Author: kannadanewsnow09

ಬೆಂಗಳೂರು; 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. 2017 ರಲ್ಲಿ ಜಿಎಸ್ ಟಿ ಜಾರಿಗೆ ಬಂದಿದ್ದು, 8 ವರ್ಷಗಳ ನಂತರ ದರ ತರ್ಕಬದ್ಧಗೊಳಿಸಿದರು. ಇದರಿಂದ ಶೇ.10 ರಷ್ಟಿದ್ದ ರಾಜ್ಯದ ತೆರಿಗೆ ಸಂಗ್ರಹಣೆ, ಈಗ ಶೇ. 4 ಕ್ಕೆ ಇಳಿದಿದೆ. ಕೆಲವು ರಾಜ್ಯಗಳು ಕೇಂದ್ರದ ಈ ನಿರ್ಧಾರದಿಂದ ದರಪರಿಷ್ಕರಣೆಯಿಂದ ತೊಂದರೆಗೊಳಗಾಗಿದ್ದು, ಇದುವರೆಗೂ ಚೇತರಿಸಿಕೊಂಡಿಲ್ಲ. ಜಿಎಸ್ ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ಸುಮಾರು ರಾಜ್ಯಕ್ಕೆ ಸುಮಾರು 10 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಮುಂದಿನ ವರ್ಷ 15000 ಕೋಟಿ ಯಷ್ಟು ನಷ್ಟವಾಗಲಿದೆ. ಕೇಂದ್ರ ಸರ್ಕಾರದ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ನಮ್ಮ ಬಜೆಟ್ನಲ್ಲಿ ಹೆಚ್ಚು ವಿತ್ತೀಯ ಶಿಸ್ತಿನ ಉಲ್ಲಂಘನೆಯಾಗಿಲ್ಲ ಎಂದು…

Read More

ಬೆಂಗಳೂರು: ದೇಶಾದ್ಯಂತ ಅನುಷ್ಠಾನಗೊಳ್ಳುತ್ತಿರುವ ‘ಮಿಷನ್ ಏಡ್ಸ್ ಸುರಕ್ಷಾ’ ಯೋಜನೆಯ ಭಾಗವಾಗಿ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು (NACO) ಬೆಂಗಳೂರಿನಲ್ಲಿ ನಾಳೆ ‘ಸುರಕ್ಷಾ ಸಂಕಲ್ಪ ಕಾರ್ಯಗಾರ’ವನ್ನು ಆಯೋಜಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಹಾಗೂ NACO ಮಹಾನಿರ್ದೇಶಕರಾದ ಡಾ.ರಾಕೇಶ್ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಪ್ರಮುಖ ಉದ್ದೇಶಗಳು: 1ನೇ ಡಿಸೆಂಬರ್‍ 2027 ರ ವೇಳೆಗೆ ಎಚ್‌ಐವಿ ಸಾಂಕ್ರಾಮಿಕದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವುದು ಮತ್ತು 2030ರ ವೇಳೆಗೆ ಏಡ್ಸ್ ಅನ್ನು ಸಾರ್ವಜನಿಕ ಆರೋಗ್ಯದ ಭೀತಿಯಿಂದ ಮುಕ್ತಗೊಳಿಸುವ ವಿಶ್ವಸಂಸ್ಥೆಯ ಗುರಿಯನ್ನು ತಲುಪಲು ಭಾರತವು ಹೊಂದಿರುವ ಅಂತಾರಾಷ್ಟ್ರೀಯ ಬದ್ಧತೆಯ ಗುರಿ ಸಾಧಿಸುವ ನಿಟ್ಟಿನಲ್ಲಿ ಈ ಕಾರ್ಯಗಾರವು ಅತ್ಯಂತ ನಿರ್ಣಾಯಕವಾಗಿದೆ. ದೇಶಾದ್ಯಂತ ಆಯೋಜಿಸಲಾಗುತ್ತಿರುವ 12 ಪ್ರಾದೇಶಿಕ ಕಾರ್ಯಾಗಾರಗಳ ಪೈಕಿ ಬೆಂಗಳೂರಿನ ಆಯೋಜಿಸುತ್ತಿರುವ ಈ ಕಾರ್ಯಕ್ರಮವು ಸರಣಿಯ ಭಾಗವಾಗಿದೆ. ಜಿಲ್ಲಾ ಮಟ್ಟದಲ್ಲಿ ಹೊಣೆಗಾರಿಕೆಯನ್ನು ಹೆಚ್ಚಿಸುವುದು ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಇದರ ಕಾರ್ಯಗಾರದ ಉದ್ದೇಶವಾಗಿದೆ. ಈ ಯೋಜನೆಯಡಿ ದೇಶದ 18 ರಾಜ್ಯಗಳ 219 ಜಿಲ್ಲೆಗಳನ್ನು ಆದ್ಯತೆಯ ಜಿಲ್ಲೆಗಳನ್ನಾಗಿ ಗುರುತಿಸಲಾಗಿದ್ದು, ಕ್ಷಿಪ್ರ ಕ್ರಮಕ್ಕಾಗಿ ಗುರುತಿಸಲಾಗಿದೆ. ಕರ್ನಾಟಕದ ಹಿನ್ನಲೆ: ಕರ್ನಾಟಕದಲ್ಲಿ ಪ್ರಸ್ತುತ ವಯಸ್ಕರಲ್ಲಿ ಎಚ್‌ಐವಿ ಹರಡುವಿಕೆಯ ಪ್ರಮಾಣ ಶೇಕಡ 0.44 ರಷ್ಟಿದ್ದು, ಅಂದಾಜು 2,91,348 ಜನರು ಎಚ್‌ಐವಿಯೊಂದಿಗೆ ಜೀವಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಸೋಂಕಿನ ಹರಡುವಿಕೆ ಮತ್ತು ಸಾಂದ್ರತೆಯ ಆಧಾರದ ಮೇಲೆ ರಾಜ್ಯದ 27 ಜಿಲ್ಲೆಗಳನ್ನು ಆದ್ಯತೆಯ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ,…

