Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ವಿದ್ಯಮಾನವೊಂದಕ್ಕೆ ತೆರೆ ಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅವರು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಕಟಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿದು ಎಂದಿನಂತೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ” ಎಂದು ಸ್ಪಷ್ಟಪಡಿಸಿದರು. ಹಿರಿಯ ನಾಯಕನ ಅನುಭವ ಪಕ್ಷಕ್ಕೆ ಆಸ್ತಿ ರಾಮಲಿಂಗಾರೆಡ್ಡಿ ಅವರ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸಿದ ಸುರ್ಜೇವಾಲ, “ಅವರು ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯ ದಿನಗಳಿಂದಲೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಜೊತೆಯಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಸತತ 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರ ರಾಜಕೀಯ ಅನುಭವ ಪಕ್ಷಕ್ಕೆ ಅತ್ಯಂತ ಮೌಲ್ಯಯುತವಾದದ್ದು,” ಎಂದರು. ರಾಜೀನಾಮೆ…

Read More

ನಮ್ಮ ದೈನಂದಿನ ಅಡುಗೆಯಲ್ಲಿ ಹಸಿರು ಮೆಣಸಿನಕಾಯಿಗೆ (Green Chilli) ಪ್ರಮುಖ ಸ್ಥಾನವಿದೆ. ಖಾರ ಹಾಗೂ ವಿಶಿಷ್ಟ ಸುವಾಸನೆ ನೀಡುವ ಈ ತರಕಾರಿ/ಮಸಾಲೆ ಬೆಳೆ ಜಾಗತಿಕವಾಗಿ ಭಾರಿ ಬೇಡಿಕೆಯನ್ನು ಹೊಂದಿದೆ. ಆದರೆ, “ವಿಶ್ವದಲ್ಲೇ ಅತಿ ಹೆಚ್ಚು ಹಸಿರು ಮೆಣಸಿನಕಾಯಿ ಉತ್ಪಾದಿಸುವ ದೇಶ ಯಾವುದು?” ಎಂಬ ಪ್ರಶ್ನೆಗೆ ಉತ್ತರ ಭಾರತ. ಹೌದು, ಭಾರತವು ಜಾಗತಿಕವಾಗಿ ಹಸಿರು ಹಾಗೂ ಒಣ ಮೆಣಸಿನಕಾಯಿ ಎರಡರಲ್ಲೂ ಅತಿ ದೊಡ್ಡ ಉತ್ಪಾದಕ, ಗ್ರಾಹಕ ಮತ್ತು ರಫ್ತುದಾರ ದೇಶವಾಗಿ ಹೊರಹೊಮ್ಮಿದೆ. ವಿಶ್ವದ ಒಟ್ಟು ಮೆಣಸಿನಕಾಯಿ ಉತ್ಪಾದನೆಯಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿದೆ. ಭಾರತ ಮೊದಲ ಸ್ಥಾನದಲ್ಲಿರಲು ಕಾರಣಗಳೇನು? ಅನುಕೂಲಕರ ಹವಾಮಾನ ಮತ್ತು ಮಣ್ಣು: ಭಾರತದಲ್ಲಿನ ವೈವಿಧ್ಯಮಯ ಹವಾಮಾನ ಮತ್ತು ಫಲವತ್ತಾದ ಮಣ್ಣು ಮೆಣಸಿನಕಾಯಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. ವರ್ಷದ ಯಾವುದೇ ಅವಧಿಯಲ್ಲಾದರೂ ದೇಶದ ಯಾವುದಾದರೂ ಒಂದು ಭಾಗದಲ್ಲಿ ಮೆಣಸಿನಕಾಯಿ ಬೆಳೆಯಲಾಗುತ್ತಿರುತ್ತದೆ. ಸಾಂಪ್ರದಾಯಿಕ ಕೃಷಿ ಜ್ಞಾನ: ಭಾರತೀಯ ರೈತರು ತಲೆಮಾರುಗಳಿಂದ ಮಸಾಲೆ ಪದಾರ್ಥಗಳ ಕೃಷಿಯಲ್ಲಿ ಪರಿಣಿತಿ ಹೊಂದಿದ್ದು, ಆಧುನಿಕ…

