Author: kannadanewsnow09

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2025 ರಂದು ಬೆಂಗಳೂರಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಜಾನೆ 2 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2025 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. ಕ್ರ. ಸಂ ಮಾರ್ಗ ಸಂಖ್ಯೆ        ಎಲ್ಲಿಂದ        ಎಲ್ಲಿಗೆ  ಬಸ್ಸುಗಳ ಸಂಖ್ಯೆ      ವಲಯ 1       G-3    ಬ್ರಿಗೇಡ್ ರಸ್ತೆ  ಎಲೆಕ್ಟ್ರಾನಿಕ್ಸ್ ಸಿಟಿ 6       ಪೂರ್ವ 2       G-4           ಜಿಗಣಿ  6       ದಕ್ಷಿಣ 3       G-2    ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ    6       ದಕ್ಷಿಣ 4      G-6            ಕೆಂಗೇರಿ KHB ಕ್ವಾರ್ಟ್ರ್ಸ್ 4      ಪಶ್ಚಿಮ 5       G-7            ಜನಪ್ರಿಯ ಟೌನ್ ಶಿಪ್…

Read More

ಶಿವಮೊಗ್ಗ: ಮಲೆನಾಡಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಅನ್ನೋದು ಹಲವರ ಪ್ಲಾನ್ ಆಗಿರುತ್ತೆ. ಆ ಪ್ಲಾನ್ ಗೆ ಅವಕಾಶವನ್ನು ಸಾಗರದ ಗ್ರೀನ್ ಎಂಬಾಸ್ಸಿ ಹೋಟೆಲ್ ಒದಗಿಸಿಕೊಡುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೃದಯ ಭಾಗದಲ್ಲಿರುವಂತ ಗ್ರೀನ್ ಎಂಬಾಸ್ಸಿ ಹೋಟೆಲ್. ಸಾಗರದಲ್ಲೇ ತುಂಬಾ ಪ್ರಸಿದ್ಧವಾಗಿರೋ ಈ ಹೋಟೆಲ್ ಬಿಹೆಚ್ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಪಕ್ಕದಲ್ಲೇ ಇದೆ. ಈ ಹೋಟೆಲ್ ನಲ್ಲಿ ನೂತನ ವರ್ಷದ ಆಚರಣೆಗೆ ಅವಕಾಶ ನೀಡುತ್ತಿದೆ. 2026ರ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ನೂತನ ವರ್ಷವನ್ನು ಸಡಗರ ಸಂಭ್ರಮದಿಂದ ಸ್ವಾಗತಿಸೋದಕ್ಕೆ ಜನರನ್ನು ಸೆಳೆಯುತ್ತಿದೆ. ಫ್ಲಾನ್ ಮಾಡಿ, ತಪ್ಪದೇ ಎಂಬಾಸ್ಸಿಯಲ್ಲೇ ಹೊಸ ವರ್ಷ ಆಚರಿಸಿ ಫ್ಯಾಮಿಲಿ, ಸ್ನೇಹಿತರ ಜೊತೆಗೆ ಹೊಸ ವರ್ಷಾಚರಣೆ ಮಾಡೋದಕ್ಕೂ ಗ್ರೀನ್ ಎಂಬಾಸ್ಸಿಯಲ್ಲಿ ಅವಕಾಶವಿದೆ. ವೆಜ್, ನಾನ್ ವೆಜ್ ತರಾವರಿ ಊಟವು ನಿಮ್ಮ ಸಂಭ್ರಮಾಚರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಜೊತೆಗೆ ಲೈವ್ ಡಿಜೆ ಕೂಡ ಇದ್ದು, ಕುಣಿದು ಕುಪ್ಪಳಿಸಿ, ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಬಹುದಾಗಿದೆ. ತಂಪು ಪಾನೀಯ…

Read More

ಮಂಡ್ಯ : ಮದ್ದೂರು ತಾಲೂಕಿನ ಅಬಲವಾಡಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳಲು ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ. ಹಲವು ವರ್ಷಗಳಿಂದ ಶ್ರೀ ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್, ಆಡಳಿತ ಮಂಡಳಿ ದೇಗುಲದ ನಿರ್ವಹಣೆಯನ್ನು ಮಾಡಿಕೊಂಡು ಬರುತ್ತಿದ್ದರು. ಏಕಾಏಕಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಹಾಗೂ ಅಧಿಕಾರಿಗಳು ಮುಜರಾಯಿ ಇಲಾಖೆಗೆ ದೇಗುಲವನ್ನು ಒಳಪಡಿಸಿಕೊಂಡು ಹುಂಡಿಯನ್ನು ದೇಗುಲದಲ್ಲಿ ಇಡಲು ಮುಂದಾದಾಗ ದೇಗುಲದ ಆವರಣದಲ್ಲಿ ನೂರಾರು ಮಂದಿ ಭಕ್ತಾಧಿಗಳು ಹಾಗೂ ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ಸುಮಾರು 3 ಗಂಟೆಗಳ ಕಾಲ ಅಡ್ಡಗಟ್ಟಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಹಶೀಲ್ದಾರ್ ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಗ್ರಾಮಸ್ಥರ ಜೊತೆ ಮಾತನಾಡಿ, ಈ ದೇವಾಲಯವು ಸಿ ಶ್ರೇಣಿಗೆ ಸೇರಿದ್ದು, ಇದನ್ನು ಮುಜರಾಯಿ ಇಲಾಖೆಗೆ…

