Author: kannadanewsnow09

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಮರುನಾಮಕರಣ ಮಾಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ರಾಷ್ಟ್ರಪತಿ ಭವನ, ಭಾರತದ ರಾಷ್ಟ್ರಪತಿಗಳ ಕಚೇರಿ ಮತ್ತು ನಿವಾಸವು ರಾಷ್ಟ್ರದ ಸಂಕೇತವಾಗಿದೆ ಮತ್ತು ಜನರ ಅಮೂಲ್ಯ ಪರಂಪರೆಯಾಗಿದೆ. ಇದನ್ನು ಜನರಿಗೆ ಹೆಚ್ಚು ಲಭ್ಯವಾಗುವಂತೆ ಮಾಡಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಷ್ಟ್ರಪತಿ ಭವನದ ವಾತಾವರಣವನ್ನು ಭಾರತೀಯ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೀತಿಗಳನ್ನು ಪ್ರತಿಬಿಂಬಿಸುವಂತೆ ಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ. ಅದರಂತೆ, ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತೋಷಪಟ್ಟಿದ್ದಾರೆ ಎಂದು ಹೇಳಿದ್ದಾರೆ. ‘ದರ್ಬಾರ್ ಹಾಲ್’ ರಾಷ್ಟ್ರೀಯ ಪ್ರಶಸ್ತಿಗಳ ಪ್ರಸ್ತುತಿಯಂತಹ ಪ್ರಮುಖ ಸಮಾರಂಭಗಳು ಮತ್ತು ಆಚರಣೆಗಳ…

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ನಲ್ಲಿ ತಮ್ಮ ಹಾಜರಾತಿಯನ್ನು ದಾಖಲಿಸುವುದು ಕಡ್ಡಾಯಗೊಳಿಸಿ, ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದ್ರಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಕರ್ನಾಟಕ ಆಡಳಿತ ಸುಧಾರಣೆ-2ರ ವರದಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಮೊಬೈಲ್ ಆಧಾರಿತ Geofenced ಹಾಜರಾತಿ ವ್ಯವಸ್ಥೆ ಅಳವಡಿಸಿಕೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ಕಛೇರಿ ಹಾಜರಾತಿ ವ್ಯವಸ್ಥೆಗಾಗಿ ಈಗಾಗಲೇ ಅಳವಡಿಸಿಕೊಳ್ಳಲಾಗಿರುವ Aadhaar enabled bioletric attendance system (AEBAS)ನಲ್ಲಿ ಹಲವಾರು ನ್ಯೂನ್ಯತೆಗಳಿರುತ್ತವೆ. AEBAS ಉಪಕರಣಗಳು ಕೆಟ್ಟುಹೋಗುತ್ತಿದ್ದು, ಪ್ರತಿ ವರ್ಷ ನವೀಕರಿಸುವ ಅವಶ್ಯಕತೆ ಇದೆ ಮತ್ತು ಇದಕ್ಕಾಗಿ ಅಗತ್ಯ ಸಮಯದಲ್ಲಿ ದುರಸ್ತಿ ಮಾಡಿಸಲು ನುರಿತ ಮಾನವ ಸಂಪನ್ಮೂಲ ಮತ್ತು ಅನುದಾನದ ಅವಶ್ಯಕತೆ ಇರುತ್ತದೆ. ಆದ್ದರಿಂದ Mobile based geofenced real-time attendanceನಲ್ಲಿರುವ ಅನುಕೂಲತೆಗಳ ಬಗ್ಗೆ ಪುಸ್ತಾಪಿಸಿ, Mobile based geofenced…

