Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ವಾಷಿಂಗ್ಟನ್/ಟೆಹ್ರಾನ್: ಕಳೆದ ಕೆಲವು ಸಮಯದಿಂದ ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಮೂಡಿಸಿದ್ದ ಇರಾನ್ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ಹಾಗೂ ಮಿಲಿಟರಿ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಉಭಯ ದೇಶಗಳ ನಡುವೆ ಐತಿಹಾಸಿಕ ಶಾಂತಿ ಒಪ್ಪಂದ ಏರ್ಪಟ್ಟಿದ್ದು, ಇದರ ಬೆನ್ನಲ್ಲೇ ಜಾಗತಿಕ ತೈಲ ಸಾರಿಗೆಯ ಪ್ರಮುಖ ಹೆಬ್ಬಾಗಿಲಾಗಿರುವ ‘ಹೊರ್ಮುಝ್ ಜಲಸಂದಿ’ಯನ್ನು (Strait of Hormuz) ಮುಕ್ತ ವ್ಯಾಪಾರ ಮತ್ತು ಹಡಗುಗಳ ಸಂಚಾರಕ್ಕಾಗಿ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯನ್ನು ದೂರ ಮಾಡಿರುವ ಈ ಬೆಳವಣಿಗೆಯು ಜಾಗತಿಕ ಮಾರುಕಟ್ಟೆಯಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ. ಶಾಂತಿ ಒಪ್ಪಂದದ ಹಿನ್ನೆಲೆ: ದೀರ್ಘಾವಧಿಯ ರಾಜತಾಂತ್ರಿಕ ಮಾತುಕತೆಗಳು ಹಾಗೂ ಅಂತರರಾಷ್ಟ್ರೀಯ ಸಮುದಾಯದ ಸಂಧಾನದ ಪ್ರಯತ್ನಗಳ ಫಲವಾಗಿ ಈ ಮಹತ್ವದ ಒಪ್ಪಂದ ಸಾಧ್ಯವಾಗಿದೆ. ತೈಲ ಬೆಲೆ ಏರಿಕೆ, ಆರ್ಥಿಕ ದಿಗ್ಬಂಧನಗಳು ಮತ್ತು ಪ್ರಾದೇಶಿಕ ಭದ್ರತೆಯ ಮೇಲಿನ ಒತ್ತಡದಿಂದಾಗಿ ಉಭಯ ದೇಶಗಳು ಸಂಘರ್ಷದ ಹಾದಿ ಬಿಟ್ಟು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಪರಸ್ಪರರ ಸಾರ್ವಭೌಮತ್ವವನ್ನು ಗೌರವಿಸುವುದು ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು…

Read More

ಶಿವಮೊಗ್ಗ: ನೂರಾರು ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆಯಲ್ಲಿ ಭೀಕರ ವಿಧ್ವಂಸಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಶಾಲೆಯ ಬೇಸಿಗೆ ರಜೆಯ ಅವಧಿಯನ್ನು ಬಳಸಿಕೊಂಡಿರುವ ಅಪರಿಚಿತ ಕಿಡಿಗೇಡಿಗಳು, ಶಾಲೆಯ ಗಂಡು ಮಕ್ಕಳ ಹಾಗೂ ಹೆಣ್ಣು ಮಕ್ಕಳ ಶೌಚಾಲಯಕ್ಕೆ ನುಗ್ಗಿ ಅಲ್ಲಿನ ಪರಿಕರಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಸುಮಾರು ಎರಡು ಲಕ್ಷ ರೂಪಾಯಿಗೂ ಅಧಿಕ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಘಟನೆಯ ವಿವರ: ಬೇಸಿಗೆ ರಜೆಯ ನಂತರ ಇತ್ತೀಚೆಗಷ್ಟೇ ಶಾಲೆಗಳು ಪುನರಾರಂಭಗೊಂಡಿದ್ದವು. ಸಮವಸ್ತ್ರ ವಿತರಣೆಯ ಹಿನ್ನೆಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಶಾಲೆಗೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಕ್ಕಳು ಶೌಚಾಲಯದ ಬಳಿ ಹೋಗಲು ಹಿಂಜರಿಯುತ್ತಿದ್ದನ್ನು ಗಮನಿಸಿದ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರಿಗೆ ವಿಷಯ ತಿಳಿಸಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಶೌಚಾಲಯದ ಒಳಗಿನ ಭೀಕರ ದೃಶ್ಯ ಕಂಡುಬಂದಿದೆ.…

