Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ. ​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಜರೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು…

Read More

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ತಾಲೂಕಿನಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ. ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ವಿರುದ್ಧ ದಂಡಯಾತ್ರೆ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸದ್ದಿಲ್ಲದೆ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ (ಲೆಟರೈಟ್ ಕಲ್ಲು) ಮತ್ತು ಮರಳು ಸಾಗಾಣಿಕೆ ಜಾಲದ ಮೇಲೆ ಖಡಕ್ ದಾಳಿ ನಡೆಸುವ ಮೂಲಕ ದಂಧೆಕೋರರ ನಡುಕ ಹುಟ್ಟಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಂಬಿಟ್ಟಿಗೆ, ಮರಳು ಸಾಗಾಟ ನಿರತ ಲಾರಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದೆ. ಹಿರೇನೆಲ್ಲೂರು ಗ್ರಾಮದಲ್ಲಿ ನಡೆದಿದ್ದೇನು? ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇನೆಲ್ಲೂರು ಗ್ರಾಮದ ಸರ್ವೆ ನಂಬರ್ 211 ರ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಯಿಲ್ಲದೆ, ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಲಾರಿಗಳ ಮೂಲಕ ಸಾಗಿಸಲಾಗುತ್ತಿದೆ ಎಂಬ ದೂರು ತಹಶೀಲ್ದಾರ್ ಅವರಿಗೆ ತಲುಪಿತ್ತು. ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ತಹಶೀಲ್ದಾರ್…

Read More

ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಒಟ್ಟಾರೆ ಪ್ರಗತಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಸಂಬಂಧವಾಗಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಅಧಿಕೃತ ಪತ್ರ ಬರೆದು ವಿಶೇಷ ಆಗ್ರಹ ಮಾಡಿದ್ದಾರೆ. ಪ್ರಾದೇಶಿಕ ಪ್ರಗತಿಗೆ ಹಿನ್ನಡೆ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಂಡು ಕಾರ್ಯಾರಂಭ ಮಾಡಿತ್ತು. ಇದಾದ ನಂತರ ಇಂಡಿಗೋ ವಿಮಾನಯಾನ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ಯಶಸ್ವಿಯಾಗಿ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಆರ್ಥಿಕ ನಷ್ಟದ ಕಾರಣವನ್ನು ನೀಡಿ ಕಳೆದ ಕೆಲವು ತಿಂಗಳುಗಳಿಂದ ಈ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು, ಉತ್ತರ…

Read More

ಮೈಸೂರು: ಬೀರೂರು–ಶಿವಮೊಗ್ಗ ಟೌನ್ ನಿಲ್ದಾಣಗಳ ಮಧ್ಯೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕಾಮಗಾರಿಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಳಕಂಡ ರೈಲುಗಳ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ: ರೈಲುಗಳ ನಿಯಂತ್ರಣ ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು 12.06.2026 ಮತ್ತು 13.06.2026ರಂದು 35 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣಕ್ಕೆ ಒಳಪಡಲಿದೆ. 14.06.2026 ರಿಂದ 30.06.2026ರವರೆಗೆ ಮಾರ್ಗಮಧ್ಯೆ 55 ನಿಮಿಷಗಳ ಕಾಲ ಹಾಗೂ 01.07.2026 ರಿಂದ 05.07.2026ರವರೆಗೆ ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ. ರೈಲು ಸಂಖ್ಯೆ 20690 ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ ರೈಲು 07.07.2026 ರಿಂದ 11.07.2026ರವರೆಗೆ 30 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣಕ್ಕೆ ಒಳಪಡಲಿದೆ. ರೈಲು ಮರುನಿಗದಿಪಡಿಕೆ ರೈಲು ಸಂಖ್ಯೆ 20690 ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ ರೈಲು 01.07.2026 ರಿಂದ 05.07.2026ರವರೆಗೆ ಶಿವಮೊಗ್ಗ ಟೌನ್ ನಿಂದ 20 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.

