Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಇತ್ತೀಚೆಗೆ ನಡೆದ ಸ್ಫೋಟದಲ್ಲಿ ಮಹಾರಾಷ್ಟ್ರದ ಸಂಭಾಜಿನಗರದಲ್ಲಿ (ಹಿಂದೆ ಔರಂಗಾಬಾದ್) ವಾಸಿಸುತ್ತಿದ್ದ ಮಹಿಳೆಯೊಬ್ಬರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಐಎಎಸ್ ಅಧಿಕಾರಿ ಎಂಬ ನಕಲಿ ಗುರುತಿನೊಂದಿಗೆ ವಾಸಿಸುತ್ತಿದ್ದ ಮಹಿಳೆ ಪಾಕಿಸ್ತಾನ ಸೇನೆಯೊಂದಿಗೆ ಮತ್ತು ಅಫ್ಘಾನಿಸ್ತಾನದ ಜನರೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ಸಂಭಾಜಿನಗರ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಕೆಯನ್ನು ಅವರು ತಂಗಿದ್ದ ಐಷಾರಾಮಿ ಹೋಟೆಲ್ನಿಂದ ಬಂಧಿಸಲಾಗಿದೆ. ಕಲ್ಪನಾ ಭಾಗವತ್ ಎಂದು ಕರೆದುಕೊಳ್ಳುವ ಮಹಿಳೆ ಬಾಂಬ್ ಸ್ಫೋಟಗಳು ನಡೆದ ಸಮಯದಲ್ಲಿ ದೆಹಲಿಯಲ್ಲಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಇಂದು ಅವರ ಬಂಧನಕ್ಕಾಗಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಅವರು ಕಳೆದ ಆರು ತಿಂಗಳಿನಿಂದ ಹೋಟೆಲ್ನಲ್ಲಿ ತಂಗಿದ್ದರು ಆದರೆ ಸ್ಫೋಟಗಳ ಸಮಯದಲ್ಲಿ ದೆಹಲಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾರೆಯೇ ಎಂದು ನಿರ್ಧರಿಸುವತ್ತ ತನಿಖೆ ಕೇಂದ್ರೀಕರಿಸುತ್ತದೆ ಮತ್ತು ದೆಹಲಿ ಸ್ಫೋಟ ಪ್ರಕರಣಕ್ಕೆ ಅವರ ಸಂಭಾವ್ಯ ಸಂಪರ್ಕಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದು ಪೊಲೀಸರು ಅವರ ಬಂಧನಕ್ಕೆ ಕೋರಿದ್ದಾರೆ. ಹೋಟೆಲ್ನಲ್ಲಿ ನಡೆದ ಶೋಧದ ಸಮಯದಲ್ಲಿ, ಆಕೆಯ…
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನುಡಿದಂತೆ ನಡೆದಿದ್ದಾರೆ. ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಸಚಿವ ಸಂಪುಟದಿಂದ ಅನುಮೋದನೆಯನ್ನು ಪಡೆದಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾನವೀಯ, ಬದ್ಧತೆಯ ಕಾರ್ಯ ಅನುಕರಣೀಯ ನಡೆ ಪ್ರಶಂಸಗೆ ಪಾತ್ರವಾಗಿದ್ದಾರೆ. ಕೋವಿಡ್ -19 ರ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಆಇ03 ಬಿಇಎಂ 2020, ದಿನಾಂಕ: 06.07.2020 ರನ್ವಯ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿರುತ್ತದೆ. ತದನಂತರ ದಿನಾಂಕ: 1.03.2024 ರ ಆದೇಶದಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಗೆ ಅನುಮೋದನೆ ನೀಡಲಾಗಿರುತ್ತದೆ. 2019 ರಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಕೇವಲ ಚಾಲಕರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ವಾಯವ್ಯ ಸಾರಿಗೆ ಸಂಸ್ಥೆಯ ಮನವಿ ಮೇರೆಗೆ, ಸಂಸ್ಥೆಯಲ್ಲಿ ನಿರ್ವಾಹಕರ ಕೊರತೆ ಇರುವುದರಿಂದ ಹಾಗೂ ವಿದ್ಯುತ್ ಚಾಲಿತ ಬಸ್ಸುಗಳು ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವುದರಿಂದ ನಿರ್ವಾಹಕ ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವ ಸಂಬಂಧ, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಲ್ಲಿ…
ಬೆಂಗಳೂರು: ಡಿಸೆಂಬರ್.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗೆ ಅಧಿವೇಶನದಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರಿಗೆ ಸರ್ಕಾರ ಸುವರ್ಣಸೌಧದಲ್ಲಿನ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ 08-12-2025ರಿಂದ ವಿಧಾನಮಂಡಲದ ಅಧಿವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ ಸಿಎಂ ಸಿದ್ಧರಾಮಯ್ಯ – 346, 347 ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ ಕಾನೂನು ಸಚಿವ ಹೆಚ್.ಕೆ ಪಾಟೀಲ್ – 303, 303ಎ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ –…
ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿತರಿಸಿದ್ದಾರೆ. ಇಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದ ಹೈಲೈಟ್ಸ್ ಮುಂದಿದೆ ಓದಿ. • ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. • ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು. • ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ…
ಬೆಂಗಳೂರು: ಗಂಡ ಎಂಬ ಪದವು ಐಪಿಸಿ ಸೆಕ್ಷನ್ 498ಎ( ಮದುವೆಯಾದ ಮಹಿಳೆಯ ಮೇಲಿನ ಕ್ರೌರ್ಯ ಮತ್ತು ಹಿಂಸೆ) ಅಲ್ಲಿ ಬಳಸಿರುವುದು ಕೇವಲ ಕಾನೂನು ಬದ್ಧವಾಗಿ ವಿವಾಹವಾದ ಸಂಬಂಧಕ್ಕೆ ಮಾತ್ರ ಸೀಮಿತವಾಗೋದಿಲ್ಲ. ಅದು ಲಿವ್-ಇನ್-ರಿಲೇಷನ್ ಶಿಪ್ ಗಳಿಗೂ ಅನ್ವಯಿಸಲಿದೆ ಎಂಬುದಾಗಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ. ಈ ಕುರಿತಂತೆ ಅರ್ಜಿಯೊಂದರ ವಿಚಾರಣೆಯ ವೇಳೆಯಲ್ಲಿ ಈ ಅಂಶವನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅದರಲ್ಲಿ ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ಬಳಸಿರುವಂತ ಗಂಡ ಎಂಬ ಪದವು ಕೇವಲ ಕಾನೂನು ಬದ್ಧವಾಗಿ ಮಾನ್ಯವಾದಂತ ವಿವಾಹ ಸಂಬಂಧಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ಲಿವ್-ಇನ್ ರಿಲೇಷನ್ ಶಿಪ್ ಗಳಿಗೂ ಅನ್ವಯಿಸುತ್ತದೆ ಎಂಬುದಾಗಿ ತಿಳಿಸಿದೆ. ಇದಷ್ಟೇ ಅಲ್ಲದೇ ವಿವಾಹದ ಸ್ವರೂಪದ ಸಂಬಂಧಗಳಿಗೂ ಕ್ರೌರ್ಯದ ವಿಚಾರದಲ್ಲಿ ಐಪಿಸಿ ಸೆಕ್ಷನ್ 498ಎ ಅನ್ವಯವಾಗಲಿದೆ ಎಂಬುದಾಗಿ ಅಭಿಪ್ರಾಯ ಪಟ್ಟಂತ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಅವರಿದ್ದಂತ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿತು. ಹೈಕೋರ್ಟ್ ಗೆ ದೂರುದಾರೆಯೊಂದಿಗೆ ಅರ್ಜಿದಾರನ ವಿವಾಹ ಕಾನೂನಾತ್ಮಕವಾಗಿ ಅಮಾನ್ಯವಾಗಿದೆ. ಹೀಗಾಗಿ 498ಎ ಅನ್ವಯಿಸೋದಿಲ್ಲ ಎಂಬುದಾಗಿ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಜೋರಾಗಿದೆ. ಒಂದೊಂದು ಗುಂಪು ಒಂದೊಂದು ರೀತಿಯಲ್ಲಿ ಪರ ವಿರೋಧದ ಮಾತುಗಳನ್ನಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಿಲ್ಲ ಎನ್ನುವ ಹಿಂದಿನ ಸಿಕ್ರೇಟ್ ಅನ್ನು ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ರಿವೀಲ್ ಮಾಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಈ ಕುರಿತಂತೆ ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದಲ್ಲಿ, ಹಲವಾರು ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳಬಹುದೆಂಬ ಭೀತಿಯಲ್ಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಹಾಗಾಗಿ, ಅವರಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ವಿರೋಧ ವ್ಯಕ್ತವಾಗುವುದು ಸಹಜ ಮತ್ತು ನಿರೀಕ್ಷಿತ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೇ, ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳುವಂತ ಗುಟ್ಟು ರಿವೀಲ್ ಮಾಡಿದ್ದಾರೆ. https://twitter.com/Sanket_Yenagi/status/1993908898877915447?t=h5-UXMQzmgQ374KY08GhuA&s=19 https://kannadanewsnow.com/kannada/there-are-no-allegations-against-our-father-no-power-sharing-formula-has-been-formed-dr-yathindra/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/…
ಮೈಸೂರು: ನನ್ನ ತಂದೆ ಸಿದ್ಧರಾಮಯ್ಯ ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿಸುವುದಕ್ಕೂ ಯಾವುದೇ ಕಾರಣಗಳೂ ಇಲ್ಲ. ಹೀಗಾಗಿ ನನ್ನ ತಂದೆ ಉಳಿದ ಎರಡೂವರೆ ವರ್ಷದ ಅವಧಿಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಂದತ ಅವರು, ಸಿದ್ಧರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಚರ್ಚೆ ಸರಿಯಲ್ಲ. ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೇ ಅದನ್ನು ನಿರ್ಧರಿಸೋದು ಕಾಂಗ್ರೆಸ್ ಹೈಕಮಾಂಡ್ ಆಗಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾದದ್ದು ಎಂದರು. ನನಗೆ ಮಾಹಿತಿ ಇರುವಂತೆ ಎಲ್ಲಿಯೂ ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ. ನಮ್ಮ ತಂದೆಯವರಾಗಲೀ, ಕೆಲ ಹಿರಿಯ ಸಚಿವರಾಗಲೀ ಈ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಅಲ್ಲಿಗೆ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲವೆಂದು ಅರ್ಥ ತಾನೆ ಅಂತ ಪ್ರಶ್ನಿಸಿದರು. ಸಿಎಂ ಯಾರನ್ನು ಮಾಡಬೇಕು, ಮಾಡಬಾರದು ಎಂಬುದು ನಮ್ಮ ಶಾಸಕರು, ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಅದರ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂಬುದಾಗಿ…