Read More

ಮಾಸ್ಕೋ: ಮಾಸ್ಕೋ ಮತ್ತು ಸೇಂಟ್ ಪೀಟರ್ಸ್‌ಬರ್ಗ್ ನಡುವಿನ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಕೈವ್ ಡ್ರೋನ್‌ಗಳನ್ನು ಹಾರಿಸಿದೆ ಎಂದು ರಷ್ಯಾ ಸೋಮವಾರ ಆರೋಪಿಸಿದೆ. “ಭಯೋತ್ಪಾದಕ ದಾಳಿ”ಯ ನಂತರ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ತನ್ನ ಮಾತುಕತೆಯ ನಿಲುವನ್ನು “ಪರಿಷ್ಕರಿಸುವುದಾಗಿ” ಘೋಷಿಸಿದೆ. ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ “ಅಧಿಕೃತ ನಿವಾಸ”ದ ಮೇಲೆ ಉಕ್ರೇನ್ 91 ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದರು, ಅವೆಲ್ಲವನ್ನೂ ವಾಯು ರಕ್ಷಣಾ ಪಡೆಗಳು ನಾಶಪಡಿಸಿವೆ ಎಂದು ಹೇಳಿದರು. “ಪ್ರತೀಕಾರದ ದಾಳಿ” ಗಾಗಿ ರಷ್ಯಾ ಉಕ್ರೇನ್‌ನಲ್ಲಿ ಗುರಿಗಳನ್ನು ಆಯ್ಕೆ ಮಾಡಿದೆ ಮತ್ತು ಮಾಸ್ಕೋದ “ಮಾತುಕತೆಯ ಸ್ಥಾನವನ್ನು ಪರಿಷ್ಕರಿಸಲಾಗುವುದು” ಎಂದು ಲಾವ್ರೊವ್ ಘೋಷಿಸಿದರು. ಇದಕ್ಕೂ ಮೊದಲು, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಫ್ಲೋರಿಡಾ ರೆಸಾರ್ಟ್‌ನಲ್ಲಿ ಝೆಲೆನ್ಸ್ಕಿಯನ್ನು ಆತಿಥ್ಯ ವಹಿಸಿದರು ಮತ್ತು ಉಕ್ರೇನ್ ಮತ್ತು ರಷ್ಯಾ ಶಾಂತಿ ಇತ್ಯರ್ಥಕ್ಕೆ “ಹಿಂದೆಂದಿಗಿಂತಲೂ ಹತ್ತಿರದಲ್ಲಿವೆ” ಎಂದು ಒತ್ತಾಯಿಸಿದರು. ಆದಾಗ್ಯೂ, ಉಕ್ರೇನ್‌ನಲ್ಲಿರುವ ಎಲ್ಲಿಂದ…

Read More

ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ. ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ” ಎಂದು ತಿಳಿಸಿದರು. ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, “ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ…

Read More

ಬಳ್ಳಾರಿ : ಬಾಲ್ಯ ವಿವಾಹವು ಹದಿಹರೆಯದ ಗರ್ಭಧಾರಣೆ ಮತ್ತು ಹೆರಿಗೆ ಸಮಯದಲ್ಲಿ ಅಪಾಯ ಹೆಚ್ಚಿಸುತ್ತದೆ. ಇದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಸಂಡೂರು ತಾಲ್ಲೂಕಿನ ಬಂಡ್ರಿ ಮತ್ತು ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಗ್ರಾಮಗಳಿಗೆ ಭೇಟಿ ನೀಡಿ ಗರ್ಭೀಣಿ ತಾಯಂದಿರಿಗೆ 18 ವರ್ಷದೊಳಗೆ ಗರ್ಭ ಧರಿಸಿದರೆ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಕುರಿತು ಮಾಹಿತಿ ನೀಡಿದ ಅವರು, ಬಾಲ್ಯವಿವಾಹದಿಂದ ಹೆಚ್‌ಐವಿ/ಏಡ್ಸ್ ನಂತಹ ಲೈಂಗಿಕವಾಗಿ ಹರಡುವ ರೋಗಗಳ ಅಪಾಯ ಸಹ ಹೆಚ್ಚಿಸುತ್ತದೆ ಎಂದು ತಿಳಿಸಿದರು. ಶಿಕ್ಷಣದ ಮೇಲೆ ಪರಿಣಾಮ ಬಾಲ್ಯ ವಿವಾಹದಿಂದಾಗಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಾಗುತ್ತದೆ, ಇದರಿಂದ ಹುಡುಗಿಯರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಭವಿಷ್ಯದ ಉದ್ಯೋಗ ಮತ್ತು ಆರ್ಥಿಕ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬಾಲ್ಯ ವಿವಾಹವು ಖಿನ್ನತೆ, ಆತಂಕ ಮತ್ತು ಆಘಾತದ…

