Author: kannadanewsnow09

ಶುಕ್ರವಾರ (ಫೆಬ್ರವರಿ 6) ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ U-19 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ U-19 ವಿರುದ್ಧ ಭಾರತದ U-19 ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ ಗಳಿಸಿ ಹಲವಾರು ದಾಖಲೆಗಳನ್ನು ಬರೆದರು. ಈ ವಿದ್ಯುತ್ ಇನ್ನಿಂಗ್ಸ್ ಭಾರತವು 50 ಓವರ್‌ಗಳಲ್ಲಿ 9 ವಿಕೆಟ್‌ಗೆ 411 ರನ್ ಗಳಿಸಲು ಸಹಾಯ ಮಾಡಿತು, ಇದು ಪಂದ್ಯಾವಳಿಯ 28 ವರ್ಷಗಳ ಇತಿಹಾಸದ ಫೈನಲ್‌ನಲ್ಲಿ ಅತಿ ಹೆಚ್ಚು. ಸೂರ್ಯವಂಶಿಯವರ 55 ಎಸೆತಗಳಲ್ಲಿ ಶತಕ ಬ್ಯಾಟಿಂಗ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನಕ್ಕೆ ಹೆಸರುವಾಸಿಯಾಗಿರುವ 14 ವರ್ಷದ ಆರಂಭಿಕ ಆಟಗಾರ, 2016 ರಿಂದ ಸತತ ಆರನೇ ಫೈನಲ್‌ನಲ್ಲಿ ಬಾಯ್ಸ್ ಇನ್ ಬ್ಲೂ ತಂಡವು ದಾಖಲೆಯ ಆರನೇ ಪ್ರಶಸ್ತಿಯನ್ನು ಗೆಲ್ಲುವ ಗುರಿಯನ್ನು ಹೊಂದಿದ್ದರಿಂದ ಪ್ರಶಸ್ತಿ ಸುತ್ತಿನಲ್ಲಿ ಶತಕ ಪೂರೈಸಲು ಕೇವಲ 55 ಎಸೆತಗಳನ್ನು ತೆಗೆದುಕೊಂಡರು. ಸೂರ್ಯವಂಶಿಯವರ ಶತಕವು U-19 ವಿಶ್ವಕಪ್‌ನಲ್ಲಿ ಭಾರತೀಯರೊಬ್ಬರಿಂದ ಅತ್ಯಂತ ವೇಗದ ಶತಕವಾಗಿದ್ದರೆ, U-19 ವಿಶ್ವಕಪ್ ಪಂದ್ಯದಲ್ಲಿ 60 ಎಸೆತಗಳಿಗಿಂತ ಕಡಿಮೆ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದಂತ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು ಕಾಂಗ್ರೆಸ್ ನಾಯಕನ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಬಿಎಲ್ಓ ಅಧಿಕಾರಿಗೆ ಧಮ್ಕಿ ಹಾಕಿರುವುದು ಕೇಳಿ ಬಂದಿದೆ. ಈ ಆಡಿಯೋವನ್ನು ಸಂಸದ ಡಾ.ಕೆ.ಸುಧಾಕರ್ ಎಕ್ಸ್ ನಲ್ಲಿ ಶೇರ್ ಮಾಡಿದ್ದು, ಕಾಂಗ್ರೆಸ್ಸಿನ ಗೂಂಡಾಗಿರಿ ಮುಂದುವರೆದಿದೆ. ಬಿಎಲ್ಓ ಅಧಿಕಾರಿಗಳೆ ಮನಬಂದಂಧೆ ನಿಂದನೆಯನ್ನು ಮಾಡಿದ್ದಾನೆ. ಕಾಂಗ್ರೆಸ್ ಬಂದಿದೆ. ಕರ್ನಾಟಕದಲ್ಲಿ ಗೂಂಡಾರಾಜ್ ತಂದಿದೆ ಎಂಬುದಾಗಿ ಕಿಡಿಕಾರಿದ್ದಾರೆ. ಶಿಡ್ಲಘಟ್ಟದಲ್ಲಿ ಮಹಿಳಾ ಪುರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡ ನಿಂದನೆ ಮಾಡಿದ ಪ್ರಕರಣದ ಬೆನ್ನಲ್ಲೇ ಈಗ ಚಿಕ್ಕಬಳ್ಳಾಪುರದಲ್ಲಿ ಕರ್ತವ್ಯ ನಿರತ ಅಧಿಕಾರಿ ಶಿವಶಂಕರ್‌ ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ನಾಗೇಶ್‌ ರೆಡ್ಡಿ ಮನಬಂದಂತೆ ನಿಂದಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ. ನಾವೇನು ಪ್ರಜಾಪ್ರಭುತ್ವದಲ್ಲಿ ಇದ್ದೀವೋ ಅಥವಾ ಕಾಂಗ್ರೆಸ್ ಪಕ್ಷದ ಪಾಳೆಗಾರಿಕೆಯಲ್ಲಿ ಇದ್ದೀವೋ? ಕಾಂಗ್ರೆಸ್ ಪುಡಾರಿಗಳಿಗೆ ಅಧಿಕಾರಿಗಳನ್ನು ನಿಂದಿಸಲು ಅಧಿಕಾರ ಕೊಟ್ಟವರಾರು..?? ಈ ಕೂಡಲೇ ನಾಗೇಶ್‌ ರೆಡ್ಡಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು…

