Author: kannadanewsnow09

ಕಲಬುರ್ಗಿ:  ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ತೊಗರಿ ಮೌಲ್ಯವರ್ಧನೆಗೆ ಬೇಕಾದ ಸಂಶೋಧನೆ, ತಾಂತ್ರಿಕ ನೆರವಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳಲು ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷರಾದ ಸೈಯದ್ ಮಹಮೂದ್ ಚಿಸ್ತಿ (ಸಾಹೇಬ್) ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು ಯಾವುದೇ ಕೃಷಿ ಉತ್ಪನ್ನಗಳನ್ನು ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆ ಸೃಷ್ಟಿಸಿದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬಹುದು ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ವೃದ್ಧಿಸಬಹುದು ಎಂದು ಹೇಳಿದರು. ಈ ಕಾರ್ಯಕ್ರಮದಡಿ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಧಾರಣೆಯನ್ನೂ ಒದಗಿಸಬಹುದು ಹಾಗೂ ಈ ನಿಟ್ಟಿನಲ್ಲಿ ಸ್ಥಳೀಯ ಮೌಲ್ಯವರ್ಧನೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ತೊಗರಿಯಿಂದ ವಿವಿಧ ಉತ್ಪನ್ನಗಳನ್ನು ತಯಾರಿಸಿ…

Read More

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ದಂಧೆ ನಿಯಂತ್ರಣಕ್ಕೆ ಸ್ವತಹ ಜೆಡಿಎಸ್ ಶಾಸಕಿಯೊಬ್ಬರೇ ಇಳಿದಿದ್ದರು. ಆದರೇ ಹೀಗೆ ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದಂತ ಶಾಸಕಿ ಮನೆಗೆ ನುಗ್ಗಿ, ಧಮ್ಕಿ ಹಾಕಿರುವಂತ ಘಟನೆ ದೇವದುರ್ಗದಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗದ ಜೆಡಿಎಸ್ ಶಾಸಕಿ ಕೆರಮ್ಮ ನಾಯಕ್ ಅವರು ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದರು. ಇದರಿಂದ ಸಿಟ್ಟಾದಂತ ಮರಳು ದಂಧೆ ಕೋರರರು ಅವರ ಮನೆಗೆ ನುಗ್ಗಿ ಧಮ್ಕಿ ಹಾಕಿರುವಂತ ಆರೋಪ ಕೇಳಿ ಬಂದಿದೆ. ದೇವದುರ್ಗದ ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿದ್ದಂತ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಕ್ಕೆ ಶಾಸಕಿ ಕೆರೆಮ್ಮ ಸೂಚಿಸಿದ್ದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸ್ವತಹ ಶಾಸಕಿ ಕೆರೆಮ್ಮ ಅವರೇ ದೇವದುರ್ಗ ಪೊಲೀಸ್ ಠಾಣೆಗೆ ತೆರಳಿ ಧಮ್ಕಿ ಹಾಕಿದಂತ 60ಕ್ಕೂ ಹೆಚ್ಚು ಜನರ ವಿರುದ್ಧ ದೂರು ನೀಡಿದ್ದಾರೆ. ಈ ದೂರು ಆಧರಿಸಿ…

Read More

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲೆಗುಡ್ಡದಲ್ಲಿ ಸಿಕ್ಕಂತ 7 ಅಸ್ಥಿಪಂಜರಗಳ್ನು ಎಸ್ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದಲ್ಲಿನ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮಾನವನ 7 ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಸೆಪ್ಟೆಂಬರ್.17, 2025ರಂದು 5, ಸೆ.18ರಂದು 2 ಸೇರಿದಂತೆ ಏಳು ಅಸ್ಥಿಪಂಜರಗಳು ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿಗೆ ಪತ್ತೆಯಾಗಿದ್ದವು. ಬಂಗ್ಲೆಗುಡ್ಡದ ಅರಣ್ಯದಲ್ಲಿ ಆತ್ಮಹತ್ಯೆ ರೀತಿಯಲ್ಲಿ ಪತ್ತೆಯಾದಂತ ಅಸ್ಥಿ ಪಂಚರಗಳನ್ನು ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಬೆಂಗಳೂರಿನ ಮಡಿವಾಳದಲ್ಲಿರುವಂತ ಎಫ್ ಎಸ್ ಎಲ್ ಕಚೇರಿಗೆ ರವಾನಿಸಲಾಗಿದೆ. ಈ ಅಸ್ಥಿ ಪಂಚರಗಳನ್ನು ಪರೀಕ್ಷೆ ನಡೆಸಿದ ನಂತ್ರ ಬರುವಂತ ವರದಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. https://kannadanewsnow.com/kannada/draft-voters-list-for-369-wards-under-gba-published/

