Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದರೂ ರಾಯ್ ಗುಂಡು ಹಾರಿಸಿಕೊಂಡು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಐಟಿ ಇಲಾಖೆಯು ರಾಯ್ ಸಾವಿನ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸಿಜೆ ರಾಯ್ ಯಾರು? ರಾಯ್ ಕೇರಳದ ಕೊಚ್ಚಿಯ ಪ್ರಸಿದ್ಧ ಬಿಲ್ಡರ್ ಮತ್ತು ರಿಯಲ್ ಎಸ್ಟೇಟ್ ಡೆವಲಪರ್ ಆಗಿದ್ದರು. ಅವರು ಚಲನಚಿತ್ರೋದ್ಯಮದಲ್ಲಿಯೂ ಸಕ್ರಿಯರಾಗಿದ್ದರು ಮತ್ತು 2012 ರಲ್ಲಿ ಬಿಡುಗಡೆಯಾದ ಮೋಹನ್ ಲಾಲ್ ಅವರ ದೊಡ್ಡ ಬಜೆಟ್ ಚಿತ್ರ ಕ್ಯಾಸನೋವಾ ಸೇರಿದಂತೆ ಮಲಯಾಳಂ ಚಲನಚಿತ್ರಗಳನ್ನು ನಿರ್ಮಿಸಿದರು. ಮೋಹನ್ ಲಾಲ್ ಆಯೋಜಿಸಿದ್ದ ಮಲಯಾಳಂ ದೂರದರ್ಶನ ರಿಯಾಲಿಟಿ ಶೋ ಬಿಗ್ ಬಾಸ್ ಮಲಯಾಳಂನ ಹಲವಾರು ಸೀಸನ್ಗಳಿಗೆ ಕಾನ್ಫಿಡೆಂಟ್ ಗ್ರೂಪ್ ಶೀರ್ಷಿಕೆ ಪ್ರಾಯೋಜಕರಾಗಿಯೂ ಸೇವೆ ಸಲ್ಲಿಸಿದೆ. ಕಾನ್ಫಿಡೆಂಟ್…
ಕೋಲ್ಕತ್ತಾ: ಕನಿಷ್ಠ 21 ಜೀವಗಳನ್ನು ಬಲಿ ಪಡೆದ ಕೋಲ್ಕತ್ತಾದ ಗೋದಾಮಿನ ಬೆಂಕಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ, ಈ ಘಟನೆಯನ್ನು ‘ತುಂಬಾ ದುರಂತ’ ಮತ್ತು ‘ದುಃಖಕರ’ ಎಂದು ಕರೆದಿದ್ದಾರೆ, ಜೊತೆಗೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಬಿಡುಗಡೆಯಾದ ಹೇಳಿಕೆಯಲ್ಲಿ, ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ತಿಳಿಸಿದೆ. ಇದರ ಜೊತೆಗೆ, ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದಿದ್ದಾರೆ. https://twitter.com/PMOIndia/status/2017208813401911409 ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಾವಿನ ಸಂಖ್ಯೆ 21ಕ್ಕೆ ಏರಿಕೆ ಜನವರಿ 26 ರ ರಾತ್ರಿ ಕೋಲ್ಕತ್ತಾದ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ(IPD) ಚಿಕಿತ್ಸೆ ನೀಡುವುದು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ, ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ವಹಿಸಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. https://twitter.com/KarnatakaVarthe/status/2017109631315976390 ಗುರುವಾರದಂದು ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ವ್ಯತ್ಯಯದಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ ಸಿಗುವಂತೆ ಮಾಡಲು ಎಲ್ಲ ಸಿದ್ದತೆ ನಡೆಸುತ್ತಿದೆ. ಜೊತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರ ಖಾಸಗಿ ಸೇವೆ ಬಗ್ಗೆ ಮಾತನಾಡಿದ ಸಚಿವರು, ಪ್ರಸ್ತುತ ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ನಂತರ (ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗದಂತೆ) ಖಾಸಗಿಯಾಗಿಯೂ…
