Author: kannadanewsnow09

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಲಾಗಿದೆ. ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೊಲೀಸರಿಗೆ ದೂರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದರು. ಈ ಆಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಕೈ ಮುಖಂಡ ಬೆದರಿಕೆ ವಿಚಾರವಾಗಿ ರಾಜೀವ್ ಗೌಡ ವಿರುದ್ಧ ನಗರಸಭೆ ಆಯುಕ್ತೆ ಅಮೃತಾಗೌಡ ಅವರು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಜಮೀನಿನಲ್ಲಿ ಬೆಳೆದಿದ್ದಂತ ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಲಾಗಿತ್ತು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ  ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ಅಕ್ರಮವಾಗಿ ಕಡಿದ ಮರಗಳನ್ನು ಜಪ್ತಿ ಮಾಡಿದ್ದಲ್ಲದೇ, ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಈ ಕುರಿತಂತೆ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಸರ್ವೆ ನಂಬರ್.25ರಲ್ಲಿ ಖಾಸಗಿ ಜಮೀನಿನಲ್ಲಿ ಇದ್ದಂತ ಮರಗಳನ್ನು ಅಕ್ರಮವಾಗಿ ರಿಯಾಜ್ ಅಹ್ಮದ್ ಹಾಗೂ ಖಲೀಮುಲ್ಲಾ ಎಂಬುವರು ಕಡಿತಲೆ ಮಾಡಿದ್ದರು. ಜೆಸಿಬಿ ಬಳಸಿ ಕಡಿತಲೆ ಮಾಡಿದಂತ ಮರಗಳ ಬುಡಗಳನ್ನು ಕಿತ್ತು ಹಾಕಿದ್ದರು. ಕಡಿತಲೆ ಮಾಡಿದ್ದಂತ 20 ಮೀಟರ್ ನಷ್ಟು ನಾಟವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ಕೆಟಿಪಿಪಿ ಕಾಯ್ದೆ 1976ರ 8, 15, 22 ಹಾಗೂ ಕೆಎಫ್ ಸಿಯ 1963 ಸೆಕ್ಷನ್ 62ರಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ…

Read More

ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ಬಗ್ಗೆ ಬುಧವಾರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು; ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ಉನ್ನತ ಸ್ಥಾನ ಅಲಂಕರಿಸುವ ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು. “ಒಬ್ಬ ಮಹಿಳಾ ಅಧಿಕಾರಿಗೆ ಈ…

Read More

ಶಬರಿಮಲೆ: ಮಕರ ಸಂಕ್ರಾಂತಿಯ ದಿನದಂದು ಪ್ರತಿ ವರ್ಷದಂತೆ ಈ ವರ್ಷವೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಯಿತು. ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಭಕ್ತಗಣವು ಭಾವ ಪರವಶತೆಯಲ್ಲಿ ಮುಳುಗಿದರು. ಸಂಜೆ ಸುಮಾರು 6.30ರಿಂದ 6.45ರ ನಡುವೆ ಗೋಚರಿಸಿದಂತ ಮಕರ ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಸ್ವಾಮಿ ಭಕ್ತರು ಭಕ್ತಿ ಭಾವದಲ್ಲಿ ಮಿಂದೆದ್ದರು. ಶಬರಿ ಮಲೆ ಬೆಟ್ಟದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷ ನಡೆಯುವ ವಿಶೇಷ ಪೂಜೆಗೆ ಶಬರಿಮಲೆ ಮಕರವಿಳಕ್ಕು ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಮಕರ ಸಂಕ್ರಮಣದ ಕಾಲದಲ್ಲಿಯೇ ಶಬರಿಮಲೆ ಮಕರ ವಿಳಕ್ಕು ಪೂಜೆಗಳು ನಡೆಯುವುದರಿಂದ ಇದರಿಂದ ಮಕರ ಜ್ಯೋತಿ ಎಂಬ ಹೆಸರಿನಿಂದಲೂ ಗುರುತಿಸಲಾಗುತ್ತದೆ. ಮಕರ ಜ್ಯೋತಿಯ ಐತಿಹಾಸಿಕ ಹಿನ್ನಲೆ ಶಬರಿಮಲೆಯ ಪ್ರಮುಖ ಕಾರ್ಯಕ್ರಮವೆಂದರೆ ಮಕರ ಜ್ಯೋತಿ ದರ್ಶನವಾಗಿದೆ. ಜ.14ರ ಇಂದು ಮಕರ ಜ್ಯೋತಿ ದರ್ಶನವಾಗಿದೆ. ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು (ಪಂದಳಂ ರಾಜನು ಪ್ರಸ್ತುತಪಡಿಸಿದ) ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ. ಆಭರಣ ಪೆಟ್ಟಿಗೆಗಳ ಆಗಮನದ ನಂತರ ಇಡೀ ಪರ್ವತವು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅಲ್ಲಿ ನೆರೆದಿದ್ದ…

