Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಕೆ.ಆರ್. ನಂದಿನಿ ಅವರ ಸರ್ಕಾರಿ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಮಂಡ್ಯದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಸಿಇಒ ಕೆ.ಆರ್. ನಂದಿನಿ ಅವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ನಿವಾಸದ ಮುಂಭಾಗದಲ್ಲೇ ಸಂಭವಿಸಿದ ಅಪಘಾತ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್. ನಂದಿನಿ ಅವರು ಮಧ್ಯಾಹ್ನ ಊಟ ಮುಗಿಸಿ ಕಚೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಸರ್ಕಾರಿ ನಿವಾಸದ ಮುಂಭಾಗದಲ್ಲೇ ಮತ್ತೊಂದು ಕಾರು ಇವರ ಅಧಿಕೃತ ಸರ್ಕಾರಿ ವಾಹನಕ್ಕೆ ರಭಸವಾಗಿ ಬಂದು ಡಿಕ್ಕಿ ಹೊಡೆದಿದೆ. ಟೈರ್ ಸ್ಫೋಟ, ಜಖಂಗೊಂಡ ಸರ್ಕಾರಿ ಕಾರು ಅಪಘಾತದ ರಭಸ ಎಷ್ಟಿತ್ತೆಂದರೆ ಜಿ.ಪಂ. ಸಿಇಒ ಅವರ ಕಾರಿನ ಟೈರ್ ಸ್ಥಳದಲ್ಲೇ ಸ್ಫೋಟಗೊಂಡಿದೆ. ಡಿಕ್ಕಿಯ ಹೊಡೆತಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತಾದರೂ, ಅಧಿಕಾರಿ ನಂದಿನಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಕಾರಿನಲ್ಲಿ ಕಚೇರಿಗೆ ತೆರಳಿದ ಸಿಇಒ ಘಟನೆ ನಡೆದ ತಕ್ಷಣವೇ ಸಾವರಿಸಿಕೊಂಡ ಸಿಇಒ ಕೆ.ಆರ್. ನಂದಿನಿ…

Read More

ಶಿವಮೊಗ್ಗ: ಇತ್ತೀಚೆಗೆ ದಿನಪತ್ರಿಕೆಯೊಂದರಲ್ಲಿ ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ.) ಕುರಿತು ಪ್ರಕಟವಾದ “ಕೋಟಿ ಬೆಲೆಯ ಕಲ್ಲುಗಳು ಮಾಯ ಹಾಗೂ ಗೋದಾಮುಗಳ ದುರ್ಬಳಕೆ” ಎಂಬ ವರದಿಯನ್ನು ಎ.ಪಿ.ಎಂ.ಸಿ. ಆಡಳಿತ ಮಂಡಳಿ ಸಂಪೂರ್ಣವಾಗಿ ನಿರಾಕರಿಸಿದೆ. ಅಲ್ಲದೇ ಕೋಟಿ ಕೋಟಿ ಬೆಲೆಯ ಕಲ್ಲುಗಳು ನಾಪತ್ತೆಯಗಾಲ್ಲ, ಗೋದಾಮೂ ಹಾಳಾಗಿಲ್ಲ ಎಂಬುದಾಗಿ ಸಾಗರ ಎಪಿಎಂಸಿ ಕಾರ್ಯದರ್ಶಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿರುವಂತ ಸಾಗರ ಎ.ಪಿ.ಎಂ.ಸಿ. ಕಾರ್ಯದರ್ಶಿ ಶೈಲಜಾ ಅವರು ಲಿಖಿತ ಪತ್ರದ ಮೂಲಕ ಅಂಕಿ-ಅಂಶ ಸಹಿತ ಸುದೀರ್ಘ ಸ್ಪಷ್ಟೀಕರಣ ನೀಡಿದ್ದಾರೆ. ಪತ್ರಿಕೆಯಲ್ಲಿ ಪ್ರಕಟವಾದ ಅಂಶಗಳು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸುವಂತಿದ್ದು, ವಾಸ್ತವ ಬೇರೆಯೇ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾಂಪೌಂಡ್ ಕಲ್ಲುಗಳ ನಾಪತ್ತೆ ಆರೋಪಕ್ಕೆ ಸ್ಪಷ್ಟನೆ ಪ್ರಾಂಗಣದ ಸುತ್ತಲಿನ ಶಿಥಿಲಗೊಂಡ ಕಾಂಪೌಂಡ್ ಗೋಡೆಯನ್ನು ಕೆಡವಿ ಹೊಸ ಗೋಡೆ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಹಳೆಯ ಕಾಂಪೌಂಡ್‌ನಿಂದ ಬಂದ ನೂರಾರು ಲೋಡ್ ಸೈಜ್ ಕಲ್ಲುಗಳನ್ನು ಗುತ್ತಿಗೆದಾರರು ರಾತ್ರೋರಾತ್ರಿ ಅಕ್ರಮವಾಗಿ ಸಾಗಿಸಿದ್ದಾರೆ ಎಂಬ ಆರೋಪ…

