Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. “ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ ಎಂದು ತಿಳಿಸಿದರು. ಇಂಧನ ಭದ್ರತೆಗೆ ಪಂಪ್ಡ್ ಸ್ಟೋರೇಜ್, ಬ್ಯಾಟರಿ…
ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಭಾಷೆಯು ನೆಲದ ಸಂಸ್ಕೃತಿ, ಸಂಪುದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು…
ಬೆಂಗಳೂರು: ನಗರದಲ್ಲಿನ ಕೇಕ್ ಅಂಗಡಿಗಳಲ್ಲಿನ ಕೇಕ್ ನಲ್ಲಿ ಅತೀಯಾದ ಕೃತಕ ಬಣ್ಣ ಬಳಕೆಯಾಗುತ್ತಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂಬುದಾಗಿ ಕೃತಕ ಬಣ್ಣವನ್ನು ಬ್ಯಾನ್ ಮಾಡಲಾಗಿತ್ತು. ಈ ಪರಿಣಾಮ ಕೇಕ್ನಲ್ಲಿ ಕೃತಕ ಬಣ್ಣದ ಪಮಾಣ ತಗ್ಗಿದೆ ಎಂಬುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಆಗಸ್ಟ್ 2024ರ ಮಾಹೆಯಲ್ಲಿ ಕೇಕ್ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುತ್ತಿರುವ ಕುರಿತಂತೆ 295 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ 12 ಮಾದರಿಗಳು (ಶೇ.4.06ರಷ್ಟು ಅಸುರಕ್ಷಿತ ಎಂದು ವರದಿಯಾಗಿರುತ್ತವೆ ಎಂದಿದೆ. ಈ ಸಂಬಂಧಿಸಿದಂತೆ ಬೇಕರಿ ಉದ್ದಿಮೆದಾರರು ತಮ್ಮ ಉದ್ದಿಮೆಗಳಲ್ಲಿ ಕೇಕ್ ಸೇರಿದಂತೆ ತಿಂಡಿ ತಿನಿಸುಗಳ ತಯಾರಿಕೆಯಲ್ಲಿ ಸ್ವಾಭಾವಿಕ/ನೈಸರ್ಗಿಕ ಬಣ್ಣಗಳನ್ನು ಬಳಸಲು ಅಥವಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011ರಡಿ ಅನುಮೋದಿತವಾಗಿರುವ ಕೃತಕ ಬಣ್ಣಗಳನ್ನು ನಿಗದಿತ ಮಿತಿಯೊಳಗೆ ಮಾತ್ರ ಬಳಸುವಂತೆ ಉದ್ದಿಮೆದಾರರ ಹಂತದಲ್ಲಿ ಮತ್ತು ಪತ್ರಿಕಾ ಪ್ರಕಟಣೆಯ ಮೂಲಕ ಅರಿವು ಮೂಡಿಸಲಾಗಿರುತ್ತದೆ…
ಬೆಂಗಳೂರು: 220/66/11 kV ಎಸ್.ಆರ್.ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.03.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ ಗೃಹಲಕ್ಷ್ಮಿ-ಅಪಾರ್ಟ್ ಮೆಂಟ್, ಎಸ್ ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ನ್ ಟಿಟಿಎಫ್,ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೋಲಿಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥೀಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸರ್ಕಲ್ ರಸ್ತೆ, ಬೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ ಎಫ್ ಲೇಔಟ್, ಎನ್ ಎಸ್ ಲೇಔಟ್, ಕೆಜಿ ಲೇಔಟ್, ರಾಜೀವ್ ಗಾಂಧಿನಗರ ಬಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆಗ್ರಾಮ ಭಾಗಶಃ ಪವರ್ ಕಟ್ ಆಗಲಿದೆ. ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಕ್ರಾಸ್, ಹೆಚ್ ಎಂಟಿ, ಬಿ.ಎಂ.ಟಿ. ಗಾರ್ಡನ್,…
ಡೆಹ್ರಾಡೂನ್: ಉತ್ತರಾಖಂಡದ ಮಾನಾ ಮತ್ತು ಬದರೀನಾಥ್ ನಡುವಿನ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಕಾರ್ಮಿಕ ಶಿಬಿರದಲ್ಲಿ ಶುಕ್ರವಾರ ಮುಂಜಾನೆ ಭಾರಿ ಹಿಮಪಾತ ಸಂಭವಿಸಿದ್ದು, ಎಂಟು ಕಂಟೇನರ್ಗಳು ಮತ್ತು ಶೆಡ್ನಲ್ಲಿ 57 ಕಾರ್ಮಿಕರು ಸಿಲುಕಿದ್ದಾರೆ. ರಕ್ಷಣಾ ತಂಡಗಳು ಇಲ್ಲಿಯವರೆಗೆ 16 ಕಾರ್ಮಿಕರನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದರೆ. ಭಾರಿ ಹಿಮಪಾತ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆ ಸಿಕ್ಕಿಬಿದ್ದ ಉಳಿದ 41 ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ. https://twitter.com/ANI/status/1895426562180407513 ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇತ್ತೀಚಿನ ಅಂಕಿಅಂಶಗಳನ್ನು ದೃಢಪಡಿಸಿದ್ದು, ಹಿಮಪಾತದಲ್ಲಿ 57 ಬಿಆರ್ಒ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಅದರಲ್ಲಿ 16 ಕಾರ್ಮಿಕರನ್ನು ರಕ್ಷಿಸಲಾಗಿದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾವು ಐಟಿಬಿಪಿಯಿಂದ ಸಹಾಯ ಪಡೆಯುತ್ತಿದ್ದೇವೆ. ಜಿಲ್ಲಾಡಳಿತ ಮತ್ತು ಇತರ ಎಲ್ಲರೂ ಸಂಪರ್ಕದಲ್ಲಿದ್ದಾರೆ ಮತ್ತು ನಾವು ಸಾಧ್ಯವಾದಷ್ಟು ಬೇಗ ಎಲ್ಲರನ್ನೂ ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು. https://twitter.com/suryacommand/status/1895403906148245569 ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಫೆಬ್ರವರಿ 28 ರಂದು ಬೆಳಿಗ್ಗೆ 7: 15 ರ ಸುಮಾರಿಗೆ ಹಿಮಪಾತ ಸಂಭವಿಸಿದೆ.