Read More

ನವದೆಹಲಿ: ಗೂಗಲ್ ಮ್ಯಾಪ್ ಬಳಕೆದಾರರಿಗೆ, ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಎಐ ಚಾಲಿತ ವೈಶಿಷ್ಟ್ಯಗಳೊಂದಿಗೆ ಭಾರತದ ಫ್ಲೈಓವರ್ ಗಳು, ಕಿರಿದಾದ ರಸ್ತೆಗಳನ್ನು ಗುರುತಿಸಲು ಗೂಗಲ್ ನಕ್ಷೆಯಲ್ಲಿ ತೋರಿಸಲಿದೆ.  ಕಳೆದ ಡಿಸೆಂಬರ್ನಲ್ಲಿ, ಗೂಗಲ್ ಇಂಧನ-ದಕ್ಷತೆಯ ಮಾರ್ಗಗಳು ಮತ್ತು ವಿಳಾಸ ವಿವರಣೆಗಳಂತಹ ಭಾರತ-ಮೊದಲ ವೈಶಿಷ್ಟ್ಯಗಳನ್ನು ಪರಿಚಯಿಸಿತು, ಇದು ಪಿನ್ಡ್ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತದೆ. ಈಗ, ಸರ್ಚ್ ಎಂಜಿನ್ ದೈತ್ಯ ಕಂಪನಿಯು ಬಹುನಿರೀಕ್ಷಿತ ಫ್ಲೈಓವರ್ ಕಾಲ್ ಔಟ್ ಗಳು ಮತ್ತು ಕಿರಿದಾದ ರಸ್ತೆ ಸೂಚಕಗಳು ಸೇರಿದಂತೆ ಹೆಚ್ಚಿನ ಮೌಲ್ಯವರ್ಧಿತ ವೈಶಿಷ್ಟ್ಯಗಳನ್ನು ತರುವುದಾಗಿ ಘೋಷಿಸಿದೆ. ಬೆಂಗಳೂರು, ದೆಹಲಿ ಮತ್ತು ಮುಂಬೈನಂತಹ ಹೆಚ್ಚು ಜನದಟ್ಟಣೆಯ ಮೆಟ್ರೋಗಳಲ್ಲಿ, ಕೇಂದ್ರ ವ್ಯಾಪಾರ ಜಿಲ್ಲೆಗಳಲ್ಲಿ (ಸಿಬಿಡಿ) ಸಾಕಷ್ಟು ಫ್ಲೈಓವರ್ಗಳಿವೆ, ಮತ್ತು ಅಂತಿಮ ಗಮ್ಯಸ್ಥಾನಕ್ಕೆ ಮರುಮಾರ್ಗಮಾಡುವಾಗ ಒಂದು ತಪ್ಪು ತಿರುವು ಸಮಯ ವ್ಯರ್ಥಕ್ಕೆ ಕಾರಣವಾಗಬಹುದು. ಗೂಗಲ್ ನಕ್ಷೆಗಳ ಬಳಕೆದಾರರು ಫ್ಲೈಓವರ್ ಗಳ ಮುಖಭಾಗದಲ್ಲಿ ಸರಿಯಾದ ಹಾದಿಯಲ್ಲಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಸರಿಯಾದ ಮಾರ್ಗದರ್ಶನ ನೀಡುವ ವೈಶಿಷ್ಟ್ಯವನ್ನು ದೀರ್ಘಕಾಲದಿಂದ ವಿನಂತಿಸುತ್ತಿದ್ದಾರೆ. ಗೂಗಲ್…

Read More

ಬೆಂಗಳೂರು: ನಗರದಲ್ಲಿನ ಪೀಣ್ಯ ಎಲಿವೇಟೆಡ್ ಪ್ಲೈ ಓವರ್ ನ ಮೂಲಕ ಗೋರಗುಂಟೆ ಪಾಳ್ಯಕ್ಕೆ, ಗೋರಗುಂಟೆ ಪಾಳ್ಯದಿಂದ ಪ್ಯಾರ್ಲೇಜಿ ಫ್ಯಾಕ್ಟರಿವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಇದೀಗ ಜುಲೈ.29ರಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಶನಿವಾರ ಬೆಳಿಗ್ಗೆ 6ರವರೆಗೆ ಒಂದು ದಿನ ಹೊರತುಪಡಿಸಿ, ಇನ್ನುಳಿದ ಎಲ್ಲಾ ದಿನಗಳು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಪೀಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಮೇಲೇತುವೆ( ರಾಷ್ಟ್ರೀಯ ಹೆದ್ದಾರಿ-4 ಪೀಣ್ಯ ಎಲಿವೇಟೆಡ್ ಫೈಓವರ್ ) ಮೇಲೆ ಕೆನ್ಸಮೆಟಲ್ ಮೀಡಿಯಾ ಅಪ್ಪ‌ ರ್ಯಾಂಪ್ ನಿಂದ ಎಸ್.ಆರ್.ಎಸ್. ಡೌನ್ ರ್ಯಾಂಪ್ ವರೆಗೆ ರಸ್ತೆ ಎರಡೂ ಬದಿಗಳಲ್ಲಿ ಭಾರೀ ವಾಹನಗಳನ್ನು ಸಂಚಾರವನ್ನು ನಿಷೇಧಿಸಿ, ದಿನಾಂಕ: 16.02.2022 ರಿಂದ ಮೇಲ್ವೇತುವೆಯ ಎರಡೂ ಕಡೆಗಳಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು, ಇನ್ನುಳಿದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ರಾತ್ರಿ 12:00…

