Author: kannadanewsnow09

ಬೆಂಗಳೂರು: ಡಿಸಿಇಟಿ-25 ಪರೀಕ್ಷೆ ಬರೆದಿದ್ದ ಹೊರನಾಡು, ಗಡಿನಾಡು ಕನ್ನಡಿಗರ ಸಲುವಾಗಿ ಜೂನ್.18ರ ಬುಧವಾರ ಕೆಇಎ ಕಚೇರಿಯಲ್ಲಿ ಪರೀಕ್ಷೆ ನಡೆದು ಒಂದು ಗಂಟೆಯಲ್ಲೇ ಫಲಿತಾಂಶ ಕೂಡ ಪ್ರಕಟಿಸಲಾಗಿದೆ. ಪರೀಕ್ಷೆ ತೆಗೆದುಕೊಂಡಿದ್ದ 27 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಗೆ ಹಾಜರಾಗಿದ್ದು ಕೇವಲ ಏಳು ಮಂದಿ. ಅವರಲ್ಲಿ ಒಬ್ಬರು ಅನುತ್ತೀರ್ಣರಾಗಿದ್ದು ಉಳಿದ ಆರು ಮಂದಿ ಅರ್ಹರಾಗಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ. ಒಟ್ಟು 50 ಅಂಕಗಳ ಲಿಖಿತ ಪರೀಕ್ಷೆ ಯಲ್ಲಿ ಕನಿಷ್ಠ 12 ಅಂಕ ಪಡೆದವರು ಮಾತ್ರ ಈ ಕೋಟಾದಡಿ ಸೀಟು ಪಡೆಯಲು ಅರ್ಹರಾಗುತ್ತಾರೆ. ಆದರೆ ಏಳು ಮಂದಿಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ 10 ಅಂಕ ಪಡೆದು ಅನರ್ಹರಾಗಿದ್ದಾರೆ ಎಂದರು.

Read More

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು. ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು. “ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌ ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ” ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ “ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ…

Read More

ಬೆಂಗಳೂರು: ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Rank ಪ್ರಕಟಿಸಿದೆ. ಯುಜಿಸಿಇಟಿ ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ. ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಕೂಡ ಅರ್ಹರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/KEA_karnataka/status/1935316653308510241 ಒಂದು ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ ಡಿಸಿಇಟಿ-25 ಪರೀಕ್ಷೆ ಬರೆದಿದ್ದ ಹೊರನಾಡು, ಗಡಿನಾಡು ಕನ್ನಡಿಗರ ಸಲುವಾಗಿ ಬುಧವಾರ (ಜೂ.18) ಇಲ್ಲಿನ ಕೆಇಎ ಕಚೇರಿಯಲ್ಲಿ ಪರೀಕ್ಷೆ ನಡೆದು ಒಂದು ಗಂಟೆಯಲ್ಲೇ ಫಲಿತಾಂಶ ಕೂಡ ನೀಡಲಾಗಿದೆ. ಪರೀಕ್ಷೆ ತೆಗೆದುಕೊಂಡಿದ್ದ 27 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಗೆ ಹಾಜರಾಗಿದ್ದು ಕೇವಲ ಏಳು ಮಂದಿ. ಅವರಲ್ಲಿ ಒಬ್ಬರು ಅನುತ್ತೀರ್ಣರಾಗಿದ್ದು ಉಳಿದ ಆರು ಮಂದಿ ಅರ್ಹರಾಗಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ. ಒಟ್ಟು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನ ಉಪಹಾರ ಯೋಜನೆಯ ಮುಖ್ಯ ಅಡುಗೆಯವರು, ಸಹಾಯಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮಾಸಿಕ ಗೌರವ ಸಂಭಾವನೆಯನ್ನು 1000ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ತ್ರಿಲೋಕ ಚಂದ್ರ ಕೆವಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯ 109ರಲ್ಲಿ ಘೋಷಣಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000ಗಳಷ್ಟು ಹೆಚ್ಚಿಸುವ ಕುರಿತಂತೆ ಉಲ್ಲೇಖಿಸಲಾಗಿದೆ ಎಂದಿದ್ದಾರೆ. ರಾಜ್ಯ ಸರ್ಕಾರದ ಉಲ್ಲೇಖದಂತೆ ಮುಖ್ಯ ಅಡುಗೆಯವರು, ಸಹಾಯಕ ಅಡುಗೆಯವರಿಗೆ ಮಾಸಿಕ ಸಂಭಾವನೆ ಕೇಂದ್ರದ ಶೇ.60ರಷ್ಟು ಅಂದರೆ ರೂ.600 ಹಾಗೂ ಮಾಸಿಕ ಸಂಭಾವನೆ ರಾಜ್ಯದ ಶೇ.40ರಷ್ಟು ಅಂದರೆ ರೂ.400 ಸೇರಿದಂತೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಹೆಚ್ಚುವರಿ ಮಾಸಿಕ ಸಂಭಾವನೆಯ ಮೊತ್ತ ರೂ.3700 ಸೇರಿಸಿ, ರೂ.4700 ಮಾಸಿಕ ಸಂಭಾವನೆ ಮೊತ್ತ ನೀಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನೂ ರಾಜ್ಯದ ಎಲ್ಲಾ 31 ಜಿಲ್ಲಾ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎನ್ನುವವರ ಕೊಲೆ ಪ್ರಕರಣ ನಡೆದಿತ್ತು. ಈ ಸಂಬಂಧ ಈಗಾಗಲೇ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್ ಹಾಗೂ ಪ್ರದೀಪ್ ವಿರುದ್ಧ ಕೇಸ್ ದಾಖಲಾಗಿತ್ತು, ಈ ಬೆನ್ನಲ್ಲೇ ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧವೂ FIR ದಾಖಲಾಗಿದೆ. ಈ ಕುರಿತಂತೆ ವೆಂಕಟೇಶ್ ಆಚಾರಿಯ ಅವರ 2ನೇ ಪತ್ನಿ ರಶ್ಮಿ ದಿನಾಂಕ 16-06-2025ರಂದು ಸಂಜೆ 6.30ರ ವೇಳೆಗೆ ಸಾಗರ ಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ ದಿನಾಂಕ 15-06-2025ರಂದು ಸೋದರ ಮಾವ ಸದಾನಂದ ಅವರನ್ನು ಗಂಡ ವೆಂಕಟೇಶ್ ಆಚಾರಿ, ಎಸ್ ಎನ್ ನಗರದ ರವೀಂದ್ರ ಕಾಮತ್ ಮತ್ತು ವಿಜಯನಗರದ ಪ್ರದೀಪ್ ಅವರು ಸೇರಿ ಕೊಲೆ ಮಾಡಿರುತ್ತಾರೆ ದೂರು ದಾಖಲಾಗಿರುತ್ತದೆ ಎಂದಿದ್ದಾರೆ. ಇನ್ನೂ ದಿನಾಂಕ 16-06-2025ರಂದು ಮಧ್ಯಾಹ್ನ 3 ಗಂಟೆಗೆ ಪಿರ್ಯಾದಿದಾರರಾದ ರಶ್ಮಿ ಸಾಗರ ಟೌನ್ ಹಳೇ ಖಾಸಗಿ ಬಸ್ ನಿಲ್ದಾಣ ಮುಂದೆ ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಪಿರ್ಯಾದಿ ಗಂಡನ…