Read More

ಬೆಂಗಳೂರು ಗ್ರಾಮಾಂತರ: ಕೆರೆಗಳು, ನದಿ, ಸರೋವರ ಸೇರಿದಂತೆ ಜಲ ಮೂಲಗಳಿಗೆ ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ಸುರಿದು ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ನೆಲಮಂಗಲ ತಾಲೂಕು ಯಂಟಗಾನಹಳ್ಳಿ ಗ್ರಾಮ ಪಂಚಾಯ್ತಿಗೆ ಇಂದು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಗ್ರಾಮದ ಕೆರೆಯಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯಲಾಗುತ್ತಿದೆ ಎಂದು ಗ್ರಾಮಸ್ಥರು ನೀಡಿದ ದೂರಿಗೆ ಸ್ಪಂದಿಸಿ, ಈ ಬಗ್ಗೆ ಪರಿಶೀಲಿಸಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸುವಂತೆ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ಜನರ ಕುಂದು ಕೊರತೆ ವಿಚಾರಿಸಿದ ಸಚಿವರು, 15 ದಿನಗಳಲ್ಲಿ 11 ಬಿ ಅರ್ಜಿಗಳನ್ನು ವಿಲೆಗೂ ಸೂಚನೆ ನೀಡಿದರು. ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದ ಅವರು, ನಿಗದಿತ ಸಮಯಕ್ಕೆ ಅಧಿಕಾರಿ, ಸಿಬ್ಬಂದಿ ಕಚೇರಿಗೆ ಆಗಮಿಸಬೇಕು, ಜನಸ್ನೇಹಿಯಾಗಿ ಕೆಲಸ ಮಾಡಬೇಕು. ವಿನಾ ಕಾರಣ ಗ್ರಾಮಸ್ಥರನ್ನು ಪಂಚಾಯ್ತಿ ಕಚೇರಿಗೆ ಅಲೆಸಬಾರದು ಎಂದು ನಿರ್ದೇಶಿಸಿದರು. ಇ-ಸ್ವತ್ತು ನೀಡಿಕೆಯಲ್ಲಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (APMC) 56 ಎಕರೆ ಪ್ರದೇಶದಲ್ಲಿ ಸುಮಾರು ₹2.25 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಲೋಕಾಯುಕ್ತ ತನಿಖೆ ನಡೆಸುವಂತೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ರೈತರು ಮತ್ತು ವ್ಯಾಪಾರಸ್ಥರ ದೂರಿನ ಹಿನ್ನೆಲೆಯಲ್ಲಿ ಸಾಗರ ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿದ ಹಾಲಪ್ಪ ಅವರು, ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಕಾಮಗಾರಿಯ ಲೋಪದೋಷಗಳನ್ನು ಎತ್ತಿ ತೋರಿಸಿದರು. ನೂರಾರು ಲೋಡ್ ಸೈಜುಗಲ್ಲು ನಾಪತ್ತೆ: ಕಣ್ಮುಚ್ಚಿ ಕುಳಿತ ಸಿಸಿ ಕ್ಯಾಮರಾಗಳು! “ಎಪಿಎಂಸಿ ಕಾಂಪೌಂಡ್‌ನಿಂದ ಕಿತ್ತ ನೂರಾರು ಲೋಡ್ ಸೈಜುಗಲ್ಲುಗಳನ್ನು ಪ್ರಾಂಗಣದಿಂದ ಹೊರಗೆ ಸಾಗಿಸಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಹಾಕಲಾಗಿದೆ. ಕಾಂಪೌಂಡ್ ನಿರ್ಮಾಣಕ್ಕಾಗಿ ಮೂರು ಹಂತಗಳಲ್ಲಿ ಇಬ್ಬರು ಗುತ್ತಿಗೆದಾರರು ಕೆಲಸ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ,…

