Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: “ಕೇವಲ ಪ್ರಚಾರ ಮತ್ತು ವ್ಯೂಸ್ ಗಳಿಸುವುದಕ್ಕಾಗಿ ಜೀವಂತ ಇರುವವರ ಸಾವಿನ ಸುಳ್ಳು ಸುದ್ದಿ ಬಿತ್ತರಿಸುವ ಮುಖೇಡಿಗಳ ಹೆಡೆಮುರಿ ಕಟ್ಟಿ ತಕ್ಷಣವೇ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಬೇಕು” ಎಂದು ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ದೊಡ್ಡಣ್ಣ ಸಿಡಿದೆದ್ದಿದ್ದಾರೆ. ತಮ್ಮ ನಿಧನದ ಕುರಿತು ರಾಜ್ಯ ಮಟ್ಟದಲ್ಲಿ ಸುಳ್ಳು ವದಂತಿ ಹರಡಿದ್ದ ಕಿಡಿಗೇಡಿಗಳ ವಿರುದ್ಧ ಅವರು ಬೆಂಗಳೂರಿನ ಸೈಬರ್ ಕ್ರೈಂ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಟ ದೊಡ್ಡಣ್ಣ ಅವರು ವಿಧಿವಶರಾಗಿದ್ದಾರೆ ಎಂಬ ಸುಳ್ಳು ಪೋಸ್ಟ್‌ಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಇದರಿಂದ ಆತಂಕಗೊಂಡ ನೂರಾರು ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಸತತ ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಅಂದೇ ವಿಡಿಯೋ ಬಿಡುಗಡೆ ಮಾಡಿದ್ದ ಹಿರಿಯ ನಟ: ತಮ್ಮ ಸಾವಿನ ಸುಳ್ಳು ವಾರ್ತೆ ಹರಿದಾಡಿದ ದಿನವೇ ಸಾಮಾಜಿಕ ಮಾಧ್ಯಮಗಳ ಮೂಲಕ ವಿಡಿಯೋ ಸಂದೇಶ ರವಾನಿಸಿದ್ದ ದೊಡ್ಡಣ್ಣ, “ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ,…

Read More

ಬೆಂಗಳೂರು : ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೆಪಿಎಸ್.ಸಿ. ಕಾರ್ಯದರ್ಶಿಗೆ ಕಳಿಸಿರುವ ಲಿಖಿತ ಸೂಚನೆಯಲ್ಲಿ ಅವರು, ಗ್ರಾಮೀಣ ಪ್ರದೇಶದ ಪ್ರಗತಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಕಲ್ಯಾಣ ಕರ್ನಾಟಕ ವೃಂದದಲ್ಲಿ 97 ಹಾಗೂ ಉಳಿಕೆ ವೃಂದದಲ್ಲಿ 150 ಪಂಚಾಯ್ತಿ ಅಧಿಕಾರಿಗಳ ಹುದ್ದೆಗಳ ಭರ್ತಿಗೆ 2024ರಲ್ಲಿ ಅಧಿಸೂಚನೆ ಆಗಿದ್ದರೂ ಅಂತಿಮ ಪಟ್ಟಿ ಪ್ರಕಟಿಸದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳ ಆತ್ಮ ಗ್ರಾಮಗಳಲ್ಲಿದ್ದು, ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ ಎಂಬ ಮಹಾತ್ಮಾ ಗಾಂಧೀ ಅವರ ಮಾತುಗಳನ್ನು ಉಲ್ಲೇಖಿಸಿರುವ ಈಶ್ವರ ಖಂಡ್ರೆ, ಪಿಡಿಓಗಳ ನೇರ ನೇಮಕಾತಿ ಪ್ರಕ್ರಿಯೆ ನಡೆಸುವ ಸಂಬಂಧ ಕೆ.ಪಿ.ಎಸ್.ಸಿಗೆ 2024ರ ಮಾರ್ಚ್ 14ರಂದು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರ, ನೇಮಕಾತಿಯ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡುವ ತೀರ್ಮಾನವನ್ನು ಕೈಗೊಂಡ ಹಿನ್ನೆಲೆಯಲ್ಲಿ…