Read More

ಶಿವಮೊಗ್ಗ: ಮಳೆಗಾಲದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಈ ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕದೆ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಾಗರ  ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆ ಬಿದ್ದರೆ ಚೌಕಾಸಿ ಮಾಡದೆ ಪರಿಹಾರ ನೀಡಿ ಮಳೆ ಗಾಳಿಗೆ ಮನೆ ಕುಸಿದು ಬಿದ್ದರೆ ತಕ್ಷಣವೇ ತಹಶೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಿದ ಶಾಸಕರು, “ಮನೆ ಕಳೆದುಕೊಂಡ ಬಡವರ ವಿಷಯದಲ್ಲಿ ಯಾವುದೇ ರೀತಿಯ ಚೌಕಾಸಿ ಮಾಡದೆ, ಅವರಿಗೆ ನಿಯಮಾನುಸಾರ ಸಿಗಬೇಕಾದ ಗರಿಷ್ಠ ಪರಿಹಾರವನ್ನು ತಲುಪಿಸಲು ಅಧಿಕಾರಿಗಳು ಮಾನವೀಯತೆಯಿಂದ ಸಹಕರಿಸಬೇಕು” ಎಂದರು.…

Read More

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯ ವಿಚಾರಣೆಯು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಸೋಮವಾರ) ತೀವ್ರ ಕುತೂಹಲದ ನಡುವೆ ಮುಂದುವರಿದಿದೆ. ವಿಚಾರಣೆ ವೇಳೆ ನ್ಯಾಯಾಲಯವು ಪ್ರಮುಖ ಆದೇಶವೊಂದನ್ನು ಹೊರಡಿಸಿದ್ದು, ಪ್ರಕರಣದ ತ್ವರಿತಗತಿಯ ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿದೆ. 13ನೇ ಸಾಕ್ಷಿಯ ಹೇಳಿಕೆ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯವು 13ನೇ ಸಾಕ್ಷಿಯ ಮಹತ್ವದ ಹೇಳಿಕೆಯನ್ನು ದಾಖಲಿಸಿಕೊಂಡಿತು. ಈ ಸಂದರ್ಭದಲ್ಲಿ ಸಾಕ್ಷಿದಾರರ ಪಾಟೀಸವಾಲನ್ನು (Cross-examination) ಮುಂದೂಡಬೇಕೆಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಆದರೆ, ಈ ಮನವಿಯನ್ನು ಕಡಾಖಂಡಿತವಾಗಿ ತಿರಸ್ಕರಿಸಿದ 59ನೇ ಸಿಸಿಹೆಚ್ ಕೋರ್ಟ್, ವಿಚಾರಣೆಯನ್ನು ಮುಂದೂಡಲು ನಿರಾಕರಿಸಿತು. ಪ್ರತಿದಿನ ಸಾಕ್ಷ್ಯ ವಿಚಾರಣೆಗೆ ಪ್ರಾಸಿಕ್ಯೂಷನ್ ಮನವಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಇನ್ಮುಂದೆ ಪ್ರತಿದಿನವೂ ಸಾಕ್ಷ್ಯ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಿಶೇಷ ಅಭಿಯೋಜಕರಾದ (SPP) ಪ್ರಸನ್ನ ಕುಮಾರ್ ಅವರು ನ್ಯಾಯಾಲಯಕ್ಕೆ ಬಲವಾದ ಮನವಿ ಸಲ್ಲಿಸಿದರು. ಕೊಲೆ ಪ್ರಕರಣದ…

Read More

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ. 100 ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ ಈಗಾಗಲೇ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ವಿಶೇಷವಾಗಿ ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡುವಂತೆ ಆಗ್ರಹಿಸಲಾಗಿದೆ. ಸರ್ಕಾರ ಯಾವುದೇ ಖಾತೆ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯು ಜೂನ್ 23 ಅಥವಾ 24 ರಂದು ನಡೆಯಲಿದೆ ಎಂದು ಮಹತ್ವದ ಮಾಹಿತಿ ನೀಡಿದರು. ರೆಸಾರ್ಟ್ ರಾಜಕೀಯ ಸಮರ್ಥನೆ ವಿಧಾನ ಪರಿಷತ್ ಚುನಾವಣೆ ಕುರಿತು ಮಾತನಾಡಿದ ಶಾಸಕರು, “ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದು ನೂರಕ್ಕೆ ನೂರರಷ್ಟು ನಿಶ್ಚಿತ. ನಮಗೆ ಇಬ್ಬರು ಶಾಸಕರ ಮತಗಳ ಕೊರತೆ ಮಾತ್ರ ಇದ್ದು, ಆ ಮತಗಳು ಕೂಡ ನಮ್ಮ ಬಳಿಯೇ ಇವೆ. ಚುನಾವಣೆಯಲ್ಲಿ ಯಾವುದೇ ಅಡ್ಡ…

Read More

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಶೂನ್ಯ ವೆಚ್ಚದಲ್ಲಿ ರಾಜ್ಯದ ವಿದ್ಯುತ್‌ ಪ್ರಸರಣ ಸಾಮರ್ಥ್ಯವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗೆ ಮುಂದಾಗಿದೆ. ಬೆಂಗಳೂರು ನಗರದ ಪುಟ್ಟೇನಹಳ್ಳಿ – ಸಹಕಾರನಗರ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ‘ಡೈನಾಮಿಕ್ ಲೈನ್ ರೇಟಿಂಗ್’ (ಡಿಎಲ್‌ಆರ್) ಪ್ರಾಯೋಗಿಕ ಯೋಜನೆ ಆಳವಡಿಕೆಯನ್ನು ಆರಂಭಿಸಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕಾರ್ಯಾದೇಶ ಪತ್ರವನ್ನು (LoI) ನೀಡಲಾಗಿದೆ. ಈ ಮೂಲಕ ಇಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ದಕ್ಷಿಣ ಭಾರತದ ಮೊದಲ ರಾಜ್ಯ ವಿದ್ಯುತ್ ಪ್ರಸರಣ ನಿಗಮವಾಗಿ ಹೊರ ಹೊಮ್ಮಿದೆ. ಈ ಹೊಸ ತಂತ್ರಜ್ಞಾನದ ಮೂಲಕ, ಯಾವುದೇ ಹೆಚ್ಚುವರಿ ಟವರ್‌ಗಳ ನಿರ್ಮಾಣ ಅಥವಾ ಹೊಸ ಭೂ ಸ್ವಾಧೀನದ ಅಗತ್ಯವಿಲ್ಲದೆ, ಅಸ್ತಿತ್ವದಲ್ಲಿರುವ ಮೂಲಸೌಕರ್ಯದ ವಿದ್ಯುತ್ ಪ್ರಸರಣ ಸಾಮರ್ಥ್ಯವನ್ನು ಶೇಕಡಾ 25 ರಷ್ಟು ಹೆಚ್ಚಿಸುವ ಗುರಿಯನ್ನು ನಿಗಮ ಹೊಂದಿದೆ. ಈ ಯೋಜನೆಯು ಪ್ರಸ್ತುತ ಜಾರಿಯಲ್ಲಿರುವ ಸಾಂಪ್ರದಾಯಿಕ…

