Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಮುಂದಿನ ಒಂದು ವರ್ಷದೊಳಗೆ ಕೊಪ್ಪ ಹೋಬಳಿಯ ಪ್ರತಿ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆಯಡಿ ಕಾವೇರಿ ನೀರನ್ನು ಪೂರೈಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಅರಗಿನಮೆಳೆ ಉತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನು ಮುಂದೆ ನೀರಿನ ಸಮಸ್ಯೆ ತಲೆದೊರುವುದಿಲ್ಲ. ಈಗಾಗಲೇ 33 ಕೋಟಿ ರೂ ವೆಚ್ಚದಲ್ಲಿ ಕಾವೇರಿ ನೀರನ್ನು ಪ್ರತಿ ಮನೆಗಳಿಗೂ ಪೂರೈಸುವ ಯೋಜನೆಗೆ ಶೀಘ್ರದಲ್ಲೆ ಚಾಲನೆ ನೀಡಲಾಗುವುದು ಎಂದರು. ಇನ್ನು ಮುಂದೆ ಕುಡಿಯುವ ನೀರಿಗಾಗಿ ಯಾವುದೇ ಬೋರ್ ವೆಲ್ ಕೊರೆಯುವುದಿಲ್ಲ. ಕೊಪ್ಪ ಹೋಬಳಿಯ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು ಸರಾಗವಾಗಿ ಹರಿಯಲು 100 ಕೋಟಿ ರೂ ವೆಚ್ಚದಲ್ಲಿ ನಾಲೆಗಳ ಆಧುನಿಕರಣ ಮಾಡಲಾಗುತ್ತಿದ್ದು, ಇದರ ಜೊತೆಗೆ ಈ ಭಾಗದ ಜನತೆಗೆ ಕುಡಿಯಲು…
ಮಂಡ್ಯ : ಕಳೆದ 20 ವರ್ಷಗಳಿಂದ ತಲೆದೊರಿರುವ ಆತಗೂರು ಹೋಬಳಿಯ ರೀ ಸರ್ವೆ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು. ಮದ್ದೂರು ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆತಗೂರು ಹೋಬಳಿಯನ್ನು ರೀ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ರೀ ಸರ್ವೆ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ. ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿದ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲೂ ರೀ…
ಬೆಂಗಳೂರು: ರಾಜ್ಯದ ರಬ್ಬರ್ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಶಿಫಾರಸ್ಸು ಮಾಡೋದಾಗಿ ಸರ್ಕಾರ ತಿಳಿಸಿದೆ. ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ರಬ್ಬರ್ ಬೋರ್ಡ್ಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂಬುದಾಗಿ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಶೇಷ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. https://twitter.com/KarnatakaVarthe/status/2017548653637058681 ತೆಂಗು ಬೆಳೆಯಲ್ಲಿ ಕಂಡುಬರುವ ಬಿಳಿನೊಣ ಹಾಗೂ ಕೀಟಗಳ ನಿಯಂತ್ರಣಕ್ಕೆ ಕ್ರಮ “ತೆಂಗು ಬೆಳೆಯಲ್ಲಿ ಕಂಡು ಬರುವ ಕಪ್ಪು ತಲೆಹುಳು ಹಾಗೂ ಬಿಳಿನೊಣ ಕೀಟಗಳ ನಿಯಂತ್ರಣಕ್ಕಾಗಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 23 ಪ್ರಯೋಗ ಶಾಲೆಗಳಲ್ಲಿ ಗೋನಿಯೋಜಸ್ ಎಂಬ ಪರೋಪಜೀವಿಗಳು ಹಾಗೂ ಐಸಿರಿಯಾ ಜೈವಿಕ ಕೀಟನಾಶಕವನ್ನು ಉತ್ಪಾದನೆ ಮಾಡಿ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. https://kannadanewsnow.com/kannada/sunetra-pawar-takes-oath-as-maharashtras-first-woman-dcm/
ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಮುಂಬರುವ 2026–27ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಶಿಕ್ಷಣ ಇಲಾಖೆಗೆ ಅಗತ್ಯವಿರುವ ಅನುದಾನ ಬೇಡಿಕೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಫೆಬ್ರವರಿ ಮೊದಲ ವಾರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಜೆಟ್ ಪೂರ್ವಭಾವಿ ಸಭೆಗೆ ಇಲಾಖೆಯ ಪ್ರಸ್ತಾವನೆಗಳ ಕುರಿತು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುಧೀರ್ಘವಾದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿಯಾದ ವಿದ್ಯಾಕುಮಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಭರತ್ ಎಸ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಜಿ ಟಿ ನಿಟ್ಟಾಲಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ…
ಮಹಾರಾಷ್ಟ್ರ: ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಶನಿವಾರ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಬುಧವಾರ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಅವರ ಪತಿ ಅಜಿತ್ ಪವಾರ್ ಅವರ ಸ್ಥಾನದಲ್ಲಿ ಅವರು ಅಧಿಕಾರ ವಹಿಸಿಕೊಂಡರು. 62 ವರ್ಷದ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿ. https://twitter.com/ANI/status/2017564681293206013 ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ನಾಯಕಿ ರಾಜ್ಯದ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಲ್ಲ ಮತ್ತು ಆರು ತಿಂಗಳೊಳಗೆ ಎರಡೂ ಸದನಗಳಿಗೆ ಆಯ್ಕೆಯಾಗಬೇಕಾಗುತ್ತದೆ. ಶನಿವಾರದಂದು, ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣದ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಆಯ್ಕೆ ಮಾಡಲಾಯಿತು. ಬಾರಾಮತಿ ಪಟ್ಟಣದ ವಾಯುನೆಲೆಯ ಬಳಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿ ಅಜಿತ್ ಪವಾರ್ ಸಾವನ್ನಪ್ಪಿದರು. ಘಟನೆಯಲ್ಲಿ ಮೃತಪಟ್ಟ ಇತರರು ಇಬ್ಬರು ಪೈಲಟ್ಗಳು, ಒಬ್ಬ ವಿಮಾನ ಸಿಬ್ಬಂದಿ ಮತ್ತು ಅಜಿತ್ ಪವಾರ್ ಅವರ ಭದ್ರತಾ ಅಧಿಕಾರಿ. ಅಪಘಾತದ ಕಾರಣ ಸ್ಪಷ್ಟವಾಗಿಲ್ಲ. ನಾಗರಿಕ ವಿಮಾನಯಾನ ಸಚಿವಾಲಯದ ಒಂದು ಘಟಕವಾದ ವಿಮಾನ ಅಪಘಾತ ತನಿಖಾ ಬ್ಯೂರೋ ಘಟನೆಯ ತನಿಖೆ ನಡೆಸುತ್ತಿದೆ.…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ಎಸ್ಐಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಅವರು ಆತ್ಮಹತ್ಯೆ ಹಿಂದಿನ ಕಾರಣ ಏನು? ಒತ್ತಡ ಏನಾದ್ರೂ ಇತ್ತಾ? ಅಥವಾ ಬೇರೆ ಏನಾದರೂ ಕಾರಣವಾಗಿದ್ಯಾ ಎನ್ನುವ ಕುರಿತಂತೆಯೂ ತನಿಖೆ ನಡೆಯಲಿದೆ ಎಂದರು. ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರುತ್ತಾರೆ. ಈ ಎಸ್ಐಟಿ ಅಧಿಕಾರಿಗಳ ತಂಡವು ಸಿಜೆ ರಾಯ್ ಆತ್ಮಹತ್ಯೆ ಹಿಂದಿನ ಕಾರಣ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದರು. https://kannadanewsnow.com/kannada/state-government-orders-sit-probe-into-real-estate-tycoon-c-j-roys-suicide-case/ https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/
