Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ, ಮಾಡುತ್ತೇವೆ, ಇದಕ್ಕೆ ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ ನೀಡಿದರು. ನಗರದ ನೆಹರೂ ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಯುವಕರ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ. ಅವರ ಸಮಯದಲ್ಲಿ ಬಹಳಷ್ಟು ಹಗರಣಗಳಾದವು. ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ನಮ್ಮ ಆದ್ಯತೆ” ಎಂದು ಹೇಳಿದರು. “ಹುದ್ದೆಗಳ ಭರ್ತಿ ಕುರಿತು ಯೋಜನೆ ತಯಾರಿಸಿದ್ದೇವೆ. ಕೆಪಿಎಸ್ ಸಿ ಸೇರಿದಂತೆ ಬೇರೆ…
ಬೆಂಗಳೂರು: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಭಾರಿ ಮನ್ನಣೆ ದೊರೆತಿದೆ. ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ಖ್ಯಾತ ವಿಜ್ಞಾನಿಗಳು, ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅವರಿಗೆ ಅಧಿಕೃತವಾಗಿ ಪತ್ರ ಬರೆದಿದ್ದು, ರಾಜ್ಯದ ‘ಕ್ವಾಂಟಮ್ ಮೆಟೀರಿಯಲ್ ಇನ್ನೋವೇಶನ್ ನೆಟ್ವರ್ಕ್’ (Q-MINt) ಯೋಜನೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಐಸಿಟಿಎಸ್-ಟಿಐಎಫ್ಆರ್ (ICTS-TIFR) ನಲ್ಲಿ ನಡೆದ ‘ಫ್ರಾಂಟಿಯರ್ಸ್ ಇನ್ ಕ್ವಾಂಟಮ್ ಕಂಡೆನ್ಸ್ಡ್ ಮ್ಯಾಟರ್ ಫಿಸಿಕ್ಸ್’ (FQCMP) ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ, ಜಾಗತಿಕ ವಿಜ್ಞಾನಿಗಳ ಸಮುದಾಯವು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಸಿಟಿ’ ಕಾರ್ಯಕ್ರಮದ ಪ್ರಮುಖ ಭಾಗವಾಗಿ ಕ್ಯೂ-ಮಿಂಟ್ (Q-MINt) ಸ್ಥಾಪಿಸುವ ದೂರದೃಷ್ಟಿಯ ಕ್ರಮವನ್ನು ಶ್ಲಾಘಿಸಿದೆ. ಕಂಪ್ಯೂಟಿಂಗ್, ಸಂವಹನ ಮತ್ತು ಸೆನ್ಸಿಂಗ್ ಕ್ಷೇತ್ರಗಳಲ್ಲಿ ಮುಂದಿನ ಪೀಳಿಗೆಯ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ನವೀನ ಕ್ವಾಂಟಮ್ ವಸ್ತುಗಳು ಅತ್ಯಂತ ನಿರ್ಣಾಯಕ ಅಡಿಪಾಯವಾಗಿವೆ ಎಂದು ವಿಜ್ಞಾನಿಗಳು ತಮ್ಮ ಜಂಟಿ ಪತ್ರದಲ್ಲಿ ಹೇಳಿದ್ದಾರೆ. ವಿಶ್ವದ ಪ್ರಮುಖ ವಿಜ್ಞಾನಿಗಳ ಬೆಂಬಲವನ್ನು ಮಾನ್ಯ ಸಚಿವರಾದ ಎನ್.ಎಸ್. ಭೋಸರಾಜು ಅವರು ಸ್ವಾಗತಿಸಿದ್ದಾರೆ. “ಕರ್ನಾಟಕ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿಯೇ ಅರಾಜಕತೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ! ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ. ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್ 11 ರಿಂದ ಒಪಿಡಿ ಬಂದ್. 