Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರ (DG & IGP) ಕಾರ್ಯಾಲಯವು ದಿನಾಂಕ 15.06.2026 ರಂದು ಅತ್ಯಂತ ಮಹತ್ವದ ಸ್ಥಾಯಿ ಆದೇಶವೊಂದನ್ನು (ಸ್ಥಾಯಿ ಆದೇಶ ಸಂಖ್ಯೆ – 1061) ಹೊರಡಿಸಿದೆ. ಒಬ್ಬ ವ್ಯಕ್ತಿಯ ಅನುಮತಿಯಿಲ್ಲದೆ ಆತನ/ಆಕೆಯ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಇಲ್ಲವೇ ಇಂಟರ್ನೆಟ್‌ನಲ್ಲಿ ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಮತ್ತು ಇಂತಹ ದೂರುಗಳ ನಿರ್ವಹಣೆಗೆ ಕಟ್ಟುನಿಟ್ಟಾದ ಹೊಸ ಮಾರ್ಗಸೂಚಿಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ. ಈ ಕುರಿತು ಸಾರ್ವಜನಿಕರು ಹಾಗೂ ಕಾನೂನು ಜಾರಿ ಅಧಿಕಾರಿಗಳು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಪ್ರಮುಖ ಕಾನೂನು ಅಂಶಗಳು ಮತ್ತು ಮಾರ್ಗಸೂಚಿಗಳ ವಿವರ ಇಲ್ಲಿದೆ: ಚಿತ್ರೀಕರಣಕ್ಕೆ ನೀಡಿದ ‘ಒಪ್ಪಿಗೆ’, ಪ್ರಸಾರಕ್ಕೆ ನೀಡಿದ ‘ಅನುಮತಿ’ ಅಲ್ಲ! ಅನೇಕ ಪ್ರಕರಣಗಳಲ್ಲಿ ಸಂತ್ರಸ್ತರು ಮೊದಲು ಚಿತ್ರ ಅಥವಾ ವೀಡಿಯೊಗಳನ್ನು ಚಿತ್ರೀಕರಿಸಲು ಒಪ್ಪಿಗೆ ನೀಡಿದ್ದರು ಎಂಬ ಕಾರಣದ ಆಧಾರದ ಮೇಲೆ ಕೆಲವು ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸಲು ನಿರಾಕರಿಸುತ್ತಿರುವುದು ಅಥವಾ…

Read More

ಬೆಂಗಳೂರು: ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೂಡಿದ್ದ ಅಸಮಾಧಾನ ಕೊನೆಗೂ ತಣ್ಣಗಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಅಧಿಕೃತವಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ (GBA Minister) ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆ್ಯಕ್ಷನ್ ಮೂಡ್‌ಗೆ ಜಾರಿದ ಸಚಿವರು, ನಗರದ ಜ್ವಲಂತ ಸಮಸ್ಯೆಗಳ ಕುರಿತು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐದು ಜಿಬಿಎ ಆಯುಕ್ತರ ಜೊತೆ ಸರಣಿ ಸಭೆ: ಅಧಿಕಾರ ಸ್ವೀಕರಿಸಿದ ತಕ್ಷಣವೇ ಸಚಿವ ಕೃಷ್ಣ ಬೈರೇಗೌಡ ಅವರು ಐದು ಜಿಬಿಎ ಆಯುಕ್ತರ ಮಹತ್ವದ ಸಭೆ ನಡೆಸಿದರು. ಜಿಬಿಎ ವ್ಯಾಪ್ತಿಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಪ್ರಗತಿ ಹಾಗೂ ಮುಂಬರುವ ಯೋಜನೆಗಳ ಕುರಿತು ಆಯುಕ್ತರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. “ಬೆಂಗಳೂರು ಅಂದರೆ ಗುಂಡಿ ಯಾಕೆ?” – ಅಧಿಕಾರಿಗಳಿಗೆ ಕ್ಲಾಸ್: ಸಭೆಯ ಉದ್ದಕ್ಕೂ ನಗರದ ರಸ್ತೆಗಳ ದುಸ್ಥಿತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಅಧಿಕಾರಿಗಳಿಗೆ ಸರಿಯಾಗಿಯೇ ಕ್ಲಾಸ್ ತಗೆದುಕೊಂಡರು. ರಸ್ತೆ ಗುಂಡಿಗಳ ವಿಚಾರವಾಗಿ…