ಮೈಸೂರು: ರೈಲ್ವೆ ಕಾರ್ಯಾಚರಣಾ ಕಾರಣಗಳಿಂದಾಗಿ, ಪೂರ್ವ ಮಧ್ಯ ರೈಲ್ವೆಯು ಕೆಳಕಂಡ ರೈಲುಗಳ ನಿರ್ಗಮನ /ಆಗಮನ ಸಮಯಗಳಲ್ಲಿ ಪರಿಷ್ಕರಣೆ ಮಾಡಿರುವುದಾಗಿ ತಿಳಿಸಿದೆ. ಈ ಪರಿಷ್ಕೃತ ಸಮಯಗಳು ಕೆಳಗೆ ಸೂಚಿಸಿರುವ ದಿನಾಂಕಗಳಿಂದ ಜಾರಿಗೆ ಬರಲಿವೆ: ರೈಲು ಸಂಖ್ಯೆ 12577 ದರ್ಬಾಂಗ – ಮೈಸೂರು ಎಕ್ಸ್ಪ್ರೆಸ್ ದರ್ಬಾಂಗ ನಿಲ್ದಾಣದಿಂದ ಹೊರಡುವ ಸಮಯವನ್ನು 15:35 ಗಂಟೆಯಿಂದ 15:30 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 07 ಏಪ್ರಿಲ್ 2026ರಿಂದ ಅನ್ವಯವಾಗಲಿದೆ. ರೈಲು ಸಂಖ್ಯೆ 12578 ಮೈಸೂರು – ದರ್ಬಾಂಗ ಎಕ್ಸ್ಪ್ರೆಸ್ ದರ್ಬಾಂಗ ನಿಲ್ದಾಣಕ್ಕೆ ಆಗಮಿಸುವ ಸಮಯವನ್ನು 16:00 ಗಂಟೆಯಿಂದ 16:10 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 06 ಫೆಬ್ರವರಿ 2026ರಿಂದ ಅನ್ವಯವಾಗಲಿದೆ. ರೈಲು ಸಂಖ್ಯೆ 15227 ಎಸ್ಎಂವಿಟಿ ಬೆಂಗಳೂರು – ಮುಜಾಫರ್ ಪುರ್ ಎಕ್ಸ್ಪ್ರೆಸ್ ಮುಜಾಫರ್ ಪುರ್ ನಿಲ್ದಾಣಕ್ಕೆ ಆಗಮಿಸುವ ಸಮಯವನ್ನು 01:45 ಗಂಟೆಯಿಂದ 01:50 ಗಂಟೆಗೆ ಪರಿಷ್ಕರಿಸಲಾಗಿದೆ. ಈ ಬದಲಾವಣೆ 05 ಫೆಬ್ರವರಿ 2026ರಿಂದ ಅನ್ವಯವಾಗಲಿದೆ. https://kannadanewsnow.com/kannada/ban-on-advertisements-promoting-tobacco-products-in-state-transport-buses-and-bus-stops/ https://kannadanewsnow.com/kannada/confident-group-chairman-c-j-roy-committed-suicide-by-shooting-himself-with-a-pistol/
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿಗೆ ಹೆದರಿ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಗ್ ಫರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಂತ ವೇಳೆಯಲ್ಲೇ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. https://kannadanewsnow.com/kannada/threatening-a-female-officer-case-rajeev-gowda-granted-conditional-bail/ https://kannadanewsnow.com/kannada/ban-on-advertisements-promoting-tobacco-products-in-state-transport-buses-and-bus-stops/