Read More

ಆಂಧ್ರಪ್ರದೇಶ: 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಅದರ ಸಂಭಾವ್ಯ ನಕಾರಾತ್ಮಕ ಪರಿಣಾಮಗಳಿಂದ ರಕ್ಷಿಸಲು ಆಂಧ್ರಪ್ರದೇಶ ಸರ್ಕಾರವು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ನಿರ್ಬಂಧಿಸುವ ಕ್ರಮಗಳನ್ನು ಪರಿಚಯಿಸಲು ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶುಕ್ರವಾರ (ಮಾರ್ಚ್ 6, 2026) ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಐಟಿ ಮತ್ತು ಶಿಕ್ಷಣ ಸಚಿವ ನಾರಾ ಲೋಕೇಶ್ ಅವರು ಸೂಚಿಸಿದ ಪ್ರಸ್ತಾವನೆಯು ಪ್ರಸ್ತುತ ಪರಿಗಣನೆಯಲ್ಲಿದೆ ಮತ್ತು ನಿರ್ಬಂಧವನ್ನು ಜಾರಿಗೆ ತರುವ ಕಾರ್ಯಕ್ರಮವನ್ನು ಮುಂದಿನ 90 ದಿನಗಳಲ್ಲಿ ರೂಪಿಸುವ ಸಾಧ್ಯತೆಯಿದೆ ಎಂದು ಹೇಳಿದರು. 13–16 ವಯಸ್ಸಿನ ಮಕ್ಕಳಿಗೆ ಸರ್ಕಾರವು ಸಂಭಾವ್ಯ ನಿಯಮಗಳನ್ನು ಸಹ ಪರಿಶೀಲಿಸುತ್ತಿದೆ ಮತ್ತು ವ್ಯಾಪಕ ಸಮಾಲೋಚನೆ ಮತ್ತು ಒಮ್ಮತದ ನಂತರ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯ ಹಾನಿಕಾರಕ ಪರಿಣಾಮಗಳಿಂದ ಮಕ್ಕಳನ್ನು ರಕ್ಷಿಸಲು ಮತ್ತು ಅವರ ಒಟ್ಟಾರೆ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಶ್ರೀ ನಾಯ್ಡು ಒತ್ತಿ ಹೇಳಿದರು.…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in/ ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/state-government-orders-educational-assistance-to-children-of-deceased-construction-workers/ https://kannadanewsnow.com/kannada/cm-siddaramaiah-sets-another-record-presents-budget-while-standing-for-3-hours-and-30-minutes/

