Author: kannadanewsnow09

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency- NTA) ನೀಟ್-ಯುಜಿ 2024 ರ ( NEET-UG 2024 ) ಅಂತಿಮ ಫಲಿತಾಂಶಗಳನ್ನು ಎರಡು ದಿನಗಳಲ್ಲಿ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ( Union Education Minister Dharmendra Pradhan ) ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಪ್ರೀಂ ಕೋರ್ಟ್ ಇಂದು (ಜುಲೈ 23) ಮಾಡಿದ ಅವಲೋಕನಗಳ ಪ್ರಕಾರ ನೀಟ್-ಯುಜಿ ಮೆರಿಟ್ ಪಟ್ಟಿಯನ್ನು ಪರಿಷ್ಕರಿಸಲಾಗುವುದು ಎಂದು ಸಚಿವರು ಹೇಳಿದರು. “ಯಾರಾದರೂ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಅವರನ್ನು ಬಿಡುವುದಿಲ್ಲ. ಯಾವುದೇ ರೀತಿಯ ಉಲ್ಲಂಘನೆಗೆ ಶೂನ್ಯ ಸಹಿಷ್ಣುತೆ; ಪರೀಕ್ಷೆಗಳ ಪಾವಿತ್ರ್ಯತೆ ನಮಗೆ ಸರ್ವೋಚ್ಚವಾಗಿದೆ.” ನೀಟ್-ಯುಜಿ 2024 ಅನ್ನು ರದ್ದುಗೊಳಿಸುವ ಬೇಡಿಕೆಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ, ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, “ಪ್ರಸ್ತುತ ಹಂತದಲ್ಲಿ, ಫಲಿತಾಂಶದ ತೀರ್ಮಾನಕ್ಕೆ ಬರಲು ಸಾಕಷ್ಟು ಪುರಾವೆಗಳ ಕೊರತೆಯಿದೆ ಅಥವಾ ಪರೀಕ್ಷೆಯ ಪಾವಿತ್ರ್ಯಕ್ಕೆ ವ್ಯವಸ್ಥಿತ ಉಲ್ಲಂಘನೆಯಾಗಿದೆ ಎಂದಿತ್ತು. https://kannadanewsnow.com/kannada/former-minister-haratalu-halappa-demands-immediate-compensation-for-rain-victims/ https://kannadanewsnow.com/kannada/big-scam-in-shivamogga-district-money-paid-to-co-operative-society-secretary-panganama/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಸಾಗರ, ಹೊಸನಗರ ತಾಲ್ಲೂಕಿನ ಅನೇಕ ಕಡೆಯಲ್ಲಿ ಜನರು ಸಂತ್ರಸ್ತರಾಗಿದ್ದಾರೆ. ಕೂಡಲೇ ತಾಲ್ಲೂಕು ಆಡಳಿತದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಮನೆ ಹಾನಿಗೆ 5 ಲಕ್ಷ ಪರಿಹಾರ ಮಂಜೂರು ಮಾಡಬೇಕು ಅಂತ ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಅಣಲೇಕೊಪ್ಪದಲ್ಲಿರುವಂತ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಡೀ ರಾಜ್ಯಾಧ್ಯಂತ ಮಳೆ ಆಗುತ್ತಿದೆ. ಮಲೆನಾಡಿನಲ್ಲಿ ಹೆಚ್ಚಾಗೇ ಸುರಿಯುತ್ತಿದೆ. ಮಳೆಯಿಂದಾಗಿ ಸಾಗರ, ಹೊಸನದ ಹಲವೆಡೆ ಮನೆ ಬಿದ್ದಿವೆ. ಮಳೆಹಾನಿಯಿಂದ ಜನರು ಸಂತ್ರಸ್ತರಾಗಿದ್ದಾರೆ ಎಂದರು. ಮನೆಹಾನಿಗೆ ಕೂಡಲೇ 5 ಲಕ್ಷ ಪರಿಹಾರ ಕೊಡಿ 2019ರಲ್ಲಿ ಮಳೆಹಾನಿಯಾದವರಿಗೆ ಮನೆ ಕಟ್ಟಿಸಿಕೊಡುವ ಕೆಲಸ ಮಾಡಿದ್ದೇವೆ. 5 ಲಕ್ಷದವರೆಗೆ ಪರಿಹಾರ ಕೊಟ್ಟಿದ್ದೇವೆ. 1.5 ಲಕ್ಷ ಭಾಗಶಹ ಮಳೆಹಾನಿಗೆ, 10,000 ತತ್ ಕ್ಷಣದಲ್ಲಿ ಪರಿಹಾರವನ್ನು ನೀಡಿದ್ದೇವೆ ಎಂದು ಅವರು ತಿಳಿಸಿದರು. ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಿಂದಾಗಿ 48 ಮನೆಗಳು ಕುಸಿದು…