…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿದೆ. ಈ ಸಮಯದಲ್ಲೇ ಬಾಯಿ ತಂಪಾಗಿಸಲು ಕಲ್ಲಂಗಡಿ ಹಣ್ಣಿನ ಮೊರೆಯನ್ನು ಜನರು ಹೋಗುತ್ತಿದ್ದಾರೆ. ಆದರೇ ಹೀಗೆ ಕಲ್ಲಂಗಡಿ ಹಣ್ಣನ್ನು ನೀವು ತಿನ್ನುತ್ತಾ ಇದ್ದರೇ ಎಚ್ಚರ ವಹಿಸಿ. ಯಾಕೆಂದ್ರೆ ನಿಮ್ಮ ಆರೋಗ್ಯದ ಮೇಲೆ ಅದಕ್ಕೆ ನೀಡುವಂತ ಕೃತಕ ಬಣ್ಣ ಪರಿಣಾಮ ಬಿರಲಿದೆ ಅಂತೆ. ಹೌದು.. ಕಲ್ಲಂಗಡಿ ಹಣ್ಣನ್ನು ಅತಿ ಹೆಚ್ಚು ಕೆಂಪಾಗಿಸಲು ಕೃತಕ ಬಣ್ಣದ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವಂತ ಆಘಾತಕಾರಿ ಮಾಹಿತಿಯನ್ನು ಮಾರಾಟಗಾರರೇ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಕಲ್ಲಂಗಡಿ ಹಣ್ಣಿಗೆ ಕೃತಕ ಬಣ್ಣ ಹಾಕಿದ್ದಾರೆ ಅನ್ನೋದು ನಮಗೆ ಗೊತ್ತಾಗೋದಿಲ್ಲ. ಆದರೇ ಹಣ್ಣಿನ ಕಲ್ಲರ್ ಹೆಚ್ಚಾಗಿದ್ದರೇ ಅದು ಕೃತಕ ಬಣ್ಣದ ಇಂಜೆಕ್ಷನ್ ಮಾಡಿರೋದು ಎಂಬುದಾಗಿ ಪರಿಗಣಿಸಬಹುದಾಗಿ ಅಂತ ಹೇಳಿದ್ದಾರೆ. ಕೃತಕ ಬಣ್ಣದ ಇಂಜೆಕ್ಷನ್ ಅನ್ನು ಕಲ್ಲಂಗಡಿ ಹಣ್ಣಿಗೆ ಮಾಡುವುದರಿಂದ ಅತೀ ಹೆಚ್ಚು ಕೆಂಪನೆಯ ಬಣ್ಣವನ್ನು ಪಡೆದುಕೊಳ್ಳುತ್ತದೆ. ಜೊತೆಗೆ ಸಪ್ಪೆಯಾಗಿದ್ದಂತ ಹಣ್ಣು ಹೆಚ್ಚು ರುಚಿಕೂಡ ಪಡೆಯುತ್ತದೆ. ಇಂತಹ ಹಣ್ಣನ್ನು ತಿನ್ನುವಂತವರ ಆರೋಗ್ಯದ ಮೇಲೆ ಅಷ್ಟೇ ಪರಿಣಾಮವನ್ನು ಕೂಡಲೇ ಬೀರದೇ ಇದ್ದರೂ ಕಾಲಾನಂತ್ರ…
ಬಳ್ಳಾರಿ: ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದು ಈ ಕಾಂಗ್ರೆಸ್ ಪಕ್ಷದ ಜಾಯಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಿದ್ದರಾಮಯ್ಯನವರು ಜನತಾದಳದಿಂದ ಬಂದು ಆ ವೃತ್ತಿಯನ್ನು ಇಲ್ಲಿ ಕಲಿತಿದ್ದಾರೆ ಎಂದು ಟೀಕಿಸಿದ್ದಾರೆ. ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಸುಮಾರು ರೂ. 25,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದಲಿತರ ಹಣವನ್ನು ಸರಕಾರ ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡಿದ ವಿಚಾರವನ್ನು ಮನೆಮನೆಗೆ ತಲುಪಿಸಲು ಅವರು ಮನವಿ ಮಾಡಿದರು. ಮೊದಲ ವರ್ಷ 34 ಸಾವಿರ ಕೋಟಿ ದಲಿತರಿಗೆ ಮೀಸಲಿಟ್ಟಿದ್ದಾಗಿ ಮುಖ್ಯಮಂತ್ರಿಗಳು ಭಾಷಣ ಮಾಡಿದ್ದರು. ಇದು ಸುಳ್ಳು; ಹೇಳಿದ್ದು ಮಾತ್ರ. ಅದರಲ್ಲಿ 11,144 ಕೋಟಿ ಮೊತ್ತವನ್ನು ಗ್ಯಾರಂಟಿಗೆ ಕೊಟ್ಟಿದ್ದಾರೆ. ಎರಡನೇ ವರ್ಷದಲ್ಲಿ ಇಲ್ಲಿಂದ 14,366 ಕೋಟಿಯನ್ನು ಗ್ಯಾರಂಟಿಗಳಿಗೆ ಕೊಟ್ಟರು ಎಂದು ದೂರಿದರು. ದಲಿತರ ಹಣವನ್ನು ಈ ಸರಕಾರ ದುರುಪಯೋಗ ಮಾಡುತ್ತಿದೆ ಎಂಬ…
