Author: kannadanewsnow09

ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು ಡಿಜಿಟಲ್ ಮಾರ್ಗಸೂಚಿಯನ್ನು ಅಳವಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಎಂಎಸ್‌ಎಂಇ, ಸಕ್ಕರೆ ಹಾಗೂ ಜವಳಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ತಿಳಿಸಿದರು. ಇಂದು ಕಾಸಿಯಾ ಭವನದಲ್ಲಿ ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಒಟ್ಟು ಕೈಗಾರಿಕಾ ಘಟಕಗಳ ಪೈಕಿ ಶೇ.97 ರಷ್ಟು ಎಂಎಸ್‌ಎಂಇಗಳೀವೆ. ರಾಜ್ಯದಲ್ಲಿ ಅತಿಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಿರುವ ಕ್ಷೇತ್ರ ಇವುಗಳದ್ದಾಗಿದೆ. ನಮ್ಮ ಸರ್ಕಾರ ಇವುಗಳ ಮಹತ್ವವನ್ನು ಅರಿತು ಪ್ರತ್ಯೇಕ ನೀತಿಯನ್ನು ರಚಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಇದರ ಮೊದಲ ಹಂತವಾಗಿ ಇಂದು ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ವಿಭಾಗೀಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗುವುದು. ಈ ಮೂಲಕ ಎಂಎಸ್‌ಎಂಇ ವಲಯ ಸಮಗ್ರ ಅಭಿವೃದ್ದಿಗೆ…

Read More

ಟೋಕಿಯೋ: ಜಾಗತಿಕವಾಗಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇಂಧನ ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಜಪಾನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾರ್ಚ್ 16ರ ಆರಂಭದಲ್ಲೇ ತನ್ನ ತೈಲ ಮೀಸಲಿನ ಒಂದು ಭಾಗವನ್ನು ಬಿಡುಗಡೆ ಮಾಡುವುದಾಗಿ ಜಪಾನ್ ಪ್ರಧಾನಿ ಸನಾ ಎ ಟಕೈಚಿ ಬುಧವಾರ ಘೋಷಿಸಿದ್ದಾರೆ. ಇರಾನ್ ಒಳಗೊಂಡಂತೆ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಿಂದ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಜಾಗತಿಕವಾಗಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ, ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯನ್ನು ನಿಯಂತ್ರಿಸಲು ಮತ್ತು ಪೂರೈಕೆಯನ್ನು ಸರಾಗಗೊಳಿಸಲು ಜಪಾನ್ ಈ ತುರ್ತು ಕ್ರಮಕ್ಕೆ ಮುಂದಾಗಿದೆ. ಜಪಾನ್ ಕೈಗೊಂಡಿರುವ ಕ್ರಮಗಳೇನು? ಟೋಕಿಯೊದಲ್ಲಿ ಮಾತನಾಡಿದ ಪ್ರಧಾನಿ ಟಕೈಚಿ, ಪೂರೈಕೆಯ ಆತಂಕವನ್ನು ಹೋಗಲಾಡಿಸಲು ಜಪಾನ್ ಈ ಕೆಳಗಿನ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದರು: ಖಾಸಗಿ ವಲಯದ ತೈಲ ಮೀಸಲು: 15 ದಿನಗಳಿಗೆ ಸಾಕಾಗುವಷ್ಟು ತೈಲ ಬಿಡುಗಡೆ. ಸರ್ಕಾರಿ (ರಾಜ್ಯ) ತೈಲ ಮೀಸಲು: ಒಂದು ತಿಂಗಳ ಅವಧಿಗೆ ಸಾಕಾಗುವಷ್ಟು ತೈಲ ಬಿಡುಗಡೆ. ಹಿನ್ನೆಲೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ನೀಡಲಾಗಿದ್ದು, ಅವರಿಗೆ ಸಿಗಲಿರುವ ಅಧಿಕೃತ ಸೌಲಭ್ಯಗಳ ಪಟ್ಟಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಮಾಸಿಕ ವೇತನದಿಂದ ಹಿಡಿದು ಅತಿಥ್ಯ ಭತ್ಯೆಯವರೆಗೆ ಭಾರಿ ಮೊತ್ತದ ಸವಲತ್ತುಗಳನ್ನು ಸರ್ಕಾರ ನಿಗದಿಪಡಿಸಿದೆ. ಪ್ರಮುಖ ಸೌಲಭ್ಯಗಳ ವಿವರ ಇಲ್ಲಿದೆ: ವೇತನ ಮತ್ತು ಮನೆ ಬಾಡಿಗೆ: * ಪ್ರತಿ ತಿಂಗಳು 1.25 ಲಕ್ಷ ರೂಪಾಯಿ ಗೌರವ ವೇತನ. ಸ್ವಂತ ಅಥವಾ ಖಾಸಗಿ ಮನೆಯಲ್ಲಿ ವಾಸವಿದ್ದರೆ ಪ್ರತಿ ತಿಂಗಳು 2.50 ಲಕ್ಷ ರೂಪಾಯಿ ಮನೆ ಬಾಡಿಗೆ ಭತ್ಯೆ (HRA). ಭಾರಿ ಭತ್ಯೆಗಳು: ವಾರ್ಷಿಕ 5 ಲಕ್ಷ ರೂಪಾಯಿ ಅತಿಥ್ಯ ಭತ್ಯೆ. ಪ್ರತಿ ಕಿಲೋಮೀಟರ್ ಪ್ರಯಾಣಕ್ಕೆ 40 ರೂಪಾಯಿ ಪ್ರಯಾಣ ಭತ್ಯೆ. ತಿಂಗಳಿಗೆ 2,000 ಲೀಟರ್ ಇಂಧನ ಭತ್ಯೆ. ರಾಜ್ಯದ ಪ್ರವಾಸದ ವೇಳೆ ದಿನಕ್ಕೆ 2,500 ರೂ. ಹಾಗೂ ಹೊರ ರಾಜ್ಯದ ಪ್ರವಾಸಕ್ಕೆ ದಿನಕ್ಕೆ 3,000 ರೂ. ದಿನಭತ್ಯೆ (DA). ಐಷಾರಾಮಿ ಜೀವನಕ್ಕೆ ಸೌಕರ್ಯ: 10…

