಂದ ಈ ಬೆಲೆ ಪರಿಷ್ಕರಣೆ ಮಾಡಲಾಗಿದೆ. ​ಜನಪ್ರಿಯ ತಿಂಡಿಗಳ ಬೆಲೆಯಲ್ಲಿ ಬದಲಾವಣೆ ​ಹೊಸ ದರಪಟ್ಟಿಯ ಅನ್ವಯ, ನಿಲ್ದಾಣಗಳಲ್ಲಿ ಅತಿ ಹೆಚ್ಚು ಮಾರಾಟವಾಗುವ ಜನಪ್ರಿಯ ತಿಂಡಿಗಳ ಬೆಲೆಯಲ್ಲಿ ವ್ಯತ್ಯಾಸವಾಗಿದೆ. ಪ್ರಯಾಣಿಕರ ನೆಚ್ಚಿನ ತಿಂಡಿಯಾದ 50 ಗ್ರಾಂ ತೂಕದ ಒಂದು ಆಲೂ ವಡಾ (Aloo Vada) ಬೆಲೆ ₹15 ಆಗಲಿದ್ದು,…

Read More

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ಉಚಿತ ಪ್ರವೇಶಕ್ಕಾಗಿ ಮೊದಲ ಸುತ್ತಿನ ಆನ್‌ಲೈನ್ ಲಾಟರಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ ತಿಳಿಸಿದೆ. ​ಮೇ 25, 2026 ರಂದು ಆನ್‌ಲೈನ್ ಲಾಟರಿ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಅರ್ಹ ಮಕ್ಕಳನ್ನು ಆಯಾ ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ​ಪ್ರಮುಖ ಮಾಹಿತಿ ಮತ್ತು ಸೂಚನೆಗಳು: ​ಮೊಬೈಲ್‌ಗೆ ಸಂದೇಶ: ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ (SMS) ಮೂಲಕ ಸೀಟು ಹಂಚಿಕೆಯ ವಿವರಗಳನ್ನು ಈಗಾಗಲೇ ರವಾನಿಸಲಾಗಿದೆ. ​ದಾಖಲಾತಿ ಅವಧಿ: ಸೀಟು ಲಭಿಸಿರುವ ಮಗುವಿನ ಪೋಷಕರು ದಿನಾಂಕ: 26.05.2026 ರಿಂದ 08.06.2026 ರೊಳಗೆ ಸೀಟು ಹಂಚಿಕೆ ಪತ್ರದೊಂದಿಗೆ (Seat Allotment Letter) ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿ ಕೋರಲಾಗಿದೆ. ​ವೆಬ್‌ಸೈಟ್ ವಿವರ: ಸೀಟು ಹಂಚಿಕೆಯ ಸಂಪೂರ್ಣ ವಿವರಗಳನ್ನು…

Read More

ಬೆಂಗಳೂರು: ಹದಿಹರೆಯದ ವಯಸ್ಸು ಎಂದರೆ ಕನಸುಗಳ ಬೆನ್ನತ್ತಿ ಹೋಗುವ ಕಾಲ. ಆದರೆ ಆ ವಯಸ್ಸಿನಲ್ಲೇ ಅಕ್ಷರಗಳನ್ನೇ ತನ್ನ ಉಸಿರಾಗಿಸಿಕೊಂಡು, ಜಾಗತಿಕ ಮಟ್ಟದ ದಾಖಲೆಗಳನ್ನು ಬರೆಯುತ್ತಾ ಸಾಹಿತ್ಯ ಲೋಕದಲ್ಲಿ ಧ್ರುವತಾರೆಯಂತೆ ಹೊಳೆಯುತ್ತಿರುವ ಅಪರೂಪದ ಪ್ರತಿಭೆ ಅಮನ ಜೆ. ಕುಮಾರ್. ಇತ್ತೀಚೆಗಷ್ಟೇ ಬೆಂಗಳೂರಿನ ಆರ್.ವಿ. ಪಿಯು ಕಾಲೇಜಿನಲ್ಲಿ 12ನೇ ತರಗತಿ ಮುಗಿಸಿರುವ ಅಮನ, ಈಗ ತನ್ನ 5ನೇ ಕೃತಿ “ದಿ ಮಿಸ್ಟಿಕಲ್ ವೇವ್ಸ್” (The Mystical Waves) ಮೂಲಕ ಮತ್ತೆ ಸಾಹಿತ್ಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ. ​ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಪುರಸ್ಕೃತರು ಹಾಗೂ ಪ್ರಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರು ಅಮನಳ ಈ 5ನೇ ಕೃತಿಯನ್ನು ಲೋಕಾರ್ಪಣೆಗೊಳಿಸಿ ಯುವ ಕವಯಿತ್ರಿಗೆ ಶುಭ ಹಾರೈಸಿದ್ದಾರೆ. ಅಂತರರಾಷ್ಟ್ರೀಯ ಬುಕ್ಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ಟಾಕ್ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿರುವುದು ಈ ಕೃತಿಯ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ​ಪದಗಳ ಸಾಗರದಲ್ಲಿ ಕಾವ್ಯದ ನವಿಲುಗರಿ:…

Read More