Author: kannadanewsnow09

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಪಾಕಿಸ್ತಾನವನ್ನು ಟೀಂ ಇಂಡಿಯಾ ಬಗ್ಗು ಬಡೆದಿದೆ. ಶ್ರೀಲಂಕಾದ ಕೊಲಂಬೋದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಈ ಪಂದ್ಯದಲ್ಲಿ ಭಾರತವು ಭರ್ಜರಿ ಗೆಲುವು ಸಾಧಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಗೆಲುವು ಸಾಧಿಸಿದೆ. ಭಾರತದ ವೇಗ, ಸ್ಪಿನ್ ಮೋಡಿಗೆ ಪಾಕಿಸ್ತಾನದ ಬ್ಯಾಟರ್ ಗಳು ತತ್ತರಿಸಿ ಹೋಗಿದ್ದಾರೆ. ಬೂಮ್ರಾ, ಹಾರ್ದಿಕ್, ಅಕ್ಷರ್, ವರುಣ್ ಗೆ ತಲಾ ಎರಡು ವಿಕೆಟ್ ಬಿದ್ದಿವೆ. ಭಾರತ 175 ರನ್ ಅನ್ನು 7 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ ಪೇರಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದಂತ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸಿ ಆಲ್ ಔಟ್ ಆಗಿ ಸೋಲು ಕಂಡಿತು. ಆ ಮೂಲಕ ಭಾರತವು ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದಂತೆ ಆಗಿದೆ.

Read More

ಬೆಂಗಳೂರು: ಒಳ‌‌ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ‌ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ‌ ವತಿಯಿಂದ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಾವಣಗೆರೆಯ ಸೂರಗೊಂಡನಕೊಪ್ಪದಲ್ಲಿನ ಸೇವಾಲಾಲ್ ಜಯಂತಿ ವೇಳೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಇದೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಮಿಯೊಂದನ್ನು‌ ಮಾಡಿದ್ದು,‌ ಸಮಿತಿ‌ ಕಾರ್ಯನ್ಮೋಕವಾಗಿದೆ ಎಂದು ತಿಳಿಸಿದರು.‌ ನಾವು- ನೀವು ಒಂದೇ‌ ತಕ್ಕಡಿಯಲ್ಲಿದ್ದೇವೆ. ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಇದಕ್ಕೆ ಯಾರು ಹೆದರುವ ಅಗತ್ಯವಿಲ್ಲ ಎಂದರು.‌ ಪ್ರತಿಯೊಂದು ತಾಂಡಾ ಕಂದಾಯ ಗ್ರಾಮ: ರಾಜ್ಯದಲ್ಲಿನ ಪ್ರತಿಯೊಂದು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಆ ಕೆಲಸ ಪ್ರಾರಂಭಗೊಂಡಿದೆ.…