Read More

ಬೆಂಗಳೂರು : “ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ದೇವರಾಜ ಅರಸು ಅವರು ನಮ್ಮನ್ನು ಅಗಲಿ 45 ವರ್ಷಗಳಾಗಿವೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಅವರ ಭಾಷಣಗಳನ್ನು ಕೇಳಿದ್ದೇನೆ. ಅವರು ರಾಜಿನಾಮೆ ಕೊಟ್ಟಾಗ ಮಾಡಿದ ಕೊನೇ ಭಾಷಣ ನನ್ನ ಕಿವಿಯಲ್ಲಿ ಹಾಗೆ ಉಳಿದಿದೆ. ಅವರು ಯಾವ ಭಾವನೆಯೊಂದಿಗೆ ರಾಜಕಾರಣ, ಅಧಿಕಾರ ನಡೆಸಿದ್ದರು ಎಂದು ಅವರು ಹೇಳಿದ್ದರು. ಇಂದಿರಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಅರಸು ಅವರ ನಾಯಕತ್ವದಲ್ಲಿ ಉಳುವವನಿಗೆ ಭೂಮಿ ನೀಡಬೇಕು ಎಂದು ತಂದ ಭೂ ಸುಧಾರಣಾ ಕಾಯ್ದೆ ದೇಶಕ್ಕೆ ಒಂದು ಮಾದರಿ. ಅದೊಂದು ಕ್ರಾಂತಿ. ಅರಸು ಅವರೊಬ್ಬ ಧೀಮಂತ ನಾಯಕ. ಅವರು…

Read More

ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು. ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ…

Read More

ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು. ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ…

Read More

ಬೆಂಗಳೂರು : ಅರಣ್ಯ, ಪ್ರಕೃತಿ, ಪರಿಸರ ಉಳಿಯದಿದ್ದರೆ ಮಾನವ ಕುಲವೇ ಉಳಿಯಲು ಸಾಧ್ಯವಿಲ್ಲ. ಹೀಗಾಗಿ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಈ ಜವಾಬ್ದಾರಿಯನ್ನು ಶುದ್ಧ ಅಂತಃಕರಣದಿಂದ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅರಣ್ಯ ಸಚಿವರಾಗಿದ್ದ ತಮಗೆ ಕೃತಜ್ಞತೆ ಸಲ್ಲಿಸಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಲಯ ಅರಣ್ಯಾಧಿಕಾರಿಗಳಿಂದ ಗೌರವವಂದನೆ ಹಾಗೂ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿ ಸಮತೋಲನ ಕಾಪಾಡಲು, ವನ್ಯಜೀವಿ ಸಂರಕ್ಷಣೆ, ಅರಣ್ಯ ಮತ್ತು ಜೀವವೈವಿಧ್ಯ ಸಂರಕ್ಷಣೆಯ ಹೊಣೆ ಹೊತ್ತಿರುವ ನೀವು ಎಚ್ಚರ ತಪ್ಪದಂತೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಈಗ ಅರಣ್ಯ ಖಾತೆ ಸಚಿವನಲ್ಲದಿದ್ದರೂ ನನ್ನ ಮೇಲೆ ಅಭಿಮಾನವಿಟ್ಟು ಅಭಿನಂದಿಸಲು ಆಗಮಿಸಿರುವ ತಮ್ಮೆಲ್ಲರ ಅಭಿಮಾನದಿಂದ ಹೃದಯ ತುಂಬಿಬಂದಿದೆ. ನೀವು ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ಅರಣ್ಯ, ವನ್ಯಜೀವಿ ಸಂರಕ್ಷಣೆ ಮಾಡಿದರೆ ಅದುವೇ ನೀವು ನನಗೆ ತೋರುವ ಅಭಿಮಾನ ಎಂದು ತಿಳಿಸಿದರು. ಇರುವುದೊಂದೇ ಭೂಮಿ, ಇದನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ…