Read More

ಪೋಷಕರು ಬುಧವಾರದಂದು 27 ಬಾರಿ ಈ ಮಂತ್ರವನ್ನು ಪಠಿಸಬೇಕು. ನಿಮ್ಮ ಮಕ್ಕಳು ಚೆನ್ನಾಗಿ ಓದುತ್ತಾರೆ ಮತ್ತು ಅವರ ಭವಿಷ್ಯ ಉಜ್ವಲವಾಗುತ್ತದೆ. ಪರೀಕ್ಷೆ ಹತ್ತಿರ ಸಮೀಪಿಸುತ್ತಿದೆ, ಮಕ್ಕಳು ಚೆನ್ನಾಗಿ ಓದಲು ಪೋಷಕರು ಪ್ರಾರ್ಥಿಸಲು ಹೇಳಬೇಕಾದ ಮಂತ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ,…

Read More

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಚರ್ಚೆಗೆ ತೆರಳುತ್ತಿದ್ದಾಗ ಅಪಘಾತ: ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಚರ್ಚೆ ಹಾಗೂ ತನಿಖಾ ಪ್ರಕ್ರಿಯೆಗಾಗಿ ಎಸ್‌ಐಟಿ ಅಧಿಕಾರಿಗಳ ತಂಡ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಸ್ಥಳೀಯರ ನೆರವು: ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಹತ್ತಿರದಲ್ಲಿದ್ದ ಸಾರ್ವಜನಿಕರು ಧಾವಿಸಿ ಬಂದು ಕಾರಿನಲ್ಲಿದ್ದ ಅಧಿಕಾರಿಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಗಾಯಾಳುಗಳಿಗೆ…

Read More

ಬೆಂಗಳೂರು: ಫಿಟ್‌ನೆಸ್ ಕಾಪಾಡಿಕೊಳ್ಳಬೇಕು, ಡಯಟ್ ಮಾಡಬೇಕು ಅನ್ನೋ ಕಾರಣಕ್ಕೆ ಎಷ್ಟೋ ಜನರು ತಮ್ಮ ಇಷ್ಟದ ಬಿರಿಯಾನಿ, ಬರ್ಗರ್ ತಿನ್ನುವುದನ್ನು ಬಿಡುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಕಾಗಿಲ್ಲ. ಇದಕ್ಕೆ ಕಾರಣ, ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ. ಹೌದು, ಸ್ವಿಗ್ಗಿ ಬೆಂಗಳೂರಿನಲ್ಲಿ ವಿಶೇಷ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಅನ್ನು ಆರಂಭಿಸಿದೆ. ಇದರಲ್ಲಿ ನಗರದ ದಿಗ್ಗಜ ಹೋಟೆಲ್ ಬ್ರ್ಯಾಂಡ್‌ಗಳಾದ ಟ್ರಫಲ್ಸ್, ಎ2ಬಿ (ಅಡ್ಯಾರ್ ಆನಂದ ಭವನ್), ಬಿರಿಯಾನಿ ಬ್ಲೂಸ್, ದಿ ಬೌಲ್ ಕಂಪನಿ, ಪಾಟ್‌ಫುಲ್ ಸೇರಿದಂತೆ ಹಲವು ಸಂಸ್ಥೆಗಳ ಜೊತೆ ಸ್ವಿಗ್ಗಿ ಕೈಜೋಡಿಸಿದೆ. ಇವು ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕ್ಯಾಲೋರಿ ಇರುವ ರುಚಿಕರ ಖಾದ್ಯಗಳನ್ನು ತಯಾರಿಸಿದ್ದು, ಇವುಗಳನ್ನು ಆ್ಯಪ್‌ನಲ್ಲಿ ಪರಿಚಯಿಸಲಾಗಿದೆ. ಬರ್ಗರ್, ಬಿರಿಯಾನಿ ಇನ್ಮುಂದೆ ‘ಹೆಲ್ತಿ’ & ‘ಟೇಸ್ಟಿ’! ಹೋಟೆಲ್‌ಗಳು ಕಳೆದ 10-12 ವಾರಗಳಿಂದ ನಿರಂತರವಾಗಿ ಶ್ರಮಿಸಿ, ತಮ್ಮ ಜನಪ್ರಿಯ ಖಾದ್ಯಗಳ ರುಚಿ ಕೆಡದಂತೆ, ಅವುಗಳನ್ನು ಆರೋಗ್ಯಕರವಾಗಿ ವಿನ್ಯಾಸಗೊಳಿಸಿವೆ. ಇದರ ಅಡಿಯಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳನ್ನು ನೀಡಲಾಗಿದೆ. ಅವುಗಳಲ್ಲಿ ಒಂದಿಷ್ಟು…