Read More

ನವದೆಹಲಿ: ಪ್ರಮುಖ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ (Telegram) ಸಂಸ್ಥೆಗೆ ದೆಹಲಿ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಐಟಿ ನಿಯಮಾವಳಿಗಳನ್ನು ಟೆಲಿಗ್ರಾಂ ನಿರಂತರವಾಗಿ ಉಲ್ಲಂಘಿಸುತ್ತಿದೆ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯದ ಗಮನಕ್ಕೆ ತಂದ ಬೆನ್ನಲ್ಲೇ, ಕೋರ್ಟ್ ಸಂಸ್ಥೆಗೆ ಯಾವುದೇ ರೀತಿಯ ತುರ್ತು ಪರಿಹಾರ ಅಥವಾ ವಿನಾಯಿತಿ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ (IT) ನಿಯಮಗಳನ್ನು ಪಾಲಿಸದ ಮತ್ತು ದೇಶದ ಕಾನೂನುಗಳಿಗೆ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಟೆಲಿಗ್ರಾಂ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದೆ. ಕೇಂದ್ರ ಸರ್ಕಾರದ ಗಂಭೀರ ಆಕ್ಷೇಪಗಳು ನ್ಯಾಯಾಲಯದಲ್ಲಿ ಈ ಕುರಿತು ವಾದ ಮಂಡಿಸಿದ ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಟೆಲಿಗ್ರಾಂ ವೇದಿಕೆಯು ಭಾರತದ ಸಾರ್ವಭೌಮತೆ ಮತ್ತು ಸುರಕ್ಷತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದರೂ ಸಂಸ್ಥೆಯು ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. “ಟೆಲಿಗ್ರಾಂ ನಿಯಮಾವಳಿಗಳನ್ನು ನಿರಂತರವಾಗಿ ಮತ್ತು ಪದೇ ಪದೇ ಉಲ್ಲಂಘಿಸುತ್ತಾ ಬಂದಿದೆ. ಕಾನೂನು ಜಾರಿ ಸಂಸ್ಥೆಗಳು ಕೇಳುವ ಅಗತ್ಯ ಮಾಹಿತಿಯನ್ನು ನೀಡಲು ನಿರಾಕರಿಸುತ್ತಿದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌ಗೆ…

Read More

ಶಿವಮೊಗ್ಗ: ಒಬ್ಬ ಅಧಿಕಾರಿಗೆ ಇರಬೇಕಾದ ಅತ್ಯುನ್ನತ ಗುಣ ಯಾವುದು? ನಿಯಮಗಳ ಪಾಲನೆಯೋ ಅಥವಾ ಸಮಯಕ್ಕೆ ತಕ್ಕಂತೆ ತೋರುವ ಜಾಣ್ಮೆಯೋ? ಸಾಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಸದಾನಂದ ಸ್ವಾಮಿ.ಸಿ ಅವರು ಇಂದು ತೋರಿರುವ ಮಾನವೀಯತೆ ಮತ್ತು ಸಮಯ ಪ್ರಜ್ಞೆ ಇವೆರಡನ್ನೂ ಮೀರಿದ್ದು. ಎದೆ ನೋವಿನಿಂದ ನರಳುತ್ತಿದ್ದ ಶಾಲಾ ಬಾಲಕನೊಬ್ಬನಿಗೆ ತಕ್ಷಣವೇ ಸ್ಪಂದಿಸಿ, ತಮ್ಮದೇ ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಆತನ ಪ್ರಾಣ ರಕ್ಷಿಸಿ ಇಡೀ ಸಾರ್ವಜನಿಕ ವಲಯದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ನೋವಿನ ಹಿನ್ನೆಲೆ, ಸಾಂತ್ವನದ ಜರ್ನಿ: ಕೆಲವೇ ದಿನಗಳ ಹಿಂದಷ್ಟೇ ಸಾಗರ ತಾಲೂಕಿನ ಹಾಳಸಸಿ ಶಾಲೆಯ ಒಂದನೇ ತರಗತಿಯ ಮುಗ್ಧ ಬಾಲಕ ತ್ರಿಲೋಕ ಜೈನ್ ಎಂಬಾತ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈ ಕರುಣಾಜನಕ ಘಟನೆಯಿಂದ ನೊಂದಿದ್ದ ಬಿಇಓ ಸದಾನಂದ ಸ್ವಾಮಿ.ಸಿ ಹಾಗೂ ಅವರ ಸಿಬ್ಬಂದಿ ವರ್ಗದವರು ಬುಧವಾರ ತ್ರಿಲೋಕ ಜೈನ್ ಅವರ ಮನೆಗೆ ಭೇಟಿ ನೀಡಿ, ಹೆತ್ತವರಿಗೆ ಸಾಂತ್ವನ ಹೇಳಿ ಭಾರವಾದ ಮನಸ್ಸಿನಿಂದ ಹಿಂತಿರುಗುತ್ತಿದ್ದರು. ಹಾಗೆ ಮರಳುವಾಗ…