Read More

ನವದೆಹಲಿ: ದೇಶದ ಸ್ಟಾಕ್‌ ಮಾರ್ಕೆಟ್‌ ಇತಿಹಾಸದಲ್ಲೇ ಅತ್ಯಂತ ಬಹುನಿರೀಕ್ಷಿತ ಐಪಿಒಗಳಲ್ಲಿ ಒಂದೆಂದು ಪರಿಗಣಿಸಲಾದ ಜಿಯೋ ಪ್ಲಾಟ್‌ಫಾರ್ಮ್ಸ್‌ನ ಐಪಿಒ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದೆ. ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಆಡಳಿತ ಮಂಡಳಿಯು, 27 ಕೋಟಿ ಈಕ್ವಿಟಿ ಷೇರುಗಳ ಫ್ರೆಶ್ ಇಶ್ಯೂಗೆ (ಹೊಸ ಷೇರುಗಳ ವಿತರಣೆ) ಅನುಮೋದನೆ ನೀಡಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್, ಸ್ಟಾಕ್ ಎಕ್ಸ್‌ಚೇಂಜ್‌ಗಳಿಗೆ ಮಾಹಿತಿ ನೀಡಿದೆ. ಈ ಷೇರುಗಳ ಮುಖಬೆಲೆ (ಫೇಸ್ ವ್ಯಾಲ್ಯೂ) ಪ್ರತಿ ಷೇರಿಗೆ 10 ರೂಪಾಯಿ ಆಗಿರಲಿದ್ದು, ಇಶ್ಯೂ ದರವನ್ನು ಬುಕ್ ಬಿಲ್ಡಿಂಗ್ ಪ್ರಕ್ರಿಯೆಯ ಮೂಲಕ ನಿರ್ಧರಿಸಲಾಗುತ್ತದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49 ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ, ಜಿಯೋ ಪ್ಲಾಟ್‌ಫಾರ್ಮ್ಸ್ ಮಂಡಳಿಯು ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್‌ಗೆ (DRHP) ಅನುಮೋದನೆ ನೀಡಿದ್ದು, ಇದನ್ನು ಇಂದು ಸೆಬಿ (SEBI) ಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಐಪಿಒ ಅಗತ್ಯ ನಿಯಂತ್ರಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ ಎಂದು ಕಂಪನಿಯು ಬಿಎಸ್‌ಇ ಮತ್ತು ಎನ್‌ಎಸ್‌ಇಗೆ…