Read More

ಚಿಕ್ಕಮಗಳೂರು: ಟಿವಿ ನೋಡುವುದು ಕಡಿಮೆ ಮಾಡು ಎಂದಿದ್ದಕ್ಕೆ ಬಾಲಕಿಯೊಬ್ಬಳು ವೇಲ್ ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ತಾಯಿ ಬೈದಿದ್ದರು. ಇದರಿಂದಾಗಿ ನೊಂದಂತ ಬಾಲಕಿ ಸುಪ್ರಿತಾ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರತಿ ದಿನ ಟಿವಿ ನೋಡುತ್ತ ಬಾಲಕಿ ಸುಪ್ರಿತಾ ಊಟ ಮಾಡುತ್ತಿದ್ದಳು. ಇಂದು ಕೂಡ ಹಾಗೆಯೇ ಊಟ ಮಾಡುತ್ತಿದ್ದಾಗ ಬಾಲಕಿ ಸುಪ್ರಿತಾ ಕೈಯಿಂದ ತಟ್ಟೆ ಕೆಳಗೆ ಬಿದ್ದಿತ್ತು. ಇದರಿಂದ ಕೋಪಗೊಂಡಂತ ಸುಪ್ರಿತಾ ತಾಯಿ ಟಿವಿ ನೋಡುವುದನ್ನು ಕಡಿಮೆ ಮಾಡು ಎಂಬುದಾಗಿ ಬುದ್ಧಿ ಹೇಳಿದ್ದರು. ಸುಪ್ರಿತಾ ತಾಯಿ ಕೆಲಸಕ್ಕೆ ಹೋದಂತ ಸಂದರ್ಭದಲ್ಲಿ ಮನನೊಂದು ವೇಲ್ ನಿಂದ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/removal-of-dangerous-dry-trees-branches-and-twigs-in-bengaluru/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಬೆಂಗಳೂರು : ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿದ/ಅಪಾಯಕಾರಿ ಮರಗಳು ಮತ್ತು ರೆಂಬೆ-ಕೊಂಬೆಗಳ ತೆರವು ಕಾರ್ಯಾಚರಣೆ ನಡೆಸಿದ್ದಾಗೆ ಆಯುಕ್ತರಾದಂತ ರಾಜೇಂದ್ರ ಚೋಳನ್ ಮಾಹಿತಿ ನೀಡಿದ್ದಾರೆ. ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ರವರ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ರಸ್ತೆಗಳಲ್ಲಿ, ಉದ್ಯಾನವನಗಳಲ್ಲಿ ಹಾಗೂ ಕೆರೆಗಳಲ್ಲಿ ಕೇಂದ್ರ ನಗರ ಪಾಲಿಕೆಯ ಅರಣ್ಯ ಘಟಕದಿಂದ 02-09-2025 ರಿಂದ ಇಲ್ಲಿಯವರೆಗೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಒಣಗಿದ ಹಾಗೂ ಅಪಾಯಕಾರಿ ಮರಗಳು ಮತ್ತು ಒಣಗಿದ ಹಾಗೂ ಅಪಾಯಕಾರಿ ರೆಂಬೆ-ಕೊಂಬೆಗಳ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ವಲಯವಾರು ತೆರವುಗೊಳಿಸಿದ ಮರ, ರೆಂಬೆ ಕೊಂಬೆಗಳ ವಿವರಗಳು ಕೆಳಗಿನಂತಿವೆ: ವಲಯ-1 ರ ಸಿ.ವಿ. ರಾಮನ್ ನಗರ ವ್ಯಾಪ್ತಿಯಲ್ಲಿ: * ಒಣಗಿದ ಮರಗಳು – 20 * ಒಣಗಿದ ರೆಂಬೆ-ಕೊಂಬೆಗಳು – 193 * ಅಪಾಯಕಾರಿ ಮರಗಳು – 10 * ಅಪಾಯಕಾರಿ ಕೊಂಬೆಗಳು –159 ವಲಯ-2 ರ ಗಾಂಧಿನಗರ ವ್ಯಾಪ್ತಿಯಲ್ಲಿ * ಒಣಗಿದ ಮರಗಳು…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು. ಸಂಘದ ಮನವಿಗೆ ಪ್ರತಿಕ್ರಿಯಿಸಿದ ಸಭಾಪತಿ ಹೊರಟ್ಟಿ ಅವರು, ಇದೇ 23ಕ್ಕೆ ಬೀದರ್ ಬರುತ್ತಿದ್ದೇನೆ. ಈ ಸಂದರ್ಭದಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ಬೀದರ್ ಪತ್ರಿಕಾ ಭವನದಲ್ಲಿ ಫೆ.23ಕ್ಕೆ ಆಯೋಜಿಸುವ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಾಗಿ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಿಂದೆ ಆಯೋಜಿಸಿದ್ದ ರಾಜ್ಯ ಸಮ್ಮೇಳನಕ್ಕೆ ಬಂದಿದ್ದೇನೆ. ಬೀದರ್ ಸಮ್ಮೇಳನಕ್ಕೂ ಬರುವೆ ಎಂದು ಹೇಳಿದರು. ಕೆಯುಡಬ್ಲ್ಯೂಜೆ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಘಕದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ, ಸಮಿತಿ ಸದಸ್ಯರಾದ ಅಪ್ಪಾರಾವ ಸೌದಿ, ಪತ್ರಕರ್ತ ನಂದಕುಮಾರ ಕರಂಜಿ, ಮಂಡ್ಯ ಜಿಲ್ಲಾ ಮಾಜಿ ಅಧ್ಯಕ್ಷ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://kannadanewsnow.com/kannada/mla-gopalakrishna-belurs-statement-welcomed-by-farmers-on-the-banks-of-sharavati-river-g-t-satyanarayana/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಬೆಂಗಳೂರು : ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ 30 ಕೆಜಿ ವರೆಗೆ ಲಗೇಜ್ ಉಚಿತವಾಗಿದೆ. ಅದರ ನಂತರದ ಲಗೇಜಿಗೆ ದರ ವಿಧಿಸುವುದಾಗಿ ನಿಗಮ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಕೆ ಎಸ್ ಆರ್ ಟಿ ಸಿ ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯೂ ಲಗೇಜು ದರ ಏರಿಕೆ‌ ಬಸ್ ಪ್ರಯಾಣ‌ ದರ‌ ಏರಿಕೆಯೊಂದಿಗೆ ಆಗುತ್ತದೆ. ಕಳೆದ ವರ್ಷ ಜನವರಿ 2025 ರಂದು ಬಸ್ ಪ್ರಯಾಣ ದರ ಏರಿಕೆ‌ಯಾಗಿತ್ತು, ಆದರೆ ಲಗೇಜು ದರ‌ ಏರಿಕೆ‌ ಮಾಡಿರಲಿಲ್ಲ. ಆ ಸಂಬಂದ ನಾಳೆಯಿಂದ ಜಾರಿಗೆ ಬರುವಂತೆ ಲಗೇಜು ದರ ಏರಿಕೆಯಾಗಿದೆ‌ ಎಂದಿದೆಮ 30 kg ವರೆಗೂ ಉಚಿತ,‌ನಂತರ ದರ ಅನ್ವಯಿಸುತ್ತದೆ ಈ‌ ಹಿಂದೆ ಲಗೇಜು ದರ ಡಿಸೆಂಬರ್ 2021 ರಲ್ಲಿ ಏರಿಕೆಯಾಗಿತ್ತು. ಈಗ ಏರಿಕೆ ಮಾಡಲಾಗಿದೆ. 30 ಕೆಜಿ ವರೆಗೆ ಲಗೇಜ್ ಉಚಿತವಾಗಿದೆ. ಆ ಬಳಿಕದ ಲಗೇಜ್ ಗೆ ಮಾತ್ರ ನಾಳೆಯಿಂದ ಜಾರಿಯಾಗುವ ಲಗೇಜ್ ದರ ಅನ್ವಹಿಸಲಿದೆ ಎಂದು ತಿಳಿಸಿದೆ. ಯಾವಾಗಲೂ…