Read More

ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಆಮ್ ಆದ್ಮಿ ಪಾರ್ಟಿ ಮುಖಂಡ ರವಿಕೃಷ್ಣಾ ರೆಡ್ಡಿ ಸೇರಿದಂತೆ ಇತರೆ ರಾಜಕೀಯ ಮುಖಂಡರು ಭಾಗಿಯಾಗಿ ಬೆಂಬಲ ಸೂಚಿಸಿದರು ಹಾಗೂ ಆಡಳಿತ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಪ್ರಮುಖ ವಿಚಾರವನ್ನು ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, “ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಪ್ರತಿಯೊಂದು ವಿಚಾರದಲ್ಲಿ…

Read More

ಬೆಂಗಳೂರು : ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧೀ ಅವರು ನಿರೂಪಿಸಿದ್ದು, ಇಂದು ಎಲ್ಲ ಕ್ಷೇತ್ರದಲ್ಲೂ ಪುರುಷನಿಗೆ ಸಮನಾಗಿ ಸಾಧಿಸುತ್ತಿರುವ ಮಹಿಳೆಯರು ಅಬಲೆಯರಲ್ಲ, ಬದಲಾಗಿ ಸಾಧಕರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಅರಣ್ಯ ಇಲಾಖೆಯ ವತಿಯಿಂದ ಇಂದು ಆಯೋಜಿಸಲಾಗಿದ್ದ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪದ್ಮಶ್ರೀ ಪುರಸ್ಕೃತೆ ಡಾ. ಎಸ್.ಜಿ. ಸುಶೀಲಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಇಂದು ಅರಣ್ಯ ಇಲಾಖೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಇದ್ದು, ರಾಜ್ಯ ಅರಣ್ಯ ಇಲಾಖೆಯ ಅತ್ಯುನ್ನತ “ಅರಣ್ಯ ಪಡೆ ಮುಖ್ಯಸ್ಥ’’ರ ಹುದ್ದೆಯನ್ನೇ ಮಹಿಳೆ ನಿರ್ವಹಿಸುತ್ತಿದ್ದಾರೆ ಎಂದರು. ತಾಯಿಯ ಪಾತ್ರ ಹಿರಿದು: ಮನೆಯಲ್ಲಿ ಮಕ್ಕಳಿಗೆ ತಾಯಿಯಾಗಿ, ಸೋದರಿಯಾಗಿ, ಪತಿಗೆ ಮಡದಿಯಾಗಿ ಶ್ರಮಿಸುವ ಮಹಿಳೆ ಕಚೇರಿಯಲ್ಲೂ ಕಾರ್ಯ ನಿರ್ವಹಿಸುವ ಮೂಲಕ, ಸಂಸಾರದ ರಥ ಎಳೆಯುತ್ತಾರೆ, ಮಹಿಳೆಯರಿಗೆ ತಾಳ್ಮೆ ಹೆಚ್ಚು. ಅದಕ್ಕೇ ಕ್ಷಮಯಾ ಧರಿತ್ರೀ ಎನ್ನುವುದು. ತಾಯಿಯಾಗಿ ನೀವೆಲ್ಲರೂ…

