Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಬಿಗ್ ಬಾಸ್ ಕನ್ನಡ ಸೀಜನ್ 12 ಅನ್ನು ಗೆದ್ದ ಅಭ್ಯರ್ಥಿಗಳನ್ನು ಘೋಷಣೆ ಕೂಡ ಮಾಡಲಾಗುತ್ತಿದೆ. ಇಂದು ಹಾಗೂ ನಾಳೆ ಎರಡು ದಿನ ನೆಚ್ಚಿನ ಅಭ್ಯರ್ಥಿಯ ಬಗ್ಗೆ ವೋಟ್ ಮಾಡೋದಕ್ಕೆ ಆನ್ ಲೈನ್ ಮೂಲಕ ಅವಕಾಶ ನೀಡಲಾಗಿದೆ. ಬಿಗ್ ಬಾಸ್ ಕನ್ನಡ ಸೀಜನ್ 12ರಲ್ಲಿ ಆರು ಮಂದಿ ಸ್ಪರ್ಧಿಗಳು ಗ್ರ್ಯಾಂಡ್ ಫಿನಾಲೆಗೆ ಕಾಲಿಟ್ಟಿದ್ದು, ಇವರಲ್ಲಿ ಓರ್ವ ವಿನ್ನರ್ ಆದರೇ, ಓರ್ವ ರನ್ನರ್ ಅಪ್ ಆಗಲಿದ್ದಾರೆ. ಅವರಲ್ಲಿ ಯಾರು ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಬಿಬಿಕೆ12ರಲ್ಲಿ ಅಶ್ವಿನಿಗೌಡ, ಗಿಲ್ಲಿ, ರಕ್ಷಿತಾ ಶೆಟ್ಟಿ, ರಘು, ಕಾವ್ಯ ಹಾಗೂ ಧನುಷ್ ಫೈನಲ್ ಲೀಸ್ಟ್ ನಲ್ಲಿ ಇದ್ದಾರೆ. ತೀವ್ರ ಪೈಪೋಟಿಯ ನಡುವೆ ನಾಳೆ ಗ್ರ್ಯಾಂಡ್ ಫಿನಾಲೆಯಲ್ಲಿ ಇವರಲ್ಲಿ ಯಾರು ವಿನ್ನರ್, ಯಾರು ರನ್ನರ್ ಅಪ್ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/1-53-lakh-crore-new-investment-attraction-after-global-investors-summit-in-the-state-minister-m-b-patil/
ಬೆಂಗಳೂರು: ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ತಿಳಿಸಿದ್ದಾರೆ. ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಈ ವಿವರ ಮತ್ತು ಅಂಕಿಅಂಶಗಳನ್ನು ನೀಡಿದ್ದಾರೆ. ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿದ್ದು, ಅದು ಕೇವಲ ಹೂಡಿಕೆದಾರರ ಸಮಾವೇಶಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ತಯಾರಿಕೆ, ಮರುಬಳಕೆ ಇಂಧನ, ಡೇಟಾ ಕೇಂದ್ರಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸ್ಥಾಪನೆ ಈ ವಲಯಗಳಲ್ಲಿ ಹಲವು ಅಗ್ರಗಣ್ಯ ಉದ್ಯಮ ಸಂಸ್ಥೆಗಳು ಈ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ. ಈ ಪ್ರಸ್ತಾವನೆಗಳು ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಉದ್ಯೋಗ…
ಮಂಡ್ಯ : ಮದ್ದೂರು ನಗರದ ರೇಷ್ಮೆ ಇಲಾಖೆ ಜಾಗದಲ್ಲಿ ನೂತನವಾಗಿ ತಾಲೂಕು ನ್ಯಾಯಾಲಯಗಳ ಸಂಕೀರ್ಣವನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಮಂಡ್ಯ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ನೂತನ ನ್ಯಾಯಾಲಯಗಳ ಸಂಕೀರ್ಣದ ನಿರ್ಮಾಣದ ಸ್ಥಳವನ್ನು ಜಿಲ್ಲಾ ಸೆಷನ್ ನ್ಯಾಯಾಧೀಶ ಡಿ.ಜೆ.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಬಿ.ಮೋಹನ್ ಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್.ಸಿ.ನಳಿನಿ ಹಾಗೂ ಇನ್ನಿತರ ನ್ಯಾಯಾಧೀಶರುಗಳ ಜೊತೆಗೆ ಆಗಮಿಸಿ ಪರಿಶೀಲಿಸಿದರು. ಮದ್ದೂರು ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣವನ್ನು ನಿರ್ಮಾಣ ಮಾಡಲು ರೇಷ್ಮೆ ಇಲಾಖೆಯ ಜಾಗದ ಸರ್ವೆ ನಂ 800/1, 800/3, 801 / 1 ರಲ್ಲಿ 4.35 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಇದರಲ್ಲಿ ನ್ಯಾಯಾಲಯದ ಸಂಕೀರ್ಣ, ನ್ಯಾಯಾಧೀಶರ ವಸತಿ ಗೃಹಗಳು ಹಾಗೂ ಸಿಬ್ಬಂದಿಗಳ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರು…
ಮಂಡ್ಯ : ಮದ್ದೂರು ತಾಲೂಕಿನ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು ಬರಲು ಒಂದು ವಾರ ಆಗುತ್ತಿತ್ತು. ಆದರೆ, ಈಗ ಎರಡು ಮೂರು ದಿನಗಳಲ್ಲೇ ಕೊನೆ ಭಾಗಕ್ಕೆ ನೀರು ಸರಾಗವಾಗಿ ಹರಿಯಲು ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಪಣ್ಣೆದೊಡ್ಡಿ, ಕೆರೆಮೇಗಳದೊಡ್ಡಿ, ಬೆಳತೂರು, ಹೊಂಬಾಳೆಗೌಡನದೊಡ್ಡಿ ಗ್ರಾಮಗಳಲ್ಲಿ ಶನಿವಾರ 1.80 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು ತಾಲೂಕಿನ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು ಬರಲು ಈ ಹಿಂದೆ ಒಂದು ವಾರ ಆಗುತ್ತಿತ್ತು. ಆದರೆ, ಈಗ ಸಾಕಷ್ಟು ನಾಲೆಗಳ ಆಧುನಿಕರಣವಾಗಿರುವುದರಿಂದ ಎರಡು ಮೂರು ದಿನಗಳಲ್ಲೇ ಕೊನೆ ಭಾಗಕ್ಕೆ ನೀರು ಸರಾಗವಾಗಿ ಹರಿದು ರೈತರಿಗೆ ಅನುಕೂಲವಾಗುತ್ತಿದೆ ಎಂದರು. ರೈತರು ಬೇಸಾಯ ಮಾಡಲು ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಸಮಸ್ಯೆಗಳ ಬಗ್ಗೆ ಸಾಕಷ್ಟು ಚರ್ಚಿಸಿ ನೀರಾವರಿ ಯೋಜನೆಗಳಿಗೆ ಅಂದಾಜು 800 ಕೋಟಿಗೂ…
ಬೆಂಗಳೂರು : ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಪೊಲೀಸರ ನಿರಂತರ ಕಾರ್ಯಾಚರಣೆ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್ ಚಟುವಟಿಕೆಗಳು ಯಥೇಚ್ಛವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಅಲ್ಲದೇ, ಸೈಬರ್ ಕ್ರೈಂ ಹಾವಳಿಯು ಹೆಚ್ಚಾಗುತ್ತಿದೆ. ಅಮಾಯಕರು ಪ್ರತಿದಿನ ಲಕ್ಷಾಂತರ ರೂ. ಹಣ ಕಳೆದುಕೊಳ್ಳುತ್ತಿದ್ದಾರೆ. ಸೈಬರ್ ಕ್ರೈಂ ಹಾವಳಿ ಮತ್ರು ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಪ್ರತ್ಯೇಕ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರೀಕ್ಷೆಯ ಮಟ್ಟಕ್ಕೆ ಕೆಲಸ ಮಾಡುತ್ತಿಲ್ಲ. ಇದನ್ನು ನಿರ್ಲಕ್ಷಿಸದೇ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಬೆಂಗಳೂರು ನಗರವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಬೆಂಗಳೂರು ನಗರ ಸೈಬರ್ ಕ್ರೈಂ ಅಡ್ಡೆಯಾಗುವುದಕ್ಕೆ ಆಸ್ಪದ ನೀಡಬಾರದು. ಇತ್ತೀಚೆಗಿನ ಕೆಲವು…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಪಂದ್ಯ ನಡೆಸಲು ಕೆ ಎಸ್ ಸಿ ಎ ಗೆ ಅನುಮತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ. ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ಅನುಮತಿಸಲಾಗಿದ್ದು, ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿ ಪಡಿಸಿರುವ ನಿರ್ಧಿಷ್ಟ ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ. ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಾವಳಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸೋದಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಜನವರಿ.20ರ ಒಳಗಾಗಿ ಮಾಹಿತಿ ನೀಡುವಂತೆ ಕೆ ಎಸ್ ಸಿ ಎ ಗೆ ಬಿಸಿಸಿಐ ಸೂಚಿಸಿತ್ತು.
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಕಾಲ್ತುಳಿತದ ನಂತ್ರ ಐಪಿಎಲ್ ಪಂದ್ಯಾವಳಿಗಳು ಆಡೋದು ಡೌಟ್ ಎನ್ನಲಾಗಿತ್ತು. ಆದರೇ ಆರ್ ಸಿ ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಲ ಷರತ್ತುಗಳೊಂದಿಗೆ ಐಪಿಎಲ್ ಪಂದ್ಯಾವಳಿಯನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡೋದಕ್ಕೆ ರಾಜ್ಯ ಗೃಹ ಇಲಾಖೆ ಅನುಮತಿಸಿದೆ.
ಬೆಂಗಳೂರು: “ಇಂಟರ್ ಶಿಪ್ಗಾಗಿ ಪ್ರತ್ಯೇಕ ಪೊರ್ಟಲ್ ಮಾಡಿರುವ ಪ್ರಮುಖ ಉದ್ದೇಶ, ವಿದ್ಯಾರ್ಥಿಗಳು ತರುತ್ತಿದ್ದ ಸುಳ್ಳು ಪ್ರಮಾಣ ಪತ್ರಗಳನ್ನು ಕಡಿವಾಣ ಹಾಕುವುದೇ ಹೊರತು ದುಡ್ಡು ಮಾಡುವುದಿಲ್ಲ” ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಹೇಳಿದ್ದಾರೆ. ಮಾಧ್ಯಮಗಳಲ್ಲಿ ಇಂಟರ್ಶಿಪ್ ಕುರಿತು ಪ್ರಕಟವಾಗಿರುವ ವರದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, “ವಿಟಿಯು ಇತಿಹಾಸದಲ್ಲಿ ಮೊದಲ ಬಾರಿಗೆ ಇಂಟರ್ಶಿಪ್ ವ್ಯವಸ್ಥೆಯನ್ನು ಪಾರದರ್ಶಕವಾಗಿ ಜಾರಿಗೆ ತರುವ ಉದ್ದೇಶದಿಂದ ಇಂಟರ್ ಶಿಪ್ ನಿರ್ವಹಣೆಗಾಗಿ ಪ್ರತ್ಯೇಕ ಪೊರ್ಟಲ್ ತೆರೆಯಲಾಗಿದೆ. ಆ ಮೂಲಕ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಇಂಟರ್ಶಿಪ್ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ವಿಶ್ವವಿದ್ಯಾಲಯ ನಿರ್ವಹಣೆ ಮಾಡುವ ಸ್ಥಿತಿ ವಿಶ್ವವಿದ್ಯಾಲಯಕ್ಕೆ ಇಲ್ಲ. ವಿಶ್ವವಿದ್ಯಾಲಯ ಆರ್ಥಿಕವಾಗಿ ಸದೃಢವಾಗಿದೆ. ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಕುಲಪತಿಗಳು ತಿಳಿಸುತ್ತಿದ್ದಾರೆ. 80 ಸಾವಿರ ವಿದ್ಯಾರ್ಥಿಗಳಿಗೆ ಇಂಟರ್ ಶಿಪ್ಗೆ ಅವಕಾಶ ಕಲ್ಪಿಸಬೇಕು. ಎಲ್ಲಾ ಕಂಪನಿಗಳು ಉಚಿತವಾಗಿಯೇ ಇಂಟರ್ ಶಿಪ್ ನೀಡಿದರೆ, ಅದನ್ನು ನೀಡುವುದಕ್ಕೆ ನಮಗೆ ಯಾವುದೇ ತೊಂದರೆ ಇಲ್ಲ. ನಮ್ಮ ಪೊರ್ಟಲ್ ನಲ್ಲಿ ಉಚಿತ ಇಂಟರ್ಶಿಪ್…
ಬೆಂಗಳೂರು: ಜನವರಿ.14, 2026ರಂದು ಬಿಎಂಟಿಸಿ ಬಸ್ ಮಾರ್ಗ 375D/18ರಲ್ಲಿ ಅಪರೂಪದ ಘಟನೆ ನಡೆದಿದೆ. ರಾತ್ರಿ ತಂಗುವ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಒಬ್ಬ ವಯಸ್ಕ ಪ್ರಯಾಣಿಕರು ಫೋನ್ ಪೇ ಮೂಲಕ ಟಿಕೆಟ್ ಶುಲ್ಕ ಪಾವತಿಸುವಾಗ ಅಚಾತುರ್ಯದಿಂದ ರೂ.6ರ ಬದಲಾಗಿ ರೂ.62,316 ಪಾವತಿಸಿದ್ದನು. ಆದರೇ ಕಂಡಕ್ಟರ್ ಮಾಡಿದಂತ ಆ ಕಾರ್ಯದಿಂದ ಭಾರೀ ಮೆಚ್ಚುಗೆಯೇ ವ್ಯಕ್ತವಾಗಿದೆ. ಆ ಬಗ್ಗೆ ಮುಂದೆ ಓದಿ.. ದಿನಾಂಕ 14-01-2026ರಂದು ಬಿಎಂಟಿಸಿ ಬಸ್ಸನ್ನು ರಾತ್ರಿ 8.30ರ ಸುಮಾರಿಗೆ ಪ್ರಯಾಣಿಕರೊಬ್ಬರು ಏರಿದ್ದರು. ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಆಧಾರ್ ಪರಿಶೀಲಿಸಿ ಉಚಿತ ಪ್ರಯಾಣ ಚೀಟಿ ನೀಡಲಾಗುತ್ತಿತ್ತು. ಇದೇ ವೇಳೆ ಓರ್ವ ಪ್ರಯಾಣಿಕ ಫೋನ್ಪೇ ಮೂಲಕ 6 ರೂಪಾಯಿ ಟಿಕೆಟ್ ದರ ಪಾವತಿಸುವ ಬದಲು , ತಪ್ಪಾಗಿ ₹62,316 ಪಾವತಿಸಿದ್ದಾರೆ. ಪ್ರಯಾಣಿಕರು ವಿಷಯವನ್ನು ಗಮನಕ್ಕೆ ತಂದ ಕೂಡಲೇ ಕಂಡಕ್ಟರ್ ಪರಿಶೀಲನೆ ನಡೆಸಿದ್ದು, ಹಣ ತಪ್ಪಾಗಿ ವರ್ಗಾಯಿಸಿರುವುದು ದೃಢಪಟ್ಟಿತ್ತು. ಕಂಡಕ್ಟರ್ ಪ್ರಯಾಣಿಕರಿಗೆ ಆತಂಕಪಡಬೇಡಿ ಎಂದು ಭರವಸೆ ನೀಡಿ, ಹಣ ಮರುಪಾವತಿ ಪ್ರಕ್ರಿಯೆಯ ಕುರಿತು…
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…