Read More

ಬೆಂಗಳೂರು: ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು. ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ…

Read More

ಶಿವಮೊಗ್ಗ: ನಗರದಲ್ಲಿ ಕೊಲೆ ಪ್ರಕರಣಗಳು ಮುಂದುವರೆದಿವೆ. ಕೌಟುಂಬಿಕ ಕಲಹದಿಂದಾಗಿ ಯುವಕನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರುವಂತ ಘಟನೆ ವಿನೋಬನಗರದಲ್ಲಿ ನಡೆದಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆ ಬಳಿಯಲ್ಲಿ ಇಂದು ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ಯುವನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರೋ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಅರುಣ್(26) ಎಂಬುದಾಗಿ ಗುರುತಿಸಲಾಗಿದೆ. ವೈವಾಹಿಕ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಈ ಗಲಾಟೆ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ಸಂಬಂಧಿಕರೇ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಕೂಡಲೇ ಅಲರ್ಟ್ ಆದಂತ ಶಿವಮೊಗ್ಗ ಪೊಲೀಸರು, ಇಬ್ಬರನ್ನು ಪ್ರಕರಣ ಸಂಬಂಧ ಬಂಧಿಸಿರೋದಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/harihar-power-outage-in-these-areas-of-honnali-tomorrow/ https://kannadanewsnow.com/kannada/good-news-for-those-preparing-for-new-year-celebrations-in-bengaluru/

Read More

ಶಿವಮೊಗ್ಗ: ಮಲೆನಾಡಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಅನ್ನೋದು ಹಲವರ ಪ್ಲಾನ್ ಆಗಿರುತ್ತೆ. ಆ ಪ್ಲಾನ್ ಗೆ ಅವಕಾಶವನ್ನು ಸಾಗರದ ಗ್ರೀನ್ ಎಂಬಾಸ್ಸಿ ಹೋಟೆಲ್ ಒದಗಿಸಿಕೊಡುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಹೃದಯ ಭಾಗದಲ್ಲಿರುವಂತ ಗ್ರೀನ್ ಎಂಬಾಸ್ಸಿ ಹೋಟೆಲ್. ಸಾಗರದಲ್ಲೇ ತುಂಬಾ ಪ್ರಸಿದ್ಧವಾಗಿರೋ ಈ ಹೋಟೆಲ್ ಬಿಹೆಚ್ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಪಕ್ಕದಲ್ಲೇ ಇದೆ. ಈ ಹೋಟೆಲ್ ನಲ್ಲಿ ನೂತನ ವರ್ಷದ ಆಚರಣೆಗೆ ಅವಕಾಶ ನೀಡುತ್ತಿದೆ. 2026ರ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ನೂತನ ವರ್ಷವನ್ನು ಸಡಗರ ಸಂಭ್ರಮದಿಂದ ಸ್ವಾಗತಿಸೋದಕ್ಕೆ ಜನರನ್ನು ಸೆಳೆಯುತ್ತಿದೆ. ಫ್ಲಾನ್ ಮಾಡಿ, ತಪ್ಪದೇ ಎಂಬಾಸ್ಸಿಯಲ್ಲೇ ಹೊಸ ವರ್ಷ ಆಚರಿಸಿ ಫ್ಯಾಮಿಲಿ, ಸ್ನೇಹಿತರ ಜೊತೆಗೆ ಹೊಸ ವರ್ಷಾಚರಣೆ ಮಾಡೋದಕ್ಕೂ ಗ್ರೀನ್ ಎಂಬಾಸ್ಸಿಯಲ್ಲಿ ಅವಕಾಶವಿದೆ. ವೆಜ್, ನಾನ್ ವೆಜ್ ತರಾವರಿ ಊಟವು ನಿಮ್ಮ ಸಂಭ್ರಮಾಚರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಜೊತೆಗೆ ಲೈವ್ ಡಿಜೆ ಕೂಡ ಇದ್ದು, ಕುಣಿದು ಕುಪ್ಪಳಿಸಿ, ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಬಹುದಾಗಿದೆ. ತಂಪು ಪಾನೀಯ…

Read More

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಖಾಲಿ ಇದ್ದ ಎಲ್ಲ ಎಂಟು ಸೀಟುಗಳು ಅರ್ಹರಿಗೆ ಮೆರಿಟ್ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಡಿ.30ರಂದು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈ ಮೂಲಕ ಪ್ರಸಕ್ತ ಸಾಲಿನ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಎಲ್ಲ ಸೀಟು ಗಳು ಖಾಲಿಯಾದಂತಾಗಿವೆ ಎಂದು ಅವರು ತಿಳಿಸಿದ್ದಾರೆ. ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ 5, ಕಲ್ಬುರ್ಗಿಯ ಎಂಆರ್ ಎಂಸಿ ವೈದ್ಯಕೀಯ ಕಾಲೇಜಿನಲ್ಲಿ 2 ಹಾಗೂ ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಒಂದು ಸೀಟು ಖಾಲಿ ಇತ್ತು. ಇಷ್ಟೂ ಸೀಟುಗಳು ಹಂಚಿಕೆಯಾಗಿವೆ ಎಂದರು.

Read More