Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ತನಿಖಾ ತಂಡಗಳು ಏಪ್ರಿಲ್-2026ರ ಮಾಹೆಯಲ್ಲಿ ರಾಜ್ಯಾದ್ಯಂತ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಿದ್ದು, ಟಿಕೆಟ್ ರಹಿತ ಪ್ರಯಾಣಿಕರಿಗೆ ಭಾರಿ ದಂಡ ವಿಧಿಸಿವೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ಒಟ್ಟು 41,308 ವಾಹನಗಳನ್ನು ತೀವ್ರ ತನಿಖೆಗೊಳಪಡಿಸಿದ ಅಧಿಕಾರಿಗಳು, 4,337 ಕಳ್ಳಪ್ರಯಾಣದ ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,462 ಪ್ರಯಾಣಿಕರಿಂದ ಒಟ್ಟು 8,67,590/- ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ. ಆದಾಯ ಸೋರಿಕೆ ಪತ್ತೆ ಮತ್ತು ಶಿಸ್ತು ಕ್ರಮ: ನಿಗಮದ ಆದಾಯಕ್ಕೆ ಕತ್ತರಿ ಬೀಳುತ್ತಿದ್ದ 1,32,973/- ರೂ.ಗಳ ಆದಾಯ ಸೋರಿಕೆಯನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಈ ಅಕ್ರಮ ಮತ್ತು ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಪ್ರಯಾಣಿಕರಲ್ಲಿ ನಿಗಮದ ಮನವಿ: > ಸಾರ್ವಜನಿಕ ಪ್ರಯಾಣಿಕರು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಜವಾಬ್ದಾರಿಯುತವಾಗಿ ಸರಿಯಾದ ಟಿಕೆಟ್ ಅಥವಾ ಪಾಸುಗಳನ್ನು ಪಡೆದೇ…
ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರೈಸ್(RISE) ವರ್ಲ್ಡ್ವೈಡ್ನೊಂದಿಗೆ ಮೇಜರ್ ಲೀಗ್ ಬೇಸ್ಬಾಲ್ (ಎಂಎಲ್ಬಿ)ಹೊಸ ಪಾಲುದಾರಿಕೆಯನ್ನು ಘೋಷಿಸಿದೆ. ಭಾರತದಲ್ಲಿ ಬೇಸ್ಬಾಲ್ ಆಟವನ್ನು ಜನಸಾಮಾನ್ಯರಿಗೆ ತಲುಪಿಸುವ ಗುರಿಯನ್ನು ಈ ಪಾಲುದಾರಿಕೆಯು ಹೊಂದಿದೆ. ಈ ಪಾಲುದಾರಿಕೆಯು ಮಾರ್ಕೆಟಿಂಗ್ ಮತ್ತು ಸಾಮಾಜಿಕ ಜಾಲತಾಣ ಪ್ರಚಾರಗಳಂಥ ವಾಣಿಜ್ಯ ಪ್ರಚಾರಗಳನ್ನು ಒಳಗೊಂಡಿರುತ್ತದೆ. ಜೊತೆಗೆ ಮುಂದಿನ ಅಕ್ಟೋಬರ್ನಲ್ಲಿ ಮುಂಬೈನಲ್ಲಿ ನಡೆಯಲಿರುವ ಪ್ರಮುಖ ಲೈವ್ ಕಾರ್ಯಕ್ರಮವನ್ನು ಒಳಗೊಂಡಿರುತ್ತದೆ. ಭಾರತೀಯ ಪ್ರೇಕ್ಷಕರಿಗೆ ಬೇಸ್ಬಾಲ್ ಆಟವನ್ನು ತಲುಪಿಸುವುದು ಇದರ ಗುರಿಯಾಗಿದೆ. ಎಂಎಲ್ಬಿ ಹಲವಾರು ವರ್ಷಗಳಿಂದ ಭಾರತದಲ್ಲಿ ಬೇಸ್ಬಾಲ್ ಆಟವನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿದೆ. 2019ರಲ್ಲಿ ನವದೆಹಲಿಯಲ್ಲಿ ಕಚೇರಿಯನ್ನು ತೆರೆದಾಗಿನಿಂದ ಎಂಎಲ್ಬಿ, ಕ್ರೀಡೆಯಲ್ಲಿ ಜಾಗೃತಿ ಮತ್ತು ಆಸಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಇದು ಭಾರತದ ಶಾಲೆಗಳಲ್ಲಿ ‘ಎಂಎಲ್ಬಿ ಫಸ್ಟ್ ಪಿಚ್’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಯುವಕರಿಗಾಗಿ ‘ಎಂಎಲ್ಬಿ ಕಪ್’ ಸ್ಪರ್ಧೆಗಳನ್ನು ನಡೆಸಿದೆ ಮತ್ತು ಭಾರತದಲ್ಲಿ ಎಂಎಲ್ಬಿ ನಂತರದ ಋತುವಿನ ಪಂದ್ಯಗಳನ್ನು ಪ್ರಸಾರ ಮಾಡಿದೆ. ಎಂಎಲ್ಬಿ ‘ಇಂಡಿಯನ್ ಬೇಸ್ಬಾಲ್ ಡ್ರೀಮ್ಸ್’ ನಂಥ ಭಾರತ-ಕೇಂದ್ರಿತ ಕಾರ್ಯಕ್ರಮಗಳನ್ನು ಸಹ…
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ದಿಢೀರ್ ಅಂತ ಏನಾದರೂ ಅವಘಡ ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಪ್ರಯಾಣಿಕರ ಪ್ರಾಣ ರಕ್ಷಣೆ ಹೇಗೆ ಮಾಡಬೇಕು? ಇಂತಹ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಲು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಚಾಲೆಂಜರ್ 2026’ ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಡಿಜಿಸಿಎ ಮತ್ತು ಐಸಿಎಒ ಮಾರ್ಗಸೂಚಿಗಳ ಅನ್ವಯ, ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಪೂರ್ಣ ಪ್ರಮಾಣದ ತಾಲೀಮು, ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಬಿಕ್ಕಟ್ಟು ನಿರ್ವಹಣೆಯ ಬದ್ಧತೆಯನ್ನು ಮತ್ತೊಮ್ಮೆ ತೋರಿಸಿದೆ. ಏರ್ಪೋರ್ಟ್ ಇತಿಹಾಸದಲ್ಲೇ ಅತಿದೊಡ್ಡ ತಾಲೀಮು! ಇದು ಕೆಂಪೇಗೌಡ ವಿಮಾನ ನಿಲ್ದಾಣದ ಇತಿಹಾಸದಲ್ಲಿ ನಡೆದ ಅತಿದೊಡ್ಡ ತುರ್ತು ಪರಿಸ್ಥಿತಿ ಅಭ್ಯಾಸವಾಗಿದೆ. ಈ ತಾಲೀಮಿನಲ್ಲಿ ವಿಮಾನಯಾನ ಸಂಸ್ಥೆಗಳು, ರಾಜ್ಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆಸ್ಪತ್ರೆಗಳು, ಭಾರತೀಯ ವಾಯುಪಡೆ, ಸೇನಾ ಹಾಗೂ ಅರೆಸೇನಾ ಪಡೆಗಳು, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸೇರಿದಂತೆ ಬರೋಬ್ಬರಿ 100ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 3,000ಕ್ಕೂ ಅಧಿಕ…
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ಶಿಕ್ಷಣ ಇತಿಹಾಸದಲ್ಲೇ ಅತ್ಯುನ್ನತ ಸಾಧನೆ ದಾಖಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸ್ನೇಹಿ ಕ್ರಮಗಳಿಂದಾಗಿ ರಾಜ್ಯದ ಒಟ್ಟು ಕ್ರೋಢೀಕೃತ ಫಲಿತಾಂಶವು ದಾಖಲೆಯ 92.25% ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷದ ಫಲಿತಾಂಶಕ್ಕೆ (85.19%) ಹೋಲಿಸಿದರೆ ಈ ಬಾರಿ 7.06% ರಷ್ಟು ಗಣನೀಯ ಏರಿಕೆ ಕಂಡುಬಂದಿದೆ. ಈ ಐತಿಹಾಸಿಕ ಸಾಧನೆಯ ಸಮಗ್ರ ವಿಶ್ಲೇಷಣಾತ್ಮಕ ಲೇಖನ ಮತ್ತು ಪ್ರಮುಖ ಅಂಕಿ-ಅಂಶಗಳ ವಿವರಗಳು ಈ ಕೆಳಗಿನಂತಿವೆ: ವಿಭಾಗವಾರು ಸಾಧನೆ (Arts, Commerce & Science) ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿಗಳು ಭರ್ಜರಿ ಪ್ರಗತಿ ಸಾಧಿಸಿದ್ದಾರೆ. ವಿಜ್ಞಾನ ವಿಭಾಗವು 96.01% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ, ಕಲಾ ವಿಭಾಗವು ಕಳೆದ ವರ್ಷಕ್ಕಿಂತ ಶೇಕಡಾ 13 ಕ್ಕಿಂತಲೂ ಹೆಚ್ಚು ಸುಧಾರಣೆ ಕಂಡು ಅತಿ ದೊಡ್ಡ ಜಿಗಿತವನ್ನು ಕಂಡಿದೆ.…
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ವಿಮಾನವು ರನ್ವೇ ಮೇಲೆ ಇಳಿಯುವಾಗ ಅದರ ಹಿಂಭಾಗವು ನೆಲಕ್ಕೆ ಅಪ್ಪಳಿಸಿದೆ (Tail-Strike). ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವೇನು? ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಏರ್ ಇಂಡಿಯಾದ AI2651 ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಿದ್ಧವಾಗಿತ್ತು. ಆ ಸಮಯದಲ್ಲಿ ಅದರ ಮುಂದೆ ಚಲಿಸುತ್ತಿದ್ದ ಮತ್ತೊಂದು ವಿಮಾನದಿಂದಾಗಿ ಉಂಟಾದ ‘ವೇಕ್ ಟರ್ಬ್ಯುಲೆನ್ಸ್’ (Wake Turbulence – ಗಾಳಿಯ ತೀವ್ರ ಏರಿಳಿತ) ಪರಿಣಾಮವಾಗಿ ಈ ವಿಮಾನದ ನಿಯಂತ್ರಣ ಹಾಗೂ ಸ್ಥಿರತೆಗೆ ಅಡ್ಡಿಯುಂಟಾಯಿತು. ಹೀಗಾಗಿ ವಿಮಾನದ ಸಮತೋಲನ ತಪ್ಪಿ, ರನ್ವೇಗೆ ಇಳಿಯುವಾಗ ಅದರ ತಳಭಾಗದ ಕೊನೆಯ ತುದಿ (Tail) ನೆಲಕ್ಕೆ ಜೋರಾಗಿ ತಾಗಿದೆ. ಪ್ರಯಾಣಿಕರು ಸುರಕ್ಷಿತ ಘಟನೆ ಸಂಭವಿಸಿದ ತಕ್ಷಣವೇ ಪೈಲಟ್ಗಳು ಸಮಯಪ್ರಜ್ಞೆ ಮೆರೆದು ವಿಮಾನವನ್ನು ಸುರಕ್ಷಿತವಾಗಿ ರನ್ವೇ ಮೇಲೆ…
ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ನಡುಕ ಹುಟ್ಟಿಸುವ ಘಟನೆ ನಡೆದಿದ್ದು, ಸಾರ್ವಜನಿಕರು ಹಾಗೂ ರಕ್ಷಣಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಬಾಲಕಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನೆಯ ವಿವರ: ರಾಮಮೂರ್ತಿನಗರ ವ್ಯಾಪ್ತಿಯ ಎನ್ ಆರ್ ಐ ಲೇಔಟ್ನಲ್ಲಿರುವ ಅಪಾರ್ಟ್ಮೆಂಟ್ ಒಂದರ 5ನೇ ಮಹಡಿ ಹತ್ತಿದ ಬಾಲಕಿ, ಅಲ್ಲಿಂದ ಕೆಳಗೆ ಬಿದ್ದು “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಜೋರಾಗಿ ಕೂಗಲಾರಂಭಿಸಿದ್ದಾಳೆ. ಬಾಲಕಿಯ ವರ್ತನೆಯನ್ನು ಕಂಡು ಆತಂಕಗೊಂಡ ಸ್ಥಳೀಯ ಸಾರ್ವಜನಿಕರು, ಸಮಯ ವ್ಯರ್ಥ ಮಾಡದೆ ತಕ್ಷಣವೇ ತುರ್ತು ಸಹಾಯವಾಣಿ ಸಂಖ್ಯೆ ‘112’ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ: ಮಾಹಿತಿ ತಿಳಿಯುತ್ತಿದ್ದಂತೆಯೇ ರಾಮಮೂರ್ತಿನಗರ ಠಾಣೆಯ ಹೊಯ್ಸಳ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯ ಸಾರ್ವಜನಿಕರ ಸಕ್ರಿಯ ಸಹಾಯದೊಂದಿಗೆ ಅತ್ಯಂತ ಜಾಗರೂಕತೆಯಿಂದ ಜಂಟಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, 5ನೇ ಮಹಡಿಯಿಂದ…
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janata Party) ಎಕ್ಸ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. @CJP_2029 ಯೂಸರ್ನೇಮ್ ಹೊಂದಿರುವ ಈ ಪ್ರೊಫೈಲ್ಗೆ ಭೇಟಿ ನೀಡಿದಾಗ “Account Withheld” ಎಂದು ತೋರಿಸುತ್ತಿದ್ದು, ಕಾನೂನಾತ್ಮಕ ಬೇಡಿಕೆಯ ಮೇರೆಗೆ ಭಾರತದಲ್ಲಿ ಈ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂಬ ಸಂದೇಶ ಕಾಣಿಸುತ್ತಿದೆ. https://twitter.com/abhijeet_dipke/status/2057380406618443930 ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇದರ ಹಿನ್ನೆಲೆ ಏನು? ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರ ಹುದ್ದೆಯ ಪದನಾಮಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಿಜೆಐ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟೀಕೆಯೊಂದನ್ನು ಮಾಡಿತ್ತು. “ಉದ್ಯೋಗ ಸಿಗದ ಕೆಲವು ಯುವಕರು ವ್ಯವಸ್ಥೆಯ ವಿರುದ್ಧ ತಿರುಗಿಬೀಳುತ್ತಿದ್ದಾರೆ. ಅವರು ಮಾಧ್ಯಮ, ಸಾಮಾಜಿಕ ಜಾಲತಾಣ ಅಥವಾ ಆರ್ಟಿಐ (RTI) ಕಾರ್ಯಕರ್ತರ ರೂಪದಲ್ಲಿ ಜಿರಳೆಗಳಂತೆ (Cockroaches) ಎಲ್ಲರ ಮೇಲೆ ದಾಳಿ ಮಾಡುತ್ತಾರೆ” ಎಂದು ನ್ಯಾಯಪೀಠ ಹೇಳಿತ್ತು. https://twitter.com/abhijeet_dipke/status/2057359108571820051 ನ್ಯಾಯಾಧೀಶರ ಈ ‘ಜಿರಳೆ’ (ಕಾಕ್ರೋಚ್)…
