Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ರಾಜ್ಯದಲ್ಲಿ 56ಸಾವಿರ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ಐತಿಹಾಸಿಕ ನಿರ್ಧಾರ. ದೇಶದ ಯಾವ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದ ನೇಮಕಾತಿ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ತಮ್ಮ ಹುಟ್ಟು ಹಬ್ಬದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೀಸಲಾತಿ ನಿಗಧಿಪಡಿಸದೆ ನೇಮಕಾತಿ ಮಾಡಿಕೊಂಡರೆ ಕೆಲವು ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದಾರೆ. ನಮ್ಮ ಇಲಾಖೆಯಲ್ಲಿ ಹೆಚ್ಚು ಜನರು ಉದ್ಯೋಗಾಕಾಂಕ್ಷಿಗಳಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಪುಗಸಟ್ಟೆ ಭಾಷಣ ಮಾಡುತ್ತಾರೆ. 2 ಲಕ್ಷ ಉದ್ಯೋಗ ಭರ್ತಿ ಮಾಡಬೇಕು ಎಂದು ಹೇಳಿಕೆ ನೀಡುತ್ತಾರೆ. ಅವರೇನು ಕತ್ತೆ ಕಾಯುತ್ತಿದ್ದರಾ, ಮೂರು ಜನ ಉಪಮುಖ್ಯಮಂತ್ರಿಗಳು ಹಿಂದಿನ ಸರ್ಕಾರದಲ್ಲಿ ಇದ್ದರು. ಏನು ಸೆಗಣಿ ತಿನ್ನುತ್ತಿದ್ದರಾ ಎಂದು ಪ್ರಶ್ನಿಸಿದ ಸಚಿವರು, 56ಸಾವಿರ ಜನರನ್ನು ಏಕಕಾಲಕ್ಕೆ ಭರ್ತಿ ಮಾಡುತ್ತಿರುವುದು ಇತಿಹಾಸ.…
ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗ, ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲೂಕುಗಳು ರಾಜ್ಯಕ್ಕೆ ಬೆಳಕು ನೀಡಿದ ಪುಣ್ಯಭೂಮಿ. ಶರಾವತಿ ಅಣೆಕಟ್ಟು ನಿರ್ಮಾಣವಾಗಿ ದಶಕಗಳೇ ಕಳೆದರೂ, ಆ ಯೋಜನೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ರೈತರು ಇಂದಿಗೂ ‘ಅತಂತ್ರ’ ಸ್ಥಿತಿಯಲ್ಲಿದ್ದಾರೆ. ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳು ಮತ್ತು ಮುಳುಗಡೆ ಸಂತ್ರಸ್ತರ ಹಕ್ಕುಪತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಇತ್ತೀಚೆಗೆ ಮಲೆನಾಡು ರೈತ ಹೋರಾಟ ಸಮಿತಿ ವತಿಯಿಂದ ಸಿಗಂಧೂರು ಸೇತುವೆ ಬಳಿ ನಡೆದ ಬೃಹತ್ ಪ್ರತಿಭಟನೆಯು ಸರ್ಕಾರದ ಕಣ್ಣು ತೆರೆಸುವ ಪ್ರಯತ್ನವಾಗಿದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ್ ಅವರು ಪ್ರಸ್ತುತ ಮತ್ತು ಹಿಂದಿನ ಸರ್ಕಾರಗಳ ವೈಫಲ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಪಕ್ಷವಾಗಲಿ, ಚುನಾವಣಾ ಸಮಯದಲ್ಲಿ ಮಲೆನಾಡಿನ ರೈತರಿಗೆ ನೀಡುವ ಭರವಸೆಗಳು ಕೇವಲ ಮತಬ್ಯಾಂಕ್ ರಾಜಕಾರಣಕ್ಕೆ ಸೀಮಿತವಾಗಿವೆ ಎನ್ನುವುದು ರೈತರ ಆರೋಪ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ…
ದುಬೈ/ಮಸ್ಕತ್: ಜಗತ್ತಿನ ಅತ್ಯಂತ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯು ಪ್ರಸ್ತುತ ಭೀಕರ ‘ಡಿಜಿಟಲ್ ಬ್ಲಾಕೌಟ್’ಗೆ ಸಾಕ್ಷಿಯಾಗಿದೆ. ಅತ್ಯಾಧುನಿಕ ಎಲೆಕ್ಟ್ರಾನಿಕ್ ಯುದ್ಧತಂತ್ರದ ಭಾಗವಾಗಿ ನಡೆಯುತ್ತಿರುವ ಜಿಪಿಎಸ್ (GPS) ಜಾಮಿಂಗ್ನಿಂದಾಗಿ ನೂರಾರು ತೈಲ ಟ್ಯಾಂಕರ್ಗಳು ಸಮುದ್ರದ ಮಧ್ಯೆ ದಿಕ್ಕುತೋಚದೆ ನಿಂತಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಏನಿದು ಬಿಕ್ಕಟ್ಟು? ಕಾರ್ಯಾಚರಣೆಯ ಹಿನ್ನೆಲೆ: ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಲಿಟರಿ ಪಡೆಗಳು ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಈ ಪ್ರದೇಶವು ಎಲೆಕ್ಟ್ರಾನಿಕ್ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಜಾಗತಿಕ ತೈಲ ಪೂರೈಕೆಯ ಶೇ. 