Read More

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು, ಹೆಸರಿಲ್ಲದಿದ್ದರೆ ಕೂಡಲೇ ನಮೂನೆಯ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವಿದೆ. 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್ ಸಂಗ್ರೇಶಿ ರವರು ಜಿ.ಬಿ.ಎ. ಕೇಂದ್ರ ಕಛೇರಿಯ ಸಭಾಂಗಣ-1 ರಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಬರಲಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್ ಸಂಗ್ರೇಶಿ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ ಸೇರಿಸಿದರೆ ಸಾಕಾಗುವುದಿಲ್ಲ.…

Read More

ಶಿವಮೊಗ್ಗ: ರಾಜಕೀಯವಾಗಿ ಅನುನುಭವಿಯಾಗಿದ್ದ ನನಗೆ ರಾಜಕೀಯ ಪ್ರಜ್ಞೆ ಮೂಡಲು ತಾಲ್ಲೂಕಿನ ಪತ್ರಕರ್ತರಿಂದ ಸಲಹೆ, ಸಹಕಾರ ಪಡೆದು ಸುಶಿಕ್ಷಿತನಾಗಲು ಸಾಧ್ಯವಾಗಿದೆ ಎಂದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಮಂಗಳವಾರ ಪಟ್ಟಣದ ಶ್ರೀರಂಗ ಕನ್ವೆನ್ಷನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಾಂಗ,ಕಾರ್ಯಾಂಗ,ಶಾಸಕಾಂಗದ ಜೊತೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಮರ್ಥವಾಗಿರುವ ಪತ್ರಿಕಾ ರಂಗ ತನ್ನದೇ ಆದ ಶಕ್ತಿ ಉಳಿಸಿಕೊಂಡಿದೆ. ಆದರೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ಬಂದ ಮೇಲೆ ಪತ್ರಿಕಾ ರಂಗದ ನಿಜವಾದ ದಿಕ್ಕು,ದಿಸೆ ಬದಲಾಗಿದೆ. ಸಮಾಜಕ್ಕೆ ಸರಿ ದಾರಿ ತೋರಿಸುವ ಕ್ಷೇತ್ರ ತನ್ನ ನಿಜತನವನ್ನು ಬದಲಾಯಿಸಿಕೊಂಡರೆ ಯಾರಿಗೆ ಪ್ರಶ್ನೆ ಮಾಡಲು ಸಾಧ್ಯ. ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದ ಎಲ್ಲರೂ ತಮ್ಮ ತನವನ್ನು ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸಚಿವನಾಗಿ ಉತ್ತಮ ಕೆಲಸ ಮಾಡಿದ್ದರೂ ತಿರುಚಿ ಹಾಕಿದಾಗ ಬಹಳ ಬೇಸರವಾಗುತ್ತದೆ. ಸಾರ್ವಜನಿಕರು ರಾಜಕಾರಣಿಗಳನ್ನು ದೂರಿದಂತೆ ಪತ್ರಕರ್ತರನ್ನು ದೂರುವ ಸಂದರ್ಭ ಹೆಚ್ಚಾಗಿದೆ. ವೃತ್ತಿಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸೋದಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ದಿಢೀರ್ ಹಿಂಪಡೆಯಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಆದೇಶ ಮಾಡಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸಲು ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ. ದಿನಾಂಕ 16-01-2026ರಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ಹೊರಡಿಸಿದ್ದಂತ ಆದೇಶವನ್ನು ಈ ಕೂಡಲೇ ಹಿಂಪಡೆಯಲಾಗಿದೆ. ಸದರಿ ಕಾರ್ಯಕ್ಕೆ ನೇಮಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮೂಲ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/shivamogga-power-outage-in-these-areas-of-soraba-ulavi-on-january-22nd/

Read More

ಶಿವಮೊಗ್ಗ: ಜನವರಿ.22, 2026ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಸೊರಬ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 22-01-2026ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ಜನವರಿ.22ರಂದು ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಜನವರಿ.22ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಬರಗಿ, ಕಾನಳ್ಳಿ, ಉಳವಿ, ಹೊಸಬಾಳೆ ಮತ್ತು ದೂಗೂರು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಕರೆಂಟ್ ಇರೋದಿಲ್ಲ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ. ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/bjp-holds-protest-in-sagar-condemning-state-governments-failure/ https://kannadanewsnow.com/kannada/nhm-contract-employees-protest-against-state-government-for-not-releasing-salaries-call-for-struggle/