Read More

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ, ಜೊತೆಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಎಲ್‌ಪಿಜಿ (LPG) ಮೇಲೆ ಅವಲಂಬಿತವಾಗುವ ಬದಲು, ಲಭ್ಯವಿರುವ ಇತರ ಆಧುನಿಕ ಮತ್ತು ಸಾಂಪ್ರದಾಯಿಕ ಪರ್ಯಾಯಗಳನ್ನು ಬಳಸುವುದು ಹೆಚ್ಚು ಸೂಕ್ತ. ಅಡುಗೆಗಾಗಿ ನೀವು ಬಳಸಬಹುದಾದ ಕೆಲವು ಪ್ರಮುಖ ಪರ್ಯಾಯ ಮಾರ್ಗಗಳು ಇಲ್ಲಿವೆ: 1. ಇಂಡಕ್ಷನ್ ಸ್ಟೌವ್ (Induction Stove): ಗ್ಯಾಸ್‌ಗೆ ಅತ್ಯಂತ ವೇಗವಾದ ಮತ್ತು ಸುರಕ್ಷಿತವಾದ ಪರ್ಯಾಯವೆಂದರೆ ಇಂಡಕ್ಷನ್ ಸ್ಟೌವ್. ಇದು ವಿದ್ಯುತ್ ಮೂಲಕ ಕಾರ್ಯನಿರ್ವಹಿಸುತ್ತದೆ. ಗ್ಯಾಸ್‌ಗೆ ಹೋಲಿಸಿದರೆ ಇದು ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದನ್ನು ಬಳಸುವುದರಿಂದ ಬೆಂಕಿಯ ಅಪಾಯವೂ ಇರುವುದಿಲ್ಲ. 2. ಸೋಲಾರ್ ಕುಕ್ಕರ್ (Solar Cooker): ನೈಸರ್ಗಿಕ ಸೂರ್ಯನ ಬೆಳಕನ್ನು ಬಳಸಿಕೊಂಡು ಅಡುಗೆ ಮಾಡುವುದು ಅತ್ಯಂತ ಕಡಿಮೆ ವೆಚ್ಚದ ಮಾರ್ಗವಾಗಿದೆ. ಸೋಲಾರ್ ಕುಕ್ಕರ್ ಬಳಕೆಯಿಂದ ಪರಿಸರಕ್ಕೂ ಲಾಭ, ನಿಮ್ಮ ಜೇಬಿಗೂ ಉಳಿತಾಯ. ಒಮ್ಮೆ ಹೂಡಿಕೆ ಮಾಡಿದರೆ ಸಾಕು, ಮುಂದಿನ ದಿನಗಳಲ್ಲಿ…

Read More

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸದಾ ರಿಯಾಯಿತಿ ದರದ ಪಾಸ್‌ಗಳನ್ನು ನೀಡುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC), ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯವೊಂದನ್ನು ಘೋಷಿಸಿದೆ. ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸುದ್ದಿಯ ಪ್ರಮುಖ ಅಂಶಗಳು: ಉಚಿತ ಪ್ರಯಾಣದ ಅವಧಿ: ದಿನಾಂಕ 18.03.2026 ರಿಂದ 02.04.2026 ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಈ ಸೌಲಭ್ಯ ಅನ್ವಯವಾಗಲಿದೆ. ಪ್ರವೇಶ ಪತ್ರವೇ ಟಿಕೆಟ್: ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಲು ಮತ್ತು ಮರಳಲು ಬಸ್‌ ಕಂಡಕ್ಟರ್‌ಗೆ ಪರೀಕ್ಷಾ ಪ್ರವೇಶ ಪತ್ರ (Hall Ticket) ತೋರಿಸಿದರೆ ಸಾಕು. ಯಾವುದೇ ಟಿಕೆಟ್ ಪಡೆಯುವ ಅಗತ್ಯವಿರುವುದಿಲ್ಲ. ಸಾಮಾನ್ಯ ಸೇವೆಗಳಿಗೆ ಮಾತ್ರ: ಈ ಸೌಲಭ್ಯವು ಸಂಸ್ಥೆಯ ಸಾಮಾನ್ಯ ಬಸ್‌ ಸೇವೆಗಳಲ್ಲಿ ಮಾತ್ರ ಲಭ್ಯವಿರುತ್ತದೆ (ವೇಗದೂತ ಅಂದರೆ ಸುಪರ್ ಫಾಸ್ಟ್ ಸೇವೆಗಳನ್ನು ಹೊರತುಪಡಿಸಿ). ವಿದ್ಯಾರ್ಥಿಗಳ ಅನುಕೂಲಕ್ಕಾಗಿ…