Read More

ಬೆಂಗಳೂರು: ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿರುವ ‘ಅದಿತ್ಯ ರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ನ್ಯಾಷನಲ್ ಸೇಲ್ಸ್ ಹೆಡ್ ಸಂದೀಪ್ ಗಿರಿಧರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶ ಹೊರಡಿಸಿದೆ. ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರಿಂದ ಬರೋಬ್ಬರಿ 211 ಕೋಟಿ ರೂ. ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಆರೋಪದ ಮೇಲೆ ಬಂಧನದ ಭೀತಿಯಲ್ಲಿದ್ದ ಸಂದೀಪ್ ಗಿರಿಧರ್ (ಪ್ರಕರಣದ 5ನೇ ಆರೋಪಿ) ಅವರಿಗೆ ಇದರಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮಾಸಿಕ ಶೇ. 5ರಷ್ಟು ಬಡ್ಡಿಯ ಆಮಿಷ! ಸಾರ್ವಜನಿಕರಿಗೆ ಮಾಸಿಕ ಶೇ. 5 ರಷ್ಟು ಭಾರಿ ಪ್ರಮಾಣದ ಬಡ್ಡಿ ಹಾಗೂ ಉಳಿತಾಯ ಠೇವಣಿಗೆ ನಿಶ್ಚಿತ ಆದಾಯದ ಆಸೆ ತೋರಿಸಿ ಈ ಕಂಪನಿಯು ಹೂಡಿಕೆ ಮಾಡಿಸಿಕೊಂಡಿತ್ತು. ಬೆಳಗಾವಿಯಲ್ಲಿ ‘ಶಿವಂ ಅಸೋಸಿಯೇಟ್ಸ್’ ಹೂಡಿಕೆ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ, ಈ ಆದಿತ್ಯ ರಾಜ್ ಕ್ಯಾಪಿಟಲ್ ಕಂಪನಿಯ ವಹಿವಾಟಿನ ಮೇಲೂ ಅಧಿಕಾರಿಗಳು ಕಣ್ಣಿಟ್ಟಿದ್ದರು. ಸಹಕಾರಿ ಸಂಘಗಳ…

Read More

ಧಾರವಾಡ: ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ವಿಶ್ವವಿದ್ಯಾಲಯದ (ಕವಿವಿ) ಸಸ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಪ್ರಾಧ್ಯಾಪಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಡೆಸಿದ ಹೈಡ್ರಾಮಾ ಮತ್ತು ಉಗ್ರ ಪ್ರತಿಭಟನೆಯ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ಇನ್‌ಸ್ಟಾಗ್ರಾಮ್ ಫೋಟೋಗಳಿಂದ ಬಯಲಾದ ಅಕ್ರಮ ಸಂಬಂಧ! ದೂರಿನ ಸಾರಾಂಶದ ಪ್ರಕಾರ, ಪ್ರೊ. ದೇವರಾಜನ್ ತಂಗುದೊರೈ ತಮ್ಮ ಬಳಿ ಪಿಹೆಚ್‌ಡಿ (PhD) ಸಂಶೋಧನೆ ಮಾಡಲು ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ವೈಯಕ್ತಿಕ ಹಾಗೂ ದೈಹಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಸಂಬಂಧದ ಕೆಲವು ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸದರಿ ವಿದ್ಯಾರ್ಥಿನಿ ತನ್ನ ಅಧ್ಯಯನವನ್ನು ಅರ್ಧಕ್ಕೇ ಕೈಬಿಟ್ಟು ವಿಶ್ವವಿದ್ಯಾಲಯದಿಂದ ತೆರಳಿದ್ದಾಳೆ. ಆದಾಗ್ಯೂ, ಆಕೆಯನ್ನು ಮರಳಿ ಕರೆಸುವಂತೆ ಪ್ರೊ. ತಂಗುದೊರೈ…