Read More

ನಮ್ಮಲ್ಲಿ ಅನೇಕರು ನಾವು ಮಾಡಿದ ಸಾಲವನ್ನು ತೀರಿಸಲಾಗದ ಪರಿಸ್ಥಿತಿಯಲ್ಲಿದ್ದೇವೆ. ಎಷ್ಟೇ ಕಷ್ಟವಾದರೂ ಅನುಭವಿಸುತ್ತೇವೆ. ಎಷ್ಟು ಸಾಧ್ಯವೋ ಅಷ್ಟು ಸಂಪಾದಿಸೋಣ. ಸಾಲವನ್ನು ಮರುಪಾವತಿಸಲು ಸ್ವಲ್ಪಮಟ್ಟಿಗೆ ಚಿಪ್ ಮಾಡುವ ಮೂಲಕ ಹಣವನ್ನು ಉಳಿಸೋಣ. ಆದರೆ ಕೊನೆಗೆ ಸಾಲ ಮರುಪಾವತಿಗೆ ಹಣ ಬಳಕೆಯಾಗುತ್ತಿಲ್ಲ. ಬೇರೆ ಯಾವುದಾದರೂ ನಿಮಗೆ ವೆಚ್ಚವಾಗುತ್ತದೆ. ಸಾಲ ತೀರಿಸಲಾಗದೆ ಬಡ್ಡಿ ಕಟ್ಟಲಾಗದೆ ನರಳುತ್ತಿರುವವರು ಬಹಳ ಮಂದಿ ಇದ್ದಾರೆ. ಒಂದು ಲಕ್ಷ ರೂಪಾಯಿ ಸಾಲಕ್ಕೆ ಒಂದು ಲಕ್ಷ ರೂಪಾಯಿ ಬಡ್ಡಿ ವಿಧಿಸಲಾಗುತ್ತದೆ. ಆದರೆ ಮೂಲ ಮೊತ್ತದ ಒಂದು ಲಕ್ಷ ರೂಪಾಯಿ ಹಿಂತಿರುಗಿಸಲಾಗದ ಪರಿಸ್ಥಿತಿ ಇರುತ್ತದೆ. ಆದಾಯವನ್ನು ಸರಿಯಾಗಿ ಉಳಿಸುವುದು ಮತ್ತು ಸಾಲವನ್ನು ಮರುಪಾವತಿ ಮಾಡುವುದು ಪರಿಹಾರವಾಗಿದೆ ಎಂದು ಆಧ್ಯಾತ್ಮಿಕವಾಗಿ ಹೇಳಲಾಗುತ್ತದೆ. ಅದು ಏನು ಎಂಬುದನ್ನು ನಾವು ಈ ಪೋಸ್ಟ್‌ನಲ್ಲಿ ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು. 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ; ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

Read More

ಬೆಂಗಳೂರು: ಗ್ರಾಮಠಾಣ ಒಳಗಿನ ಹಾಗೂ ಹೊರಗಿನ ಆಸ್ತಿ ಅಳತೆಗೆ ಅವಕಾಶ ನೀಡಲಾಗುತ್ತದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ. ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಲೈವ್‌ ಮಾಡಲಾಗುತ್ತಿರುವುದರಿಂದ, 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2 ಆಗಸ್ಟ್‌ 2024ರವರೆಗೆ…