Read More

ಬೆಂಗಳೂರು: ಇರಾನ್ ನಲ್ಲಿ ನೆಲೆಸಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಡಾ. ಆರತಿ ಕೃಷ್ಣ ತಿಳಿಸಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜದಾನಿಯಾದ ತೆಹರಾನ್ ಸಮೀಪದಲ್ಲಿರುವ Shahid Behshti Medical Univerity ಯಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದು,ಈ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಯಾದ ನದೀಮ್ ಹುಸೇನ್ ರವರು ಹಾಗೂ ಬೆಂಗಳೂರಿನಲ್ಲಿರುವ ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿ, ಬೆಂಗಳೂರು ಕಛೇರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ, ಅವರ ನೋವನ್ನು ತೋಡಿಕೊಂಡಿದ್ದು ಕೂಡಲೇ ದೇಶಕ್ಕೆ ಹಿಂದಿರುಗಲು ಇಚ್ಚೆಯನ್ನು ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಸ್ಪಂದಿಸಿದ ಅನಿವಾಸಿ ಭಾರತೀಯ ಸಮಿತಿ, ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ರವರು ಕೂಡಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು ಇರಾನ್ನಯಲ್ಲಿ…

Read More

ಬೆಂಗಳೂರು : ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಈ ಕೋರ್ಸ್‍ಗಳಿಗೆ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ compartmental/ carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ…

Read More

ಧಾರವಾಡ: 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹವಾಗಿ ತಲಾ ರೂ.1 ಲಕ್ಷದಂತೆ ಇಲಾಖೆಯಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಲಾಗಿದೆ. ಈ ಅನುದಾನದಲ್ಲಿ ರೂ.10 ಸಾವಿರಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90 ಸಾವಿರಗಳನ್ನು ಶಾಲೆಯ ಎಸ್.ಡಿ.ಎಂ.ಸಿ ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿ ಮಾಡಲು ಪ್ರೋತ್ಸಾಹಧನವನ್ನು ನೀಡಲಾಗುವುದು. ಜಿಲ್ಲೆಯ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಆಸಕ್ತ ಸರ್ಕಾರಿ ಶಾಲೆಗಳು ಜೂನ್ 27, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಜೊತೆಗೆ ಪ್ರಶಸ್ತಿ ಪತ್ರಗಳು, ಶಾಲೆಯ ದಾಖಲೆಗಳು, ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರ…

Read More

ಧಾರವಾಡ: 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ: 20/06/2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು1ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ದಿನಾಂಕ: 20/06/2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ ಪವರ್ ಕಟ್ ಆಗಲಿದೆ.…

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿಯ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಾಗೂ 33/11ಕೆ.ವಿಯ ರೂಪನಗುಡಿ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಲ್ಲಿ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಕಮ್ಮರಚೇಡು ಕೃಷಿ ಪ್ರದೇಶಗಳು. ಎಫ್-53 ಶಂಕರಬAಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು. ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ತಗ್ಗಿನಬೂದಿಹಾಳ್ ಗಾಮಗಳು. ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ…

Read More