Read More

ಮಹಾ ಪಂಚಾಮೃತ ಅಭಿಷೇಕವು ಶಿವನಿಗೆ ಸಮರ್ಪಿತವಾದ ಒಂದು ವಿಶಿಷ್ಟ ಆಚರಣೆಯಾಗಿದೆ. ಪಂಚಾಮೃತ ಅಭಿಷೇಕವು ಹಿಂದೂ ಧಾರ್ಮಿಕ ಪೂಜೆಯಾಗಿದ್ದು, ಐದು ದ್ರವಗಳನ್ನು ದೇವತೆಗಳ ಮೇಲೆ ಸುರಿಯಲಾಗುತ್ತದೆ ಮತ್ತು ಮಂತ್ರಗಳನ್ನು ಪಠಿಸಲಾಗುತ್ತದೆ. ಇದು ಎರಡು ಪದಗಳ ಸಂಯೋಜನೆಯಾಗಿದೆ, ಅಂದರೆ ಪಂಚ ಎಂದರೆ ಐದು ಮತ್ತು ಅಮೃತ ಎಂದರೆ ಅಮೃತ. ಹಾಲು, ಮೊಸರು, ಜೇನುತುಪ್ಪ, ತುಪ್ಪ ಮತ್ತು ಸಕ್ಕರೆ ಸೇರಿದಂತೆ ಪಂಚಾಮೃತವನ್ನು ತಯಾರಿಸಲು ಐದು ಪ್ರಮುಖ ಪದಾರ್ಥಗಳನ್ನು ಬಳಸಲಾಗುತ್ತದೆ. ಇವೆಲ್ಲವೂ ಮಿಶ್ರವಾಗಿವೆ. ಪ್ರಕ್ರಿಯೆಯ ಉದ್ದಕ್ಕೂ ಮಂತ್ರಗಳನ್ನು ಪಠಿಸಲಾಗುತ್ತದೆ ಮತ್ತು ಪೂಜೆ ಮುಗಿದ ನಂತರ, ಪಂಚಾಮೃತವನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ.  ಮಹಾ ಶಿವನ ಸೋಮನಾಥದಲ್ಲಿ ಈ ಪೂಜೆಯು ಪ್ರಯೋಜನಕಾರಿಯಾಗಿದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್. ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564 ಹಾಲು: ಶುದ್ಧತೆಯನ್ನು ಪ್ರತಿನಿಧಿಸುತ್ತದೆ ಮೊಸರು:…

Read More

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರದಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಮೇಲಿಂದ ಮೇಲೆ ಜಾರಣೆ ನಡೆಸುತ್ತಿದೆ. ಹಾಗಾಗಿ ಬಿ ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದಾರೆ ಈಗಾಗಲೇ ಬಹಳ ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದಾರೆ. ಮತ್ತೊಮ್ಮೆ ಬಂಧನದ ಭೀತಿ ಹಿನ್ನೆಲೆ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ…