Read More

ಶಿವಮೊಗ್ಗ : ಸಾಗರದ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ಕ್ಷೇತ್ರವ್ಯಾಪ್ತಿಯಲ್ಲಿ ಗಾಂಜಾ ಸೇರಿ ವಿವಿಧ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ವಿಫಲವಾಗಿರುವ ಆಡಳಿತದ ಕ್ರಮದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಶಿವಮೊಗ್ಗದ ಸಾಗರದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಕ್ಷೇತ್ರವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಪ್ರಕರಣ ಜಾಸ್ತಿಯಾಗಿದೆ. ಗಾಂಜಾ ಎಲ್ಲಿಂದ ಬರುತ್ತಿದೆ, ಯಾರಿಗೆ ಸರಬರಾಜು ಮಾಡುತ್ತಿದ್ದಾರೆ ಎಂದು ಪೊಲೀಸರಿಗೆ ಗೊತ್ತಿದ್ದರೂ ಅವರು ಗಮನ ಹರಿಸುತ್ತಿಲ್ಲ. ಹೊರಜಿಲ್ಲೆಗಳಿಂದ ಗಾಂಜಾ ಅಕ್ರಮವಾಗಿ ಸರಬರಾಜು ಆಗುತ್ತಿದೆ. ತಕ್ಷಣ ಇದರ ವಿರುದ್ದ ಕ್ರಮ ಜರುಗಿಸಬೇಕು. ಇಲ್ಲವಾದರೆ ಆಡಳಿತದ ವಿರುದ್ದ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಪದೇ ಪದೇ ಸಾಗರ ಕ್ಷೇತ್ರದಲ್ಲಿ ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ ಸಾಗರ ತಾಲ್ಲೂಕಿನಲ್ಲಿ ಅಸಮರ್ಪಕ ವಿದ್ಯುತ್ ವ್ಯವಸ್ಥೆಯಿಂದ ರೈತರು ಹೈರಾಣಾಗಿದ್ದಾರೆ ಎಂಬುದಾಗಿ…

Read More

ಬೆಂಗಳೂರು: ಶಕ್ತಿ ಯೋಜನೆಯಡಿ ಹೊರ ರಾಜ್ಯದವರಿಗೂ ಟಿಕೆಟ್ ನೀಡಿ, ಅದರ ಬದಲಿಗೆ ತಮ್ಮ ಯುಪಿಐ ಖಾತೆಗೆ ಟಿಕೆಟ್ ಮೊತ್ತದ ದರವನ್ನು ಕೆಲ ಬಿಎಂಟಿಸಿ ನಿರ್ವಾಹಕರು ಪಡೆದಿದ್ದು ಬೆಳಕಿಗೆ ಬಂದಿತ್ತು. ಈ ಯುಪಿಐ ಸ್ಕ್ಯಾನರ್ ದುರುಪಯೋಗ ಪ್ರಕರಣದಲ್ಲಿ ನಾಲ್ವರು ನಿರ್ವಾಹಕರನ್ನು ಅಮಾನತುಗೊಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆದೇಶಿಸಿದೆ. ಹೊರ ರಾಜ್ಯದವರಿಗೆ ಐಡಿ ಕಾರ್ಡ್ ನೋಡಿದ ನಂತ್ರ, ಅವರಿಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡುವಂತಿಲ್ಲ. ಹೀಗಿದ್ದರೂ ಬಿಎಂಟಿಸಿಯ ಕಂಡಕ್ಟರ್, ಅವರಿಗೂ ಶಕ್ತಿ ಯೋಜನೆಯ ಟಿಕೆಟ್ ನೀಡಿ, ಅವರಿಂದ ಅದರಲ್ಲಿ ಇದ್ದಂತ ಹಣವನ್ನು ತಮ್ಮ ಯುಪಿಐ ಸ್ಕ್ಯಾನರ್ ಗೆ ಹಾಕಿಸಿಕೊಂಡಿದ್ದರು. ಬಿಎಂಟಿಸಿ ತನಿಖಾಧಿಕಾರಿಗಳು ಟಿಕೆಟ್ ಚೆಕ್ ಮಾಡಿದಂತ ಸಂದರ್ಭದಲ್ಲಿ ಹೀಗೊಂದು ಹಗರಣ ಬೆಳಕಿಗೆ ಬಂದಿತ್ತು. ಹೀಗಾಗಿ ಬಿಎಂಟಿಸಿಯ ಎಲ್ಲಾ ಘಟಕದಲ್ಲೂ ಯುಪಿಐ ಸ್ಕ್ಯಾನರ್ ದುರುಪಯೋಗದ ಬಗ್ಗೆ ಸಮಗ್ರ ತನಿಖೆಯನ್ನು ಸಂಸ್ಥೆಯು ನಡೆಸಿತ್ತು. ಈ ಸಂದರ್ಭದಲ್ಲಿ ಮೂವರು ಕಂಡಕ್ಟರ್ ಯುಪಿಐ ಸ್ಕ್ಯಾನರ್ ದುರುಪಯೋಗ ಮಾಡಿಕೊಂಡಿರೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿಯ ಈಶಾನ್ಯ ವಲಯದ ಘಟಕ…

Read More