Subscribe to Updates
Get the latest creative news from FooBar about art, design and business.
Author: kannadanewsnow09
ಒಂದೊಂದು ದೇವತೆಗಳೂ ಒಂದೊಂದು ರೀತಿಯಲ್ಲಿ ಪೂಜೆ ಮಾಡುತ್ತಾರೆ. ನಾವು ಯಾವುದನ್ನು ಬಯಸುತ್ತೇವೆಯೋ ಅದನ್ನು ಯಾವುದೇ ದೇವರನ್ನು ಪ್ರಾರ್ಥಿಸಿದರೆ, ನಮಗೆ ತಕ್ಷಣದ ಫಲಿತಾಂಶಗಳು ಸಿಗುತ್ತವೆ. ಆದರೆ ಒಬ್ಬ ದೇವರಿಗೆ ಐದು ಗುಣಗಳಿದ್ದರೆ ಆ ದೇವರನ್ನು ಪೂಜಿಸಿದಾಗ ಐದು ದೇವತೆಗಳನ್ನು ಪೂಜಿಸಿದ ಲಾಭವನ್ನು ಪಡೆಯಬಹುದು. ಈ ರೀತಿಯಾಗಿ, ಈ ಮಂತ್ರದ ಬಗ್ಗೆ ನಾವು ಪೋಸ್ಟ್ನಲ್ಲಿ ನೋಡಲಿದ್ದೇವೆ , ಇಂದು ಪಂಚಮುಖ ಆಂಜನೇಯರನ್ನು ಯಾವ ಮಂತ್ರವನ್ನು ಪೂಜಿಸಿದರೆ ಪ್ರಯೋಜನಗಳು ಸಿಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಸಾಮಾನ್ಯವಾಗಿ ದೇವರ ಪೂಜೆಗೂ ಮಂತ್ರ ಪಠಣಕ್ಕೂ ವ್ಯತ್ಯಾಸವಿದೆ. ಮಂತ್ರವನ್ನು ಸರಿಯಾಗಿ ಪಠಿಸಿ ಪೂಜಿಸಿದರೆ ಆ ಮಂತ್ರದ ಲಾಭವನ್ನು ಬಹುಬೇಗ ಪಡೆಯಬಹುದು. ಅದರ ಆಧಾರದಲ್ಲಿ ಈ ಪೋಸ್ಟ್ ನಲ್ಲಿ ಪಂಚಮುಖ ಆಂಜನೇಯನ ಮಂತ್ರದ ಬಗ್ಗೆ…
ಶಿವಮೊಗ್ಗ: ಫೆಬ್ರವರಿ.22ರಂದು ಅಖಿಲ ಹವ್ಯಕ ಮಹಾಸಭಾ ವತಿಯಿಂದ ಬೆಳಿಗ್ಗೆ 6.30 ರಿಂದ ರಾತ್ರಿ 9.30ರವರೆಗೆ ರಾಘವೇಶ್ವರ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಹವ್ಯಕ ಶಿಕ್ಷಕ ಸಮಾವೇಶ ಜ್ಞಾನಮ್ ನಡೆಯಲಿದೆ ಎಂಬುದಾಗಿ ಮಹಾಸಭಾದ ನಿರ್ದೇಶಕರ ಹು.ಭಾ ಅಶೋಕ್ ಮಾಹಿತಿ ನೀಡಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರ, ಸಮಾವೇಶದಲ್ಲಿ ಅಂಗನವಾಡಿಯಿoದ ವಿಶ್ವವಿದ್ಯಾಲಯ ಹಂತದವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು. ಕಳೆದ 81 ವರ್ಷಗಳಿಂದ ಹವ್ಯಕ ಮಹಾಸಭಾ ಕೆಲಸ ಮಾಡಿಕೊಂಡು ಬರುತ್ತಿದೆ. ಪ್ರಸ್ತುತ ಡಾ. ಗಿರಿಧರ ಕಜೆ ಅವರ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ಮಹಿಳಾ ಸಮಾವೇಶ, ವಕೀಲರು, ಇಂಜಿನಿಯರ್, ವೈದ್ಯರು, ಶಿಕ್ಷಕರ ಸಮಾವೇಶ ಅಯೋಜಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಸಮಾಜದ ಕಡೆ ತೆಗೆದುಕೊಂಡು ಹೋಗುವ ಪ್ರಯತ್ನ ನಡೆಸಲಾಗುತ್ತಿದೆ. ಹವ್ಯಕ ಸಮಾಜದವರು ಶಿಕ್ಷಣಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಜ್ಞಾನಮ್ ಘೋಷವಾಕ್ಯದದ ಮೂಲಕ ಶಿಕ್ಷಕರಿಂದ ವಿದ್ಯಾರ್ಥಿಗಳಿಗಾಗಿ ಭವಿಷ್ಯಕ್ಕೋಸರ…
ಬೆಂಗಳೂರು: ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗಿತ್ತು. ಹೀಗೆ ಅಪಪ್ರಚಾರ ಮಾಡಿದವರ ವಿರುದ್ಧ ಕೆಎಂಎಫ್ ದೂರು ನೀಡಿತ್ತು. ಈ ದೂರು ಆಧರಿಸಿ ಇದೀಗ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ ನ ಪದ್ಮಾವತಿ.ಆರ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಡಾ.ಶರಣ್ಯ ಎಂಬುವರ ವಿರುದ್ಧ ಬಿಎನ್ ಎಸ್ ಕಾಯ್ದೆಯ 353(1)(ಬಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ 66(ಡಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದಂತ ಆರೋಪಗಳು ಸುಳ್ಳು ಎಂಬುದಾಗಿ ಕರ್ನಾಟಕ ಹಾಲು ಮಹಾಮಂಡಳಿ(KMF) ಸ್ಪಷ್ಟಪಡಿಸಿತ್ತು. ಈ ಕುರಿತಂತೆ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು…
ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಯವ್ಯಯದಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸುವಂತೆ ಕೋರಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾದ 13 ಅಂಶಗಳನ್ನೊಳಗೊಂಡ ಸಮಗ್ರ ಪ್ರಸ್ತಾವನೆಯನ್ನು ಮಂಡಿಸಿದರು. ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಘಟಕ ಸ್ಥಾಪನೆ, ಹಾಲು ಉತ್ಪಾದಕರ ಪ್ರೋತ್ಸಾಹ ಧನ ಹೆಚ್ಚಳ, ಎಐ (AI) ತಂತ್ರಜ್ಞಾನದ ಅಳವಡಿಕೆ ಹಾಗೂ ರೈತರ ಸಾಲದ ಮಿತಿ ಹೆಚ್ಚಳದಂತಹ ಜನಪರ ಬೇಡಿಕೆಗಳನ್ನು ಬಜೆಟ್ನಲ್ಲಿ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ. ಶಾಸಕ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮನವಿಯಲ್ಲೇನಿದೆ 2026-27ನೇ ಸಾಲಿನ ಆಯವ್ಯಯದಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಅಳವಡಿಸಿ ಘೋಷಣೆ ಮಾಡುವಂತೆ ತಮ್ಮಲ್ಲಿ…
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ವಂಚನೆಯ ಮಹಾ ಮೋಸದ ಜಾಲ ಬೆಳಕಿಗೆ ಬಂದಿದೆ. ಶಾಕಿಂಗ್ ಎನ್ನುವಂತೆ ಬ್ಯಾಂಕ್ ನಲ್ಲಿ ಇರಿಸಿದ್ದಂತ ಗ್ರಾಹಕರ ಅಸಲಿ ಚಿನ್ನವೇ ನಾಪತ್ತೆಯಾಗಿರೋದಾಗಿ ಹೇಳಲಾಗುತ್ತಿದೆ. ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ಮಹಾ ಮೋಸ ಎನ್ನುವಂತೆ ಚಿಕ್ಕಮಗಳೂರಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಲ್ಲಿ ನಡೆದಿರೋದು ಬೆಳಕಿಗೆ ಬಂದಿದೆ. ಇದರಲ್ಲಿ ಗ್ರಾಹಕರು ಇರಿಸಿದ್ದಂತ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನೇ ಬ್ಯಾಂಕ್ ಸಿಬ್ಬಂದಿ ಲೂಟಿ ಮಾಡಿರೋದಾಗಿ ಆರೋಪಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಚಿಕ್ಕಮಗಳೂರು