Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಇದರ ನೇರ ಪರಿಣಾಮ ಈಗ ಭಾರತೀಯ ರೈಲ್ವೆ ಆಹಾರ ಮತ್ತು ಪ್ರವಾಸೋದ್ಯಮ ನಿಗಮದ (IRCTC) ಮೇಲೆ ಬಿದ್ದಿದ್ದು, ರೈಲುಗಳಲ್ಲಿ ಬಿಸಿ ಅಡುಗೆ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಬಿಸಿ ಊಟದ ಬದಲು ಹಣ ಮರುಪಾವತಿ? ಸಿಲಿಂಡರ್ಗಳ ಕೊರತೆಯಿಂದಾಗಿ ರೈಲುಗಳಲ್ಲಿ ತಯಾರಿಸಿದ ಬಿಸಿ ಆಹಾರ ನೀಡುವುದನ್ನು ನಿಲ್ಲಿಸಿ, ಟಿಕೆಟ್ ಬುಕಿಂಗ್ ಸಮಯದಲ್ಲಿ ಆಹಾರಕ್ಕಾಗಿ ಹಣ ಪಾವತಿಸಿದ ಪ್ರಯಾಣಿಕರಿಗೆ ಆ ಮೊತ್ತವನ್ನು ಮರುಪಾವತಿಸುವ (Refund) ಬಗ್ಗೆ ರೈಲ್ವೆ ಇಲಾಖೆ ಚಿಂತನೆ ನಡೆಸುತ್ತಿದೆ. ಬೇಸ್ ಕಿಚನ್ಗಳ ಮೇಲೆ ಪರಿಣಾಮ: ರೈಲ್ವೆ ಅಧಿಕಾರಿಗಳ ಪ್ರಕಾರ, ಐಆರ್ಸಿಟಿಸಿಯ ‘ಬೇಸ್ ಕಿಚನ್’ಗಳಲ್ಲಿ (ಆಹಾರ ತಯಾರಿಸುವ ಕೇಂದ್ರಗಳು) ಅಡುಗೆ ಅನಿಲದ ಕೊರತೆಯಿಂದಾಗಿ ಅಡುಗೆ ತಯಾರಿಕೆಗೆ ಅಡ್ಡಿಯಾಗಿದೆ. ಇಲ್ಲಿ ತಯಾರಾದ ಆಹಾರವನ್ನೇ ಪ್ಯಾಂಟ್ರಿ ಕಾರ್ಗಳ ಮೂಲಕ ದೂರದೂದಿನ ರೈಲುಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಪ್ಯಾಂಟ್ರಿ ಕಾರ್ಗಳಲ್ಲಿ ಅಡುಗೆ ಅನಿಲ ಬಳಸದಿದ್ದರೂ, ಆಹಾರ…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (KSRTC) ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಜಾಲದ ಬಗ್ಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ವಂಚನೆಯ ಹಿನ್ನೆಲೆ: ಇತ್ತೀಚೆಗೆ ಕೆಎಸ್ಆರ್ಟಿಸಿಯ ಉನ್ನತ ಅಧಿಕಾರಿಯೆಂದು ಸುಳ್ಳು ಹೇಳಿ, ನಿಗಮದ ನಕಲಿ ಲೆಟರ್ಹೆಡ್ ಬಳಸಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿರುವುದು ಮಾಧ್ಯಮಗಳ ಮೂಲಕ ನಿಗಮದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಇಂತಹ ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ? ನಿಗಮವು ತನ್ನ ನೇಮಕಾತಿ ಪ್ರಕ್ರಿಯೆಯ ಬಗ್ಗೆ ಈ ಕೆಳಗಿನ ಪ್ರಮುಖ ಅಂಶಗಳನ್ನು ಸ್ಪಷ್ಟಪಡಿಸಿದೆ: ಸಂಪೂರ್ಣ ಪಾರದರ್ಶಕತೆ: ನಿಗಮದಲ್ಲಿನ ಎಲ್ಲಾ ನೇರ ನೇಮಕಾತಿಗಳನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಕೇವಲ ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಸಲಾಗುತ್ತದೆ. ಗಣಕೀಕೃತ ವ್ಯವಸ್ಥೆ: ನೇಮಕಾತಿಯಲ್ಲಿ ಯಾವುದೇ ಮಾನವ ಹಸ್ತಕ್ಷೇಪಕ್ಕೆ ಅವಕಾಶವಿರುವುದಿಲ್ಲ. ಸಂಪೂರ್ಣ ಪ್ರಕ್ರಿಯೆಯು ಗಣಕೀಕೃತ ವ್ಯವಸ್ಥೆಯ ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಯುತ್ತದೆ. ಶಿಫಾರಸ್ಸಿಗೆ ಅವಕಾಶವಿಲ್ಲ: ನೇರವಾಗಿ ಅರ್ಜಿ…