Read More

ಶಿವಮೊಗ್ಗ: ಅದೊಂದು ರೈತ ಕುಟುಂಬ. ತಮ್ಮ ಮನೆಯ ಮೂಕಪ್ರಾಣಿಯೇ ಆ ಕುಟುಂಬದ ಒಡನಾಡಿ. ಅದರಲ್ಲೂ ಆ ಎಮ್ಮೆ ತುಂಬು ಗರ್ಭಿಣಿ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಜೀವಕ್ಕೆ ಜನ್ಮ ನೀಡಬೇಕಿದ್ದ ಆ ಮೂಕಜೀವಿ, ವಿಧಿಯ ಆಟಕ್ಕೆ ಸಿಲುಕಿ ಸಾವಿನ ದಡ ತಲುಪಿತ್ತು. “ಇನ್ನೇನು ಇದು ಬದುಕುವುದಿಲ್ಲ” ಎಂದು ಇಡೀ ಗ್ರಾಮಸ್ಥರೇ ಕೈಚೆಲ್ಲಿ ಕುಳಿತಿದ್ದಾಗ, ಆ ಪ್ರಾಣಿಯ ಪಾಲಿಗೆ ದೇವರಂತೆ ಬಂದ ಪಶುವೈದ್ಯರೊಬ್ಬರು ಅದ್ಭುತವನ್ನೇ ಸೃಷ್ಟಿಸಿದ್ದಾರೆ! ಇಂತಹದ್ದೊಂದು ಹೃದಯಸ್ಪರ್ಶಿ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ನಡೆದಿದ್ದೇನು? ಒಮ್ಮೆಗೆ ಎದುರಾದ ಆಪತ್ತು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರಿನ ಮತ್ತಿಭಾವಿ ಗ್ರಾಮದ ರೈತ ಪ್ರೇಮ್ ಕುಮಾರ್ ಅವರಿಗೆ ಸೇರಿದ ತುಂಬು ಗರ್ಭಿಣಿ ಎಮ್ಮೆಯೇ ಈ ಕಥೆಯ ನಾಯಕಿ. ಸೋಮವಾರದಂದು ಅರಿಯದೇ ನಡೆದ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅನಾಹುತವೇ ಸಂಭವಿಸಿತ್ತು. ರೈತ ಪ್ರೇಮ್ ಕುಮಾರ್ ಅವರ ಪತ್ನಿ, ಮನೆಯಲ್ಲಿದ್ದ ವಿಷಕಾರಿ ಗಿಡವೊಂದರ ನೀರನ್ನು ಗಮನಿಸದೇ ಎಮ್ಮೆಯ ಮುಸುರೆಗೆ (ಆಹಾರದ ಪಾತ್ರೆ) ಸುರಿದಿದ್ದರು. ವಿಷಯ…

Read More

ಹೊನ್ನಾವರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹೊನ್ನಾವರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 127.5 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 17,08,300/- ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು: ಧನುಷ್ (ತಂದೆ: ಶ್ರೀಧರಗೌಡ) – ಕಳ್ಳತನ ಮಾಡಿದ ಪ್ರಮುಖ ಆರೋಪಿ (ವಾಸ: ಹೊನ್ನಾವರ ತಾಲೂಕು). ಗೌರೀಶ (ತಂದೆ: ಗಣಪತಿಗೌಡ) – ಕದ್ದ ಮಾಲನ್ನು ಮಾರಾಟ ಮಾಡಿದ ಆರೋಪಿ (ವಾಸ: ಮೆಟ್ಟಿನಗದ್ದೆ, ಗೇರುಸೊಪ್ಪ, ಹೊನ್ನಾವರ ತಾಲೂಕು). ಪ್ರಕರಣದ ಹಿನ್ನೆಲೆ: ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಕಬ್ಬಿಣದ ಟ್ರಂಕ್‌ನಲ್ಲಿ ಇಟ್ಟಿದ್ದ 128 ಗ್ರಾಂ ಚಿನ್ನದ ಆಭರಣಗಳು ಹಾಗೂ ನಗದು ಹಣವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಕಾರ್ಯಾಚರಣೆ ಮತ್ತು ಜಪ್ತಿ: ಪ್ರಕರಣದ ತನಿಖೆ ಕೈಗೆತ್ತಿಕೊಂಡ ಹೊನ್ನಾವರ ಪೊಲೀಸರು ಖಚಿತ ಮಾಹಿತಿ ಸಂಗ್ರಹಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿಧ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ನಗರದ ಕಸ್ತೂರಿನಗರ, ಜ್ಞಾನಭಾರತಿ, ತಲಘಟ್ಟಪುರ ಹಾಗೂ ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಹಲವು ಪ್ರಮುಖ ಆರ್‌ಟಿಒ ಕಚೇರಿಗಳಿಗೆ ಈ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಇಂದು ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ದುಷ್ಕರ್ಮಿಗಳು ಈ ಇ-ಮೇಲ್ ಕಳುಹಿಸಿದ್ದು, ಕಚೇರಿಗಳನ್ನು ಸ್ಫೋಟಿಸುವುದಾಗಿ ಎಚ್ಚರಿಸಿದ್ದರು. ಬೆದರಿಕೆ ಸಂದೇಶ ತಿಳಿಯುತ್ತಿದ್ದಂತೆಯೇ ಆರ್‌ಟಿಒ ಕಚೇರಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರ ದೌಡು, ತೀವ್ರ ಪರಿಶೀಲನೆ: ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣ ಎಚ್ಚೆತ್ತ ಸ್ಥಳೀಯ ಪೊಲೀಸರು ಮತ್ತು ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ಆಯಾ ಆರ್‌ಟಿಒ ಕಚೇರಿಗಳಿಗೆ ಧಾವಿಸಿದರು. ಮುಂಜಾಗ್ರತಾ ಕ್ರಮವಾಗಿ ಕಚೇರಿಯಲ್ಲಿದ್ದ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ, ಕಚೇರಿಯ ಮೂಲೆ ಮೂಲೆಗಳಲ್ಲೂ ತೀವ್ರ ಶೋಧ ಕಾರ್ಯ ನಡೆಸಿದರು. ಹುಸಿಯಾದ ಬಾಂಬ್ ಕರೆ: ಪೊಲೀಸರು ನಡೆಸಿದ…