Read More

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…

Read More

ಬೆಂಗಳೂರು : “ಬೆಂಗಳೂರು ಎಲ್ಲರಿಗೂ ಸೇರಿದ್ದು, ಹೀಗಾಗಿ ಬೆಂಗಳೂರಿನ ಹಿತ ಕಾಪಾಡಲು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಎಲ್ಲಾ ನಾಯಕರ ಅಭಿಪ್ರಾಯ, ಸಲಹೆ ಪಡೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡನೆ ಮಾಡಿದಾಗ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಬಿಜೆಪಿ ಶಾಸಕರಾದ ಅಶ್ವತ್ಥ್ ನಾರಾಯಣ ಹಾಗೂ ಸುರೇಶ್ ಕುಮಾರ್ ಅವರು ಈ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ನಾನು ಹಳ್ಳಿಯಲ್ಲಿ ಹುಟ್ಟಿರಬಹುದು. ಆದರೆ 5ನೇ ವಯಸ್ಸಿನಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದೇನೆ. ಇಲ್ಲಿನ ಪರಿಸ್ಥಿತಿ ಆರೀತಿದ್ದೇನೆ. ನಾನು ರಾಜಕೀಯವಾಗಿ ಬೇರೆಡೆ ಪ್ರತಿನಿಧಿಸುತ್ತಿದ್ದೇನೆ. ನನಗೂ ಬೆಂಗಳೂರಿನ ಬಗ್ಗೆ ಕಾಳಜಿ ಇದೆ. ಅಧಿಕಾರಿಗಳ ಸಮಿತಿ ಮಾಡಿದ್ದಾಗ ಅವರು ಲಂಡನ್ ಮಾದರಿ ಪ್ರಸ್ತಾಪ ಮಾಡಿದ್ದರು. ಆದರೆ ನಾನು ಅದನ್ನು ಒಪ್ಪಲಿಲ್ಲ. ಈಗಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಿಸಲು ಆಗುತ್ತಿಲ್ಲ. ಇರುವ ವ್ಯವಸ್ಥೆಯನ್ನೇ ಸ್ವಲ್ಪ ಪ್ರಮಾಣದಲ್ಲಿ ಮಾರ್ಪಾಡು ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು. “ಈ…

Read More

ಬೆಂಗಳೂರು : “ನಾಡಪ್ರಭು ಕೆಂಪೇಗೌಡರು ಕಟ್ಟಿಸಿರುವ ನಾಲ್ಕು ಗೋಪುರಗಳನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರಿನ ಸಮರ್ಪಕ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಬಿಲ್ ಮಂಡನೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು “ಕಳೆದ ಒಂದು ವರ್ಷದಿಂದ ನಮ್ಮ ಸಾರ್ವಜನಿಕರಿಂದ 70 ಸಾವಿರ ಸಲಹೆಗಳನ್ನು ಪಡೆಯಲಾಗಿದೆ. ಇವುಗಳನ್ನು ಕ್ರೋಡಿಕರಿಸಿ ಬೆಂಗಳೂರು ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗ್ರೇಟರ್ ಬೆಂಗಳೂರು ಬಿಲ್ ಸಿದ್ದಪಡಿಸಲಾಗಿದೆ. ಕೆಂಪೇಗೌಡರು ಬೆಂಗಳೂರು ಕಟ್ಟಿದರು, ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದರು. ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಹೆಸರನ್ನು ಅಂತರರಾಷ್ಟೀಯ ಮಟ್ಟಕ್ಕೆ ಬೆಳೆಸಿದರು. ಇಂತಹ ಬೆಂಗಳೂರನ್ನು ನಾವು ಉಳಿಸಬೇಕಾಗಿದೆ” ಎಂದು ಹೇಳಿದರು. “ಸಚಿವನಾದ ತಕ್ಷಣ ಬೆಂಗಳೂರಿಗೆ 6 ಟಿಎಂಸಿ ಕಾವೇರಿ ನೀರನ್ನು ಹೆಚ್ಚುವರಿಯಾಗಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನಗರದ ಜನರಿಗೆ ನೀರು, ಭದ್ರತೆ, ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು. ವಾಹನಗಳ ಸಂಖ್ಯೆ, ನಗರಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ.…