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ, ಭಾರತ ಸರ್ಕಾರವು ದೇಶದ ಇಂಧನ ಭದ್ರತೆಗಾಗಿ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು ‘ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-1968’ (ESMA) ಅನ್ನು ಇಡೀ ದೇಶದಲ್ಲಿ ಜಾರಿಗೊಳಿಸಿದೆ. ಇದರೊಂದಿಗೆ, ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ಗರಿಷ್ಠ ಮಟ್ಟದ ಎಲ್ಪಿಜಿ ಉತ್ಪಾದನೆಗೆ ಬಳಸಿಕೊಳ್ಳುವಂತೆ ಮತ್ತು ಹೈಡ್ರೋಕಾರ್ಬನ್ ಘಟಕಗಳನ್ನು ಎಲ್ಪಿಜಿ ಉತ್ಪಾದನೆಯತ್ತ ತಿರುಗಿಸುವಂತೆ (Divert) ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಜೊತೆಗೆ ಅಗತ್ಯ ವಸ್ತುಗಳ ಕಾಯ್ದೆ-1955 ಅನ್ನು ಸಹ ಜಾರಿಗೊಳಿಸಲಾಗಿದೆ. ಏನಿದು ಎಸ್ಮಾ (ESMA) ಕಾನೂನು? 1968ರಲ್ಲಿ ಸಂಸತ್ತು ಅಂಗೀಕರಿಸಿದ ಈ ಕಾಯ್ದೆಯು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಗತ್ಯವಾದ ಸೇವೆಗಳನ್ನು ಸುಗಮವಾಗಿ ನಡೆಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಜನಸಾಮಾನ್ಯರ ಜೀವನಕ್ಕೆ ತೊಂದರೆಯಾಗುವಂತಹ ಸಂದರ್ಭಗಳಲ್ಲಿ ಈ ಕಾನೂನನ್ನು ಅಸ್ತ್ರವಾಗಿ ಬಳಸಲಾಗುತ್ತದೆ. ಎಸ್ಮಾ ಅಡಿಯಲ್ಲಿ ಬರುವ ಪ್ರಮುಖ ಸೇವೆಗಳು: ಸಾರ್ವಜನಿಕ…
ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿಯೇ ನೇಮಕಾತಿ ಮಾಡಿಕೊಳ್ಳುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಎನ್ನುವಂತೆ ಮಾರ್ಚ್.27ರವರೆಗೆ ಕರ್ನಾಟಕದಲ್ಲಿ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟವಾಗೋದಿಲ್ಲ ಅಂತ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು. ಈಗಾಗಲೇ ಸಿಎಂ ಕೂಡ ಒಳ ಮೀಸಲಾತಿ ಜಾರಿಯ ಭರವಸೆ ನೀಡಿದ್ದಾರೆ. ಮಾರ್ಚ್.27ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಲ ಸಮುದಾಯದ ನಾಯಕರು ಒಳ ಮೀಸಲಾತಿಗೆ ಒಪ್ಪಿಕೊಂಡಿದ್ದಾರೆ ಎಂದರು. ಎಡ, ಬಲ ಸಮುದಾಯಗಳಿಗೆ ಸರಿ ಸಮನಾಗಿ ಒಳ ಮೀಸಲಾತಿ ಹಂಚಿಕೆ ಮಾಡಲಾಗುತ್ತದೆ. ಮಾರ್ಚ್.27ರವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟಣೆ ಆಗಲ್ಲ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.