37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ ಆಗಿದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ. ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯ ಪ್ರತಿಭಟನೆ ಅಂತ ತಿಳಿಸಿದ್ದಾರೆ. ಬಿಡದಿ ಟೌನ್ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್, ಕಬ್ಬು ಬಿಲ್…
ಶಿವಮೊಗ್ಗ: ತಮ್ಮ ಖಾಸಗಿ ಜಮೀನಿನಲ್ಲಿದ್ದಂತ ಕಾಡು ಜಾತಿ, ಅಕೇಶಿಯಾ ಸೇರಿದಂತೆ ಇತರೆ ಮರಗಳನ್ನು ಕಡಿತಲೆ ಮಾಡಿದ್ದ ಕಾರಣದಿಂದ ಸಾಗರ ಎಸಿಎಫ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರೈತರೊಬ್ಬರು ಸಾಗರ ಡಿಎಫ್ಓಗೆ ದೂರು ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಡಿಎಫ್ಓ ಕಚೇರಿ ಮುಂದೆ ದೊಂಬೆ ಗ್ರಾಮದ ನಿವಾಸಿಯಾದಂತ ವಿನಾಯಕ.ಕೆ ಎಂಬುವರು ದಂಪತಿ ಸಹಿತ ಪ್ರತಿಭಟನೆ ನಡೆಸಿದರು. ಅಲ್ಲದೇ ಸಾಗರದ ಎಸಿಎಫ್ ರವಿ ಅವರು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರೋದಕ್ಕೆ ಆಕ್ರೋಶವನ್ನು ಹೊರ ಹಾಕಿದರು. ಎಸಿಎಫ್ ರವಿ ವಿರುದ್ಧ ಸಾಗರ ಡಿಎಫ್ಓಗೆ ರೈತ ದಂಪತಿಗಳು ದೂರು ಈ ವೇಳೆ ಮಾತನಾಡಿದಂತ ಅವರು, ದೊಂಬೆ ಗ್ರಾಮದ ಸರ್ವೆ ನಂ.35ರಲ್ಲಿ 16 ಎಕರೆ ಸ್ವಂತ ಜಾಗವಿದೆ. ಅದರಲ್ಲಿ ಕೃಷಿ ಚಟುವಟಿಕೆ ಮಾಡುವ ಕಾರಣ ಜೆಸಿಬಿ ಹಾಗೂ ಕೆಲಸಗಾರರ ಸಹಾಯದಿಂದ ಸ್ವಚ್ಛಗೊಳಿಸುವಂತ ಕಾರ್ಯ ನಡೆಸಲಾಗುತ್ತಿತ್ತು. ಇಲ್ಲಿದೆ ಪರಿಶೀಲನೆಗಾಗಿ ಬಂದಂತ ಸಾಗರ ಎಸಿಎಫ್ ರವಿ ಅವರು, ಏ ಬಟ್ಟಾ ನೀನು ಯಾವುದೇ…
ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯು ಉತ್ತಮ ಕೆಲಸದ ಮೂಲಕ ರಾಷ್ಟ್ರ ಮಟ್ಟದಲ್ಲಿ ಜನಮನ್ನಣೆ ಪಡೆದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅಲ್ಲದೇ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1,600 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಗೃಹರಕ್ಷಕ ದಳ, ಪೌರರಕ್ಷಣೆ ಮತ್ತು ಎಸ್ಡಿಆರ್ಎಫ್ ಅಧಿಕಾರಿ, ಸಿಬ್ಬಂದಿಗಳಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಇಲಾಖೆಯು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿ, ರಾಜ್ಯಕ್ಕೆ ಗೌರವ ಸಂಪಾದನೆ ಮಾಡಿರುದನ್ನು ರಾಜ್ಯ ಸರ್ಕಾರ ಮತ್ತು ಜನಸಮುದಾಯ ಗಮನಿಸಿದೆ ಎಂದು ಹೇಳಿದರು. ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶಿಸ್ತಿನ ಸಿಪಾಯಿಗಳು. ಪೊಲೀಸ್ ಇಲಾಖೆಯ ಜೊತೆಜೊತೆಯಾಗಿ ಅಷ್ಟೇ ಶಿಸ್ತನ್ನು ಕಾಪಾಡಿಕೊಂಡು…