20 ರಷ್ಟು ಭಾಗವನ್ನು ನಿರ್ವಹಿಸುವ ಈ ಜಲಮಾರ್ಗದಲ್ಲಿ ಈಗ ಹಡಗುಗಳ ಸಂಚಾರ ಸಂಪೂರ್ಣ ಹಳಿ ತಪ್ಪಿದೆ. ಜಾಮಿಂಗ್ ಮತ್ತು ವಂಚನೆ (Spoofing): ಹಡಗುಗಳ ಸಂಚರಣಾ ವ್ಯವಸ್ಥೆಯನ್ನು (Navigation) ಹದಗೆಡಿಸಲು ಎರಡು ರೀತಿಯ ತಂತ್ರಗಳನ್ನು ಬಳಸಲಾಗುತ್ತಿದೆ: ಜಾಮಿಂಗ್: ಉಪಗ್ರಹ ಸಂಕೇತಗಳನ್ನು ಪ್ರಬಲ ರೇಡಿಯೊ ಶಬ್ದದ ಮೂಲಕ ಅಡಚಣೆ ಮಾಡುವುದು.…
ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗದ ರೈತರ ಪಾಲಿಗೆ ಭೂಮಿ ಎಂಬುದು ಕೇವಲ ಆಸ್ತಿಯಲ್ಲ, ಅದು ಅವರ ಜೀವನದ ಅಸ್ತಿತ್ವ. ಆದರೆ ಕಳೆದ ಆರು ದಶಕಗಳಿಂದ ಈ ಭಾಗದ ರೈತರು ಅರಣ್ಯ ಹಕ್ಕು, ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡಿರುವ ‘ಮಲೆನಾಡು ರೈತರ ಹೋರಾಟ ಸಮಿತಿ’ಯಿಂದ ಇಂದು ಸಿಗಂದೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ‘ಸೇತುವೆ ರಸ್ತೆ ತಡೆ ಚಳುವಳಿ’ ನಡೆಸಿ, ಹಕ್ಕು ಪತ್ರಕ್ಕಾಗಿ ಒತ್ತಾಯಿಸಲಾಯಿತು. ಈ ಹೋರಾಟವು ಕೇವಲ ಸಾಂಕೇತಿಕ ಪ್ರತಿಭಟನೆಯಲ್ಲ, ಬದಲಾಗಿ ಮಲೆನಾಡಿನ ರೈತರ ಅಸ್ತಿತ್ವಕ್ಕಾಗಿ ನಡೆಯುತ್ತಿರುವ ‘ಅಂತಿಮ ಸಮರ’ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕರಾದಂತ ತೀ.ನ.ಶ್ರೀನಿವಾಸ್ ಘೋಷಿಸಿದರು. ಅಲ್ಲದೇ 15 ದಿನಗಳಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡದೇ ಇದ್ದರೇ, ಜಿಲ್ಲಾಧಿಕಾರಿಗಳ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರಾಜಕೀಯ ಭರವಸೆಗಳ ಸುಳ್ಳಿನ ಕಂತೆ:…
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದರು. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್ಐಸಿ (NIC) ಸಂಸ್ಥೆ ಮೂಲಕ ಉದ್ಭವಿಸಿರುವ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ…
ಬೆಂಗಳೂರು: ಕರ್ನಾಟಕ ಭಾರತೀಯ ಜನತಾ ಪಾರ್ಟಿಯು ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಎ.ಆರ್. ಸಪ್ತಗಿರಿ ಗೌಡ ಅವರು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ನೇಮಕಾತಿಯಲ್ಲಿ ಅತ್ಯಂತ ಗಮನಾರ್ಹ ಅಂಶವೆಂದರೆ, ಖ್ಯಾತ ನಟಿ ಅಮೂಲ್ಯ ಅವರ ಪತಿ ಜಗದೀಶ್ ಆರ್. ಚಂದ್ರ ಅವರಿಗೆ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಜಗದೀಶ್ ಅವರು ಕಳೆದ ಕೆಲವು ಸಮಯದಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಸಂಘಟನಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಟಿ ಅಮೂಲ್ಯ ಅವರ ಮಾವ (ಜಿ.ಹೆಚ್. ರಾಮಚಂದ್ರ) ಹಾಗೂ ಪತಿ ಇಬ್ಬರೂ ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಜಗದೀಶ್ ಅವರಿಗೆ ಪ್ರಮುಖ ಹುದ್ದೆ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ಅವರಿಗೆ ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ವಿವಿಧ ಮೋರ್ಚಾಗಳ ನೂತನ ಅಧ್ಯಕ್ಷರ ಪಟ್ಟಿ: ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಘಟಕಗಳಿಗೆ…
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಕೂಡಲೇ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು; ಜನಾಭಿಪ್ರಾಯ ಪರಿಗಣಿಸದೆ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ. ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರುವ ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ…
ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜರಸಲೇಮ್ (ಧರ್ಮಕ್ಕಾಗಿ) ಗಾಗಿ ಯುದ್ಧ ನಡೆಯುತಿತ್ತು. ಈಗ ಪೆಟ್ರೋಲಿಯಂ, ಧಾರ್ಮಿಕ ವಿಚಾರಕ್ಕೆ ಯುದ್ಧ ಅಗುತ್ತಿದೆ. ಅಮೇರಿಕಾ ಆಯಿಲ್ ಮೇಲೆ ಹಿಡಿತ ಸಾಧಿಸಲು ಹೋರಾಟ ಮಾಡುತ್ತಿದೆ. ಅಮೇರಿಕಾ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೆಳಿದರು. ಮೂರನೇ ವಿಶ್ವ ಯುದ್ಧ ಆಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರನೇ ವಿಶ್ವ ಯುದ್ದ ಆಗಲು ಚೀನಾ ಮತ್ತು ರಷ್ಯಾ ಇನ್ನೂ ಯುದ್ದಕ್ಕೆ ಇಳಿದಿಲ್ಲ. ಕಾದು ನೋಡುವ…
ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗ ಮಾತನಾಡಿದ ಅವರು, ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ, ಅವರು ಗೊಂದಲಕ್ಕೆ ಸಿಲುಕಿದ್ದಾರೆ. ನೇಮಕಾತಿಯ ಮೊದಲು ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಆಗಬೇಕು ಎಂದು ಹೇಳಿದರು. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕಾನೂನು ಮಾಡಿದ್ದಾರೆ. ಹಾಗಾಗಿ ಎಲ್ಲ ಸಮುದಾಯದವರೂ ಒಳ ಮೀಸಲಾತಿ ಕೊಡಿ ಅಂತ ಹೇಳಿದ್ದಾರೆ. ಸಮಸ್ಯೆ ಸರಳೀಕರಣ ಮಾಡಬೇಕು. ಕಾನೂನು ತಜ್ಞರ ಸಲಹೆ ಪಡೆದು ಮಾಡಬೇಕು. ಸಂವಿಧಾನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಅಂತ…
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಯು ನಿರೀಕ್ಷೆಗಿಂತಲೂ ವೇಗವಾಗಿ ಗುರಿ ತಲುಪುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್ ಮತ್ತು ಸಿಎನ್ಬಿಸಿ ಸುದ್ದಿ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಒಂದೇ ಏಟಿಗೆ 48 ನಾಯಕರ ಅಂತ್ಯ: ಇರಾನ್ ನಾಯಕತ್ವದ ಮೇಲೆ ಈ ಕಾರ್ಯಾಚರಣೆಯು ಭೀಕರ ಪ್ರಹಾರ ಮಾಡಿದೆ ಎಂದು ಹೇಳಿರುವ ಟ್ರಂಪ್, “ಒಂದೇ ಹೊಡೆತಕ್ಕೆ ಇರಾನ್ನ 48 ಪ್ರಮುಖ ನಾಯಕರು ಬಲಿಯಾಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ. ಇನ್ನು ಎಷ್ಟು ಗುರಿಗಳು ಬಾಕಿ ಇವೆ ಎಂಬುದು ವಾಷಿಂಗ್ಟನ್ಗೆ ತಿಳಿದಿದೆ ಎಂದು ಅವರು ಸುಳಿವು ನೀಡಿದ್ದಾರೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಡಜನ್ಗಟ್ಟಲೆ ಹಿರಿಯ ಕಮಾಂಡರ್ಗಳು ಈ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಪೆಂಟಗನ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು (IDF) ಮೌಲ್ಯಮಾಪನ ಮಾಡುತ್ತಿರುವ ಬೆನ್ನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ನಿರೀಕ್ಷೆಗಿಂತ ವೇಗವಾಗಿ ಕಾರ್ಯಾಚರಣೆ:…