ಮಂಗಳೂರು: ರೈಲಿನಲ್ಲಿ ನಿಗೂಢವಾಗಿ ಸಾಗಿಸುತ್ತಿದ್ದಂತ 200ಕ್ಕೂ ಹೆಚ್ಚು ಸೆಕೆಂಡ್ ಹ್ಯಾಂಡ್ ಮೊಬೈಲ್ ಗಳನ್ನು ರೈಲ್ವೆ ಪೊಲೀಸರು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಆರ್ ಪಿ ಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ, 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೆಕೆಂಡ್ ಹ್ಯಾಂಡ್ 200ಕ್ಕೂ ಹೆಚ್ಚು ಮೊಬೈಲ್ ಗಳಲ್ಲಿ ಜಪ್ತಿ ಮಾಡಿದ್ದಾರೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಆರ್ ಪಿ ಎಫ್ ಪೊಲೀಸರು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಮಾಡುತ್ತಿದ್ದಾಗ ಮೊಬೈಲ್ ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಪಾಲಕ್ಕಾಡ್ ವಿಭಾಗದ ರೈಲ್ವೆ ಸಂರಕ್ಷಣಾ ಪಡೆ ಕಗಣ್ಗಾವಲನ್ನು ತೀವ್ರಗೊಳಿಸಿದೆ. ರೈಲಿನ ಮೂಲಕ ನಗದು, ಚಿನ್ನ, ಬೆಲೆ ಬಾಳುವ ವಸ್ತುಗಳ ಸಾಗಾಟದ ಬಗ್ಗೆ ಮಾಹಿತಿಯು ರೈಲ್ವೆ ಪೊಲೀಸರ ಕಣ್ಗಾವಲು ಪಡೆಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಜಾಮ್ ನಗರ – ತಿರುನಲ್ವೇಲಿ ಎಕ್ಸ್ ಪ್ರೆಸ್ ರೈಲಿನಲ್ಲಿ ಫ್ಲಾಟ್ ಫಾರ್ಮ್ ನಂ.3ರಲ್ಲಿ ತಪಾಸಣೆ ನಡೆಸಿದಾಗ 200ಕ್ಕೂ ಹೆಚ್ಚು ಮೊಬೈಲ್ ಗಳು ಪತ್ತೆಯಾಗಿವೆ. ರೈಲಿನ ಸಾಮಾನ್ಯ ಕೋಚ್ ನಲ್ಲಿ ಆರ್ ಪಿಎಫ್…
ಬೆಂಗಳೂರು: ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿಯಾಗದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ. ಮಾರ್ಚ್ 10 ಕಳೆದರೂ ನೌಕರರ ಕೈಗೆ ವೇತನ ಸಿಕ್ಕಿಲ್ಲದಿರುವುದು ಸಿಬ್ಬಂದಿ ವರ್ಗದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸಂಘದ ಅಧ್ಯಕ್ಷರಾದ ಎ. ಅಮೃತ್ ರಾಜ್ ಅವರು ಅಧಿಕೃತವಾಗಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ನೌಕರರ ಸಂಕಷ್ಟ ಮತ್ತು ಆಗ್ರಹಗಳು: ವೇತನ ವಿಳಂಬ: ಫೆಬ್ರವರಿ-2026ರ ಮಾಹೆಯ ವೇತನವು ಇಂದಿನವರೆಗೂ ಪಾವತಿಯಾಗಿಲ್ಲ. ಇದರಿಂದಾಗಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಾಗಿ ಸಂಘ ಹೇಳಿದೆ. ದೈನಂದಿನ ಜೀವನಕ್ಕೆ ಹೊಡೆತ: ವೇತನ ಬಾರದೆ ಇರುವುದರಿಂದ ಮನೆ ಬಾಡಿಗೆ ಪಾವತಿಸಲು, ಮಕ್ಕಳ ಶಾಲಾ ಶುಲ್ಕ ಕಟ್ಟಲು ಮತ್ತು ದಿನನಿತ್ಯದ ಆಹಾರ ಪದಾರ್ಥಗಳನ್ನು ಖರೀದಿಸಲು ನೌಕರರು ಪರದಾಡುತ್ತಿದ್ದಾರೆ ಎಂದು ಸಂಘ ತಿಳಿಸಿದೆ. 24 ಗಂಟೆಗಳ ಗಡುವು:…
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಬುಧವಾರ) ಆರಂಭವಾಗಬೇಕಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಮುಷ್ಕರಕ್ಕೆ ಕರೆ ನೀಡಿತ್ತು. ಇದರಿಂದ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗ (OPD) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಮುಷ್ಕರ ಕೈಬಿಡಲಾಗಿದೆ. ಸರ್ಕಾರ ನೀಡಿದ ಭರವಸೆಗಳೇನು? ವೈದ್ಯರ ಸಂಘ ಮಂಡಿಸಿದ್ದ ಒಟ್ಟು 14 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಪ್ರಮುಖವಾಗಿ: ವೇತನ ಶ್ರೇಣಿ: ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲೇ ಆರೋಗ್ಯ ಇಲಾಖೆಯ ವೈದ್ಯರಿಗೂ ವೇತನ ನೀಡುವ ಭರವಸೆ. ಹುದ್ದೆಗಳ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ ಸುಮಾರು 39,000 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ಪ್ರಕ್ರಿಯೆ. ಗುತ್ತಿಗೆ ನೌಕರರ ಹಿತರಕ್ಷಣೆ: ಎನ್.ಹೆಚ್.ಎಂ (NHM) ಅಡಿಯಲ್ಲಿ ಕೆಲಸ…
