Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎಂಬುವರ ಕೊಲೆಯಾಗಿತ್ತು. ಈ ಕೊಲೆ ಪ್ರಕರಣ ಖಂಡಿಸಿ ಹಾಗೂ ಸೂಕ್ತ ರೀತಿಯ ತನಿಖೆಗೆ ಆಗ್ರಹಿಸಿ ನಾಳೆ ಸಾಗರ ತಾಲ್ಲೂಕು ನಾಗರೀಕ ಹಿತರಕ್ಷಣ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಾಗರ ತಾಲ್ಲೂಕು ನಾಗರೀಕ ಹಿತರಕ್ಷಣ ಸಮಿತಿಯ ಸಂಚಾಲಕ ಹಿತಕರ್ ಜೈನ್ ಅವರು, ಸಾಗರದ ಶಿವಪ್ಪನಾಯಕ ನಗರದ ನಿವಾಸಿ ಸದಾನಂದ ಆಚಾರಿ ಕೊಲೆ ಪ್ರಕರಣ ಖಂಡಿಸಿ ನಾಳೆ ಬೆಳಗ್ಗೆ 11.30 ಗಂಟೆಗೆ ಸಾಗರ ಪಟ್ಟಣ ಪೊಲೀಸ್ ಠಾಣೆ ಎದುರು ಸಾಗರ ತಾಲ್ಲೂಕು ನಾಗರೀಕ ಹಿತರಕ್ಷಣ ಸಮಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸದಾನಂದ ಆಚಾರ್ ಅವರದ್ದು ಸಾಧಾರಣ ಕೊಲೆ ಎಂದು ಅನಿಸಿದರು, ಯುವ ಉದ್ಯಮಿಗಳ ವಿರುದ್ಧ ಎಫ್ಐಆರ್ ಆಗಿರುವುದು ಸೇರಿದಂತೆ ಸಾಗರ ವ್ಯಾಪ್ತಿಯಲ್ಲಿ ಪುಂಡಾಟಿಕೆ ಮೂಲಕ ಜನಸಾಮಾನ್ಯರುಗಳ ಹೆದರಿಸುವುದು ಕೊಲೆ ಬೆದರಿಕೆ ಹಾಕುವುದು ಮೊದಲಾದ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡಿರುವವರ ವಿರುದ್ಧ ಪೊಲೀಸ್ ಇಲಾಖೆ…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಅನ್ನು ರಾಷ್ಟ್ರೀಯ ಮಟ್ಟದ ಇಟಿ ಇನ್ಫ್ರಾ ರೈಲ್ ಶೋ ಮತ್ತು ಅವಾರ್ಡ್ಗಳಲ್ಲಿ “ಎಂಆರ್ಟಿಎಸ್/ಆರ್ಆರ್ಟಿಎಸ್ ಯೋಜನೆಗಳ ಕ್ಯಾಪೆಕ್ಸ್ ಅಥವಾ ಓಪೆಕ್ಸ್ಗೆ ಅತ್ಯಾಧುನಿಕ ಹಣಕಾಸು ವಿಧಾನ” ಎಂಬ ಪ್ರತಿಷ್ಠಿತ ಪ್ರಶಸ್ತಿಯಿಂದ ಗೌರವಿಸಲಾಗಿದೆ. ದೇಶದ ಇನ್ಫ್ರಾ ಕ್ಷೇತ್ರದಲ್ಲಿ ಪರಿಣತಿ ಮತ್ತು ಮುಂದಾಲೋಚನೆಯ ಚಟುವಟಿಕೆಗಳನ್ನು ಗುರುತಿಸುವ ಈ ಪ್ರಶಸ್ತಿಗೆ ಬಿಎಂಆರ್ಸಿಎಲ್ ಆಯ್ಕೆಯಾಗಿದೆ. ಬಿಎಂಆರ್ಸಿಎಲ್ ಟಿಕೆಟ್ ಹೊರಗಿನ ಆದಾಯದ ಮೂಲಗಳನ್ನು ಪ್ರಯೋಜನಪಡಿಸಿಕೊಂಡು ಮೆಟ್ರೋ ವಿಸ್ತರಣೆ ಮತ್ತು ನಿರ್ವಹಣೆಗೆ ಅನುದಾನ ಒದಗಿಸಿದ ಉತ್ಸಾಹಪೂರ್ಣ ಕ್ರಮಗಳಿಗೆ ಈ ಪ್ರಶಸ್ತಿ ಲಭಿಸಿದೆ. ಇವುಗಳಲ್ಲಿ ದೀರ್ಘಕಾಲ ವಾಣಿಜ್ಯ ಬಾಡಿಗೆ, ನಿಲ್ದಾಣಗಳ ಹೆಸರಿಡುವ ಹಕ್ಕು, ಹೊಸದಾದ ಜಾಹೀರಾತು ಪಾಲುದಾರಿಕೆಗಳು ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಎಐಎಲ್) ಜೊತೆಗಿನ ಸಾರ್ವಜನಿಕ-ಖಾಸಗಿ ಭಾಗಿದಾರಿ ಯೋಜನೆಗಳು ಸೇರಿವೆ. ಭಾರತೀಯ ರೈಲ್ವೆ, ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA), ಎನ್ಎಚ್ಎಐ, ಬಿಎಚ್ಇಎಲ್, ಎನ್ಎಚ್ಎಸ್ಆರ್ಸಿಎಲ್ ಮತ್ತು ಇತರ ಮೆಟ್ರೋ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ನಿರ್ಣಾಯಕ ಮಂಡಳಿ ಈ ಪ್ರಶಸ್ತಿಗೆ…
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗೆ ಪ್ರತಿಕ್ರಿಯೆಯಾಗಿ, ಇಸ್ರೇಲ್-ಇರಾನ್ ಕಳವಳಗಳು ಮಾರುಕಟ್ಟೆ ವಹಿವಾಟನ್ನು ಕುಗ್ಗಿಸಿದ್ದರಿಂದ ಬೆಂಚ್ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಮಂಗಳವಾರ ಕುಸಿತ ಕಂಡವು. ಎಸ್ & ಪಿ ಬಿಎಸ್ಇ ಸೆನ್ಸೆಕ್ಸ್ 212.85 ಪಾಯಿಂಟ್ಗಳ ಕುಸಿತದೊಂದಿಗೆ 81,583.30 ಕ್ಕೆ ಮುಕ್ತಾಯವಾಯಿತು, ಆದರೆ ಎನ್ಎಸ್ಇ ನಿಫ್ಟಿ 50 93.10 ಪಾಯಿಂಟ್ಗಳ ಕುಸಿತದೊಂದಿಗೆ 24,853.40 ಕ್ಕೆ ಮುಕ್ತಾಯವಾಯಿತು. ಜಿಯೋಜಿತ್ ಇನ್ವೆಸ್ಟ್ಮೆಂಟ್ಸ್ ಲಿಮಿಟೆಡ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್, FOMC ಸಭೆಯ ಮೊದಲು ಮಧ್ಯಪ್ರಾಚ್ಯದಲ್ಲಿ ಸಂಘರ್ಷಗಳು ಹೆಚ್ಚಾಗುವ ಅಪಾಯ ಹೆಚ್ಚುತ್ತಿರುವ ನಡುವೆ ಬೆಂಚ್ಮಾರ್ಕ್ ಈಕ್ವಿಟಿ ಸೂಚ್ಯಂಕವು ಮಧ್ಯಮ ನಷ್ಟವನ್ನು ಅನುಭವಿಸಿದೆ ಎಂದು ಹೇಳಿದರು. ಈ ಅನಿಶ್ಚಿತತೆಯು ಬ್ರೆಂಟ್ ಕಚ್ಚಾ ತೈಲ ಬೆಲೆಗಳನ್ನು ಹೆಚ್ಚಿಸಿತು – ಭಾರತಕ್ಕೆ ಪ್ರತಿಕೂಲವಾದ ಬೆಳವಣಿಗೆ, ತೈಲ ಆಮದಿನ ಮೇಲೆ ಹೆಚ್ಚಿನ ಅವಲಂಬನೆಯನ್ನು ನೀಡಿರುವುದರಿಂದ, ಗಳಿಕೆಯ ಬೆಳವಣಿಗೆಯನ್ನು ಕುಂಠಿತಗೊಳಿಸಿತು ಎಂದು ಅವರು ಹೇಳಿದರು. ವಿಶಾಲ ಮಾರುಕಟ್ಟೆಯಲ್ಲಿ, ಆಟೋ ಮತ್ತು ಲೋಹಗಳಂತಹ ಪ್ರಮುಖ ವಲಯಗಳು ಮಾರಾಟದ ಒತ್ತಡಕ್ಕೆ ಒಳಗಾದವು. ಏತನ್ಮಧ್ಯೆ, ಐಟಿ ವಲಯವು ಮರುಸಮತೋಲನಕ್ಕೆ ಸಾಕ್ಷಿಯಾಯಿತು,…
