Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಬಿಳಿಮಲೆ, ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಇಂಜಿನಿಯರುಗಳ ನೇಮಕಾತಿಗೆ ಪ್ರಕಟಣೆಯನ್ನು ಹೊರಡಿಸಿದ್ದು, ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿರುತ್ತದೆ. ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಯಾವ ಅವಕಾಶವೂ ದೊರೆಯದ ರೀತಿಯಲ್ಲಿ ಈ ಅಧಿಸೂಚನೆ ಸಿದ್ಧಗೊಂಡಿರುತ್ತದೆ ಎಂದು ಹೇಳಿದ್ದಾರೆ. ಸಂವಿಧಾನದ ಒಕ್ಕೂಟ ತತ್ತ್ವವನ್ನು ಈ ಅಧಿಸೂಚನೆ ಗಾಳಿಗೆ ತೂರಿದೆ ಎಂದು ಅಪಾದಿಸಿರುವ ಬಿಳಿಮಲೆ, ಬಿಇಎಲ್ ಸಂಸ್ಥೆಗೆ ಬೆಂಗಳೂರು ಮುಂಚಿನಿಂದಲೂ ಪ್ರಮುಖ ಚಟುವಟಿಕೆಯ ಕೇಂದ್ರವಾಗಿದ್ದು, ಸ್ಥಳೀಯ ಕನ್ನಡಿಗರು ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಪ್ರಮುಖ ಕಾರಣಕರ್ತರಾಗಿದ್ದಾರೆ ಎನ್ನುವುದನ್ನು ಗಮನಿಸಬೇಕಾಗುತ್ತದೆ ಎಂದಿದ್ದಾರೆ. ಹಾಗಾಗಿ ಸಮತೋಲಿತ…
ಬೆಂಗಳೂರು : ಸರ್ಕಾರಿ ಶಾಲೆಗಳಿಗೆ ಗಣತಿ ಕಾರ್ಯದ ನಿಮಿತ್ತ ರಜೆ ನೀಡಿರುವ ಕುರಿತು ಬಿಜೆಪಿ ನಾಯಕರು ವ್ಯಕ್ತಪಡಿಸಿರುವ ಅಸಮಾಧಾನಕ್ಕೆ ತೀವ್ರ ಪ್ರತಿಕ್ರಿಯೆ ನೀಡಿರುವ ಸಚಿವ ಬೋಸರಾಜು ಅವರು, ಬಿಜೆಪಿ ನಾಯಕರ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ವಿಫಲತೆ ಮತ್ತು ಮಲತಾಯಿ ಧೋರಣೆಯನ್ನು ಮರೆಮಾಚಲು ಕೇವಲ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗಣತಿ ಸಹಕಾರ: ಬಿಜೆಪಿಯಿಂದ ರಾಜಕೀಯ ಆರೋಪ ರಾಜ್ಯ ಸರ್ಕಾರದ ಗಣತಿ ಕಾರ್ಯವು ಯಶಸ್ವಿಯಾಗಿ ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲಿ ಈಗಾಗಲೇ ಶೇ. 92 ರಿಂದ 93 ರಷ್ಟು ಕೆಲಸ ಪೂರ್ಣಗೊಂಡಿದೆ. ರಾಜ್ಯದ ಜನತೆ ಸಂಪೂರ್ಣ ಸಹಕಾರ ನೀಡುತ್ತಿರುವಾಗ, ಈ ಕಾರ್ಯಕ್ಕೆ ಸಹಕಾರ ನೀಡದೆ ಕೇವಲ ರಾಜಕೀಯ ಮಾಡುತ್ತಿರುವವರು ಬಿಜೆಪಿ ನಾಯಕರು ಮಾತ್ರ. “ಬಿಜೆಪಿ ಆರೋಪ ಮಾಡಿದರೆ ಯಾರೂ ಚರ್ಚೆ ಮಾಡಲ್ಲ, ಅವರಲ್ಲಿ ಇರುವುದು ಕೇವಲ ನಾಲ್ಕು ಜನ ಲೀಡರ್ ಗಳು. ಅವರು ತಮ್ಮಷ್ಟಕ್ಕೆ…
ನಾಳೆ ಸಿಎಂ, ಡಿಸಿಎಂ ರಾಜ್ಯದ 525 ಗ್ರಾಮ ಪಂಚಾಯ್ತಿಗಳಲ್ಲಿ ನೀರಿದ್ದರೆ ನಾಳೆ ಯೋಜನೆಗೆ ಚಾಲನೆ: ಸಚಿವ ಎನ್.ಎಸ್ ಭೋಸರಾಜು
ಬೆಂಗಳೂರು : ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 525 ಗ್ರಾಮ ಪಂಚಾಯ್ತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ…
ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು…