Read More

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/republic-day-celebrations-at-manekshaw-maidan-in-bengaluru-e-pass-system-for-the-public/ https://kannadanewsnow.com/kannada/big-news-censor-board-halts-the-imitation-of-the-deity-koomi-from-kantara-in-the-movie-rahuketu/

Read More

ಮಂಡ್ಯ : ನ್ಯಾಷನಲ್ ಲೀಡರ್ ಅಂತೆ ಪೋಸು ಕೊಟ್ಟು ಬರಿ ಪೇಪರ್ ಲೀಡರ್ ರಂತೆ ಮಾತನಾಡಿರುವ ಆರ್.ಅಶೋಕ್ ರವರು ಕಳೆದ ಚುನಾವಣೆಯಲ್ಲಿ ಕನಕಪುರದಲ್ಲಿ ಠೇವಣಿಯನ್ನೂ ಕಳೆದುಕೊಂಡಿದ್ರು ಇಲ್ಲಿ ಬಂದು ನನ್ನ ಬಗ್ಗೆ ಮಾತನಾಡಿದ್ದಾರೆ, ಮುಂದಿನ ಚುನಾವಣೆಯಲ್ಲಿ ಅವರ ಕ್ಷೇತ್ರವಾದ ಪದ್ಮನಾಭನಗರಕ್ಕೆ ಹೋಗಿ ಚುನಾವಣೆ ಮಾಡುತ್ತೇನೆ ಎಂದು ಶಾಸಕ ಉದಯ್ ಸವಾಲ್ ಹಾಕಿದರು. ಪದ್ಮನಾಭನಗರದಲ್ಲಿ ಬೇರೆ ಬೇರೆ ರೀತಿಯ ಅಡ್ಜಸ್ಟ್ ಮೆಂಟ್ ರಾಜಕೀಯ ಇದೆ. ಒಬ್ಬ ನಾಯ್ಡು ನಿಲ್ಲಿಸಿದ್ರೆ ಮತ್ತೋಬ್ಬ ನಾಯ್ಡು ಗೆ ದುಡ್ಡು ಕೊಟ್ಟು ನಿಲ್ಲಿಸ್ತಾರೆ. ವಿಪಕ್ಷ ನಾಯಕ ಬಿಟಿಎಂ ಲೇಔಟ್ ಗೆ ಹೋಗಿ ಸ್ಪರ್ಧಿಸಿ ಗೆದ್ದು ತೋರಿಸಲಿ ನಾನು ಅಲ್ಲಿ ಹೋಗಿ ಚುನಾವಣೆಗೆ ಸ್ಪರ್ಧಿಸಲ್ಲ ಆದರೆ, ಆರ್.ಅಶೋಕ್ ವಿರುದ್ಧ 2028 ರ ಚುನಾವಣೆ ಮಾಡ್ತಿನಿ ಎಂದು ಶಾಸಕ ಉದಯ್ ಸವಾಲ್ ಹಾಕಿದರು. ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಒಂದು ಪಂಚಾಯಿತಿ, ಕಾರ್ಪೋರೇಷನ್ ಚುನಾವಣೆಯಲ್ಲಿ ನಿಂತು ಗೆಲ್ಲೋದಕ್ಕೆ ಯೋಗ್ಯತೆ ಇಲ್ಲದವರು ನನ್ನನ್ನ ಫಾರಿನ್ ಶಾಸಕ ಅಂತ ಮಾತಾಡ್ತಾರೆ. ಅವರಿಗೆ…

