Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಗೆ ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿ, ಮಧ್ಯಂತರ ಪರಿಹಾರ ಕೊಡಬೇಕು. ಕೇಂದಕ್ಕೆ ಬೆಳೆ ನಷ್ಟದ ವರದಿ ಕಳುಹಿಸಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ನಿಯಮಗಳ ಪ್ರಕಾರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗಹಿಸಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ಕೂಡ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ರೈತರು ಮತ್ತು ರೈತ ಸಂಘಟನೆಗಳು ಕೂಗು ಹಾಕಿದ ಮೇಲೆ ಸಿಎಂ ಕಾಟಾಚಾರದ ಮೀಟಿಂಗ್ ಮಾಡಿದ್ದಾರೆ. ಇದುವರೆಗೂ ಪರಿಹಾರ ಸಿಕ್ಕಿಲ್ಲ. ರಾಜ್ಯ ಸಕಾರದ ಸೂಚನೆ ಇದೆಯೊ ಗೊತ್ತಿಲ್ಲ. ಬೆಳೆ ನಷ್ಟದ ಕ್ಷೇತವನ್ನು ಪ್ರಾಥಮಿಕ ಸಮೀಕ್ಷೆ ಮಾಡಬೇಕು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಷ್ಟು ಬೆಳೆ ನಷ್ಟವಾಗಿದೆ…
ಕಠ್ಮಂಡು: ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅವರ ಸರ್ಕಾರವನ್ನು ಪದಚ್ಯುತಗೊಳಿಸಿ ನೇಪಾಳದಲ್ಲಿ ಜನರಲ್-ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ಹಿಮಾಲಯನ್ ರಾಷ್ಟ್ರದಲ್ಲಿ ಮಧ್ಯಂತರ ಸರ್ಕಾರದ ನೇತೃತ್ವವನ್ನು ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೇಪಾಳ ಸೇನೆಯು ದೇಶದ ನಿಯಂತ್ರಣವನ್ನು ವಹಿಸಿಕೊಂಡಿದೆ ಮತ್ತು ಮಧ್ಯಂತರ ಸರ್ಕಾರವನ್ನು ರಚಿಸಲು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮುಂದಿನ ಮಾರ್ಗವನ್ನು ಕಂಡುಹಿಡಿಯಲು ಪಾಲುದಾರರೊಂದಿಗೆ ಚರ್ಚೆ ನಡೆಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಬುಧವಾರ ಪ್ರತಿಭಟನಾಕಾರರ ನಡುವೆ ಮಾತುಕತೆ ನಡೆಯಿತು. 4,000 ಕ್ಕೂ ಹೆಚ್ಚು ಯುವಕರು ಆನ್ಲೈನ್ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ಹೇಳುತ್ತವೆ, ಈ ಸಂದರ್ಭದಲ್ಲಿ ಕರ್ಕಿ ಅವರ ಹೆಸರನ್ನು ಸೇನೆಯೊಂದಿಗೆ ಮಾತುಕತೆ ನಡೆಸಲು ಮತ್ತು ಮಧ್ಯಂತರ ಆಡಳಿತದ ಮುಖ್ಯಸ್ಥರನ್ನಾಗಿ ಮಾಡಲು ಭಾಗವಹಿಸುವವರು ಚರ್ಚಿಸಿದರು ಮತ್ತು ವ್ಯಾಪಕವಾಗಿ ಒಪ್ಪಿಕೊಂಡರು. https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ತ್ರಿಷ್ಟಿಯನ್ನು ಆಚರಿಸಲು ಸಾಮಾನ್ಯವಾಗಿ ಬಾಗಿಲಲ್ಲಿ ನಿಂಬೆಹಣ್ಣನ್ನು ಎರಡು ಭಾಗಗಳಾಗಿ ಕತ್ತರಿಸಲಾಗುತ್ತದೆ. ಇದನ್ನು ಮಾಡುವವರು ಗಮನಿಸಬೇಕಾದ ಒಂದು ಪ್ರಮುಖ ಅಂಶವಿದೆ. ನೆರೆಹೊರೆಯಲ್ಲಿ ಕಾಣದಂತೆ ಅನೇಕ ಜನರು ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಸಾಲಿನಲ್ಲಿ ನಿಂಬೆಹಣ್ಣಿನಿಂದ ನೀವು ಏನು ಮಾಡಬಹುದು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕಣ್ಣಿನ…