ನವದೆಹಲಿ: ದೇಶದಲ್ಲಿ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ವೆಚ್ಚವನ್ನು (Freight Charges) ಹೆಚ್ಚಿಸಲು ನಿರ್ಧರಿಸಿವೆ. ಇದರಿಂದಾಗಿ ದಿನಬಳಕೆ ವಸ್ತುಗಳು, ಕೈಗಾರಿಕಾ ಕಚ್ಚಾ ವಸ್ತುಗಳು ಮತ್ತು ಆನ್ಲೈನ್ ಡೆಲಿವರಿ ವೆಚ್ಚಗಳು ದುಬಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಹೊಸ ಫಾರ್ಮುಲಾ: ‘ಫ್ಯುಯೆಲ್ ಅಡ್ಜಸ್ಟ್ಮೆಂಟ್ ಫ್ಯಾಕ್ಟರ್’ ಜಾರಿ ದೇಶಾದ್ಯಂತದ ಸಾರಿಗೆದಾರರನ್ನು ಪ್ರತಿನಿಧಿಸುವ ‘ಆಲ್ ಇಂಡಿಯಾ ಟ್ರಾನ್ಸ್ಪೋರ್ಟರ್ಸ್ ವೆಲ್ಫೇರ್ ಅಸೋಸಿಯೇಷನ್’ (AITWA), ‘ಫ್ಯುಯೆಲ್ ಅಡ್ಜಸ್ಟ್ಮೆಂಟ್ ಫ್ಯಾಕ್ಟರ್’ (FAF) ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಹೊಸ ನಿಯಮದ ಪ್ರಕಾರ, ಮೇ 15, 2026ರ ಮೂಲ ದರಕ್ಕಿಂತ ಡೀಸೆಲ್ ಬೆಲೆಯಲ್ಲಿ ಪ್ರತಿ 1 ರೂಪಾಯಿ ಹೆಚ್ಚಳವಾದರೆ, ಸಾರಿಗೆ ದರವು ಶೇಕಡಾ 0.65 ರಷ್ಟು ಸ್ವಯಂಚಾಲಿತವಾಗಿ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ವೆಚ್ಚದ ಜಾರಿಯು ಮೇ 20, 2026 ರಿಂದಲೇ ಜಾರಿಗೆ ಬಂದಿದೆ ಎಂದು ಅಸೋಸಿಯೇಷನ್ ತಿಳಿಸಿದೆ. ಸಾರಿಗೆ ಕ್ಷೇತ್ರಕ್ಕೆ ಡೀಸೆಲ್ ಏಕೆ ಪ್ರಮುಖ? ರಸ್ತೆ ಸಾರಿಗೆ ಉದ್ಯಮದಲ್ಲಿ ಡೀಸೆಲ್ ಅತ್ಯಂತ ಪ್ರಮುಖ ವೆಚ್ಚವಾಗಿದೆ.…
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಬೆನಕ ಪ್ರಸಾದ್ ಎನ್.ಜೆ (IPS KN 2022) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ (ಎ) ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ರಾಜ್ಯಪಾಲರ ಆಜ್ಞೆಯ ಮೇರೆಗೆ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಸಾಗರದಲ್ಲಿ ದಕ್ಷತೆಯ ಛಾಪು ಮೂಡಿಸಿದ್ದ ಅಧಿಕಾರಿ ಡಾ. ಬೆನಕ ಪ್ರಸಾದ್ ಅವರು ಸಾಗರ ಉಪವಿಭಾಗದ ಎಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಅತ್ಯುತ್ತಮ ಹಾಗೂ ಜನಸ್ನೇಹಿ ಪೊಲೀಸ್ ಸೇವೆಗೆ ಹೆಸರಾಗಿದ್ದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ತಾಲೂಕಿನಲ್ಲಿ ಶಾಂತಿ ಕಾಪಾಡಲು ಶ್ರಮಿಸಿದ್ದರು. ತಮ್ಮ ಕರ್ತವ್ಯ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದಾಗಿ ಸಾರ್ವಜನಿಕ ವಲಯದಲ್ಲಿ ಒಬ್ಬ ಅತ್ಯಂತ ದಕ್ಷ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರ ಕಾರ್ಯವೈಖರಿಯು…
ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್ ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ, ದಾಖಲಿಸಬಹುದು ಎಂದು…