Read More

ದಾವಣಗೆರೆ: ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಹೆಚ್. ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಅತ್ಯಂತ ಭಯಾನಕ ಅಗ್ನಿ ಅವಘಡವೊಂದು ಸಂಭವಿಸಿದೆ. ಗೋದಾಮೊಂದರಲ್ಲಿ ಇಟ್ಟಿದ್ದ ಸುಮಾರು 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳು ಒಂದಾದ ನಂತರ ಒಂದರಂತೆ ಸಿನಿಮೀಯ ಶೈಲಿಯಲ್ಲಿ ಸ್ಫೋಟಗೊಂಡಿದ್ದು, ಇಡೀ ಭಾಗದಲ್ಲಿ ತೀವ್ರ ಆತಂಕ ಹಾಗೂ ದಿಗಿಲಿನ ವಾತಾವರಣ ಸೃಷ್ಟಿಯಾಗಿತ್ತು. ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ಸಿಲಿಂಡರ್‌ಗಳು; ಮೊಬೈಲ್‌ನಲ್ಲಿ ದೃಶ್ಯ ಸೆರೆ! ಹೆಚ್. ಕಲ್ಪನಹಳ್ಳಿಯ ಹೊರವಲಯದ ಅಡಿಕೆ ತೋಟದ ಮಧ್ಯೆ ಇದ್ದ ಸಿಲಿಂಡರ್ ಗೋದಾಮಿನಲ್ಲಿ ಈ ದುರಂತ ನಡೆದಿದೆ. ಗೋದಾಮಿಗೆ ಬೆಂಕಿ ತಗುಲುತ್ತಿದ್ದಂತೆಯೇ ಸಿಲಿಂಡರ್‌ಗಳು ಒಂದರ ಮೇಲೊಂದರಂತೆ ಭೀಕರ ಶಬ್ದದೊಂದಿಗೆ ಬ್ಲಾಸ್ಟ್ ಆಗಲು ಆರಂಭಿಸಿವೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಆಕಾಶಕ್ಕೆ ಚಿಮ್ಮಿ, ಜಮೀನಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ರೋಮಾಂಚಕ ಹಾಗೂ ಭಯಾನಕ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಮಾಲೀಕ ಸೇರಿ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಭಾಷಣದಿಂದ ಸ್ಫೂರ್ತಿ ಪಡೆದಿರುವ ಮಹಾರಾಷ್ಟ್ರದ ಕುಟುಂಬವೊಂದು, ತಮ್ಮ ಮಗನ ಮದುವೆಗೆ ಯಾವುದೇ ಹೊಸ ಚಿನ್ನಾಭರಣಗಳನ್ನು ಖರೀದಿಸದಿರಲು ನಿರ್ಧರಿಸುವ ಮೂಲಕ ದೇಶದ ಗಮನ ಸೆಳೆದಿದೆ. ಇಷ್ಟೇ ಅಲ್ಲದೆ, ಭಾವಿ ಸೊಸೆಗೆ ಹೊಸ ಮಂಗಳಸೂತ್ರವನ್ನು ಕೊಡಿಸುವ ಬದಲಾಗಿ, ತಮ್ಮ ಬಳಿ ಇರುವ ಹಳೆಯ ಮಂಗಳಸೂತ್ರವನ್ನೇ ಪಾಲಿಶ್ ಮಾಡಿಸಿ ನೀಡಲು ಮುಂದಾಗಿದೆ. ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪುಲಗಾಂವ್‌ನಲ್ಲಿ ಪೂಜಾ ಸಾಮಗ್ರಿಗಳ ಅಂಗಡಿ ನಡೆಸುತ್ತಿರುವ ಸತೀಶ್ ಗೌರಿಶಂಕರ್ ಚೌಬೆ ಅವರ ಕುಟುಂಬವೇ ಈ ಅಪರೂಪದ ಹಾಗೂ ಆದರ್ಶ ನಿರ್ಧಾರ ಕೈಗೊಂಡಿರುವುದು. ಈ ಕುರಿತು ಅವರು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೇ ಪತ್ರ ಬರೆದು ತಮ್ಮ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಪತ್ರ ಬರೆದಿದ್ದೇಕೆ? ದಶಕಗಳ ಹಿಂದೆ ರಾಜಸ್ಥಾನದ ಜುಂಜುನುವಿನಿಂದ ಮಹಾರಾಷ್ಟ್ರಕ್ಕೆ ವಲಸೆ ಬಂದು ನೆಲೆಸಿರುವ ಚೌಬೆ ಅವರದ್ದು ಸರಳ ಮಾರ್ವಾಡಿ ಕುಟುಂಬ. ಜುಲೈ 1ರಂದು ಇವರ ಮಗ ಯಶ್ ಅವರ ವಿವಾಹ ಮಹೋತ್ಸವ ನಿಗದಿಯಾಗಿದೆ. ಮದುವೆಗೆ…