ನವದೆಹಲಿ: ಇಂದು ವಿಮಾನ ಹಾರಾಟ ಪೂರ್ವ ತಪಾಸಣೆಯ ಸಮಯದಲ್ಲಿ ಸಮಸ್ಯೆ ಕಂಡುಬಂದ ನಂತರ ಮಂಗಳವಾರ ದೆಹಲಿಯಿಂದ ಪ್ಯಾರಿಸ್ಗೆ ಹಾರಾಟ ನಡೆಸಬೇಕಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವನ್ನು ರದ್ದುಗೊಳಿಸಲಾಯಿತು. ಜೂನ್ 17 ರಂದು ದೆಹಲಿಯಿಂದ ಪ್ಯಾರಿಸ್ಗೆ ಹಾರಾಟ ನಡೆಸಬೇಕಿದ್ದ AI143 ವಿಮಾನವನ್ನು ರದ್ದುಗೊಳಿಸಲಾಗಿದೆ. ಕಡ್ಡಾಯ ಪೂರ್ವ ವಿಮಾನ ಹಾರಾಟ ತಪಾಸಣೆಯಲ್ಲಿ ಪ್ರಸ್ತುತ ಪರಿಹರಿಸಲಾಗುತ್ತಿರುವ ಸಮಸ್ಯೆಯನ್ನು ಗುರುತಿಸಲಾಗಿದೆ. ಆದಾಗ್ಯೂ, ಪ್ಯಾರಿಸ್ ಚಾರ್ಲ್ಸ್ ಡಿ ಗೌಲ್ (CDG) ವಿಮಾನ ನಿಲ್ದಾಣದಲ್ಲಿ ರಾತ್ರಿ ಕಾರ್ಯಾಚರಣೆಗಳ ಮೇಲಿನ ನಿರ್ಬಂಧಗಳ ಅಡಿಯಲ್ಲಿ ವಿಮಾನ ಬರುತ್ತಿರುವುದರಿಂದ, ಈ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದೆ ಮತ್ತು ಪ್ರಯಾಣಿಕರು ರದ್ದತಿಗೆ ಸಂಪೂರ್ಣ ಮರುಪಾವತಿಯನ್ನು ನೀಡುತ್ತಿದೆ ಅಥವಾ ಪ್ರಯಾಣಿಕರು ಹಾಗೆ ಮಾಡಲು ಬಯಸಿದರೆ ಉಚಿತ ಮರುಹೊಂದಿಕೆಯನ್ನು ನೀಡುತ್ತಿದೆ ಎಂದು ಹೇಳಿದೆ. ಈ ಪರಿಣಾಮವಾಗಿ ಜೂನ್ 17, 2025 ರಂದು ಪ್ಯಾರಿಸ್ನಿಂದ ದೆಹಲಿಗೆ ಹಾರಾಟ ನಡೆಸಬೇಕಿದ್ದ AI142 ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಅದು…
ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು. ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ…
ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ಅವಧಿ ಡಿಸೆಂಬರ್-2025 ರವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ 1 ರಿಂದ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು 2025ರ ಡಿಸೆಂಬರ್ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಇದಲ್ಲದೆ, ಜುಲೈ 1, 2025 ರಿಂದ ಜಾರಿಗೆ ಬರುವಂತೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜೂನ್ 30, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07377 ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್ ರೈಲು ಈಗ ಜುಲೈ 1ರಿಂದ ಡಿಸೆಂಬರ್ 31, 2025ರವರೆಗೆ ವಿಸ್ತರಿಸಲ್ಪಟ್ಟಿದೆ. ಅದೇ ರೀತಿ, ಜುಲೈ 1, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲು…