ಬೆಂಗಳೂರು : ಸ್ವಯಂ ಚಾಲಿತ ಮ್ಯುಟೇಷನ್ಗೆ ಚಾಲನೆ ನೀಡುವ ಮೂಲಕ ಜನಪರ ಮತ್ತು ಸರಳ ಆಡಳಿತವನ್ನು ಸಾರ್ವಜನಿಕರ ಮನೆಬಾಗಿಲಿಗೇ ತಲುಪಿಸಬೇಕು ಎಂಬ ಸರ್ಕಾರದ ಉದ್ದೇಶ ಈಡೇರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಮಂಗಳವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ಗೆ ಚಾಲನೆ ನೀಡಿ ಮಾತನಾಡಿದ ಅವರು, “ಕಂದಾಯ ಇಲಾಖೆಯನ್ನು ಜನಪರಗೊಳಿಸಬೇಕು, ಆಡಳಿತದಲ್ಲಿ ಸುಧಾರಣೆ ಮತ್ತು ಸರಳೀಕರಣಗೊಳಿಸಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಿಂದ ಹೆಜ್ಜೆ ಹೆಜ್ಜೆಗೂ ಹಲವಾರು ಬದಲಾವಣೆಗಳನ್ನು ತರಲಾಗುತ್ತಿದೆ. ಆ ಬದಲಾವಣಾ ಪರ್ವದ ಮತ್ತೊಂದು ಮಹತ್ವದ ಹೆಜ್ಜೆಯೇ ಸ್ವಯಂ ಚಾಲಿತ ಮ್ಯುಟೇಶನ್ ಗೆ ಚಾಲನೆ. ಈ ಸೇವೆಯನ್ನು ಒಂದು ತಿಂಗಳಿನಿಂದ ಮಂಡ್ಯದಲ್ಲಿ ಅನುಷ್ಠಾನಗೊಳಿಸಿ ಸಾಧಕ ಪರಿಶೀಲಿಸಿ ಇಂದಿನಿಂದ ಶೇ.98 ರಷ್ಟು ಎಲ್ಲಾ ಖಾತೆ ಬದಲಾವಣೆಗಳೂ ಸ್ವಯಂ ಚಾಲಿತಗೊಳ್ಳಲು ಮುನ್ನುಡಿ ಇಟ್ಟಿದ್ದೇವೆ” ಎಂದು ಸಂತಸ ವ್ಯಕ್ತಪಡಿಸಿದರು. “ಖಾತೆ ಬದಲಾವಣೆ ಕಂದಾಯ ಇಲಾಖೆಯ ಮೂಲ ಜವಾಬ್ದಾರಿಗಳಲ್ಲೊಂದು. ಈ ಹಿಂದೆ ಶಾನುಬೋಗರು ಮಾಡುತ್ತಿದ್ದ ಕೆಲಸವನ್ನು ಈಗ ಭೂಮಿ ತಂತ್ರಾಂಶದ ಮೂಲಕ ಮಾಡಲಾಗುತ್ತಿದೆ.…
ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. ನಾರಿನಂಶವಿರುವ (Fiber) ಆಹಾರಗಳನ್ನು ಹೆಚ್ಚಿಸಿ ಓಟ್ಸ್, ಬಾರ್ಲಿ, ಮತ್ತು ದ್ವಿದಳ ಧಾನ್ಯಗಳಲ್ಲಿರುವ ‘ದ್ರವ ರೂಪದ ನಾರು’ (Soluble Fiber) ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ (LDL) ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ದಿನಕ್ಕೆ ಕನಿಷ್ಠ ಒಂದು ಬಾರಿಯಾದರೂ ಇಡೀ ಧಾನ್ಯಗಳ ಸೇವನೆ ಇರಲಿ. 2. ಆರೋಗ್ಯಕರ ಕೊಬ್ಬನ್ನು ಆರಿಸಿ (Healthy Fats) ಸಾಚುರೇಟೆಡ್ ಫ್ಯಾಟ್ ಇರುವ ಬೆಣ್ಣೆ ಅಥವಾ ತುಪ್ಪದ ಬದಲಾಗಿ, ಹೃದಯಕ್ಕೆ ಹಿತವಾದ ಅನ್ಸಾಚುರೇಟೆಡ್ ಫ್ಯಾಟ್ ಬಳಸಿ. ಆಲಿವ್ ಎಣ್ಣೆ…
ಧಾರವಾಡ: ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೂ ಆದೇಶ ಮಾಡಿ ಸಿಹಿಸುದ್ದಿಯನ್ನು ನೀಡಿದೆ. ಈ ಕುರಿತಂತೆ ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅವರ ಆಯುಕ್ತರು ಆದೇಶ ಮಾಡಿದ್ದು, ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಸೇವಾ ಹಿರಿತನ, ಪರಿಷ್ಕೃತ ವೇತನ ನಿಗದಿ ಹಾಗೂ ಬಾಕಿ ಪಾತಿಗಳನ್ನು ಪಾವತಿಸುವ ಸಂಬಂಧ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಗೌರವಾನ್ವಿತ ಭಾರತ ಸರ್ವೋಚ್ಚ ನ್ಯಾಯಾಲಯಗಳು ನೀಡಿರುವ ತೀರ್ಪ/ಆದೇಶಗಳ ಹಿನ್ನೆಲೆಯಲ್ಲಿ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಆದೇಶವನ್ನು ಅನುಷ್ಠಾನ ಮಾಡಿದಲ್ಲಿ ರಾಜ್ಯಾದ್ಯಂತ ಗ್ರಾಮೀಣ ಕೃಪಾಂಕ ರಹಿತವಾಗಿ 2003-04 ರಲ್ಲಿ ನೇಮಕಗೊಂಡಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು ಅತ್ಯಧಿಕ ಆರ್ಥಿಕ ವೆಚ್ಚ ಉಂಟಾಗುವುದೆಂಬುದನ್ನು ಮನಗಂಡು ಆರ್ಥಿಕ ಇಲಾಖೆಯ ಸಹಮತಿಯಂತೆ ಅರ್ಕಾರದ ಆದೇಶ ಸಂಖ್ಯೆ: ಇಪಿ 78 PMW 2025 ದಿನಾಂಕ: 11-07-2025ರ ಆದೇಶವನ್ನು…
ಕೆಎನ್ಎನ್ ಡಿಜಿಟಲ್ ಡೆಸ್ಕ್: ವಾಟರ್ ಹೀಟ್ ಮೂಲಕ ಬಿಸಿ ನೀರು ಕಾಯಿಸಿ ಉಪಯೋಗಿಸುವಾಗ ಎಚ್ಚರಿಕೆ ವಹಿಸಬೇಕಿದೆ. ಒಂದು ವೇಳೆ ವಾಟರ್ ಹೀಟರ್ ಬಳಸುವಾಗ ಈ ತಪ್ಪು ಮಾಡಿದರೇ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇದೆ. ಗೀಸರ್ ಅಥವಾ ಇಮ್ಮರ್ಶನ್ ರಾಡ್ ಬಳಸಿ ನೀರನ್ನು ಅತಿಯಾಗಿ ಕಾಯಿಸಿ ಸ್ನಾನ ಮಾಡುವುದು ನಿಮ್ಮ ಚರ್ಮ ಮತ್ತು ಆರೋಗ್ಯದ ಮೇಲೆ ಗಂಭೀರ ಪ್ರಭಾವ ಬೀರಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಚರ್ಮದ ನೈಸರ್ಗಿಕ ತೇವಾಂಶಕ್ಕೆ ಕುತ್ತು ನಮ್ಮ ಚರ್ಮದ ಮೇಲೆ ನೈಸರ್ಗಿಕವಾಗಿ ತೇವಾಂಶದ ಪದರವೊಂದು (Moisture Barrier) ಇರುತ್ತದೆ, ಇದು ಬಾಹ್ಯ ಸೋಂಕುಗಳಿಂದ ಚರ್ಮವನ್ನು ಕಾಪಾಡುತ್ತದೆ. ನೀರನ್ನು ಅತಿಯಾದ ಉಷ್ಣಾಂಶಕ್ಕೆ ಕಾಯಿಸಿ ಸ್ನಾನ ಮಾಡುವುದರಿಂದ ಈ ರಕ್ಷಣಾ ಪದರವು ಹಾನಿಗೊಳಗಾಗುತ್ತದೆ. ಇದರಿಂದಾಗಿ ಈ ಕೆಳಗಿನ ಸಮಸ್ಯೆಗಳು ಎದುರಾಗಬಹುದು: ಚರ್ಮದ ಶುಷ್ಕತೆ: ಚರ್ಮವು ಅತಿಯಾಗಿ ಒಣಗುವುದು ಮತ್ತು ಬಿರುಕು ಬಿಡುವುದು. ತುರಿಕೆ ಮತ್ತು ಅಲರ್ಜಿ: ಚರ್ಮ ಕೆಂಪಾಗುವುದು ಮತ್ತು ನಿರಂತರ ತುರಿಕೆ ಕಾಣಿಸಿಕೊಳ್ಳುವುದು. ಸುಟ್ಟ ಗಾಯಗಳು: ವಿಶೇಷವಾಗಿ ಸಣ್ಣ ಮಕ್ಕಳು…
ನವದೆಹಲಿ: ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) ಆಹಾರಗಳ ಸೇವನೆ ದೇಹದಲ್ಲಿ ಹಿಮೋಗ್ಲೋಬಿನ್ ಉತ್ಪಾದನೆಗೆ ಕಬ್ಬಿಣಾಂಶ ಅತಿ ಮುಖ್ಯ. ನಿಮ್ಮ ಆಹಾರದಲ್ಲಿ ದಾಳಿಂಬೆ, ಖರ್ಜೂರ, ಬೀಟ್ರೂಟ್, ಕುಂಬಳಕಾಯಿ ಬೀಜ, ನುಗ್ಗೆ ಸೊಪ್ಪು, ಒಣದ್ರಾಕ್ಷಿ, ಎಳ್ಳು, ಮೊಟ್ಟೆ, ಮೀನು ಮತ್ತು ಹಸಿರು ಎಲೆ ತರಕಾರಿಗಳನ್ನು ಹೆಚ್ಚಾಗಿ ಬಳಸಿ. 2. ವಿಟಮಿನ್ ಬಿ12 ಮರೆಯಬೇಡಿ ಕೆಂಪು ರಕ್ತಕಣಗಳ ಉತ್ಪಾದನೆಗೆ ವಿಟಮಿನ್ ಬಿ12 ಇಂಧನದಂತೆ ಕೆಲಸ ಮಾಡುತ್ತದೆ. ಹಾಲು, ಮೊಸರು, ಚೀಸ್ನಂತಹ ಡೈರಿ ಉತ್ಪನ್ನಗಳು ಮತ್ತು ಮೊಟ್ಟೆಗಳು ಬಿ12 ನ…