Read More

ಚಿತ್ರದುರ್ಗ: ರಾಜ್ಯ ರಾಜಕೀಯದಲ್ಲಿ ಮುಂಬರುವ ಚುನಾವಣಾ ಕಣಗಳು ಈಗಿನಿಂದಲೇ ಕಾವೇರುತ್ತಿವೆ. ಇದಕ್ಕೆ ಪೂರಕವೆಂಬಂತೆ, ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ (By-election) ಅಧಿಕೃತ ಘೋಷಣೆಗೂ ಮುನ್ನವೇ ಅಲ್ಲಿ ರಾಜಕೀಯ ಫೈಟ್ ಜೋರಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ರುಚಿ ತೋರಿಸಲು ಜೆಡಿಎಸ್ ಭರ್ಜರಿ ತಂತ್ರಗಾರಿಕೆ ಹೆಣೆಯುತ್ತಿದ್ದು, ಆ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ಮುಂದೆ ಓದಿ… ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್‌ಡಿಕೆ ಗಾಳ: ಸಚಿವ ಡಿ.ಸುಧಾಕರ್ ಅವರು ಅಕಾಲಿಕ ನಿಧನದ ನಂತ್ರ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಹೊಸ್ತಿಲಿಗೆ ಬಂದು ನಿಂತಿದೆ. ಹಿರಿಯೂರು ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠಿತವಾಗಿ ಪರಿಗಣಿಸಿರುವ ಜೆಡಿಎಸ್, ತೆರೆಮರೆಯಲ್ಲಿ ಗೆಲುವಿಗಾಗಿ ಭಾರಿ ಕಸರತ್ತು ನಡೆಸುತ್ತಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಒಂದೆರಡು ಸುತ್ತಿನ ಮಾತುಕತೆ ನಡೆಸಿದ್ದು, ಕಾಂಗ್ರೆಸ್‌ನ ಪ್ರಮುಖ ನಾಯಕರೊಬ್ಬರಿಗೆ ಜೆಡಿಎಸ್ ಗಾಳ ಹಾಕಿದೆ. ಕಾಂಗ್ರೆಸ್‌ನಲ್ಲಿ ಅಸಮಾಧಾನಗೊಂಡಿರುವ ತುಮಕೂರಿನ ಪ್ರಮುಖ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಅವರನ್ನು ಜೆಡಿಎಸ್ ಆಪರೇಷನ್ ಮಾಡಲು ಮುಂದಾಗಿದೆ. ಸತೀಶ್…

Read More

ಬೆಂಗಳೂರು: ಪೊಲೀಸ್ ಇಲಾಖೆಯ ದಾಖಲೆ ನಿರ್ವಹಣೆಯ ಲೋಪದಿಂದಾಗಿ ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಬರೋಬ್ಬರಿ 66 ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಕೈಬಿಟ್ಟಿರುವ ವಿಚಾರ ರಾಜ್ಯ ರಾಜಧಾನಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಗಂಭೀರ ವಿದ್ಯಮಾನದ ಕುರಿತು ನಗರ ಪೊಲೀಸ್ ಆಯುಕ್ತರಾದ (Police Commissioner) ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಅವರು ಪ್ರತಿಕ್ರಿಯಿಸಿದ್ದು, ಇಲಾಖೆಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇಲಾಖಾ ತನಿಖೆಗೆ ಕಮಿಷನರ್ ಆದೇಶ: ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ರೌಡಿಶೀಟರ್‌ಗಳನ್ನು ಯಾವ ಕಾರಣಕ್ಕೆ ಪಟ್ಟಿಯಿಂದ ಕೈಬಿಡಲಾಗಿದೆ ಎಂಬುದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಲಾಗುತ್ತಿದೆ. ಈ ಇಡೀ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯ ಕಡೆಯಿಂದ ಯಾವುದೇ ರೀತಿಯ ಕರ್ತವ್ಯಲೋಪ ಆಗಿದೆಯೇ ಎಂಬುದನ್ನೂ ಕೂಡ ತನಿಖೆ ಮಾಡಲಾಗುತ್ತದೆ,” ಎಂದು ತಿಳಿಸಿದರು. ಡಿಜಿಪಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ: ರೌಡಿಶೀಟರ್‌ಗಳ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆ…

Read More