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಮುಂಗಡ ಪತ್ರ ಮಂಡಿಸಿರುವುದಾಗಿ ತಿಳಿಸಿದರು. ಹಾಗಾದ್ರೇ ಅವರ ಸುದ್ದಿಗೋಷ್ಠಿಯ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ.  2026-27 ನೇ ಸಾಲಿನ ರಾಜ್ಯದ ಬಜೆಟ್ಟನ್ನು ಮಂಡಿಸಿದ್ದೇನೆ. ರಾಜ್ಯದ  ಈ ವರ್ಷದ  ಬಜೆಟ್‌  ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್‌ ಗಾತ್ರ  4,09,549 ರೂಗಳಷ್ಟಿತ್ತು. ಈ  ಆಯವ್ಯಯದಲ್ಲಿ  38,455 ಕೋಟಿ ರೂಗಳಷ್ಟು ಹೆಚ್ಚಿನ ಗಾತ್ರದ ಬಜೆಟ್‌ ಇದಾಗಿದೆ. ಶೇ.9.4 ರಷ್ಟು ಬೆಳವಣಿಗೆಯಾಗಿದೆ. ಕೇಂದ್ರದ ಬಜೆಟ್‌ ಬೆಳವಣಿಗೆಯ ಶೇ.ವಾರು ಬೆಳವಣಿಗೆಗಿಂತ  ನಮ್ಮ ಬಜೆಟ್ ಬೆಳವಣಿಗೆ ಉತ್ತಮವಾಗಿದೆ. ಕೇಂದ್ರ ಸರ್ಕಾರದ  ಬಜೆಟ್‌  ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5.5 ರಷ್ಟು ಮಾತ್ರ ಬೆಳವಣಿಗೆ ಸಾಧಿಸಿದೆ [ 2025 ರಲ್ಲಿ 50.65 ಲಕ್ಷ ಕೋಟಿಗಳ ಬಜೆಟ್‌ ಮಂಡಿಸಿದ್ದರು. ಈ ವರ್ಷ 53.47 ಲಕ್ಷ ಕೋಟಿ ರೂ ಗಾತ್ರದ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಇತಿಹಾಸದಲ್ಲೇ ಒಂದು ಮಹತ್ವದ ಹೆಜ್ಜೆಯಾಗಿ, ಕರ್ತವ್ಯದ ಅವಧಿಯಲ್ಲಿ ಮತ್ತು ಇತರ ಕಾರಣಗಳಿಂದ ಮೃತಪಟ್ಟ 35 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು 8.22 ಕೋಟಿ ರೂಪಾಯಿಗಳ ಪರಿಹಾರ ಧನವನ್ನು ಇಂದು ವಿತರಿಸಲಾಯಿತು. ನಿಗಮದ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚೆಕ್‌ಗಳನ್ನು ಹಸ್ತಾಂತರಿಸಿದರು. ಪರಿಹಾರ ವಿತರಣೆಯ ವಿವರಗಳು: ಕಾರ್ಯಕ್ರಮದಲ್ಲಿ ಪರಿಹಾರ ಧನವನ್ನು ಈ ಕೆಳಗಿನಂತೆ ವಿತರಿಸಲಾಯಿತು: ಅಪಘಾತದಿಂದ ಮೃತಪಟ್ಟವರು: ಅಪಘಾತದಿಂದ ಮೃತಪಟ್ಟ 4 ಸಿಬ್ಬಂದಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿಗಳಂತೆ ಒಟ್ಟು 4 ಕೋಟಿ ರೂಪಾಯಿಗಳ ಪರಿಹಾರ ನೀಡಲಾಯಿತು. ಇದು ‘ಸಾರಿಗೆ ಸುರಕ್ಷಾ ವಿಮಾ ಯೋಜನೆ’ಯ ಅಡಿಯಲ್ಲಿ ನೀಡಲಾದ ಅತ್ಯಧಿಕ ಮೊತ್ತದ ಪರಿಹಾರವಾಗಿದೆ. ಇತರೆ ಕಾರಣಗಳಿಂದ ಮೃತಪಟ್ಟವರು: ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮುಂತಾದ ಗಂಭೀರ ಕಾಯಿಲೆಗಳಿಂದ ಮೃತಪಟ್ಟ 28 ಸಿಬ್ಬಂದಿಗಳ ಅವಲಂಬಿತರಿಗೆ ತಲಾ 14 ಲಕ್ಷ ರೂಪಾಯಿಗಳಂತೆ ಒಟ್ಟು 3.92 ಕೋಟಿ ರೂಪಾಯಿಗಳನ್ನು ವಿತರಿಸಲಾಯಿತು.…