Read More

ಮಂಡ್ಯ: ರಾಜ್ಯದಲ್ಲಿ ಮುಂಗಾರು (ಮುಂಗಾರು ಮಳೆ) ಅಧಿಕೃತವಾಗಿ ಪ್ರವೇಶ ಪಡೆದಿದ್ದರೂ ಸಹ, ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ವರುಣ ದೇವ ಇನ್ನು ಕೃಪೆ ತೋರಿಲ್ಲ. ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯ ದಿನೇ ದಿನೇ ಬರಿದಾಗುವತ್ತ ಸಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಒಂದೆಡೆ ಕಡು ಬೇಸಿಗೆಯ ರಣ ಬಿಸಿಲಿನ ತಾಪ, ಮತ್ತೊಂದೆಡೆ ಮುಂಗಾರು ಆರಂಭದಲ್ಲೇ ವಕ್ಕರಿಸಿರುವ ಮಳೆಯ ಅಭಾವದಿಂದಾಗಿ ಡ್ಯಾಂನ ನೀರಿನ ಮಟ್ಟ ತಳ ಹಿಡಿಯುತ್ತಿದ್ದು, ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ತೀವ್ರವಾಗಿ ಕುಸಿತ ಕಂಡಿರುವುದರಿಂದ ಕೇವಲ ಮಂಡ್ಯ ಜಿಲ್ಲೆಯ ಕೃಷಿ ವಲಯಕ್ಕೆ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಹಲವು ಜಿಲ್ಲೆ ಹಾಗೂ ಪ್ರಮುಖ ನಗರಗಳಿಗೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ಜಲಾಶಯ ಬತ್ತಿ ಹೋಗುತ್ತಿರುವುದರಿಂದ, ಈ ಹಿಂದೆ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ದ್ವೈವಾರ್ಷಿಕ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಕಣದಲ್ಲಿದ್ದ ಏಕೈಕ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ನೂತನ ಸದಸ್ಯರು: ಎಂ. ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಪವನ್ ಖೇರಾ (ಕಾಂಗ್ರೆಸ್) ಮನ್ಸೂರ್ ಅಲಿಖಾನ್ (ಕಾಂಗ್ರೆಸ್) ಎಂ. ನಾಗರಾಜ್ (ಬಿಜೆಪಿ) ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಭೋಸರಾಜು ಸೋಮಯ್ಯ (ಭೋಜಣ್ಣ ಸೋಮಯ್ಯ) ಎಂಬುವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ನಾಮಪತ್ರ ಸಲ್ಲಿಸಿದ್ದರು. ಆದರೆ, ನಿಯಮಾವಳಿಗಳ ಪ್ರಕಾರ ಅಗತ್ಯವಿದ್ದ ಸೂಚಕರ ಸಹಿ ಇಲ್ಲದ ಕಾರಣ ಅವರ…

Read More

ಮುಂಬೈ: ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ತಮ್ಮ ವಿಶಿಷ್ಟ ನಟನೆ, ಗಂಭೀರ ಧ್ವನಿ ಮತ್ತು ನೇರ ನಡೆ-ನುಡಿಗಳಿಗೆ ಹೆಸರುವಾಸಿಯಾಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಯಶಸ್ಸು ಗಳಿಸಿರುವ ಇವರ ವೃತ್ತಿಜೀವನದಷ್ಟೇ ಇವರ ವೈಯಕ್ತಿಕ ಜೀವನವೂ ಆಗಾಗ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತದೆ. ಅದರಲ್ಲೂ ವಿಶೇಷವಾಗಿ, ನಾನಾ ಪಾಟೇಕರ್ ಮತ್ತು ಅವರ ಪತ್ನಿ ನೀಲಕಾಂತಿ ಪಾಟೇಕರ್ ಅವರು ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯದಿದ್ದರೂ, ಕಳೆದ ಸುಮಾರು 35 ವರ್ಷಗಳಿಂದ ಪರಸ್ಪರ ದೂರ ವಾಸಿಸುತ್ತಿರುವುದು ಅನೇಕರಲ್ಲಿ ಕುತೂಹಲ ಮೂಡಿಸಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ನಾನಾ ಪಾಟೇಕರ್ ಅವರೇ ತಮ್ಮ ದಾಂಪತ್ಯ ಜೀವನ ಮತ್ತು ಪತ್ನಿಯಿಂದ ದೂರವಿರಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ರಂಗಭೂಮಿಯಿಂದ ಶುರುವಾದ ಪ್ರೇಮಕಥೆ: ನಾನಾ ಪಾಟೇಕರ್ ಮತ್ತು ನೀಲಕಾಂತಿ ಅವರ ಮೊದಲ ಭೇಟಿ ಆಗಿದ್ದು ರಂಗಭೂಮಿಯಲ್ಲಿ. ನಾಟಕಗಳಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದ ಇವರ ಪರಿಚಯ ಹಂತಹಂತವಾಗಿ ಸ್ನೇಹಕ್ಕೆ ತಿರುಗಿ, ಬಳಿಕ ಪ್ರೇಮವಾಗಿ ಬದಲಾಯಿತು. ಆ ದಿನಗಳಲ್ಲಿ ನಾನಾ ಪಾಟೇಕರ್ ಅವರಿಗೆ ಒಂದು ನಾಟಕದ…