ಮಂಡ್ಯ: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಇಲಾಖೆ ಮುಖ್ಯ ಕಾರ್ಯಧರ್ಶಿ ವಿರುದ್ಧ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ಇಂದು ಮಂಡ್ಯ ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ. ಅವರು ನೀಡಿರುವಂತ ದೂರಿನಲ್ಲಿ ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿ ಬಿ ಜಿ ರಾಮ್ ಜಿ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಈ ಜಾಹೀರಾತು “ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗವಾಗಿದೆ ಎಂದಿದ್ದಾರೆ. ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದೆ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿದೆ. ಆ ಮೂಲಕ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಹಿಂದಿನ ನಿಖರ ಕಾರಣ ಬಹಿರಂಗಕ್ಕೆ ಮುಂದಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ತನಿಖೆಗೆ ರಚಿಸಿ ಸರ್ಕಾರ ಆದೇಶಿಸಿದೆ. ವಂಶಿಕೃಷ್ಣ ನೇತೃತ್ವದ ಎಸ್ಐಟಿ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು ಇರಲಿದ್ದಾರೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಅಂದಹಾಗೇ ಉದ್ಯಮಿ ಸಿ.ಜೆ ರಾಯ್ ಅವರು ನಿನ್ನೇ ತಮ್ಮ ಮನೆಯಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತ ವೇಳೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಕಾಡುತ್ತಿದ್ದವು. ಈ ಹಿನ್ನಲೆಯಲ್ಲಿ ಸರ್ಕಾರ ಎಸ್ಐಟಿ ನೇತೃತ್ವದಲ್ಲಿ ತನಿಖೆಗೆ ವಹಿಸಿ ಆದೇಶಿಸಿದೆ. https://kannadanewsnow.com/kannada/journalist-prabhulinga-neeloore-passes-away-kuwj-condoles/ https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/
ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕೆಯುಡಬ್ಲೂೃಜೆ ಸಂತಾಪ: ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. https://twitter.com/kuwj_r/status/2017552394956259722?s=48&t=K__Bb-oISWk0C8ZNc8qCGw https://kannadanewsnow.com/kannada/a-dispute-between-relatives-over-land-ends-in-the-murder-of-a-man/ https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/
ಕಲಬುರ್ಗಿ: ಜಿಲ್ಲೆಯಲ್ಲಿ ಜಮೀನಿನ ವಿಚಾರಕ್ಕೆ ಆರಂಭವಾದಂತ ದಾಯಾದಿಗಳ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ಸೇಡಂ ತಾಲ್ಲೂಕಿನ ಹಂಗನಹಳ್ಳಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನಿನ ವಿಚಾರಕ್ಕೆ ದಾಯಾದಿಗಳ ನಡುವೆ ಜಗಳ ಉಂಟಾಗಿತ್ತು. ಈ ಜಗಳವು ತಾರಕಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ತಳವಾರ(34) ಎಂಬುವರ ಕೊಲೆಯಲ್ಲಿ ಅಂತ್ಯಗೊಂಡಿದೆ. ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದಂತ ಬಸವರಾಜ್ ತಳವಾರ್ ಮತ್ತು ಘೋಳೇಶ್ ನಡುವೆ ಜಮೀನಿನ ವಿಚಾರಕ್ಕೆ ಗಲಾಟೆಯಾಗಿತ್ತು. ಈ ಗಲಾಟೆಯು ತಾರಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ಗೆ ಚಾಕುವಿನಿಂದ ಇರಿದು ಘೋಳೇಶ್ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾಗಿದ್ದಂತ ಬಸವರಾಜ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bmrcl-launches-special-awareness-campaign-to-ensure-compliance-with-rules-among-passengers/ https://kannadanewsnow.com/kannada/karnataka-state-rural-livelihood-mission-chief-operating-officer-ujireya-visits-rudset-institute/














