Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಯುವಸಮೂಹವನ್ನು ಆಕರ್ಷಿಸುವ ವಿಶಿಷ್ಟ ವಿನ್ಯಾಸದೊಂದಿಗೆ ರಿಯಲ್ಮೀ ತನ್ನ ಬಹುನಿರೀಕ್ಷೆಯ 16 ಪ್ರೊ ಸರಣಿ ಬಿಡುಗಡೆ ಮಾಡಿದೆ. ಬಿಡುಗಡೆಗೊಳಿಸಿ ಮಾತನಾಡಿದ ರಿಯಲ್ಮಿ ಇಂಡಿಯಾ ಪ್ರಾಡಕ್ಟ್ ಸ್ಟಾಟರ್ಜಿ ಮ್ಯಾನೇಜರ್ ದೇವೇಂದರ್ ಸಿಂಗ್ ಮಾತನಾಡಿ, ರಿಯಲ್ಮಿ ಇಂಡಿಯಾ ಇದರೊಂದಿಗೆ ಪ್ರೀಮಿಯಂ ಮಿಡ್-ರೇಂಜ್ ವಿಭಾಗದಲ್ಲಿ ತನ್ನ ಮಾನದಂಡವನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ರಿಯಲ್ ಮಿ 16 ಪ್ರೊ+ ಮತ್ತು ಎಲ್ಲ ಅಗತ್ಯಗಳನ್ನು ಪೂರೈಸುವ ರಿಯಲ್ ಮಿ 16 ಪ್ರೊ ಮಾದರಿಗಳನ್ನು ಒಳಗೊಂಡಿರುವ ಈ ಸರಣಿ, ಪರ್ಫಾರ್ಮೆನ್ಸ್ ಮತ್ತು ಡಿಸೈನ್ ಅಲ್ಲಿ ಮಾಸ್ಟರ್ಕ್ರಾಫ್ಟ್ ಶ್ರೇಷ್ಠತೆಯನ್ನು ಹೊಂದಿದೆ. ಜೊತೆಗೆ, ಪೋರ್ಟ್ರೇಟ್ ಇಮೇಜಿಂಗ್ ಮಾನದಂಡಗಳನ್ನು ಮರುನಿರ್ವಹಿಸುವ ಕ್ರಾಂತಿಕಾರಿ ಕೇಂದ್ರೀಕರಣದೊಂದಿಗೆ ಗಮನ ಸೆಳೆಯುತ್ತದೆ. 200MP ಪೋರ್ಟ್ರೇಟ್ ಮಾಸ್ಟರ್: ಪ್ರೀಮಿಯಂ ಮಿಡ್-ರೇಂಜ್ ವಿಭಾಗದಲ್ಲಿ 200MP ಪೋರ್ಟ್ರೇಟ್ ಮಾಸ್ಟರ್ ಆಗಿ ರಿಯಲ್ ಮಿ 16 ಪ್ರೊ ಸರಣಿ ಹೊರಹೊಮ್ಮಿದೆ. 200MP ಲೂಮಾಕಲರ್ ಕ್ಯಾಮೆರಾ ಹಾಗೂ 3.5× ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಹೊಂದಿರುವ ರಿಯಲ್ ಮಿ 16 ಪ್ರೊ+, “ಸ್ನ್ಯಾಪ್ ಯುವರ್ ವೈಬ್ ಅಟ್ ಎವೆರಿ ಜೂಮ್”…
ಚಿತ್ರದುರ್ಗ : ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ. ಹೊಳಲ್ಕೆರೆ ತಾಲೂಕಿಗೆ 293 ಕೋಟಿ ರೂ.ಗೂ ಅಧಿಕ ಹಣವನ್ನು ವೆಚ್ಚ ಮಾಡುವ ಮೂಲಕ ಜನತೆಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಳಿಗೆ ಹಣ ನೀಡುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಜೆಟ್ ನಲ್ಲಿ 1.36 ಲಕ್ಷ ಕೋಟಿ ರೂ.ಹಣವನ್ನು ಮೀಸಲಿಡುವ ಮುಲಕ ಅಭಿವೃದ್ಧಿ ಗ್ಯಾರಂಟಿಯನ್ನು ಸಹ ನೀಡುತ್ತಿದೆ ಎಂದರು. ಕರ್ನಾಟಕದಲ್ಲಿ ಜಾರಿಗೆ ಬಂದ ಐದು ಗ್ಯಾರಂಟಿ ಯೋಜನೆಗಳು ರಾಜ್ಯಮಟ್ಟಕ್ಕೆ ಸೀಮಿತವಾಗದೆ, ಇಡೀ ದೇಶದ ರಾಜಕೀಯ–ಆಡಳಿತ ಚರ್ಚೆಯ ದಿಕ್ಕನ್ನೇ ಬದಲಿಸಿವೆ. ಬಡತನ ನಿವಾರಣೆ, ಮಹಿಳಾ ಸಬಲೀಕರಣ…
ಶಿವಮೊಗ್ಗ : ಮಹಿಳೆಯರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಸಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ನಡೆಸುವ ಅಗತ್ಯವಿದೆ. ಎಷ್ಟೆ ತಿಳಿದುಕೊಂಡಿದ್ದರೂ ಇನ್ನಷ್ಟು ತಿಳಿದುಕೊಳ್ಳಬೇಕಾದ ವಿಷಯ ಇರುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಆಯೋಜಿಸಿದ್ದಂತ ಮಹಿಳಾ ವಿಚಾರ ಗೋಷ್ಟಿಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನುಷ್ಟಾನಕ್ಕೆ ಬಂದ ಮೇಲೆ ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಸಶಕ್ತರಾಗಲು