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಯಾರಾದರೂ ಓಕೆ ನನಗೆ. ಆದರೇ ಜನರಿಗೆ ಒಳ್ಳೇದಾಗಬೇಕು ಅಷ್ಟೇ ಎಂಬುದಾಗಿ ನಟಿ ರಮ್ಯಾ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯನ್ನು ನಾನು ಡಿಸೈಡ್ ಮಾಡೋದಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹಿರಿಯ ನಾಯಕರಿದ್ದಾರೆ. ನನಗೆ ಯಾರದರೂ ಓಕೆ, ರಾಜ್ಯಕ್ಕೆ ಒಳ್ಳೇದಾಗಬೇಕು ಎಂದರು. ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಹುಹ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ನಿರ್ಧರಿಸುತ್ತಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/no-situation-has-arisen-in-the-state-to-change-the-chief-minister-dr-yathindra-siddaramaiah/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಿಸುವಂತ ಪರಿಸ್ಥಿತಿ ಉದ್ಭವಿಸಿಲ್ಲ. ಸಿದ್ಧರಾಮಯ್ಯ ವಿರುದ್ಧ ಯಾವುದೇ ಹಗರಣದ ಆರೋಪವಿಲ್ಲ. ಸಿಎಂ ಬದಲಿಸಬೇಕು ಅಂದರೆ ಏನಾದ್ರೂ ಹಗರಣ ನಡೆದಿರಬೇಕು ಎಂಬುದಾಗಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಅವರನ್ನು ಬದಲಿಸೋ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಯಾವುದೇ ಅಕ್ರಮದ ಆರೋಪವಿಲ್ಲ. ಹಾಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ ಎಂಬುದಾಗಿ ತಿಳಿಸಿದರು. ಯಾರೋ ಒಂದಿಬ್ರು ಸಿಎಂ ಬದಲಾವಣೆ ಆಗಬೇಕು ಅಂತಿದ್ದಾರೆ ಅಷ್ಟೇ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಪಕ್ಷದ ಕಾರ್ಯಕರ್ತನಾಗಿ, ಪರಿಷತ್ ಸದಸ್ಯನಾಗಿ ಹೇಳಬೇಕು ಅಂದರೇ ಈಗಿರುವ ಪರಿಸ್ಥಿತಿ ನೋಡಿದರೇ ಸಿದ್ಧರಾಮಯ್ಯ ಐದು ವರ್ಷ ಪೂರೈಸುತ್ತಾರೆ. ಅದರಲ್ಲಿ ನೋ ಡೌಟ್ಸ್ ಎಂದರು. https://kannadanewsnow.com/kannada/delhi-road-transport-corporation-managing-director-team-of-officials-visit-ksrtc-office-in-bengaluru/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/
ಬೆಂಗಳೂರು: ಇಂದು ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿತೇಂದ್ರ ಯಾದವ್, ಭಾಆಸೇ., ಮತ್ತು ಅಧಿಕಾರಿಗಳ ತಂಡವು ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಭಾಆಸೇ., ಅವರನ್ನು ಕೆ.ಎಸ್.ಆರ್.ಟಿ.ಸಿ, ಕೇಂದ್ರ ಕಛೇರಿಯಲ್ಲಿ ಭೇಟಿ ನೀಡಿದರು. ಕೆ ಎಸ್ ಆರ್ ಟಿ ಸಿ ನಿಗಮದಲ್ಲಿ ವಾಹನಗಳ ಸುಗಮ ಕಾರ್ಯಾಚರಣೆ, ವಾಹನಗಳ ತಾಂತ್ರಿಕ ನಿರ್ವಹಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಹೆಚ್.ಆರ್.ಎಂ.ಎಸ್., ಬಸ್ ನಿಲ್ದಾಣ/ ಘಟಕಗಳ ಕಾಮಗಾರಿ ಪದ್ಧತಿ, ಬಸ್ಸುಗಳ ಬ್ರ್ಯಾಂಡಿಂಗ್, ಬಸ್ಸುಗಳ ಪುನಶ್ವೇತನ ಕಾರ್ಯ, ಬಸ್ ನಿಲ್ದಾಣದ ಸ್ವಚ್ಛತೆ ಮತ್ತು ಇತರೆ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮುಖಾಂತರ ಮಾಹಿತಿ ನೀಡಿದರು. ನಿಗಮದಲ್ಲಿನ ಹೆಚ್.ಆರ್.ಎಂ.ಎಸ್., ತಂತ್ರಜ್ಞಾನವನ್ನು ಮುಂದಿನ ದಿನಗಳಲ್ಲಿ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಳವಡಿಸಿಕೊಳ್ಳುವುದಾಗಿ ತಿಳಿಸಿದರು. ಬಸ್ಸುಗಳ ಪುನಶ್ಚೇತನ ಕಾರ್ಯಕ್ಕೂ ಸಹ ಮೆಚ್ಚುಗೆ ವ್ಯಕ್ತಪಡಿಸಿದರು. ಕೆ ಎಸ್ ಆರ್ ಟಿ ಸಿ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು…