Read More

ಶಿವಮೊಗ್ಗ : ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ 3ಹೆಚ್‍ಪಿ, 5 ಹೆಚ್‍ಪಿ ಮತ್ತು ಮೇಲ್ಪಟ್ಟು ಸೋಲಾರ್ ಪಂಪ್‍ಸೆಟ್‍ಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ದರದಂತೆ ಸಹಾಯಧನವನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಇಲಾಖೆಯಿಂದ ಅನುಮೋದಿತ ಎಂಪ್ಯಾನಲ್ ಸಂಸ್ಥೆಗಳಿಂದ ಸೋಲಾರ್ ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಶಿವಮೊಗ್ಗ ತಾಲೂಕಿನ ಸಾಮಾನ್ಯ ವರ್ಗಕ್ಕೆ -3, ಪ.ಜಾ. ವರ್ಗದವರಿಗೆ 5 ಮತ್ತು ಪ.ಪಂ.ದವರಿಗೆ- 1 ಸೋಲಾರ್ ಪಂಪ್‍ಸೆಟ್‍ಗಳಿಗೆ ಅವಕಾಶವಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತಾಲೂಕು ತೋಟಗಾರಿಕೆ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 09ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆ ದೂ.ಸಂ.:08182-279415…

Read More

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೊಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿ, ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಸಮುದಾಯದವರು ಸಲ್ಲಿಸಿರುವಂತ 408 ಪ್ರಸ್ತಾವಕ್ಕೆ ಅನುಮೋದನೆ ನೀಡಿರುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನ ಮಂಡಲದ ಕಲಾಪದಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ ಜಮೀನುಗಳನ್ನು ಪರಭಾರೆ ಮಾಡಲು ಅನುಮತಿ ಕೋರಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೂರು ವರ್ಷಗಳಿಂದ ಈವರೆಗೆ ಸಲ್ಲಿಸಿರುವ 625 ಪ್ರಸ್ತಾವಗಳಲ್ಲಿ 408ಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 217 ಪ್ರಸ್ತಾವಗಳನ್ನು ವಿವರಣೆ ಕೋರಿ ಜಿಲ್ಲಾಧಿಕಾರಿಗಳಿಗೆ ಹಿಂತಿರುಗಿಸಲಾಗಿದೆ. ವಿವಿಧ ಟ್ರಸ್ಟ್‌, ಶಾಲೆಗಳಿಗೆ ಹಾಗೂ ಇತರೆ ಉದ್ದೇಶಕ್ಕಾಗಿ ಜಮೀನು ಮಂಜೂರಾತಿ ಕೋರಿ ಸರ್ಕಾರಕ್ಕೆ 131 ಪ್ರಸ್ತಾವಗಳು ಬಂದಿವೆ. ಈ ಪೈಕಿ 62 ಪ್ರಸ್ತಾವಗಳಿಗೆ ಮಂಜೂರಾತಿ ನೀಡಲಾಗಿದೆ. 25 ಪ್ರಸ್ತಾವಗಳನ್ನು ತಿರಸ್ಕರಿಸಲಾಗಿದೆ. ವಿವರಣೆ ಕೋರಿ 44 ಪ್ರಸ್ತಾವಗಳನ್ನು ಜಿಲ್ಲಾಧಿಕಾರಿಗಳಿಗೆ ವಾಪಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/mla-ajay-singh-wins-legislative-cup-2024-chess-match-cm-distributes-prizes/ https://kannadanewsnow.com/kannada/farmer-friendly-tax-free-all-people-centric-stable-budget-r-ashoka/

