Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಡಿಯೋ ಬಾಂಬ್ ಸ್ಪೋಟಗೊಂಡಿದೆ. ವೈರಲ್ ಆಗಿರುವಂತ ಆಡಿಯೋದಲ್ಲಿ ಮಾಜಿ ಎಂಎಲ್ಸಿಯೊಬ್ಬರು ದಿವಂಗತ ನಟ ಅಬರೀಶ್, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರೋದಾಗಿ ಹೇಳಲಾಗುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಆಡಿಯೋವೊಂದು ವೈರಲ್ ಆಗಿದೆ. ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ. ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಮಾತನಾಡಿರುವಂತ ದೂರವಾಣಿ ಸಂಭಾಷಣೆಯ ಆಡಿಯೋ ಅದಾಗಿ ಎನ್ನಲಾಗಿದೆ. ಅದರಲ್ಲಿ ಅಶ್ಲೀಲ, ಅವಾಚ್ಯ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ದಿವಂಗತ ನಟ ಅಂಬರೀಶ್ ಬಗ್ಗೆಯೂ ತೀವ್ರ ವಾಗ್ಧಾಳಿ ನಡೆಸಿರುವಂತ ಎಲ್ ಆರ್ ಶಿವರಾಮೇಗೌಡ ಅವರು, ಮಾತಿನ ಬರದಲ್ಲಿ ಏಕ ವಚನದಲ್ಲೇ ಕಿಡಿಕಾರಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಲೋಕಸಭೆ ಉಪ ಚುನಾವಣೆಯ ಸಂದರ್ಭದಲ್ಲಿ ನನ್ನಿಂದ 36 ಕೋಟಿ ಖರ್ಚಿ ಮಾಡಿಸಿದರು. ಆದರೇ ಟಿಕೆಟ್ ನೀಡದೇ ನನ್ನನ್ನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಇತರರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ. ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂಮಾಲೀಕ ದೇವರಾಜಗೆ ನ್ಯಾಯಾಲಯದಿಂದ ರಿಲೀಫ್ ನೀಡಲಾಗಿದೆ. ಈ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪುರಸ್ಕರಿಸಿರುವಂತ ಕೋರ್ಟ್, ಉಳಿದವರ ಮೇಲಿನ ತನಿಖೆ ಮುಂದುವರೆಸಲು ಆದೇಶಿಸಿದೆ. ಒಟ್ಟಾರೆಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ…
BIG BREAKING: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಲೋಕಾಯುಕ್ತ ಪೊಲೀಸರ ಬಿ-ರಿಪೋರ್ಟ್ ಪುರಸ್ಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣದಲ್ಲಿ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ಪುರಸ್ಕರಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಅವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದಂತ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಪುರಸ್ಕರಿಸಿದೆ. ಇನ್ನೂ ಉಳಿದವರ ಮೇಲಿನ ತನಿಖೆ ಮುಂದುವರೆಸಲು ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ, ಬಾಮೈದ, ಜಮೀನು ಮಾಲೀಕರಿಗೂ ಜನಪ್ರತಿನಿಧಿಗಳ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಉತ್ತರ ಕನ್ನಡ: ಪ್ರಸಿದ್ಧ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರು ಕಿತ್ತಾಟ ಮಾಡಿಕೊಂಡ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಕ್ಷೇತ್ರದಲ್ಲಿ ತಟ್ಟೆ ಕಾಸಿಗಾಗಿ ಅರ್ಚಕರು ಭಕ್ತರ ಮುಂದೆಯೇ ಕಿತ್ತಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಗಲಾಟೆ ವೀಡಿಯೋ ಈಗ ವೈರಲ್ ಆಗಿದೆ. ಐತಿಹಾಸಿಕ ಇಡಗುಂಜಿ ಗಣಪತಿ ದೇವಸ್ಥಾನದಲ್ಲೇ ತಟ್ಟೆಕಾಸಿಗಾಗಿ ಭಕ್ತರ ಮುಂದೆ ಅರ್ಚಕರಾದಂತ ನರಸಿಂಹ ಭಟ್ ಹಾಗೂ ರಮಾನಂದ ಭಟ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ದೇಗುಲದ ಹಕ್ಕಿಗಾಗಿ ಅರ್ಚಕರ ಕುಟುಂಬದಲ್ಲಿ ಒಳಜಗಳ ಉಂಟಾಗುತ್ತಿರುವುದು ವೀಡಿಯೋದಲ್ಲಿ ಬಟಾ ಬಯಲಾಗಿದೆ. ದೇವಸ್ಥಾನದ ಹಕ್ಕಿಗಾಗಿ ಕೋರ್ಟ್ ನಲ್ಲಿ ದಾವೆಯನ್ನು ಅರ್ಚಕರ ಕುಟುಂಬಗಳು ಹೂಡಿವೆ. ದೇಗುಲದಲ್ಲಿ ಪೂಜೆ ವಿಚಾರವಾಗಿಯೂ 2 ಕುಟುಂಬಗಳ ನಡುವೆ ಕಲಹ ಉಂಟಾಗಿದೆ. ತಟ್ಟೆಕಾಸಿಗಾಗಿ ಭಕ್ತರ ಮುಂದೆ ಹೊಡೆದಾಡಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಪೊಲೀಸರು ಆರೋಪಿ ರಾಜೀವ್ ಗೌಡ ಬಂಧಿಸಿದ್ದರು. ಅವರಿಗೆ ನಿನ್ನೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇಂದು ಹೆಚ್ಚಿನ ವಿಚಾರಣೆಗಾಗಿ 2 ದಿಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪಿ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ನಿನ್ನೆ ಶಿಡ್ಲಘಟ್ಟ ನ್ಯಾಯಾಲಯಕ್ಕೂ ಹಾಜರುಪಡಿಸಿದ್ದರು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು ಅವರನ್ನು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ನ್ಯಾಯಾಲಯವು 2 ದಿನಗಳ ಕಾಲ ಆರೋಪಿ ರಾಜೀವ್ ಗೌಡ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. https://kannadanewsnow.com/kannada/staubli-invests-10-million-to-strengthen-solar-pv-connector-ecosystem-in-bengaluru/ https://kannadanewsnow.com/kannada/dgca-revealed-the-reason-behind-ajit-pawars-plane-crash-do-you-know-that/
ಬೆಂಗಳೂರು: ಜಾಗತಿಕ ಕೈಗಾರಿಕಾ ಮತ್ತು ಮೆಕಾಟ್ರಾನಿಕ್ ಪರಿಹಾರಗಳ ಪೂರೈಕೆದಾರ ಸ್ಟೌಬ್ಲಿ, ಇಂದು ಬೆಂಗಳೂರಿನಲ್ಲಿ ತನ್ನ ಉತ್ಪಾದನಾ ಸೌಲಭ್ಯದ ವಿಸ್ತರಣೆ ಘೋಷಿಸಿತು, ಇದು 10 ಮಿಲಿಯನ್ ಡಾಲರ್ ಕಾರ್ಯತಂತ್ರದ ಹೂಡಿಕೆಯನ್ನು ಪ್ರತಿನಿಧಿಸುತ್ತದೆ. ಈ ಕುರಿತು ಮಾತನಾಡಿದ ಸ್ಟೌಬ್ಲಿ ಗ್ರೂಪ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜೆರಾಲ್ಡ್ ವೋಗ್ಟ್ , ಈ ವಿಸ್ತರಣೆಯು ಭಾರತದ ವೇಗವಾಗಿ ಬೆಳೆಯುತ್ತಿರುವ ಸೌರ ಫೋಟೊವೋಲ್ಟಾಯಿಕ್ (PV) ವಲಯದಲ್ಲಿ ಸ್ಟೌಬ್ಲಿಯ ಸ್ಥಾನವನ್ನು ಬಲಪಡಿಸುತ್ತದೆ. ದೇಶದ ಕೈಗಾರಿಕಾ ಬೆಳವಣಿಗೆ ಮತ್ತು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಕಂಪನಿಯ ದೀರ್ಘಕಾಲೀನ ಬದ್ಧತೆಯನ್ನು ಬಲಪಡಿಸುತ್ತದೆ ಎಂದರು. ವಿಸ್ತೃತ ಸೌಲಭ್ಯವು ಸುಧಾರಿತ ಸ್ವಯಂಚಾಲಿತ ಅಸೆಂಬ್ಲಿ ಲೈನ್ಗಳು ಮತ್ತು MC4-Evo1 ಮತ್ತು MC4-Evo2 ಕನೆಕ್ಟರ್ಗಳ ಉತ್ಪಾದನೆಗೆ ಮೀಸಲಾಗಿರುವ ವರ್ಧಿತ ಗುಣಮಟ್ಟದ ಭರವಸೆ ವ್ಯವಸ್ಥೆಗಳನ್ನು ಹೊಂದಿರುತ್ತದೆ, ಇದು ಸೌರ ಮಾಡ್ಯೂಲ್ಗಳನ್ನು ಇನ್ವರ್ಟರ್ಗಳಿಗೆ ಮತ್ತು ಬ್ಯಾಲೆನ್ಸ್-ಆಫ್-ಸಿಸ್ಟಮ್ ಉಪಕರಣಗಳಿಗೆ ಸಂಪರ್ಕಿಸುವ ನಿರ್ಣಾಯಕ ಘಟಕಗಳಾಗಿವೆ. ಈ ಕ್ರಮವು ಸ್ಟೌಬ್ಲಿಯ ಉತ್ತಮ ಗುಣಮಟ್ಟದ, ಸ್ಥಳೀಯವಾಗಿ ತಯಾರಿಸಿದ ಪಿವಿ ಕನೆಕ್ಟರ್ಗಳಿಗೆ ಹೆಚ್ಚುತ್ತಿರುವ ದೇಶೀಯ ಬೇಡಿಕೆಯನ್ನು ಪೂರೈಸುವ…
ಬೆಂಗಳೂರು : ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, ‘ಜಿಯೋ ಎಐ ಕ್ಲಾಸ್ರೂಮ್’ (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ. ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ ‘ಎಐ-ರೆಡಿ’ (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ. ಈ ಅಭಿಯಾನವು…
ಬಾರಾಮತಿ: ನಾಳೆ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎಂಬುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ತಮ್ಮ ಆಪ್ತ ಸ್ನೇಹಿತ ಮತ್ತು ಸಹೋದ್ಯೋಗಿ ಅಜಿತ್ ದಾದಾ ಪವಾರ್ ಅವರ ವಿಮಾನ ಅಪಘಾತದಲ್ಲಿ ನಿಧನರಾದ ಬಗ್ಗೆ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಈ ಸುದ್ದಿಯನ್ನು “ಹೃದಯ ವಿದ್ರಾವಕ” ಎಂದು ಕರೆದ ಫಡ್ನವೀಸ್, ತಾವು ನಿಶ್ಚೇಷ್ಟಿತರಾಗಿದ್ದೇವೆ ಮತ್ತು ಮಾತುಗಳನ್ನು ಹೇಳಿಕೊಳ್ಳುತ್ತಿಲ್ಲ ಎಂದು ಹೇಳಿದರು. ಅಜಿತ್ ದಾದಾ ಅವರನ್ನು ಜನರೊಂದಿಗೆ ಬಲವಾದ ಸಂಪರ್ಕ ಹೊಂದಿರುವ ಜನ ನಾಯಕ ಮತ್ತು ವಿಶಾಲ ಹೃದಯದ ಧೈರ್ಯಶಾಲಿ ಸ್ನೇಹಿತ ಎಂದು ಬಣ್ಣಿಸಿದರು. ಈ ನಷ್ಟವನ್ನು ಅವರು ಆಳವಾಗಿ ವೈಯಕ್ತಿಕ ಮತ್ತು ಸರಿಪಡಿಸಲಾಗದು ಎಂದು ಬಣ್ಣಿಸಿದರು ಮತ್ತು ಅವರಿಗೆ ಹೃತ್ಪೂರ್ವಕ ಗೌರವಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ನಾಳೆ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ಬೆಳಗ್ಗೆ 11 ಗಂಟೆಗೆ ನಡೆಸಲಾಗುತ್ತದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವುದಾಗಿ ಅವರು…
ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ವಿಮಾನದಲ್ಲಿದ್ದ ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ಅಪಘಾತದ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಅನುಕ್ರಮವನ್ನು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದೆ. ಅಲ್ಲದೇ ಎರಡನೇ ಲ್ಯಾಂಡಿಂಗ್ ಪ್ರಯತ್ನ, 4 ನಿಮಿಷಗಳ ನಂತರ ವಿಮಾನ ಪಥನದ ಹಿಂದಿನ ಕಾರಣವನ್ನು ಡಿಜಿಸಿಎ ರಿವೀಲ್ ಮಾಡಿದೆ. VT-SSK ನೋಂದಣಿ ಹೊಂದಿರುವ ಲಿಯರ್ಜೆಟ್ 45 ವಿಮಾನವು ಬಾರಾಮತಿ ವಾಯುನೆಲೆಯಲ್ಲಿ ಇಳಿಯಲು ಪ್ರಯತ್ನಿಸುವಾಗ ಅಪಘಾತಕ್ಕೀಡಾಯಿತು. ಸಚಿವಾಲಯದ ಪ್ರಕಾರ, ಕ್ಯಾಪ್ಟನ್ ಸುಮಿತ್ ಕಪೂರ್ ಮತ್ತು ಕ್ಯಾಪ್ಟನ್ ಶಾಂಭವಿ ಪಾಠಕ್ ಇಬ್ಬರೂ ಪೈಲಟ್ಗಳು ತಲಾ 15,000 ಗಂಟೆಗಳಿಗಿಂತ ಹೆಚ್ಚು ಹಾರಾಟದ ಸಮಯವನ್ನು ಹೊಂದಿದ್ದರು. ಬಾರಾಮತಿ ಅನಿಯಂತ್ರಿತ ವಾಯುನೆಲೆಯಾಗಿದ್ದು, ಸಂಚಾರ ಮಾಹಿತಿಯನ್ನು ಬಾರಾಮತಿಯಲ್ಲಿರುವ ಹಾರುವ ತರಬೇತಿ ಸಂಸ್ಥೆಗಳ ಬೋಧಕರು/ಪೈಲಟ್ ಒದಗಿಸುತ್ತಾರೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ಸಮಯದಲ್ಲಿ ATC ಯನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯು ಘಟನೆಗಳ ಅನುಕ್ರಮವನ್ನು ಈ ಕೆಳಗಿನಂತೆ ವಿವರಿಸಿದರು. ಜನವರಿ 28, 2026 ರಂದು ವಿಮಾನ VI-SSK ಮೊದಲು ಬೆಳಿಗ್ಗೆ 08:18 IST…
ಮಹಾರಾಷ್ಟ್ರ: ಇಂದು ವಿಮಾನ ಪಥನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ದುರ್ಮರಣ ಹೊಂದಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 11 ಗಂಟೆಗೆ ನೆರವೇರಿಸಲಾಗುತ್ತಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಅಜಿತ್ ಪವಾರ್ ಅಂತ್ಯಕ್ರಿಯೆ ನೆರವೇರಲಿದೆ. ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಅಜಿತ್ ಪವಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಜಿತ್ ಪವಾರ್ 1959ರ ಜುಲೈ 22ರಂದು ಜನಿಸಿದ್ದರು. 1982ರಲ್ಲಿ ಅಜಿತ್ ಪವಾರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಕೋ ಆಪರೇಟಿವ್ ಸಕ್ಕರೆ ಕಾರ್ಖಾನೆ ಬೋರ್ಡ್ ಸದಸ್ಯರಾದರು. 1991ರಲ್ಲಿ ಪುಣೆ ಜಿಲ್ಲಾ ಕೋ ಆಪರೇಟಿವ್ ಸಂಘದ ಅಧ್ಯಕ್ಷರಾಗಿ ಆಯ್ಕೆ. 1991ರಲ್ಲೇ ಸಂಸದರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು.4 ತಿಂಗಳಲ್ಲೇ ಸಂಸದ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ.1995ರಲ್ಲಿ ಬಾರಾಮತಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.…