ಮಂಡ್ಯ: ಇಂದು ಮದ್ಧೂರಲ್ಲಿ 20ಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ಮೂಲಕ ಕೊಂಡೊಯ್ದು, ವಿಸರ್ಜನೆ ಮಾಡಲಾಗಿದೆ. ಅಂದು ಕಲ್ಲು ತೂರಿ ಅವಮಾನ ಮಾಡಿದ್ರು. ಇಂದು ಅತ್ಯಂತ ಅಭಿಮಾನದಿಂದ ಸಾಮೂಹಿಕ ಗಣೇಶ ಮೆರವಣಿಗೆ ಮಾಡಿ, ವಿಸರ್ಜನೆ ಮಾಡಲಾಯಿತು ಎಂಬುದಾಗಿ ಬಿಜೆಪಿ ಮುಖಂಡ ಎಸ್ ಪಿ ಸ್ವಾಮಿ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂದು ಕಲ್ಲು ತೂರಿ ಗಣಪತಿಗೆ ಅಪಮಾನ ಮಾಡಿದ್ರು. ಇಂದು ಅತ್ಯಂತ ಅಭಿಮಾನದಿಂದ ಸಾಮೂಹಿಕ ಗಣೇಶ ಮೆರವಣಿಗೆ, ವಿಸರ್ಜನೆ ಆಗಿದೆ. ಇಂದಿನ ಕಾರ್ಯಕ್ರಮ 50 ಸಾವಿರ ಜನರ ನಿರೀಕ್ಷೆ ಇತ್ತು. ಅಷ್ಟೆ ಪ್ರಮಾಣದ ಜನರು ಇವತ್ತು ಸೇರಿದ್ದರು ಎಂದರು. 28 ಗಣಪತಿ ಬರಬೇಕಿತ್ತು. 20ಕ್ಕೂ ಹೆಚ್ಚು ಗಣಪತಿಗಳ ಸಾಮೂಹಿಕ ಮೆರವಣಿಗೆ, ವಿಸರ್ಜನೆ ಮಾಡಲಾಗಿದೆ. ಅಂದು ಪೆಟ್ಟು ತಿಂದ ಕಾರಣಕ್ಕೆ ಇಂದು ಹಿಂದೂ ಸಮಾಜ ಒಂದಾಗಿದೆ. ಹೀಗಾಗಿ ಪೆಟ್ಟು ತಿಂದವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇಂದಿನ ಕಾರ್ಯಕ್ರಮದ ಯಶಸ್ವಿಗೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆಗಳು, ಧನ್ಯವಾದಗಳನ್ನು ತಿಳಿಸಿದರು. ವರದಿ: ಗಿರೀಶ್ ರಾಜ್,…
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅದ್ಧೂರಿಯಾಗಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡಲಾಯಿತು. ಈ ಮೂಲಕ ಬೃಹತ್ ಮೆರವಣಿಗೆ ಮೂಲಕ ಹಿಂದೂಗಳ ಶಕ್ತಿ ಪ್ರದರ್ಶನದ ಮೂಲಕ ಗಣಪತಿ ವಿಸರ್ಜನೆ ಮೆರವಣಿಗೆಗೆ ತೆರೆ ಬಿದ್ದಿದೆ. ಮಂಡ್ಯದ ಮದ್ದೂರಲ್ಲಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಕಲ್ಲು ತೂರಾಟ ನಡೆದಿತ್ತು. ಈ ಬಳಿಕ ಇಂದು ಮದ್ದೂರಲ್ಲಿ 14 ಗಣಪತಿಗಳನ್ನು ಸಾಮೂಹಿಕವಾಗಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಬೃಹತ್ ಮೆರವಣಿಗೆ ಮೂಲಕ ಇಂದು ಮದ್ದೂರಲ್ಲಿ ಸಾಮೂಹಿಕವಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು. ಐತಿಹಾಸಿಕ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಗಣಪತಿ ಮೆರವಣಿಗೆಗೆ ಕಲ್ಲು ಹೊಡೆದದ್ದು ಖಂಡಿಸಿ ನಡೆದ ಮೆರವಣಿಗೆ ಇದಾಗಿತ್ತು. ಸುಮಾರು 3.5 ಕಿಲೋ ಮೀಟರ್ ಬೃಹತ್ ಮೆರವಣಿಗೆ ನಡೆಯಿತು. ಸತತ ಐದು ಗಂಟೆಗಳ ಕಾಲ ಮೆರವಣಿಗೆ ಸಾಗಿತು. ಡಿಜೆ ಸದ್ದಿಗೆ ಸಾವಿರಾರು ಜನರು ಕುಣಿದು ಕುಪ್ಪಳಿಸಿದರು. ಶಿಂಷಾ ನದಿಯ ತಟದವರೆಗೆ ಸಾಗಿದಂತ ಮೆರವಣಿಗೆಯು, 14 ಗಣಪತಿಗಳನ್ನು ಸಾಮೂಹಿಕವಾಗಿ ಶಿಂಷಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/protesters-attempting-to-lay-siege-to-the-vidhana-soudha-were-taken-into-custody-by-the-police/…
ಬೆಂಗಳೂರು: ನಾಲ್ಕು ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಪಡೆದು, ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ (ಸಿಎಂ) ಸಿ.ಎಂ. ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ನಲ್ಲಿ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಬೇಕಾಗಿತ್ತು ಎಂದು ನುಡಿದರು. ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ.…