Read More

ಬೆಂಗಳೂರು: ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ಅವರು ಎಲ್ಲಾ ಸುತ್ತಿನಲ್ಲೂ ವಿಜೇತರಾಗಿ ಚಾಂಪಿಯನ್ ಆಗಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಲೆಜಿಸ್ಲೇಜರ್ ಕಪ್ ಪಂದ್ಯಾವಳಿ ಆಯೋಜಿಸಿದ್ದು ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದಿದ್ದವು. ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು. ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. https://kannadanewsnow.com/kannada/farmer-friendly-tax-free-all-people-centric-stable-budget-r-ashoka/ https://kannadanewsnow.com/kannada/big-news-gt-mall-which-was-closed-due-to-dhoti-effect-reopens/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸಹಕಾರ ಸಂಘಕ್ಕೆ ಪಿಗ್ಮಿ, ಶೇರು ರೂಪದಲ್ಲಿ ಜನರು ನೀಡಿದಂತ ಹಣವನ್ನೇ, ಕಾರ್ಯದರ್ಶಿಯೊಬ್ಬ ಸ್ವಂತಕ್ಕೆ ಬಳಸಿಕೊಂಡು, ನಾಪತ್ತೆಯಾಗಿರೋದಾಗಿ ಹೇಳಲಾಗುತ್ತಿದೆ. ಈಗ ಸಹಕಾರ ಸಂಘಕ್ಕೆ ಹಣ ಕಟ್ಟಿದಂತ ಜನರು ತಮ್ಮ ದುಡ್ಡು ವಾಪಾಸ್ಸು ಕೊಡಿಸುವಂತೆ ಒತ್ತಾಯಿಸಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಲ್ಲೇ ಬಹುದೊಡ್ಡ ಹಗರಣ ಎನ್ನುವಂತೆ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಮನೆಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ ಶೇರುದಾರರು, ಪಿಗ್ಮಿ ಕಟ್ಟಿದಂತವರ ಲಕ್ಷಾಂತರ ರೂ ಜನರ ಹಣವನ್ನು ನುಂಗಿ ನೀರು ಕುಡಿಯಲಾಗಿದೆ. ಹೌದು ಕಲ್ಮನೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದಲ್ಲಿ ಇಂತದ್ದೊಂದು ಹಗರಣ ನಡೆದಿರುವುದಾಗಿ ಜನರು ಅಲವತ್ತುಕೊಂಡಿದ್ದಾರೆ. ಸಹಕಾರ ಸಂಘದ ಕಾರ್ಯದರ್ಶಿ ಮೇಘರಾಜ್ ಎಂಬುವರು ಜನರ ಹಣವನ್ನು ತಮ್ಮ ಸ್ವಂತದ್ದಕ್ಕೆ ಬಳಸಿಕೊಂಡ ಆರೋಪವನ್ನು ಜನರು ಮಾಡುತ್ತಿದ್ದಾರೆ. ಕೆಲಸಕ್ಕೆ ಬಾರದೇ ರಜೆ ಹಾಕಿ ನಾಪತ್ತೆ ಸಂಘದ ಕಾರ್ಯದರ್ಶಿ ಸಹಿ ಇಲ್ಲದೇ ಹಣ ಕಟ್ಟಿರೋ ಜನರ ದುಡ್ಡನ್ನು ಸಹಕಾರ ಸಂಘದಿಂದ ತೆಗೆಯೋದಕ್ಕೆ ಸಾಧ್ಯವಿಲ್ಲ. ಹೀಗಾಗಿ ಕಲ್ಮನೆ…

Read More