Read More

ದಕ್ಷಿಣ ಕನ್ನಡ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅನಾರೋಗ್ಯದಿಂದ ಬುಧವಾರ (ಜೂನ್ 10) ನಿಧನರಾಗಿದ್ದಾರೆ. ಸಾಧನೆಯ ಶಿಖರ ಏರಬೇಕಿದ್ದ ಹಸನ್ಮುಖಿ ಯುವತಿಯ ಅಕಾಲಿಕ ಅಗಲಿಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಿಕ್ಷಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೃತ ಅಭಿಜ್ಞಾ ಭಟ್ ಅವರು ಸುಳ್ಯದ ಹೆಸರಾಂತ ಕಿವಿ, ಮೂಗು ಮತ್ತು ಗಂಟಲು (ENT) ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದ ಸಾವು: ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಜ್ಞಾ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ. ತಾಲೂಕಿಗೆ ಪ್ರಥಮ, ರಾಜ್ಯಕ್ಕೆ…

Read More

ಬೆಂಗಳೂರು: “ಒಬ್ಬ ವ್ಯಕ್ತಿಯ ಮೇಲಿರುವ ಆರೋಪಗಳು ಎಷ್ಟೇ ಗಂಭೀರವಾಗಿದ್ದರೂ, ಆತನ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕ ಮಾಹಿತಿಯನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಕೇವಲ ಸರ್ಕಾರಿ ಅಧಿಕಾರಿಯಾಗಿದ್ದಾರೆ ಎಂಬ ಕಾರಣಕ್ಕೆ ಅವರ ವೈಯಕ್ತಿಕ ಆಸ್ತಿ ಮತ್ತು ಜವಾಬ್ದಾರಿಗಳ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಬಹಿರಂಗಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಇಲ್ಲದ ವೈಯಕ್ತಿಕ ದಾಖಲೆಗಳನ್ನು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅಡಿಯಲ್ಲಿ ವಿನಾಯಿತಿಯ ವ್ಯಾಪ್ತಿಗೆ ತರಲಾಗಿದ್ದು, ಇಂತಹ ಮಾಹಿತಿಗಾಗಿ ಒತ್ತಾಯಿಸುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ: ಏನಿದು ವಿವಾದ? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (KSRTC) 1990 ರಿಂದ 2002ರ ಅವಧಿಯಲ್ಲಿ ಕೇಂದ್ರ ಕಚೇರಿಯ ಡೆಪ್ಯುಟಿ ಕಂಟ್ರೋಲರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಪಿ. ಜಯಪಾಲ್ ಎಂಬುವರ ವಿರುದ್ಧ ಬೆಂಗಳೂರಿನ ನಿವಾಸಿ ಎಸ್‌ ಸಾವಿತ್ರಮ್ಮ ಎಂಬುವರು ಆಸ್ತಿ ವಂಚನೆ ಆರೋಪ ಮಾಡಿದ್ದರು. ತಮಗೆ ಸೇರಿದ ಆಸ್ತಿಗೆ ಸಂಬಂಧಿಸಿದಂತೆ ಜಯಪಾಲ್ ವಂಚನೆ ಎಸಗಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ತಮ್ಮಿಬ್ಬರ ನಡುವಿನ ಸಂಬಂಧದ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಂಪೂರ್ಣ ಅನವಶ್ಯಕವಾಗಿದ್ದು, ನಮ್ಮ ನಡುವಿನ ಬಾಂಧವ್ಯ ಎಂದಿಗೂ ಹಾಳಾಗಿಲ್ಲ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಮೊದಲಿನಿಂದಲೂ ನಾನು ಇದನ್ನೇ ಹೇಳುತ್ತಾ ಬಂದಿದ್ದೇನೆ, ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ. ಕೆಲವು ಐಟಿ ಸೆಲ್‌ನವರು ಈ ವಿಷಯಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದರಿಂದ ಅನವಶ್ಯಕವಾಗಿ ಈ ಚರ್ಚೆ ಮುನ್ನೆಲೆಗೆ ಬಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ, ಪಕ್ಷದಾಚೆಗೂ ಅಹಿಂದ ಸಂಘಟನೆಯನ್ನು ಬಲಪಡಿಸುವ ಕೆಲಸವನ್ನು ತಾವು ಮುಂದುವರಿಸುವುದಾಗಿ ಅವರು ತಿಳಿಸಿದರು. ಸಿಎಂ ಹುದ್ದೆ ಹಾಗೂ ಪಕ್ಷದ ಕೆಲಸದ ಕುರಿತು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಮತ್ತು ಸಿಎಂ ಹುದ್ದೆಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಅಭಿಪ್ರಾಯಪಟ್ಟ ಸತೀಶ್ ಜಾರಕಿಹೊಳಿ, “ಮುಖ್ಯಮಂತ್ರಿಯಾಗಲು ಕೇವಲ ಅಧ್ಯಕ್ಷ ಸ್ಥಾನವೇ ಬೇಕೆಂದಿಲ್ಲ. ಪಕ್ಷಕ್ಕಾಗಿ ದುಡಿದರೆ ಅದಕ್ಕೆ ತಕ್ಕ ಕೂಲಿ ಸಿಕ್ಕಿಯೇ…

Read More