Read More

ದಾವಣಗೆರೆ : ರಾಜ್ಯದ ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2026–27ನೇ ಸಾಲಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ. ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿರುವುದು ಸಂತಸ ತಂದಿದೆ ಎಂದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಿಗೆ ವಾಸಿಸುತ್ತಿರುವ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.100.00 ಕೋಟಿ ಅನುದಾನ ನೀಡಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಗೃಹ ಸ್ಥಾಪನೆ, ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದಿದ್ದಾರೆ. ದಾವಣಗೆರೆಯಲ್ಲಿ ಮತ್ಸ್ಯ ದರ್ಶಿನಿ ಮೀನು ಮಾರಾಟ ಕೇಂದ್ರ ಹಾಗೂ ಹಿಂದುಳಿದ ವರ್ಗಗಳ ಪೋಸ್ಟ್-ಮ್ಯಾಟ್ರಿಕ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಚನ್ನಗಿರಿ ತಾಲ್ಲೂಕಿನ ಕಗತೂರು ಹಳ್ಳಕ್ಕೆ ಚೆಕ್‌ಡ್ಯಾಂ ನಿರ್ಮಾಣ. ದಾವಣಗೆರೆ ತಾಲ್ಲೂಕಿನ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಬಜೆಟ್‌ ಸೇರಿದಂತೆ 4,39,254 ಕೋಟಿ ರೂ. ಸಾಲವನ್ನು ಸಿಎಂ ಮಾಡಿದ್ದು, ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತಹ ಉಪ್ಪು, ಹುಳಿ ಖಾರ ಇಲ್ಲದ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಯಾವುದೇ ಹೊಸ ಯೋಜನೆಗಳಿಲ್ಲ ಕೇವಲ ʼಸಾಲʼದ ಯೋಜನೆಗಳೇ ತುಂಬಿವೆ. ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ 4,39,254 ಕೋಟಿ ರೂ. ಸಾಲದ ಹೊರೆಯನ್ನು ರಾಜ್ಯದ ಜನರ ತಲೆ ಮೇಲೆ ಹೇರಿದ್ದಾರೆ. ಈ ಹಣಕ್ಕೆ ಬಡ್ಡಿ ಪಾವತಿಸಲು ಕೂಡ ಆಗದ ಪರಿಸ್ಥಿತಿ ಬಂದಿದೆ. ವಿತ್ತೀಯ ಕೊರತೆ 97,000 ಕೋಟಿ ರೂ. ಆಗಿದೆ. ಸಿದ್ದರಾಮಯ್ಯನವರು ಇನ್ನೂ ಮುಂದುವರಿದರೆ ಸಾಲದ ಹೊರೆ 10 ಲಕ್ಷ ಕೋಟಿ ರೂ. ಆಗಲಿದೆ. ಸಿದ್ದರಾಮಯ್ಯನವರು ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿಸಿ ಹತ್ತು ಪಟ್ಟು ಅಧಿಕ ಸಾಲ ಮಾಡಿದ್ದಾರೆ ಎಂದರು. ನೀರಾವರಿ…

Read More

ಶಿವಮೊಗ್ಗ: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚುರುಕುಗೊಂಡಿದ್ದು, ಸುಮಾರು 6 ಸಾವಿರ ಅರ್ಹವಲ್ಲದ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಉದ್ದೇಶಿಸಲಾಗಿದೆ ಎಂದು ಸಾಗರದ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ. ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ ಬಿ.ಎಲ್.ಓ.ಗಳು ಹಾಗೂ ನಗರಸಭೆ ಮಾಜಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ಕಡೆ ಮತದಾನದ ಹಕ್ಕು ಹೊಂದಿರುವವರು, ವಿದೇಶ ಅಥವಾ ಹೊರರಾಜ್ಯಗಳಿಗೆ ವಲಸೆ ಹೋದವರು ಮತ್ತು ವಿಳಾಸವಿದ್ದರೂ ವಾಸವಿಲ್ಲದವರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಮ್ಯಾಪಿಂಗ್ ಬಾಕಿ: ತಾಲ್ಲೂಕಿನಲ್ಲಿ ಇನ್ನೂ 41 ಸಾವಿರ ಮತದಾರರ ಮ್ಯಾಪಿಂಗ್ ಕಾರ್ಯ ಬಾಕಿ ಉಳಿದಿದ್ದು, ಅದನ್ನು ಪೂರ್ಣಗೊಳಿಸಬೇಕಿದೆ. ಕಾರ್ಯತತ್ಪರತೆ: ನಗರಸಭೆ ವ್ಯಾಪ್ತಿಯಲ್ಲಿ ಮ್ಯಾಪಿಂಗ್ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆದಿಲ್ಲ. ಬಿಎಲ್‌ಓಗಳು ಭೇಟಿ ನೀಡಿದಾಗ ಮತದಾರರು ಲಭ್ಯವಿಲ್ಲದ ಕಾರಣ, ಮತ್ತೊಂದು ಸುತ್ತಿನ ಸಭೆ ನಡೆಸಿ ಹೊರಗುಳಿದವರನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಗುರಿ: ನಕಲಿ ಮತದಾರರನ್ನು ತಡೆಗಟ್ಟುವುದು ಮತ್ತು ಎರಡು ಕಡೆ ಮತ ಹೊಂದಿರುವವರನ್ನು ಪತ್ತೆ ಹಚ್ಚುವುದು ಆಡಳಿತದ ಮುಖ್ಯ ಉದ್ದೇಶವಾಗಿದೆ. ಮುಂದಿನ…

Read More

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. https://kannadanewsnow.com/kannada/cm-siddaramaiah-presented-a-budget-for-building-a-new-karnataka-mlc-dinesh-gooligouda-praises/ https://kannadanewsnow.com/kannada/cm-siddaramaiah-sets-another-record-presents-budget-while-standing-for-3-hours-and-30-minutes/

Read More