Read More

ಮುಂಬೈ: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ- ಕೃತಕ ಬುದ್ಧಿಮತ್ತೆ) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಮುಖ್ಯಸ್ಥ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಮುಕೇಶ್ ಡಿ. ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು ಎಂದು ಹೇಳಿದರು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ ಮುನ್ನಡೆಸಲಾಗುತ್ತಿದೆ ಎಂದು ಮುಕೇಶ್ ಅಂಬಾನಿ ತಿಳಿಸಿದರು. ಗ್ರಾಹಕರು, ಉದ್ಯಮಗಳು ಮತ್ತು ಸರ್ಕಾರಗಳಿಗಾಗಿ ದೊಡ್ಡ ಪ್ರಮಾಣದಲ್ಲಿ ಎಐ ಮೂಲಸೌಕರ್ಯ, ಪ್ಲಾಟ್‌ಫಾರ್ಮ್‌ಗಳು ಮತ್ತು ಸೇವೆಗಳ ಲಾಭದಾಯಕ ವ್ಯವಹಾರವನ್ನು ಸಿದ್ಧಪಡಿಸುವುದು ರಿಲಯನ್ಸ್ ಇಂಟೆಲಿಜೆನ್ಸ್‌ನ ಉದ್ದೇಶ ಎಂದು ಅವರು ಹೇಳಿದರು. ಜಿಯೋ ಮುಖ್ಯಸ್ಥ ಆಕಾಶ್ ಅಂಬಾನಿ ಅವರು ರಿಲಯನ್ಸ್ ಇಂಟೆಲಿಜೆನ್ಸ್‌ನ ಸೇವೆಗಳು ಮತ್ತು ಎಐ ಉತ್ಪನ್ನಗಳ ವಿವರವಾದ ಮಾಹಿತಿ ನೀಡಿದರು. ರಿಲಯನ್ಸ್ ಇಂಟೆಲಿಜೆನ್ಸ್…

Read More

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಬಹುನಿರೀಕ್ಷಿತ ಡಿಜಿಟಲ್ ಹಾಗೂ ಟೆಲಿಕಾಂ ಅಂಗಸಂಸ್ಥೆಯಾದ ‘ಜಿಯೋ ಪ್ಲಾಟ್‌ಫಾರ್ಮ್ಸ್’ (Jio Platforms) ಆರಂಭಿಕ ಸಾರ್ವಜನಿಕ ಕೊಡುಗೆ (IPO) ಅನ್ನು ಅಧಿಕೃತವಾಗಿ ಘೋಷಿಸಿದೆ. ಕಂಪನಿಯ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ, ಜಿಯೋ ಐಪಿಒಗೆ ಕಂಪನಿಯ ಮಂಡಳಿ ಅನುಮೋದನೆ ನೀಡಿದ್ದು, ಕರಡು ದಾಖಲೆಗಳನ್ನು (DRHP) ಇಂದೇ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಗೆ (SEBI) ಸಲ್ಲಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಇದು ಭಾರತೀಯ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿ ದೊಡ್ಡ ಐಪಿಒಗಳಲ್ಲಿ ಒಂದಾಗುವ ಸಾಧ್ಯತೆಯಿದೆ. ಈ ಮಹತ್ವದ ಸುದ್ದಿಯ ವಿವರ ಇಲ್ಲಿದೆ: ಜಿಯೋ ಐಪಿಒ ಪ್ರಕ್ರಿಯೆಗೆ ಅಧಿಕೃತ ಚಾಲನೆ ಷೇರು ಮಾರುಕಟ್ಟೆಯಲ್ಲಿ ಜಿಯೋ ಪಟ್ಟಿಯಾಗುವ ಕುರಿತು ಹಲವು ವರ್ಷಗಳಿಂದ ಇದ್ದ ನಿರೀಕ್ಷೆಗಳಿಗೆ ಈಗ ತೆರೆ ಬಿದ್ದಿದೆ. ಎಜಿಎಂನಲ್ಲಿ ಮಾತನಾಡಿದ ಮುಕೇಶ್ ಅಂಬಾನಿ, “ಜಿಯೋ ಪ್ಲಾಟ್‌ಫಾರ್ಮ್ಸ್ ಮಂಡಳಿಯು ಕರಡು ಪ್ರತಿಯನ್ನು (DRHP) ಅನುಮೋದಿಸಿದೆ ಎನ್ನಲು ನನಗೆ ಅತ್ಯಂತ ಸಂತೋಷವಾಗುತ್ತಿದೆ. ಇದನ್ನು ಇಂದೇ ಸೆಬಿಗೆ…

Read More

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮತ್ತು ಸ್ಥಳೀಯವಾಗಿ ಸರ್ಕಾರಿ ಆಸ್ತಿಗಳ ದುರ್ಬಳಕೆ ಆಗುತ್ತಿರುವ ಕುರಿತು ಸಾಗರ ಬಿಜೆಪಿ ನಗರಾಧ್ಯಕ್ಷ ಗಣೇಶ್ ಪ್ರಸಾದ್ ಕೆ.ಆರ್. ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು… ಗೃಹಲಕ್ಷ್ಮಿ ಯೋಜನೆಯಲ್ಲಿನ ಲೋಪಗಳು ಮತ್ತು ಗ್ಯಾರಂಟಿ ಸಮಿತಿಗಳ ವೈಫಲ್ಯ ರಾಜ್ಯದಲ್ಲಿ 2023ರಲ್ಲಿ ಹತ್ತಾರು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತೇವೆ ಎಂದು ಹೇಳಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಈ ಸಮಿತಿಗಳ ಪದಾಧಿಕಾರಿಗಳಿಗೆ ತಿಂಗಳಿಗೆ 75,000 ದಿಂದ 5 ಲಕ್ಷ ರೂಪಾಯಿಗಳವರೆಗೆ…

Read More

ಹಾಸನ: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಭಾರಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ, ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ (CID) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಕೆ.ಎಸ್. ಲಿಂಗೇಶ್ ಅವರು ಬೇಲೂರು ತಾಲ್ಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ವ್ಯಾಪಕ ಪ್ರಮಾಣದ ಸರ್ಕಾರಿ ಜಮೀನನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅವರು ಬೇಲೂರು ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. 2,750 ಎಕರೆ ಜಮೀನು ಮೌಲ್ಯದ ಬೃಹತ್ ಹಗರಣ! ಸಾಮಾಜಿಕ ಕಾರ್ಯಕರ್ತರು ನೀಡಿದ ದೂರಿನ ಪ್ರಕಾರ, ಸುಮಾರು 2,750 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಬರೋಬ್ಬರಿ 1,430 ಬೋಗಸ್ (ನಕಲಿ) ಫಲಾನುಭವಿಗಳಿಗೆ ಕಾನೂನುಬಾಹಿರವಾಗಿ ಮಂಜೂರಾತಿ…

Read More

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ್ ಫಾಲ್ಸ್‌ನಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸಲು ಉದ್ದೇಶಿಸಲಾಗಿರುವ ಬಹುನಿರೀಕ್ಷಿತ ‘ರೋಪ್ ವೇ – ಕೇಬಲ್ ಕಾರ್’ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಗರ ತಹಶೀಲ್ದಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಹಾಗೂ ಸರ್ವೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ. ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದಾಗಿರುವ ಹಾಗೂ ಸಾಗರ ತಾಲೂಕಿನ ಪ್ರಮುಖ ಆಕರ್ಷಣೆಯಾಗಿರುವ ಜೋಗ್ ಫಾಲ್ಸ್ ಅನ್ನು ಅಂತರರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಹಲವು ಯೋಜನೆಗಳು ಪ್ರಗತಿಯಲ್ಲಿವೆ. ಅದರ ಮುಂದುವರಿದ ಭಾಗವಾಗಿ, ಪ್ರವಾಸಿಗರಿಗೆ ಜೋಗ್ ಜಲಪಾತದ ನಯನಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು “ರೋಪ್ ವೇ – ಕೇಬಲ್ ಕಾರ್” ಅನ್ನು ಪ್ರಮುಖ ಆಕರ್ಷಣೆಯನ್ನಾಗಿ ರೂಪಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಶಾಸಕರ ಸೂಚನೆ ಹಾಗೂ ಪ್ರಾಧಿಕಾರದ ನಡೆ: ಜೋಗ್ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜೋಗ್ ಫಾಲ್ಸ್ ಅಭಿವೃದ್ಧಿಗೆ ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಶಾಸಕ ಗೋಪಾಕೃಷ್ಣ ಬೇಳೂರು ಅವರು ಪ್ರವಾಸೋದ್ಯಮ ಆಕರ್ಷಣೆಯ ಎಲ್ಲಾ ಕಾರ್ಯಗಳನ್ನು…

Read More