Read More

ಆನೇಕಲ್: ಪುರಸಭೆ ಸದಸ್ಯನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಆನೇಕಲ್ ಹೊರವಲಯದ ಹೊಸೂರಿನಲ್ಲಿ ನಡೆದಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಲ್ಲೂಕಿನ ಪುರಸಭೆಯ ಸದಸ್ಯ ರವಿ ಆಲಿಯಾಸ್ ಸ್ಕ್ರಾಪ್ ರವಿ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸಿಕ್ಕ ಸಿಕ್ಕ ಕಡೆ ಮಚ್ಚು ಬೀಸಿ ಕೊಲೆಗೈದಿರುವಂತ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರಸಭೆ ಸದಸ್ಯ ರವಿ ಕೊಲೆ ವಿಷಯ ತಿಳಿದು ಅವರ ಶವವಿರುವಂತ ಆಸ್ಪತ್ರೆಯ ಮುಂದೆ ಸಂಬಂಧಿಕರು, ಅಭಿಮಾನಿಗಳು ಜಮಾಯಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/kset-exam-2023-to-be-brought-to-the-notice-of-the-candidates-who-have-passed-certificate-will-come-to-your-home/ https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/

Read More

ಬೆಂಗಳೂರು: ಕೆಸೆಟ್ 2023ರ ಪರೀಕ್ಷೆಯ ನಂತ್ರ, ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಲಾಗಿತ್ತು. ಯಾರೆಲ್ಲ ಅಭ್ಯರ್ಥಿಗಳು ಉತ್ತೀರ್ಣರಾದ ಬಳಿಕ, ದಾಖಲಾತಿ ಪರೀಶಿಲನೆ ಹಾಜರಾಗಿದ್ದಾರೋ, ಅವರೆಲ್ಲರಿಗೂ ಪೋಸ್ಟ್ ಮೂಲಕ ಮನೆಗೆ ಪ್ರಮಾಣ ಪತ್ರವನ್ನು ರವಾನಿಸಲಾಗುತ್ತದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಅದರಲ್ಲಿ ದಿನಾಂಕ:11.07.2024 ರಿಂದ 22.07.2014 ರವರೆಗೆ ಜರುಗಿದ ಸೆಟ್-2023 ದಾಖಲಾತಿ ಪರಿಶೀಲನೆಗೆ ಆನಿವಾರ್ಯ ಕಾರಣಗಳಿಂದ ಹಾಜರಾಗದ ತಾತ್ಕಾಲಿಕ ಪಟ್ಟಿಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗಾಗಿ ದಿನಾಂಕ:31.07.2024ರಂದು ಕೊನೆಯ ಅವಕಾಶವನ್ನು ನೀಡಲಾಗಿದೆ ಎಂದಿದೆ. ಮುಂದುವರೆದು, ದಾಖಲಾತಿ ಪರಿಶೀಲನೆ ಸಂಪೂರ್ಣಗೊಂಡು ಪ್ರಮಾಣಪತ್ರ ಪಡೆಯದಿರುವ ಅಭ್ಯರ್ಥಿಗಳು ದಿನಾಂಕ:31.07.2024ರಂದು ಪ್ರಮಾಣ ಪತ್ರ ಪಡೆದುಕೊಳ್ಳಲು ಕೊನೆಯ ಅವಕಾಶವಾಗಿದೆ. ದಾಖಲಾತಿ ಪರಿಶೀಲನೆಯಾಗಿದ್ದು ಪ್ರಮಾಣ ಪತ್ರವನ್ನು ದಿನಾಂಕ:31.07.2024ರಂದು ಖುದ್ದು ಹಾಜರಾಗಿ ಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೋಸ್ಟ್ ಮೂಲಕ ಕಳುಹಿಸಲಾಗುವುದು ಅಂತ ಕೆಇಎ ಕಾರ್ಯನಿರ್ವಾಹ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/ https://kannadanewsnow.com/kannada/nita-ambani-re-elected-unopposed-as-member-of-international-olympic-committee/

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ರಾತ್ರಿ ಪೂರ್ತಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಧರಣಿ ಮಾಡುತ್ತೇವೆ. ನಾಳೆ ಕೂಡ ಧರಣಿ ಮುಂದುವರಿಯಲಿದೆ. ಎರಡೂ ಹಗರಣಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ದೊಡ್ಡ ಹಗರಣ ನಡೆದಿದೆ. ಮುಡಾ…

Read More