Read More

ಶಿವಮೊಗ್ಗ: ಒಬ್ಬ ವ್ಯಕ್ತಿಗೆ ಈ ಮಟ್ಟದ ಒಂದು ಸತ್ಕಾರ ಅನ್ನುವಂತದ್ದು, ಒಂದು ಜಗದ ಬದುಕಿನಲ್ಲಿ ಸಾರ್ಥಕತೆಯನ್ನು ಕೊಡುತ್ತದೆ ಅಂತ ಹೇಳಿ ನನಗೆ ಅನಿಸುತ್ತದೆ. ಬಹಳ ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಗಾರರು ಮತ್ತು ಮಂಜಪ್ಪನವರ ಹಿತೈಷಿಗಳು ಈ ಸಭೆಯಲ್ಲಿ ಸೇರಿದ್ದೀರಿ. ನಾವು ಬಹಳ ಸನ್ಮಾನಗಳನ್ನು ಇದನ್ನು ನೋಡಿದ್ದೇವೆ. ಆದರೆ ಈ ಮಟ್ಟದಲ್ಲಿ ನಡೆಯುತ್ತಾ ಇರುವಂತದ್ದು ಮಂಜಪ್ಪನವರ ಸಾರ್ವಜನಿಕ ಬದುಕಿಗೆ ಒಂದು ದೊಡ್ಡ ಶಕ್ತಿಯನ್ನು ತುಂಬಿದೆ ಮತ್ತು ಮಾನ್ಯತೆಯನ್ನು ಕೊಟ್ಟಿದೆ ಅಂತ ಹೇಳಿ ನಾನು ಭಾವಿಸುತ್ತೇನೆ ಎಂಬುದಾಗಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆದ ಹೆಚ್.ಎಸ್ ಮಂಜಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ​ಸತ್ಕಾರ ಮತ್ತು ಬದುಕಿನ ಸಾರ್ಥಕತೆ ​ಒಬ್ಬ ವ್ಯಕ್ತಿಗೆ ಈ ಮಟ್ಟದ ಒಂದು ಸತ್ಕಾರ ಅನ್ನುವಂತದ್ದು, ಒಂದು ಜಗದ ಬದುಕಿನಲ್ಲಿ ಸಾರ್ಥಕತೆಯನ್ನು ಕೊಡುತ್ತದೆ ಅಂತ ಹೇಳಿ ನನಗೆ ಅನಿಸುತ್ತದೆ. ಬಹಳ ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಗಾರರು ಮತ್ತು ಮಂಜಪ್ಪನವರ…

Read More

ಬೆಂಗಳೂರು : ಪರಿಸರ ಸಂರಕ್ಷಣೆ ಮತ್ತು ವಿದ್ಯುತ್ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ತನ್ನ ಹೈ-ವೋಲ್ಟೇಜ್ ಟ್ರಾನ್ಸ್‌ಫಾರ್ಮರ್‌ಗಳ ಜಾಲದಲ್ಲಿ ಬಳಕೆಯಲ್ಲಿದ್ದ ಸಾಂಪ್ರದಾಯಿಕ ಮತ್ತು ಹಾನಿಕಾರಕ ಮಿನರಲ್ ಆಯಿಲ್ (ಖನಿಜ ತೈಲ) ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ಬಯೋಡಿಗ್ರೇಡಬಲ್‌ ನ್ಯಾಚುರಲ್ ಎಸ್ಟರ್ ಆಯಿಲ್ ಗೆ ಬದಲಾಯಿಡುವ ಕಾರ್ಯಕ್ಕೆ ಮುನ್ನಡಿ ಬರೆದಿದೆ. ರಾಜ್ಯದಾದ್ಯಂತ ಲಕ್ಷಾಂತರ ಗ್ರಾಹಕರಿಗೆ ಸುರಕ್ಷಿತ ಮತ್ತು ಪರಿಸರ ಸ್ನೇಹಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳವ ನಿಟ್ಟಿನಲ್ಲಿ, ಕೆಪಿಟಿಸಿಎಲ್‌ ಕೈಗೊಂಡಿರುವ ಈ ಪರಿಸರ ಸ್ನೇಹಿ ಉಪಕ್ರಮವು, ಮೂಲಸೌಕರ್ಯ ನಿರ್ವಹಣೆಯಲ್ಲಿ ಒಂದು ನಿರ್ಣಾಯಕ ಮೈಲಿಗಲ್ಲಾಗಿದೆ. ರಾಜ್ಯದಾದ್ಯಂತ ವಿದ್ಯುತ್ ಜಾಲದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 3,754 ಟ್ರಾನ್ಸ್‌ಫಾರ್ಮರ್‌ಗಳ ಪೈಕಿ, ಕೆಪಿಟಿಸಿಎಲ್ ಕಾರ್ಯತಂತ್ರದ ಭಾಗವಾಗಿ 45 ಹೈ-ಕೆಪಾಸಿಟಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಸ್ಯ ಆಧಾರಿತ ನ್ಯಾಚುರಲ್ ಎಸ್ಟರ್ ಆಯಿಲ್ ನೊಂದಿಗೆ ಬದಲಾಯಿಸಲಾಗಿದೆ. ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವ ಆರ್ಥಿಕ ಹೊರೆಯ ಬದಲಿಗೆ, 15 ವರ್ಷಗಳಿಗಿಂತಲೂ ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಗುರುತಿಸಿ, ಅವುಗಳ ಜೀವಿತಾವಧಿ ಮತ್ತು ಕಾರ್ಯಕ್ಷಮತೆಯನ್ನು…

Read More

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ, ಕರ್ನಾಟಕ ಮತ್ತು ಕೇರಳ ವಲಯದ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು  ಸಿಆರ್‌ಪಿಎಫ್‌ ವಲಯದ ಅಡಿಯಲ್ಲಿ ಬರುವ ಎಲ್ಲಾ ಘಟಕಗಳಲ್ಲಿ ಸಸಿ ನೆಡುವ ಅಭಿಯಾನವನ್ನು ಆಯೋಜಿಸಲಾಗಿತ್ತು. ಈ ಸಸಿ ನೆಡುವ ಅಭಿಯಾನವು ಬೆಂಗಳೂರಿನ ರೇಂಜ್, ಗ್ರೂಪ್ ಸೆಂಟರ್, 240 (ಎಂ) ಬೆಟಾಲಿಯನ್, 247 ಬೆಟಾಲಿಯನ್, ಡಿ/97 ಬೆಟಾಲಿಯನ್, ಸಿಐಟಿ (CIT) ಬೆಂಗಳೂರು ಮತ್ತು ಸಿಆರ್‌ಪಿಎಫ್ (CRPF) ಕ್ಯಾಂಪಸ್‌ನಲ್ಲಿರುವ ಇತರ ಎಲ್ಲಾ ಸಂಸ್ಥೆಗಳಲ್ಲಿ ಏಕಕಾಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಎರಡು ಎನ್‌ಜಿಒ  ಸಂಸ್ಥೆಗಳು ಭಾಗವಹಿಸಿದ್ದವು: 01. 🌱 ಹಸಿರೇ ಉಸಿರು : ಇದು ಕರ್ನಾಟಕ ಮೂಲದ ಪರಿಸರ ಸಂಘಟನೆಯಾಗಿದ್ದು, ಸಸಿ ನೆಡುವಿಕೆ, ಹಸಿರೀಕರಣವನ್ನು ಹೆಚ್ಚಿಸುವುದು, ಜೀವವೈವಿಧ್ಯ ಸಂರಕ್ಷಣೆ ಮತ್ತು ಪರಿಸರ ಜಾಗೃತಿಯನ್ನು ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ. 02. 🤝 ಜೀವನಮುಕ್ತಿ ಫೌಂಡೇಶನ್: ಇದು ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ರಕ್ಷಣೆ, ಬಡತನ ನಿರ್ಮೂಲನೆ ಮತ್ತು ಸಮುದಾಯ ಕಲ್ಯಾಣದ…

Read More

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್‌, ಈ ಕುರಿತ ವರದಿಗಳು ಆಧಾರ ರಹಿತ ಎಂದು ಗುರುವಾರ ಹೇಳಿದ್ದಾರೆ. ಈ ಕುರಿತ ಊಹಾಪೋಹಗಳನ್ನು ತಳ್ಳಿಹಾಕಿರುವ ಸಚಿವ ಜಾರ್ಜ್‌, “ಖಾತೆ ಹಂಚಿಕೆ ಹಾಗೂ ಆಡಳಿತಾತ್ಮಕ ನೇಮಕಾತಿಗಳ ಬಗ್ಗೆ ನನಗೆ ಅಸಮಾಧಾನ ಇದೆ ಎಂದು ಕೆಲ ಮಾಧ್ಯಮಗಳ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾದುದು. ಈ ರೀತಿಯ ವದಂತಿಗಳು ಜನರನ್ನು ದಾರಿ ತಪ್ಪಿಸುವಂಥದ್ದು,”ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಇದೆ ಎಂದು ಪುನರುಚ್ಛರಿಸಿರುವ ಜಾರ್ಜ್‌, “ಖಾತೆ ಹಂಚಿಕೆ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಆಡಳಿತಾತ್ಮಕ ನೇಮಕಾತಿಗಳ ಬಗ್ಗೆಯೂ ತಕರಾರಿಲ್ಲ. ಈ ಕುರಿತ ವರದಿಗಳು ಸತ್ಯಕ್ಕೆ ದೂರವಾದವು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಕೈ…

Read More