Read More

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆ ಸೇರ್ಪಡೆ ವಿಚಾರವಾಗಿ ಕಳೆದ 24 ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಯಾವುದೇ ರಾಜಕೀಯ ಪಕ್ಷಗಳ ಕುಮ್ಮಕ್ಕಿನಿಂದ ನಡೆಯುತ್ತಿಲ್ಲ ಎಂದು ರೈತ ನಾಯಕಿ ಸುನಂದಾ ಜಯರಾಂ ಬುಧವಾರ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಕೆ.ಎಂ‌.ಉದಯ್ ಅವರು ಕಳೆದೆರಡು ವರ್ಷಗಳಿಂದ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಅವರ ಕಾರ್ಯ ವೈಖರಿ ಬಗ್ಗೆ ನಾವು ಯಾವುದೇ ವಿರೋಧ ಮಾಡುತ್ತಿಲ್ಲ. ಆದರೆ, ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆ ಸೇರ್ಪಡೆ ವಿಚಾರವಾಗಿ ನಾವು ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು. ಗ್ರಾಮ ಪಂಚಾಯಿತಿಯನ್ನು ನಗರಸಭೆಗೆ ಸೇರ್ಪಡೆ ಮಾಡುವ ವಿಚಾರವಾಗಿ ಸಾಮಾನ್ಯ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದಾಗ ಎಲ್ಲಾ ಸದಸ್ಯರು ನಗರಸಭೆ ಸೇರ್ಪಡೆ ವಿಷಯವನ್ನು ತಿರಸ್ಕರಿಸಿದ್ದಾರೆ. ಈ ಸಂಬಂಧ ಗ್ರಾಮದಲ್ಲೂ ಯಾವುದೇ ಗ್ರಾಮಸಭೆಯನ್ನು ನಡೆಸದೆ ಮತ್ತೋಂದು ಸಾಮಾನ್ಯ ಸಭೆಯಲ್ಲಿ ಈ ವಿಚಾರವನ್ನು…

Read More

ಮಂಡ್ಯ : ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ಪುರಾಣ ಪ್ರಸಿದ್ಧ ಶ್ರಿ ತೋಪಿನ ತಿಮ್ಮಪ್ಪನ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಬಾರದು. ಎಂದಿನಂತೆ ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್ ವತಿಯಿಂದಲೇ ನಡೆಯುವಂತೆ ಅಧಿಕಾರಿಗಳು ಅವಕಾಶ ಕೋಡಬೇಕೆಂದು ಒತ್ತಾಯಿಸಿ ದೇಗುಲದ ಮುಂದೆ ಗ್ರಾಮಸ್ಥರು ಹಾಗೂ ಮಹಿಳೆಯರು ಮಂಗಳವಾರ ಪ್ರತಿಭಟನೆ ಮಾಡಿದರು. ಟ್ರಸ್ಟ್ ಅಧ್ಯಕ್ಷ ಟಿ.ಕೃಷ್ಣೇಗೌಡ ಮಾತನಾಡಿ, ಶ್ರೀ ತೋಪಿನ ತಿಮ್ಮಪ್ಪ ದೇವಸ್ಥಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. 2008 ರಲ್ಲಿ ಅಂದು ಶಾಸಕರಾಗಿದ್ದ ಡಿ.ಸಿ.ತಮ್ಮಣ್ಣ, ಭಕ್ತಾಧಿಗಳು, ಗ್ರಾಮಸ್ಥರು ಹಾಗೂ ದಾನಿಗಳು ಸೇರಿಕೊಂಡು ದೇಗುಲವನ್ನು ಕೋಟ್ಯಂತರ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ಜೀರ್ಣೋದ್ಧಾರ ಮಾಡಲಾಗಿತ್ತು, ಆ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ 272 ಜೋಡಿ ಸರಳ ವಿವಾಹ ಮಾಡಲಾಗಿತ್ತು ಎಂದರು. ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್ ಅಂದಿನಿಂದ ಇಂದಿನವರೆಗೆ ದೇಗುಲವನ್ನು ಉತ್ತಮವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದಕ್ಕೂ ಪಾರದರ್ಶಕವಾಗಿ ಹಾಗೂ ಕಾನೂನಿನ ಪ್ರಕಾರವಾಗಿ ಲೆಕ್ಕಚಾರ ಮಾಡಿಕೊಂಡು ಬರಲಾಗುತ್ತಿದೆ. ಟ್ರಸ್ಟ್ನಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ದುರುಪಯೋಗವಾಗಿಲ್ಲ ಈ ಬಗ್ಗೆ ಯಾರು ಬೇಕಾದರು…

Read More