Read More

ಕೇರಳ: ನಿಮ್ಮ ಶಾಲಾ ಮಕ್ಕಳ ಬ್ಯಾಗ್‌ನಲ್ಲಿ ಲಿಪ್‌ಸ್ಟಿಕ್ ಅಥವಾ ಇನ್ಯಾವುದೇ ಸೌಂದರ್ಯವರ್ಧಕ ಉತ್ಪನ್ನಗಳು (Cosmetics) ಇರುತ್ತವೆಯೇ? ಹಾಗಿದ್ದರೆ ತಕ್ಷಣವೇ ನೀವು ಮಕ್ಕಳೊಂದಿಗೆ ಗಂಭೀರವಾಗಿ ಮಾತನಾಡಬೇಕಾದ ಸಮಯ ಬಂದಿದೆ. ಕೇರಳದ ಕೊಲ್ಲಂ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು (CWC) ಶಾಲೆಗಳಿಂದ ಸೌಂದರ್ಯವರ್ಧಕಗಳನ್ನು ಸಂಪೂರ್ಣವಾಗಿ ದೂರವಿಡಲು ಬೃಹತ್ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದೆ. ಇದರ ಹಿಂದಿರುವ ಆರೋಗ್ಯದ ಕಾರಣಗಳು ನಿಜಕ್ಕೂ ತಲ್ಲಣ ಮೂಡಿಸುವಂತಿವೆ. ಮಾತೃಭೂಮಿ ವರದಿಯ ಪ್ರಕಾರ, ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಮರ್ಕ್ಯುರಿ (ಪಾದರಸ) ಮತ್ತು ಕ್ಯಾಡ್ಮಿಯಂನಂತಹ ವಿಷಕಾರಿ ಭಾರ ಲೋಹಗಳು (Heavy Metals) ಮಕ್ಕಳ ದೇಹದಲ್ಲಿ ಶೇಖರಣೆಗೊಂಡು ಪ್ರಮುಖ ಆಂತರಿಕ ಅಂಗಗಳಿಗೆ ಹಾನಿ ಉಂಟುಮಾಡಬಹುದು ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ವಯಸ್ಕರಿಗಿಂತ ಮಕ್ಕಳ ಚರ್ಮವು ತುಂಬಾ ತೆಳ್ಳಗೆ ಮತ್ತು ಸೂಕ್ಷ್ಮವಾಗಿರುವುದರಿಂದ, ಅವರು ರಾಸಾಯನಿಕ ಪದಾರ್ಥಗಳನ್ನು ಅತಿ ವೇಗವಾಗಿ ಹೀರಿಕೊಳ್ಳುತ್ತಾರೆ. ಹೀಗಾಗಿ ಇಂತಹ ಉತ್ಪನ್ನಗಳಿಂದ ಮಕ್ಕಳಿಗೆ ಅಪಾಯ ಹೆಚ್ಚು. ಈಗಲೇ ಶಾಲೆಗಳು ಎಚ್ಚೆತ್ತುಕೊಳ್ಳಲು ಕಾರಣವೇನು? ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವು (RCC) ಇತ್ತೀಚೆಗೆ ನಡೆಸಿದ…

Read More

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಪಬ್‌ ಒಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಜ್ವಾಲೆಗೆ ಇಬ್ಬರು ದುರ್ದೈವಿಗಳು ಸಜೀವ ದಹನವಾಗಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪ್ರಮುಖ ಪಬ್‌ನಲ್ಲಿ ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೂದಿಯಾದ ಪಬ್: ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್‌ನಲ್ಲಿ ಎಂದಿನಂತೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದ ವೇಳೆ ಹಠಾತ್ತನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ನೋಡನೋಡುತ್ತಿದ್ದಂತೆಯೇ ಇಡೀ ಪಬ್‌ಗೆ ಜ್ವಾಲೆ ಆವರಿಸಿಕೊಂಡಿದೆ. ಪರಿಣಾಮವಾಗಿ ಇಡೀ ಪಬ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ತಕ್ಷಣವೇ ಹೊರಗೆ ಓಡಿಬರಲು ಸಾಧ್ಯವಾಗದೆ ಇಬ್ಬರು ವ್ಯಕ್ತಿಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. 7 ಜನರಿಗೆ ಗಂಭೀರ ಗಾಯ: ದುರಂತದಲ್ಲಿ ಪಬ್‌ನಲ್ಲಿದ್ದ ಇತರ ಏಳು ಜನರಿಗೂ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತುರ್ತು…

Read More