ಮುಂಬೈ: ಇತ್ತೀಚೆಗಷ್ಟೇ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಸಂಭ್ರಮದಲ್ಲಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಈಗ ಮತ್ತೊಂದು ಹಬ್ಬದ ಸುದ್ದಿ ಬಂದಿದೆ. ಬಹುನಿರೀಕ್ಷಿತ ಐಪಿಎಲ್ 2026 ರ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 13ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಂಗಳವಾರ ಖಚಿತಪಡಿಸಿದ್ದಾರೆ. ಮಾರ್ಚ್ 28 ರಿಂದ ಟೂರ್ನಿ ಆರಂಭವಾಗಲಿದೆ ಎಂದು ಈಗಾಗಲೇ ಸ್ಟಾರ್ ಸ್ಪೋರ್ಟ್ಸ್ ತಿಳಿಸಿದೆ. ಆದರೆ, ಪೂರ್ಣ ಪ್ರಮಾಣದ ವೇಳಾಪಟ್ಟಿಯ ಬದಲಿಗೆ ಹಂತ ಹಂತವಾಗಿ ಪಂದ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡದಿರಲು ಕಾರಣವೇನು? ಭಾರತದ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳೇ ಇದಕ್ಕೆ ಪ್ರಮುಖ ಕಾರಣ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಐಪಿಎಲ್ ನಡೆಯುವ ಸಮಯದಲ್ಲಿಯೇ ಚುನಾವಣೆಗಳು ಎದುರಾಗಲಿವೆ. ಇದರಿಂದಾಗಿ ಭದ್ರತೆ ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ. “ಚುನಾವಣಾ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಎಲ್.ಕೆ.ಜಿ ಇಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, ಮುಂದಿನ ಮೂರು ವರ್ಷಗಳಲ್ಲಿ 800 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ (KPS) ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಯೋಜನೆಯ ಪ್ರಮುಖಾಂಶಗಳನ್ನು ಹಂಚಿಕೊಂಡಿದ್ದಾರೆ: ಏನಿದು ಕರ್ನಾಟಕ ಪಬ್ಲಿಕ್ ಶಾಲೆ (KPS)? ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣದಿಂದ (Pre-Primary) ಆರಂಭವಾಗಿ ದ್ವಿತೀಯ ಪಿಯುಸಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣವನ್ನು ಖಾತ್ರಿಗೊಳಿಸುವುದು ಈ ಶಾಲೆಗಳ ಮುಖ್ಯ ಗುರಿಯಾಗಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳು ಪದೇ ಪದೇ ಶಾಲೆ ಬದಲಾಯಿಸುವ ತೊಂದರೆ ತಪ್ಪಲಿದ್ದು, ಸುಸಜ್ಜಿತ ಮೂಲಸೌಕರ್ಯದೊಂದಿಗೆ ಶಿಕ್ಷಣ ಲಭ್ಯವಾಗಲಿದೆ. ಪ್ರಸ್ತುತ ಸ್ಥಿತಿಗತಿ: ರಾಜ್ಯದಲ್ಲಿ ಸದ್ಯ 309 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ಶಾಲೆಗಳಲ್ಲಿ ಒಟ್ಟು 2,72,464 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ವಿಶ್ವಾಸ…
ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..! ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು. ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ.ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ,ಐದು ಬಾರಿ,ಒಂಭತ್ತು ಬಾರಿ,ಇಪ್ಪತೊಂದು ಬಾರಿ,ಸಾವಿರದ ಎಂಟು ಬಾರಿ ಜಪಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರುರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ.ಆ ನಿಯಮಗಳು ಯಾವುವೆಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲವಾದರು ಗುರುರಾಯರ ವಿಶೇಷ ದಿನವಾದ…