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅವರು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಪದೇ ಪದೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದರು. ಇಂದು ಕೂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದರು. ಈ ಹಿನ್ನಲೆಯಲ್ಲಿ ಅವರು ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. https://kannadanewsnow.com/kannada/ban-on-advertisements-promoting-tobacco-products-in-state-transport-buses-and-bus-stops/ https://kannadanewsnow.com/kannada/threatening-a-female-officer-case-rajeev-gowda-granted-conditional-bail/
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದಂತ ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಬಳಿಕ ಜೈಲುಪಾಲಾಗಿದ್ದರು. ಅವರಿಗೆ ಇಂದು ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಬ್ಯಾನರ್ ತೆರವಿನ ಸಂಬಂಧ ದೂರವಾಣಿ ಕರೆ ಮಾಡಿದ್ದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅವರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಕೇರಳದ ಗಡಿಯಲ್ಲಿ ರಾಜೀವ್ ಗೌಡ ಅವರನ್ನು ಬಂಧಿಸಿದ್ದರು. ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇಂದು ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಶಿಡ್ಲಘಟ್ಟ ಜೆಎಂಎಫ್ ಸಿ ಕೋರ್ಟ್ ವಿಚಾರಣೆ ನಡೆಸಿತು. ರಾಜೀವ್ ಗೌಡ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. https://kannadanewsnow.com/kannada/injustice-without-funding-betrayal-of-kannadigas-by-bjp-government-at-the-centre-congress-kidi/ https://kannadanewsnow.com/kannada/ban-on-advertisements-promoting-tobacco-products-in-state-transport-buses-and-bus-stops/
ವಿಧಾನಸಭೆಯಲ್ಲಿ ಋತುಚಕ್ರ ರಜೆ, ಗಿಗ್ ಕಾರ್ಮಿಕರಿಗೆ ವಿಮೆ, ಸಂಚಾರಿ ಆರೋಗ್ಯ ಘಟಕದ ಸೇವೆ ಕುರಿತು ಶಾಸಕಿ ನಯನಾ ಪ್ರಶಂಸೆ
ಬೆಂಗಳೂರು : ಕಾರ್ಮಿಕ ಇಲಾಖೆಯ ಜಾರಿ ಮಾಡಿರುವ ಮೂರು ಮಹತ್ವದ ಯೋಜನೆಗಳಿಗೆ ವಿಧಾನಸಭೆಯ ಕಲಾಪದಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಋತುಚಕ್ರ ರಜೆ ನೀತಿ, ಕರ್ನಾಟಕ ಪ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರ ವಿಮಾ ಯೋಜನೆ ಹಾಗೂ ಸಂಚಾರಿ ಆರೋಗ್ಯ ಘಟಕಗಳ ಬಗ್ಗೆ ಕಲಾಪದ ವೇಳೆ ಮಾತನಾಡಿದ ಶಾಸಕಿ, ಕಾರ್ಮಿಕ ಇಲಾಖೆಯ ಕಾರ್ಯವೈಖರಿಗೆ ಧನ್ಯವಾದಗಳನ್ನು ತಿಳಿಸಿದರು. ಸರ್ಕಾರಿ ಹಾಗೂ ನೋಂದಾಯಿತ ಕೈಗಾರಿಕೆ ಮತ್ತು ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ಒಂದು ವೇತನ ಸಹಿತ ಋತುಚಕ್ರ ರಜೆ ನೀಡಲಾಗುತ್ತಿದೆ. ವರ್ಷದಲ್ಲಿ 12 ರಜೆಗಳನ್ನು ಸರ್ಕಾರ ನೀಡಿದೆ. ಇದೊಂದು ಐತಿಹಾಸಿಕ ನಿರ್ಣಯ ಎಂದ ಅವರು, ಇಂತಹ ಮಹತ್ವದ ರಜೆಯನ್ನು ಜಾರಿ ಮಾಡಿದ ಸರ್ಕಾರಕ್ಕೆ ಎಲ್ಲ ಮಹಿಳೆಯರ ಪರವಾಗಿ ಧನ್ಯವಾದಗಳು ಎಂದರು. ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಕಾರ್ಮಿಕ ಇಲಾಖೆ ಜಾರಿ ಮಾಡಿರುವ ಕರ್ನಾಟಕ ಪ್ಲಾಟ್ಫಾರಂ ಆಧಾರಿತ…