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋಗೆ ನೀಡಿದ್ದಂತ ಅರಣ್ಯ ಭೂಮಿಯನ್ನು ವಾಪಾಸ್ ಪಡೆಯುವುದಾಗಿಯೂ ತಿಳಿಸಿತ್ತು. ಈ ಬೆನ್ನಲ್ಲೇ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ 15 ಗುಂಟೆ ಜಮೀನು ನೀಡುವಂತೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆ ಭೇಟಿಯಾಗಿ ಮನವಿ ಮಾಡಿದ್ದಾರೆ. ಇಂದು ಚಲನಚಿತ್ರ ನಿರ್ಮಾಪಕರಾದ ಕೆ. ಮಂಜು, ಉಮೇಶ್ ಬಣಕಾರ್ ಮತ್ತಿತರರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಭೇಟಿ ಮಾಡಿ, ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕಕ್ಕೆ ಅಭಿಮಾನ್ ಸ್ಟುಡಿಯೋ ಪ್ರದೇಶದಲ್ಲಿ 15 ಗುಂಟೆ ಜಮೀನು ನೀಡುವಂತೆ ಮನವಿ ಮಾಡಿದರು. https://kannadanewsnow.com/kannada/maddur-ganesh-riot-case-bjp-state-president-by-vijayendra-demands-a-judicial-inquiry/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಮದ್ದೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ- ಇವೆಲ್ಲವುಗಳ ಮೂಲಕ ರಾಜ್ಯ ಸರಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ; ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದರು. ಹಿಂದೂ ಸಂಘಟನೆಗಳು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು. ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನು ಮುಖ್ಯಮಂತ್ರಿಗಳು…
ಬೆಂಗಳೂರು ಗ್ರಾಮಾಂತರ: ಇಲ್ಲಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರಿನಲ್ಲಿರುವಂತ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 8 ವರ್ಷದಿಂದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸವನ್ನು ತಿಮ್ಮೇಗೌಡ ಮಾಡುತ್ತಿದ್ದರು. ಇಂತಹ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದೆ. ತಿಮ್ಮೇಗೌಡ ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದಂತ ತಿಮ್ಮೇಗೌಡ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು. ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/young-people-collapsed-due-to-illness-during-the-reservation-protest-in-bangalore/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇದೀಗ ಪ್ರತಿಭಟನಾ ಸ್ಥಳದಲ್ಲಿ ಯುವಕರು ಅಸ್ವಸ್ಥರಾಗಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಸಮುದಾಯದವರಿಂದ ಒಳ ಮೀಸಲಾತಿ ಜಾರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾ ನಿರತ ಹೋರಾಟಗಾರರು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರೂ, ಬ್ಯಾರಿಕೇಟ್ ಮುರಿದು ರೋಷಾವೇಶವನ್ನು ಹೊರ ಹಾಕಿದ್ದಾರೆ. ಈ ಸಂದರ್ಭದಲ್ಲಿಯೇ ನೂಕು ನುಗ್ಗಲು ಉಂಟಾದ ಪರಿಣಾಮ, ಕೆಲ ಯುವಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/official-stamp-on-the-law-to-confiscate-illegal-mining-assets-in-the-state-minister-h-k-patil/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/