ಸಾಧ್ಯವಾಗಿದೆ. ಜೊತೆಗೆ ದೈನಂದಿನ ವ್ಯವಹಾರದ ಬಗ್ಗೆ ಅರಿವು ಹೊಂದುವಂತೆ ಆಗಿದೆ. ಮಹಿಳೆಯರಿಗೆ ಇಂತಹ ಕಾರ್ಯಗಾರ ಮೂಲಕ ಇನ್ನಷ್ಟು ಅರಿವು ಮೂಡಿಸುತ್ತಿರೋದು ಶ್ಲಾಘನೀಯವೇ ಸರಿ ಎಂದರು. ಧರ್ಮಸ್ಥಳ ಸಂಘವು ಮಹಿಳೆಯರ ಜೀವನಶೈಲಿಯನ್ನೇ ಬದಲಾಯಿಸಿದೆ. ಹಿಂದೆ ನೀವು ಕಷ್ಟಪಟ್ಟಿದ್ದಕ್ಕೆ ಇಂದು ಫಲ ಸಿಕ್ಕಿದೆ. ಗಂಡನಿoದ ಆಗುತ್ತಿದ್ದ ಶೋಷಣೆ ಸಹ ತಪ್ಪಿದೆ. ಬಹಳಷ್ಟು ಕುಟುಂಬ ನಿರಾಳವಾಗಿ ಬದುಕೋದಕ್ಕೆ ಮದ್ಯವರ್ಜನ ಶಿಬಿರ ಕಾರಣವಾಗಿದೆ. ಪ್ರತಿವರ್ಷ 13 ಸಾವಿರ ಕೋಟಿ ರೂ.…
ಈ ತಿಂಗಳ ಅಂತ್ಯದಲ್ಲಿ ತಮ್ಮ ಹುದ್ದೆಯಿಂದ ಕೆಳಗಿಳಿಯಲಿರುವ ವಾಲ್ಮಾರ್ಟ್ ಸಿಇಒ ಡೌಗ್ ಮೆಕ್ಮಿಲನ್, ಅತ್ಯಂತ ಆಕರ್ಷಕ ಸಂಬಳದಾರರಲ್ಲಿ ಒಬ್ಬರು. ಅವರು ಪ್ರತಿ 30 ನಿಮಿಷಕ್ಕೆ ಸರಿಸುಮಾರು 1.4 ಲಕ್ಷ ರೂ. ಗಳಿಸುತ್ತಾರೆ. ವಾಲ್ಮಾರ್ಟ್ನ $905 ಬಿಲಿಯನ್ ಸಾಮ್ರಾಜ್ಯದ ಹಿಂದಿನ ವ್ಯಕ್ತಿ ಫಾರ್ಚೂನ್ ಪ್ರಕಾರ, $1.5 ಮಿಲಿಯನ್ (ಸುಮಾರು ರೂ.13.5 ಕೋಟಿ) ಸಂಬಳ, $20.4 ಮಿಲಿಯನ್ (ಸುಮಾರು ರೂ.184 ಕೋಟಿ) ಸ್ಟಾಕ್ ಪ್ರಶಸ್ತಿಗಳು ಮತ್ತು $4.4 ಮಿಲಿಯನ್ (ಸುಮಾರು ರೂ.40 ಕೋಟಿ) ಬೋನಸ್ಗಳಾಗಿ ಒಟ್ಟು $27.5 ಮಿಲಿಯನ್ (ಸುಮಾರು ರೂ.248 ಕೋಟಿ) ಗಳಿಸಿದ್ದಾರೆ. ವೇತನ ವ್ಯತ್ಯಾಸವು ದಿಗ್ಭ್ರಮೆಗೊಳಿಸುವಂತಿದೆ. 1984 ರಲ್ಲಿ ಡೌಗ್ ಮೆಕ್ಮಿಲನ್ ವಾಲ್ಮಾರ್ಟ್ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದಾಗ, ಕಂಪನಿಯ ಗೋದಾಮುಗಳಲ್ಲಿ ಟ್ರೇಲರ್ಗಳನ್ನು ಇಳಿಸುವ ಮೂಲಕ ಗಂಟೆಗೆ $6.50 (ಸುಮಾರು ರೂ.585) ಗಳಿಸಿದರು. ಇಂದು, ಸಿಇಒ ಆಗಿ, ಅವರು ಗಂಟೆಗೆ ಸರಿಸುಮಾರು ರೂ. 2.8 ಲಕ್ಷ ಮತ್ತು ನಿಮಿಷಕ್ಕೆ ರೂ. 4,700 ಗಳಿಸುತ್ತಾರೆ, ಇದು ಅವರ ಆರಂಭಿಕ ಸಂಬಳಕ್ಕಿಂತ ಸುಮಾರು 481 ಪಟ್ಟು…
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಬಟ್ಟೆಯ ಬಗ್ಗೆ ಅಶ್ಲೀಲವಾಗಿ ವೇಶ್ಯೆ ಎಂಬುದಾಗಿ ಕಾಮೆಂಟ್ ಮಾಡಲಾಗಿತ್ತು. ಈ ಬಗ್ಗೆ ಶಾಸಕಿ ನಯನಾ ಮೋಟಮ್ಮ ಅವರು ಬೇಸರ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಅಶ್ಲೀಲ ಕಾಮೆಂಟ್ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕಿ ನಯನಾ ಮೋಟಮ್ಮ ಅವರು ಉಡುಪಿ ವಿಚಾರವಾಗಿ ಇನ್ಟಾಗ್ರಾಂನಲ್ಲಿ ಹಾಕಿದ್ದಂತ ಪೋಸ್ಟ್ ಗೆ ಅವಹೇಳನಕಾರಿಯಾಗಿ ಅಶ್ಲೀಲ ಕಾಮೆಂಟ್ ಮಾಡಲಾಗಿತ್ತು. ಶಾಸಕಿಯ ಬಟ್ಟೆಯ ಬಗ್ಗೆ ಕಾಮೆಂಟ್ ಮಾಡಿದ್ದಂತ ಆರೋಪಿಯೊಬ್ಬ ವೇಶ್ಯ ಎನ್ನುವಂತ ಪದ ಕೂಡ ಬಳಸಿದ್ದನು. ಈ ಹಿನ್ನಲೆಯಲ್ಲಿ ಶಾಸಕಿ ನಯನಾ ಮೋಟಮ್ಮ ಅವರ ಪಿಎ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಪೊಲೀಸರು ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು: ನಟ ಯಶ್ ಅಭಿನಯದ ಟ್ಯಾಕ್ಸಿಕ್ ಚಿತ್ರದ ಟ್ರೇಲರ್ ರಿಲೀಸ್ ಆಗಿತ್ತು. ಈ ಟೀಸರ್ ನಲ್ಲಿ ಅಶ್ಲೀಲ ಕಂಟೆಂಟ್ ಇದೆ ಎಂಬುದಾಗಿ ರಾಜ್ಯ ಮಹಿಳಾ ಆಯೋಗಕ್ಕೆ ಎಎಪಿಯಿಂದ ದೂರು ನೀಡಲಾಗಿದೆ. ಇಂದು ರಾಜ್ಯ ಮಹಿಳಾ ಆಯೋಗದ ಕಚೇರಿಗೆ ತೆರಳಿದಂತ ಅಮ್ ಆದ್ಮಿ ಪಕ್ಷದ ಮುಖಂಡರು, ಇತ್ತೀಚೆಗೆ ಬಿಡುಗಡೆಯಾಗಿರುವ ಟಾಕ್ಸಿಕ್ ಚಲನಚಿತ್ರದ ಟೀಸರ್ ಅನ್ನು ಕೂಡಲೆ ರದ್ದುಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಇಂದು ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಈ ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳು ಹೆಂಗಳೆಯರ ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿದ್ದು ಕನ್ನಡದ ಐತಿಹಾಸಿಕ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ತೀವ್ರ ಅಪಮಾನವಾಗಿದೆ ಎಂದು ಆಕ್ರೋಶ…
ಬೆಂಗಳೂರು: ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ…
ಬೆಂಗಳೂರು: ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ ಭಾಷಣ ಮಸೂದೆ ವಿರೋಧಿಸಿ ಮನವಿ ನೀಡಲಾಗಿದೆ ಎಂದರು. ಇದಕ್ಕೆ ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ನಿವೃತ್ತ ಐ.ಪಿ.ಎಸ್. ಅಧಿಕಾರಿ ಭಾಸ್ಕರ್ ರಾವ್, ಬೆಂಗಳೂರು ಉತ್ತರ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯದ ನಿಮಿತ್ತ, ನಾಳೆ ಸಾಗರ ಪಟ್ಟಣದ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಾಗರದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು, ದಿನಾಂಕ 13-01-2026ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಳ ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ನಾಳೆ ಸಾಗರ ಪಟ್ಟಣದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗುವುದಾಗಿ ತಿಳಿಸಿದ್ದಾರೆ. ನಾಳೆ ಸಾಗರ ಪಟ್ಟಣದ ನೆಹರೂ ನಗರ, ಜೋಸೆಫ್ ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು.. https://kannadanewsnow.com/kannada/police-complaint-filed-against-two-people-for-extortion-in-the-name-of-a-prestigious-newspaper-in-sagara/ https://kannadanewsnow.com/kannada/who-will-benefit-from-sankranti-which-star-will-suffer-losses/
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: 2026ನೇ ಸಾಲಿನ ‘ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ’ಕ್ಕೆ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ. ಅದರಂತೆ ಈ…