ಶಾಖೆಯ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ಸೇರಿದಂತೆ ಐವರ ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂದಹಾಗೇ 2020ರಿಂದ 2025ರ ಅವಧಿಯಲ್ಲಿ ಚಿಕ್ಕಮಗಳೂರು ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಬೃಹತ್ ಹಗರಣ ನಡೆದಿದೆ ಎಂದು ಹೇಳಲಾಗುತ್ತಿದೆ. ಗ್ರಾಹಕರೊಬ್ಬರ ಮಾಹಿತಿಯಂತೆ ಅವರ ಹೆಸರಿನಲ್ಲಿ ಹೆಚ್ಚುವರಿ ಗೋಲ್ಡ್ ಲೋನ್ ಮಾಡಿ ಹಣವನ್ನೇ…
ಬೆಂಗಳೂರು: ಇದೊಂದು ಸಂಘಟನಾತ್ಮಕ ಸಭೆಯಲ್ಲ; ಆತ್ಮಮಂಥನದ ಸಭೆ ಇದಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವಿವರಿಸಿದ್ದಾರೆ. ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಜೀ ಅವರ ವಿಕಸಿತ ಭಾರತದ ವಿಚಾರಧಾರೆಯ ಮನನ ಮಾಡುವ ಸಭೆ ಇದು. ಸಂಘಟನೆ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪದ ಸಭೆ ಎಂದು ವಿಶ್ಲೇಷಿಸಿದರು. ಶಿವಾಜಿ ಮಹಾರಾಜರ ಸಂಘರ್ಷ ಇಂದಿಗೂ ನಮಗೆ ಪ್ರೇರಣಾದಾಯಿ ಎಂದು ತಿಳಿಸಿದ್ದಾರೆ. ಬಿಜೆಪಿ, ಸಾಂಸ್ಕೃತಿಕ ರಾಷ್ಟ್ರವಾದದ ಆಂದೋಲನ ಇದು ಎಂದು ತಿಳಿಸಿದರು. ಬಿಜೆಪಿ ಪಕ್ಷ ಉದಯಿಸಿದಾಗ, ಕತ್ತಲು ದೂರ ಸರಿದು, ಕಮಲ ಅರಳಲಿದೆ ಎಂದು ಅಟಲ್ ಜೀ ಅವರು ಹೇಳಿದ್ದನ್ನು ನೆನಪಿಸಿದರು. ಅದು ವೈಚಾರಿಕ ಪುನರ್ ಜಾಗರಣದ ಶಂಖನಾದ ಎಂದು ನುಡಿದರು. ಜನಸಂಘವು ಮೂಲಕ ನಮ್ಮ ಪಕ್ಷದ ಬೀಜ ರೂಪ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ…
ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ. https://kannadanewsnow.com/kannada/breaking-6-years-243-petitions-hearing-of-citizenship-amendment-act-petitions-begins-in-supreme-court-from-may-5/ https://kannadanewsnow.com/kannada/71-39-tax-collection-in-the-states-gram-panchayat-areas-minister-priyank-kharge/
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದ್ದು, ಕಳೆದ ವರ್ಷಗಳಲ್ಲಿ ಉಳಿದಿರುವ ಬಾಕಿ ಕರ ಸಂಗ್ರಹಣೆಗೂ ತೀವ್ರ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ನೀಡಿದೆ. “ಪ್ರಸಕ್ತ ಸಾಲಿನ ಬಾಕಿಯನ್ನು ಮಾರ್ಚ್ 2026ರ ಅಂತ್ಯದೊಳಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸಲಾಗುವುದು. ಹಿಂದಿನ ಸಾಲುಗಳ ತೆರಿಗೆ ಬಾಕಿ 3352.4 ಕೋಟಿಗಳಿದ್ದು ಆಸ್ತಿ ವರ್ಗೀಕರಣವಾರು ತೆರಿಗೆ ಬಾಕಿ ಪ್ರತ್ಯೇಕಿಸಿ ಸಂಗ್ರಹಿಸಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ತೆರಿಗೆ ಬೇಡಿಕೆ ದ್ವಿಗುಣವಾಗಿದ್ದು, ತೆರಿಗೆ ವಸೂಲಾತಿಯ ಮೊತ್ತ ಕೂಡ ಹೆಚ್ಚಳವಾಗಿದೆ. ಆದ್ದರಿಂದ 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ…
ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಯೇ ಸಾಮಾಜಿಕ ನ್ಯಾಯದ ಬಗ್ಗೆ ಸ್ಪಷ್ಟತೆ ಮತ್ತು ಖಚಿತತೆ ಸತೀಶ್ ಜಾರಕಿಹೊಳಿಯವರಿಗೆ ಇರುವ ಕಾರಣದಿಂದಲೇ ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಜಾರಕಿಹೊಳಿಯವರನ್ನು ನಾವು ಸ್ಪಷ್ಟವಾಗಿ ಕಾಣಬಹುದಾಗಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಗಳ ಪಕ್ಕದಲ್ಲೇ ಜಾರಕಿಹೊಳಿಯವರ ಕೈಗಳಿವೆ ಎಂದು ನುಡಿದರು. ಜಾರಕಿಹೊಳಿಯವರು ಹೆಚ್ಚು ಮಾತಾಡುವುದಿಲ್ಲ, ಐವತ್ತು ಮಂದಿ ಸೇರಿರುವ ಸಭೆಯಾಗಲಿ, ಐದು ಲಕ್ಷ ಮಂದಿ ಸೇರಿರುವ ಸಭೆಯಾಗಲಿ ಐದೇ ನಿಮಿಷದಲ್ಲಿ ಮಾತು ಮುಗಿಸುತ್ತಾರೆ ಎಂದು ಬಹಳ ಮಂದಿ ನನಗೆ ಹೇಳಿದ್ದಾರೆ. ಅವರಿಗೆಲ್ಲಾ ನಾನು ಒಂದೇ ಉತ್ತರ ಕೊಡುತ್ತೇನೆ, “ದಡದಲ್ಲಿ ನಿಂತು ನೋಡುವಾಗ ಸಮುದ್ರ ಬಹಳ ಪ್ರಶಾಂತವಾಗಿ ಕಾಣುತ್ತದೆ. ಆದರೆ ಸಮುದ್ರದ ರಭಸ…
ಬೆಂಗಳೂರು: ಕರ್ನಾಟಕವು ತನ್ನ ರೈಲ್ವೆ ಮೂಲಸೌಕರ್ಯ ವಿಸ್ತರಣೆಯಲ್ಲಿ ಮಹತ್ವದ ಘಟ್ಟವನ್ನು ತಲುಪಿದೆ. ರಾಜ್ಯದಾದ್ಯಂತ ಹಲವು ಪರಿವರ್ತನಾತ್ಮಕ ರೈಲು ಯೋಜನೆಗಳು ಪ್ರಗತಿಯಲ್ಲಿದ್ದು, ಗಣನೀಯ ಹಣಕಾಸು ಹಂಚಿಕೆ ಮತ್ತು ಆಡಳಿತಾತ್ಮಕ ಅನುಮೋದನೆಗಳು ಈಗಾಗಲೇ ಲಭಿಸಿವೆ. ಆದರೆ ಈ ಯೋಜನೆಗಳ ಅನುಷ್ಠಾನದ ವೇಗವು ಬಹುಪಾಲು ಸಕಾಲಿಕ ಭೂಸ್ವಾಧೀನದ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ ಮಂಜೂರಾದ ರೈಲ್ವೆ ಯೋಜನೆಗಳಿಗೆ ಒಟ್ಟು 9,064 ಹೆಕ್ಟೇರ್ ಭೂಮಿ ಅಗತ್ಯವಿದೆ. ಇದರಲ್ಲಿ 5,707 ಹೆಕ್ಟೇರ್ ಭೂಮಿ, ಅಂದರೆ ಶೇಕಡಾ 63 ರಷ್ಟು, ಈಗಾಗಲೇ ಸ್ವಾಧೀನಗೊಂಡಿದೆ. ಇನ್ನೂ 3,357 ಹೆಕ್ಟೇರ್ ಭೂಮಿ (ಶೇಕಡಾ 37) ಸ್ವಾಧೀನಗೊಳ್ಳಬೇಕಿದ್ದು, ಇದು ಹಲವಾರು ಪ್ರಮುಖ ರೈಲು ಮಾರ್ಗಗಳ ಅನುಷ್ಠಾನಕ್ಕೆ ಅಡ್ಡಿಯಾಗುತ್ತಿದೆ. 96 ಕಿ.ಮೀ ಉದ್ದದ ಶಿವಮೊಗ್ಗ–ರನ್ನೆಬೆನ್ನೂರು ಹೊಸ ರೈಲು ಮಾರ್ಗಕ್ಕೆ 559 ಹೆಕ್ಟೇರ್ ಭೂಮಿ ಅಗತ್ಯವಿದ್ದು, ಅದರಲ್ಲಿ 333 ಹೆಕ್ಟೇರ್ ಇನ್ನೂ ಬಾಕಿಯಿದೆ. ಹಾಗೆಯೇ, ಬೆಳಗಾವಿ–ಧಾರವಾಡ (73 ಕಿ.ಮೀ) ಹೊಸ ಮಾರ್ಗಕ್ಕೆ 581 ಹೆಕ್ಟೇರ್, ಶಿವಮೊಗ್ಗ–ಹರಿಹರ (79 ಕಿ.ಮೀ) ಹೊಸ ಮಾರ್ಗಕ್ಕೆ 488 ಹೆಕ್ಟೇರ್, ವೈಟ್ಫೀಲ್ಡ್–ಕೋಲಾರ (53 ಕಿ.ಮೀ) ಹೊಸ…