Read More

ಬೆಂಗಳೂರು: ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಪೂರೈಕೆ ವ್ಯತ್ಯಯದ ಹಿನ್ನಲೆಯಲ್ಲಿ, ಬೆಂಗಳೂರಿನ ವಿಜಯನಗರದ ಪುಡ್ ಸ್ಟ್ರೀಟ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಹೌದು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿನ ಅಂಗಡಿ-ಮುಂಗಟ್ಟನ್ನು ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಸಿಗದೇ ಇರುವುದರಿಂದ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿ ಕೆಲವರು ಸೌದೆ ಒಲೆಯಲ್ಲಿ ಅಡುಗೆ ಮಾಡ್ತಿದ್ದರೇ, ಕೆಲವು ವ್ಯಾಪಾರಿಗಳು ಚಾರ್ ಕೋಲ್ ಬಳಸಿ ಅಡುಗೆ ಮಾಡುತ್ತಿರುವುದು ಕಂಡು ಬಂದಿದೆ. https://kannadanewsnow.com/kannada/lpg-cylinder-shortage-in-the-assembly-intense-war-of-words-between-the-ruling-and-opposition-parties/ https://kannadanewsnow.com/kannada/no-need-to-invest-do-this-for-2-hours-a-day-and-earn-rs-1-lakh-per-month-guaranteed/

Read More

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಇಂದು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಯಿತು. ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾಗೂ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಕುರಿತಾದ ಆರೋಪ-ಪ್ರತ್ಯಾರೋಪಗಳಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೋದಿ ಹೆಸರು ಕೇಳಿ ಕೆರಳಿದ ಬಿಜೆಪಿ ಶೂನ್ಯವೇಳೆಯಲ್ಲಿ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಗ್ಯಾಸ್ ಅಭಾವದ ಬಗ್ಗೆ ಗಮನ ಸೆಳೆದರು. “900 ರೂಪಾಯಿ ಇದ್ದ ಸಿಲಿಂಡರ್‌ಗೆ ಇಂದು 1,800 ರೂಪಾಯಿ ನೀಡಬೇಕಾದ ಪರಿಸ್ಥಿತಿ ಬಂದಿದೆ. ಇದಕ್ಕೆ ಪ್ರಧಾನಿ ಮೋದಿ ಸರ್ಕಾರದ ದುರ್ಬಲ ವಿದೇಶಾಂಗ ನೀತಿಯೇ ಕಾರಣ” ಎಂದು ಆರೋಪಿಸಿದರು. ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಬಿಜೆಪಿ ಸದಸ್ಯರು ರಂಗನಾಥ್ ವಿರುದ್ಧ ಮುಗಿಬಿದ್ದು, ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಿಯಾಂಕ್ ಖರ್ಗೆ ವರ್ಸಸ್ ಸುನಿಲ್ ಕುಮಾರ್ ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಪ್ರಿಯಾಂಕ್ ಖರ್ಗೆ, “ದೇಶದ ಆರ್ಥಿಕ ಮತ್ತು ವಿದೇಶಾಂಗ ನೀತಿ ಏನಾಗಿದೆ? ಪ್ರಧಾನಿಯವರು ಇಷ್ಟೆಲ್ಲಾ…

Read More

ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ. ನೆರೆಯ ರಾಜ್ಯಕ್ಕೆ ‘ಬೆಣ್ಣೆ’, ನಮಗೆ ‘ಸುಣ್ಣ’ ಎನ್ನುವ ಕೇಂದ್ರದ ಈ ಧೋರಣೆ ಸರ್ವಥಾ ಸರಿಯಲ್ಲ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಕಿಡಿ ಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು. ಆದರೆ, ನಮ್ಮ ರಾಜ್ಯದ ಬೇಡಿಕೆಯ ಬಗ್ಗೆ ಕೇಂದ್ರವು ಪ್ರದರ್ಶಿಸುತ್ತಿರುವ ಉದಾಸೀನ ಮನೋಭಾವವು ಪ್ರಶ್ನಾರ್ಹವಾಗಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವವಂತೆ ಕೋರಿ 24 ಜೂನ್ 2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಇಷ್ಟಾಗಿಯೂ…

Read More