Read More

ಶಿವಮೊಗ್ಗ: “ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಅಧ್ಯಕ್ಷರು, ಬಿಎಲ್‌ಒಗಳು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಬೇಕು. ಇದರಲ್ಲಿ ಆಸಕ್ತಿ ವಹಿಸದಿದ್ದರೆ ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊರನಡೆಯಿರಿ” ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ‘ಬಂಗಾರಧಾಮ’ ಆವರಣದಲ್ಲಿ ಆಯೋಜಿಸಲಾಗಿದ್ದ ಮತದಾನ ಪರಿಷ್ಕರಣೆ ಜಾಗೃತಿ ಕುರಿತಾದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪ್ರಮುಖ ಮುಖಂಡರ ತುರ್ತು ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಬಿಜೆಪಿಯಿಂದ ಕಾಂಗ್ರೆಸ್ ನಿರ್ಮೂಲನೆಯ ಸಂಚು! ಸಭೆಯಲ್ಲಿ ಕಾರ್ಯಕರ್ತರನ್ನು ಎಚ್ಚರಿಸಿದ ಕಲಗೋಡು ರತ್ನಾಕರ್, “ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯನ್ನು (SIR) ಬಿಜೆಪಿ ತನಗೆ ಪೂರಕವಾಗಿ ಬಳಸಿಕೊಳ್ಳಲು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದೆ. ಆ ಪಕ್ಷದ ರಾಷ್ಟ್ರೀಯ ಮುಖಂಡರಾದ ನಿತಿನ್ ನಬಿ ಅವರು ದೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡುವ ಪಣ ತೊಟ್ಟಿದ್ದಾರೆ. ಈ ಹೊತ್ತಿನಲ್ಲಿ ನಮ್ಮ ಮುಖಂಡರು…

Read More

ಶಿವಮೊಗ್ಗ: ಸಾಗರದ ತಹಶೀಲ್ದಾರ್ ಆಗಿರುವಂತ ಡಾ.ಪ್ರತಿಭಾ ಅವರನ್ನು ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. ಆ ಮೂಲಕ ಹಲವು ವರ್ಷಗಳಿಂದ ಮುಂಬಡ್ತಿ ನಿರೀಕ್ಷೆಯಲ್ಲಿದ್ದಂತ ಅವರಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಕಳೆದ ಮೇ.27ರಂದು ಸಾಗರ ತಾಲ್ಲೂಕಿಗೆ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ಆ ಬಳಿಕ ಅವರು ಜೂನ್.3ರಂದು ಸಾಗರದ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇಂತಹ ಅವರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ರಾಜ್ಯ ಸರ್ಕಾರವು ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಒಟ್ಟು 232 ಅಧಿಕಾರಿಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರವು ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಮತ್ತು ನೌಕರರ ಅರ್ಹತೆಯನ್ನು ಗೌರವಿಸುವ ಸರ್ಕಾರದ ದೃಢ ಸಂಕಲ್ಪವನ್ನು ಬಿಂಬಿಸಿದೆ. ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಬಗ್ಗೆ ಸಂಕ್ಷಿಪ್ತ ಮಾಹಿತಿ ಡಾ.ಪ್ರತಿಭಾ ಅವರು ಶಿಕ್ಷಣ ತಜ್ಞೆ, ಸಾಹಿತ್ಯ ಕಳಕಳಿಯ ಚಿಂತಕಿ…

