Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಸಾರ್ವಜನಿಕ ಸ್ಥಳವಾಗಲೀ, ಅದು ಯಾವುದೇ ಪ್ರದೇಶವಾಗಿರಲಿ, ಕೆಲವರು ರೀಲ್ಸ್ ಮಾಡೋದನ್ನು ಮಾತ್ರ ಬಿಡೋದಿಲ್ಲ. ಹೀಗೆ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಅದು ಎಲ್ಲಿ? ಏಕೆ ಎನ್ನುವ ಬಗ್ಗೆ ಮುಂದೆ ಓದಿ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸರಿಂದ ವಿಶ್ವನಾಥ್(29) ಎಂಬಾತನನ್ನು ಬಂಧಿಸಲ್ಪಟ್ಟಿದ್ದಾರೆ. ಕಾರಣ, ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದಕ್ಕೆ. ಹೌದು ದುರ್ಗಮ್ಮ ದೇಗುಲ ಬಳಿ ರೈಲು ಸೇತುವೆ ಮೇಲೆ ನಿಂತು ಡ್ಯಾನ್ಸ್ ಮಾಡಿ, ರೀಲ್ಸ್ ಮಾಡುತ್ತಾ ವಿಶ್ವನಾಥ್ ಹುಚ್ಚಾಟ ಮೆರೆದಿದ್ದನು. ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಕ್ಕಾಗಿ ಸಾರ್ವಜನಿಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಂತ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ವಿಶ್ವನಾಥ್ ಮೂಲತಹ ಉತ್ತರ ಪ್ರದೇಶದವನು. ಸಾರ್ವಜನಿಕ ಸ್ಥಳದಲ್ಲಿ, ಅಪಾಯ ಕಾರಿ ಪ್ರದೇಶದಲ್ಲಿ ರೀಲ್ಸ್ ಮಾಡುವುದು ಅಪರಾಧ. ಈ ಹಿನ್ನಲೆಯಲ್ಲೇ ಯುವಕ ವಿಶ್ವನಾಥ್ ನನ್ನು ಪೊಲೀಸರು ಬಂಧಿಸಿ, ಬಿಸಿ ಮುಟ್ಟಿಸಿದ್ದಾರೆ.…
ಬೀದರ್: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಹಾಗೂ ಅಮರೇಶ(23) ಕಾಲು ಜಾರಿ ಬಿದ್ದು ಡ್ಯಾಂನಲ್ಲಿ ಸಾವನ್ನಪ್ಪಿದ್ದಾರೆ. ಬೀದರ್ ನಲ್ಲಿ ಸೀಮೆಂಟ್ ಖಾಲಿ ಮಾಡಿ ವಾಪಾಸ್ ಊರಿಗೆ ಹೋಗುತ್ತಿದ್ದರು. ಈ ವೇಳೆ ಕಾಲುವೆಗೆ ಇಳಿದು ಕೈಕಾಲು ತೊಡೆದುಕೊಳ್ಳುತ್ತಿದ್ದ ಪುತ್ರ ಅಮರೇಶ್ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದಿದ್ದರು. ಪುತ್ರನನ್ನು ರಕ್ಷಿಸೋದಕ್ಕೆ ಹೋಗಿ ತಂದೆ ವಿಶ್ವನಾಥ್ ಕೂಡ ಸಾವನ್ನಪ್ಪಿದ್ದಾರೆ. ತಂದೆ-ಮಗನ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಕಾರಂಜಾ ಡ್ಯಾಂ ಕಾಲುವೆಯಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಬೀದರ್ ನ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/actress-rashmika-mandanna-actor-vijay-deverakonda-wedding-on-february-26-invitation-card-goes-viral/
ನವದೆಹಲಿ: ಇದೇ ಫೆಬ್ರವರಿ.26ರಂದು ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಮದುವೆಯಾಗಲಿದ್ದಾರೆ. ಮದುವೆಯ ಆಮಂತ್ರಣದ ಆಹ್ವಾನ ಪತ್ರಿಕೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಅಭಿಮಾನಿಗಳು ಸಂಭ್ರಮಿಸಲು ಮತ್ತೊಂದು ಕಾರಣ ಸಿಕ್ಕಿದೆ. ಜನಪ್ರಿಯ ಪ್ಯಾನ್-ಇಂಡಿಯನ್ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈ ತಿಂಗಳ ಕೊನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವರ್ಷಗಳ ಕಾಲ ತಮ್ಮ ಸಂಬಂಧವನ್ನು ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದ ಈ ಜೋಡಿ ಈಗ ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸಜ್ಜಾಗಿದೆ. ಅವರ ವಿವಾಹ ಆಮಂತ್ರಣ ಪತ್ರಿಕೆ ಸೋರಿಕೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಮತ್ತು ದಂಪತಿಗಳು ಹೊಸ ಆರಂಭಕ್ಕೆ ಮುಂದಾಗುತ್ತಿರುವಂತೆ ತೋರುತ್ತಿದೆ. ರಶ್ಮಿಕಾ ಮತ್ತು ವಿಜಯ್ ಅವರ ವಿವಾಹ ಆರತಕ್ಷತೆಯ ಆಹ್ವಾನ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ “ನಮ್ಮ ಕುಟುಂಬಗಳ ಆಶೀರ್ವಾದದೊಂದಿಗೆ, ರಶ್ಮಿಕಾ ಮತ್ತು ನಾನು 26.02.26 ರಂದು ಸಣ್ಣ ಮತ್ತು ಆತ್ಮೀಯ ಸಮಾರಂಭದಲ್ಲಿ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಾಘ ಮಾಸದ ಅಂತ್ಯದೊಂದಿಗೆ, ಶುಕ್ರ ಮುಹೂರ್ತವೂ ಕೊನೆಗೊಳ್ಳುತ್ತಿದೆ. ಈ ತಿಂಗಳ 17 ರಂದು ಅಮಾವಾಸ್ಯೆಯೊಂದಿಗೆ ಶುಕ್ರ ಮುಹೂರ್ತ ಕೊನೆಗೊಳ್ಳುತ್ತದೆ ಮತ್ತು ಫಾಲ್ಗುಣ ಮಾಸ 18 ರಂದು ಪ್ರಾರಂಭವಾಗುತ್ತದೆ. ಹಾಗಾದ್ರೆ 2026ರ ಮದುವೆ ಶುಭ ಮುಹೂರ್ತದ ದಿನಗಳ ಪಟ್ಟಿ ಈ ಕೆಳಗಿನಂತಿದೆ. ಮದುವೆ ಮುಹೂರ್ತಗಳು ಫಾಲ್ಗುಣ ಶುದ್ಧ ವಿದ್ಯಾದ 19 ರಂದು ಪ್ರಾರಂಭವಾಗಿ ವರ್ಷವಿಡೀ ಮುಂದುವರಿಯುತ್ತವೆ. ಪಂಚಾಂಗ ಬರಹಗಾರರ ಪ್ರಕಾರ, ಮದುವೆಗಳಿಗೆ ಶುಭ ದಿನಾಂಕಗಳು ಫೆಬ್ರವರಿ 19, 20, 21, 24, 25, ಮತ್ತು 26; ಮಾರ್ಚ್ 1, 3, 4, 7, 8, 9, 11, ಮತ್ತು 12; ಏಪ್ರಿಲ್ 15, 20, 21, 25, 26, 27, 28, ಮತ್ತು 29; ಮೇ 1, 3, 5, 6, 7, 8, 13, ಮತ್ತು 14; ಜೂನ್ 21, 22, 23, 24, 25, 26, 27, ಮತ್ತು 29; ಜುಲೈ 1, 6, 7, ಮತ್ತು…
ನವದೆಹಲಿ: PhonePe, Googleನಲ್ಲಿ 1000ಕ್ಕಿಂತ ಹೆಚ್ಚು ಹಣ ವರ್ಗಾವಣೆ ಶುಲ್ಕ ವಿಧಿಸಲಾಗುತ್ತದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಹಾಗಾದ್ರೇ ಇದು ನಿಜವೇ? ಇದರ ಅಸಲಿ ಸತ್ಯವೇನು ಅಂತ ಮುಂದೆ ಓದಿ.. ದೇಶಾದ್ಯಂತ UPI ಬಳಸುವ ಜನರ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದೆ. ಸ್ಮಾರ್ಟ್ಫೋನ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಬ್ಯಾಂಕ್ ಅನ್ನು ಎರಡು ಅಥವಾ ಮೂರು UPI ಅಪ್ಲಿಕೇಶನ್ಗಳೊಂದಿಗೆ ಲಿಂಕ್ ಮಾಡಿ ಪಾವತಿಗಳನ್ನು ಮಾಡುತ್ತಿದ್ದಾರೆ. ಪ್ರತಿದಿನ ಲಕ್ಷ ಕೋಟಿ ರೂಪಾಯಿಗಳ ನಗದು ವಹಿವಾಟುಗಳು ನಡೆಯುತ್ತಿವೆ. ಆದಾಗ್ಯೂ, ನಗದು ವಹಿವಾಟುಗಳು ಹೆಚ್ಚುತ್ತಿರುವಂತೆ, ಕೆಲವು ವದಂತಿಗಳು ಹೊರಹೊಮ್ಮುತ್ತಿವೆ. UPI ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದೆ. ಕಾಲಕಾಲಕ್ಕೆ, ಭಾರತೀಯ ರಿಸರ್ವ್ ಬ್ಯಾಂಕ್, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಮತ್ತು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡುತ್ತಿವೆ. ಇತ್ತೀಚೆಗೆ, ಮತ್ತೊಂದು ಸುದ್ದಿ ವೈರಲ್ ಆಗುತ್ತಿದೆ. UPI ವಹಿವಾಟಿನ ಮೂಲಕ ರೂ. 