Read More

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಯಾರನ್ನೂ ತೆರವುಗೊಳಿಸೋದಿಲ್ಲ. ಕೆಪಿಸಿ ಭೂಮಿ ಇರಲಿ, ಅರಣ್ಯ ಭೂಮಿ ಆದರೂ ಸರಿಯೇ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು ಹೇಳಿದ್ದರು. ಆ ಮೂಲಕ ಯಡಮನೆ ಜನರ ಬೆನ್ನಿಗೆ ನಿಂತಿದ್ದರು. ಇಂತಹ ಶಾಸಕರ ಇಂದಿನ ಹೇಳಿಕೆಯನ್ನು ಶರಾವತಿ ನದಿ ದಂಡೆ ರೈತರು ಸ್ವಾಗತಿಸುತ್ತೇವೆ ಎಂಬುದಾಗಿ ಕೆಡಿಪಿ ಸದಸ್ಯ, ಕಾಂಗ್ರೆಸ್ ಮುಖಂಡ ಜಿ.ಟಿ ಸತ್ಯನಾರಾಯಣ ಅವರು ತಿಳಿಸಿದ್ದಾರೆ. ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಮಾತನಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವಂತ ಜಿ.ಟಿ ಸತ್ಯನಾರಾಯಣ ಅವರು, ಶರಾವತಿ ಸಂತ್ರಸ್ತರ ಭೂಮಿ ಸಮಸ್ಯೆ ಅಂದರೆ ಇಲ್ಲಿಂದ ಮುಳುಗಡೆ ಆಗಿ ಅನಿವಾರ್ಯವಾಗಿ ಬೇರೆ ಕಡೆ ಹೋದವರ ಸಮಸ್ಯೆ ಎನ್ನುವುದು ಇಲ್ಲಿಯ ತನಕ ಸರ್ಕಾರ ನೋಟ ಆಗಿದೆ. ವಾಸ್ತವದಲ್ಲಿ ಮುಳುಗಡೆ ಆಗದೇ ಉಳಿದ ನದಿ ದಂಡೆಯಲ್ಲಿ 10-12 ಸಾವಿರ ಕುಟುಂಬ ಕೃಷಿ ಮಾಡಿಕೊಂಡು ಬದುಕಿವೆ… ಅವರಿಗೆ ಭೂಮಿ ಹಕ್ಕು ನೀಡಬೇಕು ಎಂದಿದ್ದಾರೆ.…