ಶಿವಮೊಗ್ಗ : ಸ್ಥಳೀಯರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ರಾಯಲ್ ಬಿಲ್ಡರ್ಸ್ ನಿಂದ ಸಾಗರದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ಮಾರಾಟ ಮಳಿಗೆಯನ್ನು ಆರಂಭಿಸಲಾಗುತ್ತಿದೆ. ಅಕ್ಟೋಬರ್.10ರಂದು ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶೋ ರೂಂ ಉದ್ಘಾಟಿಸಲಿದ್ದಾರೆ ಎಂಬುದಾಗಿ ರಾಯಲ್ ಬಿಲ್ಡರ್ಸ್ ನ ಆರ್ ಬಿ ಡಿ ಮಹೇಶ್ ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎನ್ನುವ ಉದ್ದೇಶಕ್ಕೆ ಸ್ಥಾಪಿಸಿದ್ದು ರಾಯಲ್ ಬಿಲ್ಡರ್ಸ್ ಸಂಸ್ಥೆಯಾಗಿದೆ. ಇದು ದಶಮಾನೋತ್ಸವ ಪೂರೈಸಿದ್ದು, ಈತನಕ ಸಾಗರ, ಬೆಂಗಳೂರು ಭಾಗದಲ್ಲಿ 200ಕ್ಕೂ ಹೆಚ್ಚು ಯುವಜನರಿಗೆ ನಮ್ಮ ಸಂಸ್ಥೆ ಉದ್ಯೋಗ ನೀಡಿದೆ. ರಾಯಲ್ ಬಿಲ್ಡರ್ಸ್ ಗ್ರೂಪ್ ರಾಜ್ಯದಾದ್ಯಂತ ತನ್ನ ಚಟುವಟಿಕೆ ವಿಸ್ತರಿಸಿಕೊಂಡಿದೆ ಎಂದು ಹೇಳಿದರು. ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಬೇಕು ಎನ್ನುವ ಉದ್ದೇಶದಿಂದ ನಮ್ಮ RBD ಸಂಸ್ಥೆ ಹತ್ತು ವರ್ಷದ ಹಿಂದೆ ಪ್ರಾರಂಭಿಸಲಾಯಿತು. ಈ ಸಂಸ್ಥೆ ವತಿಯಿಂದ ಕಾನೂನುಬದ್ದವಾಗಿ ಭೂಪರಿವರ್ತನೆ ಮಾಡಿ ನಿವೇಶನಗಳನ್ನು ಜನಸಾಮಾನ್ಯರಿಗೂ ಕೈಗೆಟುಕುವ…
ಬೆಂಗಳೂರು: ಹಾಸನಾಂಬ ಜಾತ್ರೆಗೆ ತೆರಳುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಇಲಾಖೆಯಿಂದ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ ಮಾಡಲಾಗಿದೆ ಎಂದಿದ್ದಾರೆ. ಸಾರಿಗೆ ಇಲಾಖೆಯಿಂದ ವಿವಿಧ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 2,300ಕ್ಕೂ ಹೆಚ್ಚು ಬಸ್ಗಳನ್ನು ದರ್ಶನೋತ್ಸವಕ್ಕೆ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1975835832922550551 https://kannadanewsnow.com/kannada/boiler-users-at-home-beware-girl-dies-after-boiler-explodes-three-others-in-critical-condition/
ದಾವಣಗೆರೆ: ಬಹುತೇಕರು ಬಿಸಿನೀರಿಗಾಗಿ ಮನೆಯಲ್ಲಿ ಬಾಯ್ಲರ್ ಬಳಕೆ ಮಾಡುತ್ತಾರೆ. ಹೀಗೆ ಮನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿದ್ದಂತ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 11 ವರ್ಷದ ಸ್ವೀಕೃತಿ ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. ಈ ದುರಂತದಲ್ಲಿ ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಬಾಯ್ಲರ್ ಆನ್ ಮಾಡಿದಾಗ ದಿಢೀರ್ ಸ್ಪೋಟಗೊಂಡಿದೆ. ಇದರಿಂದಾಗಿ ಬಾಯ್ಲರ್ ಪಕ್ಕದಲ್ಲೇ ಇದ್ದಂತ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮೂವರು ಸುಟ್ಟ ಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/shoe-throwing-incident-at-cj-is-wrong-showing-unrighteousness-in-a-place-where-justice-is-delivered-is-unacceptable-dcm-d-k-shivakumar/ https://kannadanewsnow.com/kannada/breaking-drugs-worth-rs-23-crore-seized-in-bengaluru-6-accused-including-2-foreign-nationals-arrested/
ಬೆಂಗಳೂರು : “ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು. ಬಿಗ್ ಬಾಸ್ ಬಂದ್; ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚನೆ “ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ. ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ.…
ಬೆಂಗಳೂರು : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು. ಆನೆ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ವಲಯದಲ್ಲಿನ ಮಲಂದೂರು ಮೀಸಲು ಅರಣ್ಯವನ್ನು ನಕಲಿ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿದ್ದಂತ 6 ಎಕರೆ 24 ಗುಂಟೆ ಜಮೀನನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಿದ್ದರು. ಈ ಮೂಲಕ ಸಾಗರದ ಅರಣ್ಯಾಧಿಕಾರಿಗಳು ನಕಲಿ ದಾಖಲೆ ಸೃಷ್ಟಿ ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಶಾಕ್ ನೀಡಿದ್ದಾರೆ. ಹಾಗಾದರೆ ಕರ್ನಾಟಕ ಅರಣ್ಯ ಅಧಿನಿಯಮ 1963ರ ಸೆಕ್ಷನ್ 64(ಎ)ರ ಅಡಿಯಲ್ಲೇ ಕಾನೂನಿನಂತೆ ತೆರವು ಮಾಡಿದ್ದೇಗೆ ಅಂತ ಆ 64ಎ ಪ್ರೊಸಿಡಿಂಗ್ಸ್ ಆದೇಶದ ಸಂಪೂರ್ಣ ವಿವರ ಮುಂದಿದೆ ಓದಿ. ಈ ಕುರಿತಂತೆ ಸಾಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂನ ಮಲಂದೂರು ಗ್ರಾಮದ ಸರ್ವೆ ನಂಬರ್ 157ರ ಮಲಂದೂರು ರಾಜ್ಯ ಅರಣ್ಯ ಪ್ರದೇಶದಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪಗೌಡ ಎಂಬುವರು 6 ಎಕರೆ 24 ಗುಂಟೆ ಜಮೀನು ಒತ್ತುವರಿ ಮಾಡಿದ್ದರ ಬಗ್ಗೆ ದೂರು ಬಂದಿತ್ತು. ಈ ದೂರು ಆಧರಿಸಿ ಅರಣ್ಯಾಧಿಕಾರಿಗಳು ತನಿಖೆ…