ಬೆಂಗಳೂರು: “ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. ನೀವು ಕೂಡ ಅವರಂತೆಯೇ ಸಾಧನೆ ಮಾಡಬಹುದು. ಯಾರೂ ಯಾರಿಗಿಂತ ಕಡಿಮೆ ಇಲ್ಲ. ನೀವು ಯಶಸ್ಸು ಸಾಧಿಸಬೇಕಾದರೆ, ಸಾಧನೆಯ ಕನಸು ಕಾಣಬೇಕು, ಆ ಕನಸು ಈಡೇರಿಸಲು ಇಚ್ಚೆ ಇರಬೇಕು, ಬದ್ಧತೆ, ಶಿಸ್ತು ಹೊಂದಿರಬೇಕು. ಆಗ ಮಾತ್ರ ಸಾಧನೆ ಸಾಧ್ಯ. ಈಗ ಸಾಧನೆ ಮಾಡಿರುವ ಅನೇಕ ವಿಜ್ಞಾನಿಗಳು ನಿಮ್ಮಂತೆಯೇ ಹುಟ್ಟಿ ಬೆಳೆದವರು. ನಿಮಗೆ ಇರುವಷ್ಟು ಅವಕಾಶ, ಸೌಲಭ್ಯಗಳು ಅವರಿಗೆ ಇರಲಿಲ್ಲ. ಆದರೂ ಅವರು ಸಾಧನೆ ಮಾಡಿದ್ದಾರೆ” ಎಂದು ತಿಳಿಸಿದರು. “ಶುಭಂ ಕರೋತಿ…
ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್ ಲರ್ನಿಂಗ್ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಜವಾಹರ್ಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ, ” ರಾಷ್ಟ್ರೀಯ ವಿಜ್ಞಾನ ದಿನ” ಮತ್ತು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯು ಆರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಈ ವಿಷಯ ತಿಳಿಸಿದರು. ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್ ಸಿ.ವಿ ರಾಮನ್ ಅವರ “ರಾಮನ್ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು…
ಕರಾಚಿ: ವಾಯವ್ಯ ಪಾಕಿಸ್ತಾನದ ತಾಲಿಬಾನ್ ಪರ ಸೆಮಿನರಿಯೊಳಗೆ ಶುಕ್ರವಾರ ಪ್ರಬಲ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ರಂಜಾನ್ ಉಪವಾಸಕ್ಕೆ ಮುಂಚಿತವಾಗಿ ಈ ಘಟನೆ ವರದಿಯಾಗಿದೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಅಕ್ಕೋರಾ ಖಟ್ಟಕ್ ಜಿಲ್ಲೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಶೀದ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಸತ್ತವರು ಮತ್ತು ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಅಫ್ಘಾನ್ ತಾಲಿಬಾನ್ ಜೊತೆ ನಂಟು ಹೊಂದಿರುವ ಜಾಮಿಯಾ ಹಕ್ಕಾನಿಯಾ ಸೆಮಿನರಿಯೊಳಗೆ ನಡೆದ ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಮುಸ್ಲಿಮರ ಪವಿತ್ರ ರಂಜಾನ್ ಮಾಸಕ್ಕೆ ಮುಂಚಿತವಾಗಿ ಈ ಬಾಂಬ್ ದಾಳಿ ನಡೆದಿದ್ದು, ಇದು ಚಂದ್ರನ ದರ್ಶನಕ್ಕೆ ಒಳಪಟ್ಟು ಶನಿವಾರ ಅಥವಾ ಭಾನುವಾರ ಪ್ರಾರಂಭವಾಗುವ ನಿರೀಕ್ಷೆಯಿದೆ. https://kannadanewsnow.com/kannada/congress-cant-tolerate-evolved-india-basavaraj-bammai/ https://kannadanewsnow.com/kannada/vatal-nagaraj-announces-akhanda-karnataka-bandh-on-march-22/