Read More

ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾದ ಆಡಳಿತಾತ್ಮಕ ಮೈಲುಗಲ್ಲೊಂದು ಸಾಕಾರಗೊಂಡಿದೆ. ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಅಧಿಕಾರಿಗಳ ಬಹುಕಾಲದ ಬೇಡಿಕೆಯನ್ನು ರಾಜ್ಯ ಸರ್ಕಾರವು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಆದೇಶ ಹೊರಡಿಸಿದೆ. ಇದು ಕೇವಲ ಒಂದು ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ರಾಜ್ಯದ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢ ಬದ್ಧತೆಗೆ ಸಾಕ್ಷಿಯಾಗಿದೆ. ಈ ಮಹತ್ವದ ನಿರ್ಧಾರದ ಹಿನ್ನೆಲೆ, ಉದ್ದೇಶ ಹಾಗೂ ಮುಂಬರುವ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಆಗಲಿರುವ ಜನಕೇಂದ್ರಿತ ಬದಲಾವಣೆಗಳ ಕುರಿತು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆಯ ಮನ್ನಣೆ ಹಾಗೂ ಮಾನಸಿಕ ಒತ್ತಡಕ್ಕೆ ಮುಕ್ತಿ ಕಳೆದ 5 ವರ್ಷಗಳಿಗೂ ಹೆಚ್ಚು ಕಾಲದಿಂದ ನಮ್ಮ ಕಂದಾಯ ಇಲಾಖೆಯ ಅನೇಕ ಸಮರ್ಥ ಹಾಗೂ ಪ್ರತಿಭಾವಂತ ಅಧಿಕಾರಿಗಳು, ತಮ್ಮ…

Read More

ಫ್ರಾನ್ಸ್: ಪಶ್ಚಿಮ ಏಷ್ಯಾದ ಯುದ್ಧಕ್ಕೆ ಮುಕ್ತಾಯ ಹಾಡಲು ಅಮೆರಿಕ ಮತ್ತು ಇರಾನ್ ನಡುವೆ ಒಪ್ಪಂದದ ಮಾತುಕತೆಗಳು ನಡೆಯುತ್ತಿದ್ದರೂ, ಅಮೆರಿಕದ ಆಕ್ರಮಣಕಾರಿ ಧೋರಣೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಫ್ರಾನ್ಸ್‌ನ ಇವಿಯಾನ್ ನಗರದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇರಾನ್ ಜವಾಬ್ದಾರಿಯುತವಾಗಿ ನಡೆದುಕೊಳ್ಳದಿದ್ದರೆ ನಾವು ತಕ್ಷಣವೇ ಅವರ ತಲೆಯ ಮೇಲೆಯೇ ಬಾಂಬ್ ದಾಳಿಗಳನ್ನು ಪುನರಾರಂಭಿಸುತ್ತೇವೆ” ಎಂದು ಅತ್ಯಂತ ಕಟು ಶಬ್ದಗಳಲ್ಲಿ ಎಚ್ಚರಿಸಿದ್ದಾರೆ. ಪಶ್ಚಿಮ ಏಷ್ಯಾದ ಸಂಘರ್ಷಕ್ಕೆ ಅಂತ್ಯ ಹಾಡಲು ಉಭಯ ದೇಶಗಳು ಸಮ್ಮತಿಸಿದ ಬೆನ್ನಲ್ಲೇ, ಇದೇ ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೆವಾದಲ್ಲಿ ಮಹತ್ವದ ತಿಳುವಳಿಕಾ ಒಪ್ಪಂದಕ್ಕೆ (MoU) ಸಹಿ ಹಾಕಲು ದಿನಾಂಕ ನಿಗದಿಯಾಗಿದೆ. ಆದರೆ ಈ ಒಪ್ಪಂದದ ಪ್ರಕ್ರಿಯೆಯ ಮಧ್ಯೆಯೇ ಟ್ರಂಪ್ ನೀಡಿರುವ ಹೇಳಿಕೆ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ‘ತಿಳುವಳಿಕಾ ಒಪ್ಪಂದವೇನೂ ಅಂತಿಮವಲ್ಲ!’ ಪ್ರಸ್ತಾವಿತ ಒಪ್ಪಂದದ ಕುರಿತು ಜಿ7 ಶೃಂಗಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ಇದು ಕೇವಲ ಒಂದು ತಿಳುವಳಿಕಾ ಒಪ್ಪಂದ (MoU) ಅಷ್ಟೇ, ಇದಿನ್ನೂ ಅಂತಿಮಗೊಂಡಿಲ್ಲ. ಒಂದು ವೇಳೆ…

Read More