Read More

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವಂತ ಘಟನೆ ದಾಬಾಸ್ ಪೇಟೆ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ದಾಬಾಸ್ ಪೇಟೆ ಬಳಸಿಯ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿಯಲ್ಲಿ ಬಿಎಂಟಿಸಿ ಬಸ್ ಬೈಕಿಗೆ ಡಿಕ್ಕಿಯಾದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೇ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮೃತರ ಬಗ್ಗೆ ವಿವರ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/om-birla-to-attend-tarique-rahmans-swearing-in-ceremony-in-bangladesh-sources/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More

ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಅನೇಕ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಕೂದಲು ಸಂಬಂಧಿತ ಸಮಸ್ಯೆಯೂ ಒಂದು. ಇಂದಿನ ಕಾಲದಲ್ಲಿ ಚಿಕ್ಕ ಮಕ್ಕಳು ಸಹ ಕೂದಲು ಉದುರುವಿಕೆ ಮತ್ತು ಬೂದುಬಣ್ಣವನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಇದು ಜೀವನಶೈಲಿಯಲ್ಲಿನ ಬದಲಾವಣೆಗಳಿಂದಾಗಿ. ಈ ಜೀವನಶೈಲಿಯ ಬದಲಾವಣೆಗಳನ್ನು ಬದಲಾಯಿಸುವುದರ ಜೊತೆಗೆ, ನಾವು ನಮ್ಮ ಕೂದಲನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದರೆ, ನಮಗೆ ಯಾವುದೇ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳು ಇರುವುದಿಲ್ಲ. ಈ ವಿಭಾಗದಲ್ಲಿ, ಕೂದಲು ಉದುರುವಿಕೆಯನ್ನು ನಿವಾರಿಸಲು ಮತ್ತು ಕಪ್ಪು, ದಪ್ಪ ಕೂದಲನ್ನು ಪಡೆಯಲು ತಯಾರಿಸಬಹುದಾದ ಎಣ್ಣೆಯನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ…

Read More

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶ ಮಾಡಿದ್ದು, ಪ್ರಯಾಣಿಕರ ರಹಿತವಾಗಿ ಸಾಗಿಸುವ ಲಗೇಜ್ ದರದಲ್ಲಿ ಪರಿಷ್ಕರಣೆ ಮಾಡಿದ್ದಾರೆ. 1-5 ಸ್ಟೇಜ್ ವರೆಗೆ 6 ರೂಪಾಯಿ, 6-12 ಸ್ಟೇಜ್ ವರೆಗೆ 12 ರೂಪಾಯಿ, 156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದ್ದಾರೆ. 2021ರಲ್ಲಿ ಪ್ರಯಾಣಿಕ ರಹಿತ ಲಗೇಜ್ ದರ ಏರಿಕೆಯಾಗಿತ್ತು. ಟಿಕೆಟ್ ದರ ಪರಿಷ್ಕರಣೆಯಾದಗ ಲಗೇಜ್ ದರ ಹೆಚ್ಚಿಸಿರಲಿಲ್ಲ. ಹೀಗಾಗಿ ಈಗ ನಾಳೆಯಿಂದ ಜಾರಿಗೆ ಬರುವಂತೆ ಪ್ರಯಾಣಿಕರ ರಹಿತ ಲಗೇಜ್ ದರವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿ ಸಿ ಎಂ.ಡಿ ಅಕ್ರಂ ಪಾಷಾ ಆದೇಶಿಸಿದ್ದಾರೆ. https://kannadanewsnow.com/kannada/minister-dinesh-gundu-raos-letter-to-union-minister-shivraj-singh-chouhan-for-fixing-minimum-support-price-msp-for-rubber/ https://kannadanewsnow.com/kannada/vijayendra-visits-mla-bhairati-basavarajs-house-bjp-state-president-reassures-family/

Read More