ನವದೆಹಲಿ: ತನ್ನ ಜಲ ರಾಜತಾಂತ್ರಿಕತೆ ಮತ್ತು ಕಾರ್ಯತಂತ್ರದ ಸಂಪನ್ಮೂಲ ಯೋಜನೆಯ ಗಮನಾರ್ಹ ಏರಿಕೆಯಲ್ಲಿ, ಭಾರತವು ಸಿಂಧೂ ನದಿ ವ್ಯವಸ್ಥೆಯಿಂದ ಹೆಚ್ಚುವರಿ ನೀರನ್ನು ಮರುನಿರ್ದೇಶಿಸುವ ದೊಡ್ಡ ಯೋಜನೆಗೆ ಮುಂದಾಗಿದೆ. ಹೆಚ್ಚುವರಿ ಸಿಂಧೂ ನದಿಯ ನೀರನ್ನು ಕಾಲುವೆ ನಿರ್ಮಿಸುವ ಮೂಲಕ ರಾಜಸ್ಥಾನ, ಪಂಜಾಬ್ ಹಾಗೂ ಹರಿಯಾಣಕ್ಕೆ ತಿರುಗಿಸಲು ಭಾರತ ಮುಂದಾಗಿರುವುದಾಗಿ ತಿಳಿದು ಬಂದಿದೆ. ಲಭ್ಯವಿರುವ ಹರಿವುಗಳನ್ನು ನಿಯಂತ್ರಿಸಲು ಮತ್ತು ಬಳಸಿಕೊಳ್ಳಲು ತ್ವರಿತ, ಅಲ್ಪಾವಧಿಯ ಕ್ರಮಗಳನ್ನು ಪ್ರಾರಂಭಿಸಿದ ನಂತರ, ಸರ್ಕಾರವು ಈಗ ಅಂತರ-ಜಲಾನಯನ ನೀರಿನ ವರ್ಗಾವಣೆ ಯೋಜನೆಯತ್ತ ಗಮನ ಹರಿಸಿದೆ. ಇದು ಜಮ್ಮು ಮತ್ತು ಕಾಶ್ಮೀರದಿಂದ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಬರಡಾದ ಭೂಮಿಗೆ ಹೆಚ್ಚುವರಿ ನೀರನ್ನು ತಿರುಗಿಸಲು ವಿನ್ಯಾಸಗೊಳಿಸಲಾದ 113 ಕಿಮೀ ಉದ್ದದ ಕಾಲುವೆಯಾಗಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಪೂರೈಕೆಯನ್ನು ಹೆಚ್ಚಿಸುವುದರ ಜೊತೆಗೆ ಜಲವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಉಜ್ ಬಹುಪಯೋಗಿ ಯೋಜನೆಯನ್ನು ಕೇಂದ್ರವು ಪುನರುಜ್ಜೀವನಗೊಳಿಸಲಿದೆ. ಈ ಕ್ರಮವು ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ…
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ…
ಬೆಂಗಳೂರು : ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು. ಬೆಂಗಳೂರು ನಗರದ ಹಸಿರು ಹೊದಿಕೆ ವೃದ್ಧಿಗೆ ಕ್ರಮ: ನಿವೃತ್ತರ ಸ್ವರ್ಗ, ಉದ್ಯಾನ ನಗರಿ ಎಂದು ಖ್ಯಾತವಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶ್ವಾಸ ತಾಣ ಉಳಿಸಲು ಹೆಸರುಘಟ್ಟ ಹುಲ್ಲುಗಾವಲಿನ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಎಂದರು. ಬೆಂಗಳೂರು ಉತ್ತರದ ಯಲಹಂಕ ಬಳಿ 153 ಎಕರೆ ಭೂಮಿಯಲ್ಲಿ ಬೃಹತ್…
ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ. ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ. ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ…