Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಕ್ಷಣ ಹತ್ತಿರವಾಗಿದ್ದು, ನಾಳೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಅದ್ಧೂರಿ ರಾಜಕೀಯ ಸಮಾರಂಭಕ್ಕೆ ಸಾಕ್ಷಿಯಾಗಲಿರುವ ಗಣ್ಯಾತಿಗಣ್ಯರ ಹಾಗೂ ವಿಶೇಷ ಆಹ್ವಾನಿತರ ಅಧಿಕೃತ ಪಟ್ಟಿ ಸಿದ್ಧವಾಗಿದೆ. ಕೇವಲ ರಾಜಕೀಯ ಮುಖಂಡರಷ್ಟೇ ಅಲ್ಲದೆ, ಸಮಾಜದ ಎಲ್ಲಾ ಸ್ತರದ ಜನರನ್ನು ಒಳಗೊಂಡ ವಿಶಿಷ್ಟ ಆಹ್ವಾನಿತರ ಪಟ್ಟಿ ಇದಾಗಿದೆ. ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಮುಖ ಆಹ್ವಾನಿತರ ವಿವರ ಈ ಕೆಳಗಿನಂತಿದೆ: ಹೈಕಮಾಂಡ್ ಮತ್ತು ರಾಜಕೀಯ ಗಣ್ಯರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ದಂಡೇ ಈ ಸಮಾರಂಭಕ್ಕೆ ಸಾಕ್ಷಿಯಾಗಲಿದೆ. ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹೂಲ್ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ (PCC) ಅಧ್ಯಕ್ಷರುಗಳು ಹಾಗೂ ಸಂಸದರು ವಿಶೇಷ ಆಹ್ವಾನಿತರು: ಡಿಕೆಶಿ ಶಾಲಾ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಕ್ರಾಸ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಖಾಸಗಿ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ. ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಆತಂಕದಿಂದ ಕಿರುಚಾಡಿದ್ದಾರೆ. ಅದೃಷ್ಟವಶಾತ್, ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದ್ದು, ಪ್ರಯಾಣಿಕರು ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ. ಖಾಸಗಿ ಬಸ್ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರೆಳುತ್ತಿತ್ತು ಎನ್ನಲಾಗಿದೆ. ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಆನಂದಪುರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದು, ಘಟನಾ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರಸ್ತೆಯಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ಸುಗಮಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತಕ್ಕೆ ಚಾಲಕನ ಅತಿವೇಗ ಕಾರಣವೇ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಇತಿಹಾಸ ಸೃಷ್ಟಿಯಾಗುತ್ತಿದ್ದು, ನಾಳೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಈ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬರೋಬ್ಬರಿ 10 ಲಕ್ಷ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ! ನೆಲಮಂಗಲದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಈ ಬೃಹತ್ ಲಾಡು ತಯಾರಿಕಾ ಕಾರ್ಯ ಭರದಿಂದ ಸಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ನರಸಿಂಹಮೂರ್ತಿ ಅವರ ನೇತೃತ್ವದಲ್ಲಿ ಈ ಮೆಗಾ ಲಾಡು ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದೆ. 250ಕ್ಕೂ ಹೆಚ್ಚು ಬಾಣಸಿಗರಿಂದ ಅಹೋರಾತ್ರಿ ಕೆಲಸ! ಹತ್ತು ಲಕ್ಷ ಲಾಡುಗಳನ್ನು ಅತ್ಯಂತ ರುಚಿಕರವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿದ್ಧಪಡಿಸಲು ತಿರುಪತಿಯಿಂದ ಆಗಮಿಸಿರುವ ವಿಶೇಷ ಪರಿಣಿತರು ಸೇರಿದಂತೆ ಒಟ್ಟು 250ಕ್ಕೂ ಹೆಚ್ಚು ಪ್ರಸಿದ್ಧ ಬಾಣಸಿಗರು (ಅಡುಗೆ ಭಟ್ಟರು) ಅಹೋರಾತ್ರಿ ಶ್ರಮಿಸುತ್ತಿದ್ದಾರೆ. ಲಾಡು ತಯಾರಿಕೆಗೆ ಬಳಕೆಯಾಗುತ್ತಿರುವ ಬೃಹತ್…
ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಂಪುಟ ರಚನೆಯ ಕಸರತ್ತು ತೀವ್ರಗೊಂಡಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ನಡೆಸಿದ ಸರಣಿ ಸಭೆಗಳ ಬಳಿಕ, ಸಚಿವರಾಗಲಿರುವ ಶಾಸಕರ ಮೊದಲ ಪಟ್ಟಿ ಬಹುತೇಕ ಬಹಿರಂಗಗೊಂಡಿದೆ. ಮೂಲಗಳ ಪ್ರಕಾರ, ಬುಧವಾರ ನಡೆಯಲಿರುವ ಸುದೀರ್ಘ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಒಟ್ಟು 14 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಚಿವರ ಆಯ್ಕೆ ಕುರಿತು ಹೈಕಮಾಂಡ್ ನಾಯಕರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯ ಮುಖಾಂತರ ಇದುವರೆಗೆ ಒಟ್ಟು 12 ಪ್ರಮುಖ ನಾಯಕರ ಹೆಸರುಗಳು ಅಂತಿಮಗೊಂಡಿವೆ ಎನ್ನಲಾಗಿದ್ದು, ಇಂದು ರಾತ್ರಿ 9 ಗಂಟೆಯ ವೇಳೆಗೆ ಸಚಿವರ ಸಂಪೂರ್ಣ ಹಾಗೂ ಅಧಿಕೃತ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ. ನೂತನ ಸಚಿವರ ಸಂಭಾವ್ಯ ಪಟ್ಟಿ ಇಲ್ಲಿದೆ: ಕಾಂಗ್ರೆಸ್ ವಲಯದಲ್ಲಿ ಸದ್ಯಕ್ಕೆ ಕೇಳಿಬರುತ್ತಿರುವ ಹಾಗೂ ಅಂತಿಮಗೊಂಡಿದೆ ಎನ್ನಲಾದ ಪ್ರಮುಖ 12 ಸಚಿವರ ಹೆಸರುಗಳು ಈ ಕೆಳಗಿನಂತಿವೆ:…
ಶಿವಮೊಗ್ಗ: ರಾಜಕೀಯ ನಾಯಕರನ್ನು ಇಷ್ಟಪಡುವ, ಆರಾಧಿಸುವ ಅಭಿಮಾನಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರದ ನಾಗರಾಜ್ ಗುಡ್ಡೇಮನೆ ಅವರ ಅಭಿಮಾನ ಮಾತ್ರ ನಿಜಕ್ಕೂ ವಿಶಿಷ್ಟ ಮತ್ತು ಅನನ್ಯ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಪ್ಪಟ ಅಭಿಮಾನದಿಂದಾಗಿ ನಾಗರಾಜ್ ಅವರು ತಮ್ಮ ಎರಡು ಕೈಗಳ ಭುಜಗಳ ಮೇಲೆ ಡಿ.ಕೆ.ಶಿ ಅವರ ಚಿತ್ರವನ್ನು ಟ್ಯಾಟೋ (ಹಚ್ಚೆ) ಹಾಕಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನದ ಭಕ್ತಿಯನ್ನು ಮೆರೆದಿದ್ದಾರೆ. 8 ಗಂಟೆಗಳ ಕಾಲ ನೋವು ಭರಿಸಿ ಹಚ್ಚೆ! ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಇಡಿ (ED) ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲು ಸೇರಿ, ಬಳಿಕ ಬಿಡುಗಡೆಯಾದ ದಿನವೇ ನಾಗರಾಜ್ ಈ ಸಾಹಸಕ್ಕೆ ಕೈಹಾಕಿದ್ದರು. ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆಯಾದ ಅದೇ ದಿನದಂದು, ಸಾಗರದಲ್ಲಿ ನಾಗರಾಜ್ ಅವರು ಸತತ 8 ಗಂಟೆಗಳ ಕಾಲ ತೀವ್ರ ನೋವನ್ನು ಲೆಕ್ಕಿಸದೆ ತಮ್ಮ ಎರಡೂ ಭುಜಗಳ ಮೇಲೆ ನೆಚ್ಚಿನ ನಾಯಕನ ಚಿತ್ರವನ್ನು ಕೆತ್ತಿಸಿಕೊಂಡಿದ್ದಾರೆ. ಇವರ ಒಂದು ಭುಜದ…
ಇಂಗ್ಲಿಷ್ನಲ್ಲಿ ಒಂದು ಪ್ರಸಿದ್ಧ ಗಾದೆಯಿದೆ – “An apple a day keeps the doctor away” (ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು). ಇತ್ತೀಚಿನ ಆಧುನಿಕ ವೈದ್ಯಕೀಯ ಸಂಶೋಧನೆಗಳು ಮತ್ತು ಪೌಷ್ಟಿಕಾಂಶ ತಜ್ಞರ ಪ್ರಕಾರ ಈ ಮಾತು ಅಕ್ಷರಶಃ ಸತ್ಯ. ನಮ್ಮ ದೇಹಕ್ಕೆ ಕಾಡುವ ಸಣ್ಣಪುಟ್ಟ ಇನ್ಫೆಕ್ಷನ್ಗಳಿಂದ ಹಿಡಿದು ದೀರ್ಘಕಾಲದ ಕಾಯಿಲೆಗಳವರೆಗೆ, ಬಹುತೇಕ ಎಲ್ಲಾ ಕಾಯಿಲೆಗಳ ವಿರುದ್ಧ ಹೋರಾಡುವ ಅದ್ಭುತ ಶಕ್ತಿ ಸೇಬಿನಲ್ಲಿದೆ. ಹಾಗಾದರೆ, ಈ ಒಂದು ಹಣ್ಣು ನಮ್ಮ ದೇಹದಲ್ಲಿ ಹೇಗೆ ರೋಗಗಳ ವಿರುದ್ಧ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ? ಇದರ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಕರುಳಿನ ಆರೋಗ್ಯದ ರಕ್ಷಕ (Gut Health Guardian) ಸೇಬು ಹಣ್ಣಿನಲ್ಲಿ ‘ಪೆಕ್ಟಿನ್’ (Pectin) ಎಂಬ ಕರಗುವ ನಾರಿನಂಶ (Soluble Fiber) ಹೇರಳವಾಗಿದೆ. ಇದು ನಮ್ಮ ಕರುಳಿನಲ್ಲಿರುವ ಒಳ್ಳೆಯ ಬ್ಯಾಕ್ಟೀರಿಯಾಗಳಿಗೆ (Probiotics) ಆಹಾರವಾಗಿ ಕೆಲಸ ಮಾಡುತ್ತದೆ. ಕರುಳಿನ ಆರೋಗ್ಯ ಉತ್ತಮವಾಗಿದ್ದರೆ ದೇಹದ ರೋಗನಿರೋಧಕ ಶಕ್ತಿ ತಂತಾನೇ ಹೆಚ್ಚುತ್ತದೆ ಮತ್ತು ಜೀರ್ಣಕ್ರಿಯೆಯ…
ಬೆಂಗಳೂರು: ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ ಎಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೆÇಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ. ಇಂತಹ ಸಮಾಜವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಗೌರವಾನ್ವಿತ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಘಟನೆಯ…
ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ನೈಸರ್ಗಿಕ ಮತ್ತು ಪೌಷ್ಟಿಕಾಂಶಯುಕ್ತ ಆಹಾರಗಳಿಗೆ ಆದ್ಯತೆ ನೀಡುವುದು ಇಂದಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅವಶ್ಯಕ. ಇಂತಹ ಸೂಪರ್ಫುಡ್ಗಳಲ್ಲಿ ಮೊಳಕೆ ಬರಿಸಿದ ಕಾಳುಗಳು (Sprouts) ಮುಂಚೂಣಿಯಲ್ಲಿವೆ. ಧಾನ್ಯಗಳು ಅಥವಾ ಕಾಳುಗಳನ್ನು ಮೊಳಕೆ ಬರಿಸಿದಾಗ ಅವುಗಳಲ್ಲಿನ ಪೋಷಕಾಂಶಗಳ ಮೌಲ್ಯವು ದುಪ್ಪಟ್ಟಾಗುತ್ತದೆ. ಮೊಳಕೆಕಾಳುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ನಮ್ಮ ದೇಹಕ್ಕೆ ಸಿಗುವ 7 ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ಜೀರ್ಣಕ್ರಿಯೆ ಸುಧಾರಿಸುತ್ತದೆ (Improves Digestion) ಮೊಳಕೆ ಬರಿಸಿದ ಕಾಳುಗಳಲ್ಲಿ ಜೀವಂತ ಎಂಜೈಮ್ಗಳು (Enzymes) ಅತ್ಯಧಿಕ ಪ್ರಮಾಣದಲ್ಲಿರುತ್ತವೆ. ಇವು ನಾವು ತಿನ್ನುವ ಆಹಾರವನ್ನು ಸುಲಭವಾಗಿ ಒಡೆಯಲು ಮತ್ತು ಜೀರ್ಣಿಸಿಕೊಳ್ಳಲು ದೇಹಕ್ಕೆ ಸಹಾಯ ಮಾಡುತ್ತವೆ. ಅಲ್ಲದೆ, ಇದರಲ್ಲಿರುವ ಸಮೃದ್ಧ ನಾರಿನಂಶ (Fiber) ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸಿ, ಕರುಳಿನ ಆರೋಗ್ಯವನ್ನು ವೃದ್ಧಿಸುತ್ತದೆ. 2. ಪೋಷಕಾಂಶಗಳ ಗಣಿ (Rich in Nutrients) ಕಾಳುಗಳನ್ನು ಮೊಳಕೆ ಬರಿಸುವ ಪ್ರಕ್ರಿಯೆಯಲ್ಲಿ ಅವುಗಳಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳ ಪ್ರಮಾಣವು ಗಣನೀಯವಾಗಿ ಹೆಚ್ಚುತ್ತದೆ. ವಿಶೇಷವಾಗಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್…
ಬೆಂಗಳೂರು: ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ಬ್ಯಾಂಕ್ ಅಕೌಂಟ್ನಲ್ಲಿ ದುಡ್ಡಿಲ್ಲವೆಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯ ಇನ್ಮುಂದೆ ಇಲ್ಲ! ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆ ‘ಭಾರತ್ಪೇ’, ಯೆಸ್ ಬ್ಯಾಂಕ್ ಸಹಯೋಗದೊಂದಿಗೆ ‘ಭಾರತ್ಪೇ ಫ್ಲೆಕ್ಸ್’ ಎಂಬ ವಿನೂತನ ಸೇವೆಯನ್ನು ಆರಂಭಿಸಿದೆ. ಏನಿದು ಭಾರತ್ಪೇ ಫ್ಲೆಕ್ಸ್? ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಪಾವತಿ ಮಾಡಿದಾಗ, ಆ ಹಣ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಸಾಲದ ಸೌಲಭ್ಯವಾಗಿದೆ. ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಲು, ಆನ್ಲೈನ್ ಶಾಪಿಂಗ್ ಮಾಡಲು, ಕರೆಂಟ್ ಬಿಲ್ ಕಟ್ಟಲು, ರೀಚಾರ್ಜ್ ಮಾಡಲು ಹಾಗೂ ಪೆಟ್ರೋಲ್ ಹಾಕಿಸಲು ಈ ‘ಕ್ರೆಡಿಟ್ ಲೈನ್’ (ಸಾಲ ಸೌಲಭ್ಯ) ಅನ್ನು ಬಳಸಬಹುದು. ಆಕಸ್ಮಿಕವಾಗಿ ಎದುರಾಗುವ ತುರ್ತು ಖರ್ಚುಗಳನ್ನು ನಿಭಾಯಿಸಲು ಇದು ಗ್ರಾಹಕರಿಗೆ ನೆರವಾಗಲಿದೆ. ಬಡ್ಡಿ ಇಲ್ಲ, ಇಎಂಐ ಪಾವತಿಗೂ ಅವಕಾಶ * ಬಡ್ಡಿ-ಮುಕ್ತ ಅವಧಿ: ಗ್ರಾಹಕರು ಪಾವತಿಸಿದ (ಬಳಸಿದ) ಹಣವನ್ನು…
ಬೆಂಗಳೂರು: ಜೂನ್ 3 ರ ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಹಾಗೂ ಮಾರ್ಗಸೂಚಿಗಳನ್ನು ಸಂಚಾರ ಪೊಲೀಸರು ಸಲಹೆ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 03.06.2026 ರಂದು ಸಂಜೆ 04:00 ಗಂಟೆಗೆ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕಭವನದ ಗಾಜಿನ ಮನೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈ ಅತ್ಯಂತ ಪ್ರಮುಖ ಕಾರ್ಯಕ್ರಮಕ್ಕೆ ದೇಶದ ಹಾಗೂ ರಾಜ್ಯದ ಅತಿಗಣ್ಯ ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ನಿಯಂತ್ರಣದ ಹಿತದೃಷ್ಟಿಯಿಂದ ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಿ.ಬಿ.ಡಿ. ವ್ಯಾಪ್ತಿಯಲ್ಲಿರುವ ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ನಗರದಲ್ಲಿ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ದಿನಾಂಕ: 03.06.2026 ರಂದು ಮಧ್ಯಾಹ್ನ 12:00…