1000 ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಕಳುಹಿಸಿದರೆ ಸೇವಾ ಶುಲ್ಕ ವಿಧಿಸಲಾಗುತ್ತದೆ…
ನವದೆಹಲಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಮಾರ್ಚ್ 18 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಆ ಮೂಲಕ ಬಿಗ್ ರಿಲೀಫ್ ಅನ್ನು ನಟ ರಾಜ್ ಪಾಲ್ ಯಾದವ್ ಅವರಿಗೆ ನೀಡಿದೆ. ಶಹಜಹಾನ್ಪುರದಲ್ಲಿ ನಡೆಯುವ ತಮ್ಮ ಸೊಸೆಯ ಮದುವೆಯಲ್ಲಿ ಭಾಗವಹಿಸಲು ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಸ್ವೀಕರಿಸುವವರ ಹೆಸರಿನಲ್ಲಿ 1.5 ಕೋಟಿ ರೂ.ಗಳ ಡಿಮಾಂಡ್ ಡ್ರಾಫ್ಟ್ ಸಲ್ಲಿಸಲು ನ್ಯಾಯಾಲಯವು ನಟನಿಗೆ ಮಧ್ಯಾಹ್ನ 3 ಗಂಟೆಯವರೆಗೆ ಸಮಯಾವಕಾಶ ನೀಡಿದ ನಂತರ ಇದು ಬಂದಿದೆ. ರಾಜ್ಪಾಲ್ ಯಾದವ್ ಅವರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿ ಅವರು 1.5 ಕೋಟಿ ರೂ.ಗಳ ಡಿಡಿಯನ್ನು ಠೇವಣಿ ಇಟ್ಟಿದ್ದಾರೆ. ನ್ಯಾಯಾಲಯವು ಅವರ ಪಾಸ್ಪೋರ್ಟ್ ಅನ್ನು ಸಹ ಒಪ್ಪಿಸುವಂತೆ ಆದೇಶಿಸಿದೆ. ಮುಂದಿನ ವಿಚಾರಣೆ ಮಾರ್ಚ್ 18 ರಂದು ನಡೆಯಲಿದೆ. https://kannadanewsnow.com/kannada/high-court-orders-invalidation-of-election-of-bagepalli-mla-sn-subbareddy/
ಬೆಂಗಳೂರು: ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಇಂದು ಈ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಎಸ್ ಕಮಲ್ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿ ಈ ಆದೇಶ ಮಾಡಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ಹೈಕೋರ್ಟ್ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿದೆ. ಚುನಾವಣಾ ಅಕ್ರಮ ಹಿನ್ನಲೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ. https://kannadanewsnow.com/kannada/a-young-man-died-due-to-an-unscientific-hump-in-the-state/
ಶಿವಮೊಗ್ಗ: ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಬಲಿ ಎನ್ನುವಂತೆ ಶಿವಮೊಗ್ಗದಲ್ಲಿ ಪಾಲಿಕೆ ನಿರ್ಮಿಸಿದ್ದಂತ ಅವೈಜ್ಞಾನಿಕ ಹಂಪ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಶಿವಮೊಗ್ಗದ ಎಲ್ ಬಿ ಎಸ್ ನಗರದ ಫ್ಲೈಓವರ್ ಬಳಿಯಲ್ಲಿ ಪಾಲಿಕೆಯಿಂದ ಅವೈಜ್ಞಾನಿಕವಾಗಿ ಹಂಪ್ ಒಂದನ್ನು ನಿರ್ಮಿಸಲಾಗಿತ್ತು. ಈ ಹಂಬ್ ಕಾಣದೇ ಉಲ್ಲಾ(35) ಎಂಬಾತ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವೈಜ್ಞಾನಿಕ ಹಂಪ್ ಕಾಣದೇ ಉಲ್ಲಾ ಬೈಕ್ ನಿಂದ ಕೆಳಗೆ ಬಿದ್ದಿರುವಂತ ದೃಶ್ಯ ಸಮೀಪದಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಲ್ಲಾ ಸಾವಿಗೆ ಶಿವಮೊಗ್ಗ ಪಾಲಿಕೆಯೇ ಕಾರಣ ಎಂಬುದಾಗಿ ಆರೋಪಿಸಿ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/another-victim-of-elephant-attack-in-the-state-laborer-dies-in-chikkamagaluru/
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹಾವೇರಿಯ ಕೂಲಿ ಕಾರ್ಮಿಕನೊಬ್ಬ ಚಿಕ್ಕಮಗಳೂರಿನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಆನೆ ದಾಳಿಗೆ ಬಲಿಯಾಗಿದ್ದಾನೆ. ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಾಗೇಶ್ ಗೌಡ ಎಂಬುವರ ತೋಟದಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ(45) ಎಂಬಾತ ಕೆಲಸ ಮಾಡುತ್ತಿದ್ದನು. ನಾಗೇಶ್ ಗೌಡರ ತೋಟದ ಮೂಲಕ ಶ್ರೀಧರ್ ಗೌಡ ಅವರ ತೋಟದ ಲೈನ್ ಮನೆಗೆ ಹೋಗುತ್ತಿದ್ದಂತ ಸಂದರ್ಭದಲ್ಲಿ ಆನೆ ದಾಳಿ ಮಾಡಿ, ಸಾಯಿಸಿದೆ. ಕೂಲಿ ಕೆಲಸ, ಗಾರೆ ಕೆಲಸವನ್ನು ಮೃತ ಯಲ್ಲಪ್ಪ ಮಾಡುತ್ತಿದ್ದರು. ಇಂದು ಅವರು ತೋಟದ ಮನೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಆನೆ ದಾಳಿ ಮಾಡಿ ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕೂಲಿ ಕಾರ್ಮಿಕ ಯಲ್ಲಪ್ಪ ಪಾರ್ಥೀವ ಶರೀರವನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. https://kannadanewsnow.com/kannada/india-us-trade-deal-is-like-a-death-warrant-for-farmers-aap-chief-minister-chandru/
ಬೆಂಗಳೂರು: ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ ಭಾರತ ದೇಶವು ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಾಂತರ ಸಂಖ್ಯೆಯ ಸಣ್ಣ ಸಣ್ಣ ರೈತರುಗಳು ಇಂದಿಗೂ ಸಹ ಭಾರತದ ಆರ್ಥಿಕತೆಗೆ ಬೆನ್ನೆಲುಬಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೆರಿಕ ದೇಶದ ಒತ್ತಡ ಹಾಗೂ ಹಿತಾಸಕ್ತಿಗೆ ಬಲಿಯಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದೇಶಗಳ ನಡುವಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕವೆಂದು ಹೇಳುತ್ತಲೇ ಭಾರತೀಯ ರೈತರುಗಳಿಗೆ ಮರಣ ಶಾಸನವನ್ನೇ ಬರೆದುಬಿಟ್ಟಿದ್ದಾರೆ ಎಂದು ತೀವ್ರ ಕಳವಳವನ್ನು ವ್ಯಕ್ತ ಪಡಿಸಿದ್ದಾರೆ. ಮುಂದುವರೆದು ಮಾತನಾಡುತ್ತಾ ” ಭಾರತದ 145 ಕೋಟಿ ಜನಸಂಖ್ಯೆಯಲ್ಲಿ 85ರಿಂದ 90 ಕೋಟಿ ಜನತೆ ಕೃಷಿ…