ಬೆಂಗಳೂರು: ಕೇಂದ್ರ ಸರ್ಕಾರವು ಅನುದಾನ ಕೊಡದೇ ಕನ್ನಡಿಗರಿಗೆ ದ್ರೋಹ ಮಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ವಿರುದ್ಧ ಮತ್ಸರ ಕಾರುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, 5ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಮಾಡಿದ ಕಾರಣಕ್ಕೆ ಆಯೋಗವು 11,495 ಕೋಟಿ ರೂ.ನಷ್ಟು ಹೆಚ್ಚುವರಿ ಅನುದಾನ (5,495 ಕೋಟಿ ವಿಶೇಷ ಅನುದಾನ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ) ನೀಡಲು ಶಿಫಾರಸ್ಸು ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಇದನ್ನು ಕೊಡದೇ ದ್ರೋಹ ಬಗೆದಿದೆ ಎಂದು ಗುಡುಗಿದೆ. ಬಿಜೆಪಿಯ ಅನ್ಯಾಯ ಇಷ್ಟಕ್ಕೇ ನಿಲ್ಲಲಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ಹೆಚ್ಚಿನ ಹೊರೆ ಬಿದ್ದಿದೆ ಎಂಬುದಾಗಿ ತಿಳಿಸಿದೆ. ಜಲಜೀವನ್ ಮಿಷನ್ ಯೋಜನೆಯಲ್ಲಿ 13 ಸಾವಿರ ಕೋಟಿ…
ಬೆಂಗಳೂರು: ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ಭಾಗವಾಗಿ ಜಾವಾ, ಯೆಜ್ಡಿ ಹಾಗೂ ಬಿಎಸ್ಎ ಸವಾರರು ಬಾವುಟ ಹಾರಿಸುತ್ತಾ ದೇಶಾದ್ಯಂತ ರ್ಯಾಲಿ ನಡೆಸಿದರು. ಕ್ಲಾಸಿಕ್ ಲೆಜೆಂಡ್ಸ್, ತನ್ನ ವೆಬ್ಸೈಟ್ನಲ್ಲಿ ‘ನೋಮ್ಯಾಡ್ಸ್: ರೈಡ್ ಆಸ್ ಒನ್, ರೈಡ್ ದಿ ಲೆಗಸಿ’ ಎಂಬ ಶೀರ್ಷಿಕೆಯಡಿ ಗಣರಾಜ್ಯೋತ್ಸವವನ್ನು ಬೈಕ್ ರೈಡ್ ಮಾಡುವ ಮೂಲಕ ಆಚರಿಸಲು ಆಸಕ್ತ ಯುವಸಮುದಾಯವನ್ನು ಆಹ್ವಾನಿಸಿತ್ತು. ಅಂತೆಯೇ, ದೇಶಾದ್ಯಂತ 150 ಕ್ಕೂ ಹೆಚ್ಚು ವೃತ್ತಿಪರ ಸವಾರರು, ರೈಡರ್ ತಂಡಗಳು, ಸ್ವಯಂ ಸವಾರರು ಸೇರಿ ಸುಮಾರು 2,000 ಕ್ಕೂ ಹೆಚ್ಚು ಸವಾರರು ಈ ರೈಡ್ನಲ್ಲಿ ಭಾಗಿಯಾಗಿದ್ದರು. ಈ ಕುರಿತು ಮಾತನಾಡಿ ಕ್ಲಾಸಿಕ್ ಲೆಜೆಂಡ್ಸ್ನ ಸಹ-ಸಂಸ್ಥಾಪಕ ಅನುಪಮ್ ಥರೇಜಾ, ಕ್ಲಾಸಿಕ್ ಲೆಜೆಂಡ್ಸ್ ಪ್ರತಿ ಆಚರಣೆಯನ್ನು ಆಸಕ್ತ ರೈಡರ್ಗಳ ಜೊತೆಗೆ ರೈಡ್ಗಳನ್ನು ಆಹ್ವಾನಿಸುವ ಮೂಲಕ ಎಲ್ಲರನ್ನು ಒಟ್ಟುಗೂಡಿಸುತ್ತದೆ. ಅಂತೆಯೇ, ಈ ಗಣರಾಜ್ಯೋತ್ಸವದ ಪ್ರಯುಕ್ತದಂದು 2 ಸಾವಿರಕ್ಕೂ ಹೆಚ್ಚು ಸವಾರರು ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಲು ನಮ್ಮೊಂದಿಗೆ ಸೇರಿದ್ದರು. ಈ ದಿನದಂದು ಜಾವಾ, ಯೆಜ್ಡಿ ಮತ್ತು ಬಿಎಸ್ಎಯ ವಾರ್ಷಿಕ ಸವಾರಿಗಳು ವಿಭಿನ್ನ ಸವಾರರನ್ನು ನಿಕಟ…