Read More

ಬೆಂಗಳೂರು: ಎಂಎಸ್ಐಎಲ್ ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ ಲಭ್ಯವಾಗುವಂತೆ ನಾಳೆ ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕುರಿತಂತೆ ಸಚಿವ ಎಂ.ಬಿ ಪಾಟೀಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಎಂಎಸ್ಐಎಲ್ ಚಿಟ್ಸ್ ನ ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ 10.30ಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಡಿಜಿಟಲ್ ವ್ಯವಸ್ಥೆಯ ಮೂಲಕ ಚಿಟ್ ಸದಸ್ಯರಿಗೆ ಪಾರದರ್ಶಕತೆ, ವೇಗ, ಸುರಕ್ಷತೆ ಮತ್ತು ಸುಲಭ ಪ್ರವೇಶ-ಎಲ್ಲವೂ ಮೊಬೈಲ್ ಆಪ್ ನಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಖಾತೆ ವಿವರಗಳು, ಕಂತು ಪಾವತಿ, ಹರಾಜು ಮಾಹಿತಿ ಸೇರಿದಂತೆ ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ! ಸಣ್ಣ ಉಳಿತಾಯದಿಂದ ದೊಡ್ಡ ಕನಸುಗಳವರೆಗೆ-MSIL ಚಿಟ್ಸ್ ಜನರ ವಿಶ್ವಾಸವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/power-outages-expected-in-half-of-bengaluru-tomorrow/

Read More

ಬೆಂಗಳೂರು : 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 07.02.2026 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ,…

Read More

ಪಾಕಿಸ್ತಾನ: ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಮುಸ್ಲಿಂ ಮಸೀದಿಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಫೆಡರಲ್ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಮ್‌ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟವು ಮಸೀದಿಯನ್ನು ನಡುಗಿಸಿತು ಎಂದು ಪೊಲೀಸ್ ಅಧಿಕಾರಿ ಜಾಫರ್ ಇಕ್ಬಾಲ್ ಹೇಳಿದ್ದಾರೆ. “ನಾವು ಹಲವಾರು ಜನರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದೇವೆ. ಈ ಸಮಯದಲ್ಲಿ ಎಷ್ಟು ಮಂದಿ ಸತ್ತಿದ್ದಾರೆಂದು ನಾನು ಹೇಳಲಾರೆ, ಆದರೆ ಹೌದು ಜನರು ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು. https://twitter.com/PTI_News/status/2019716041870377449 ಸ್ಫೋಟದ ಪ್ರಕಾರ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಪೊಲೀಸರು ಮತ್ತು ರಕ್ಷಣಾ ಸೇವೆಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಕ್ತಾರರನ್ನು ಉಲ್ಲೇಖಿಸಿ, ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಐಎಂಎಸ್ ಮತ್ತು ಪಾಲಿಕ್ಲಿನಿಕ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ಅದು ಹೇಳಿದೆ.

Read More

ಪಾಕಿಸ್ತಾನ: ಇಲ್ಲಿನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಮುಸ್ಲಿಂ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಡಾನ್ ಪ್ರಕಾರ, ಫೆಡರಲ್ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಮ್‌ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ. ಈ ಘಟನೆಯ ನಂತರ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (PIMS) ವಕ್ತಾರರನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿರುವ ಪ್ರಕಾರ, ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ PIMS ಮತ್ತು ಪಾಲಿಕ್ಲಿನಿಕ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಆರು ತಿಂಗಳೊಳಗೆ ರಾಜಧಾನಿಯಿಂದ ವರದಿಯಾದ ಎರಡನೇ ಸ್ಫೋಟ ಘಟನೆ ಇದಾಗಿದೆ. ಕಳೆದ ನವೆಂಬರ್‌ನಲ್ಲಿ, ಇಸ್ಲಾಮಾಬಾದ್ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭವಿಸಿದ ಕಾರು ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದರು ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡರು. ನಿಲ್ಲಿಸಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನಿ ಅಧಿಕಾರಿಗಳು ಇದನ್ನು ಆತ್ಮಹತ್ಯಾ…

Read More

ಗದಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಬಳಸಿಯೇ ಮಾಡುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಗದಗದ ಲಕ್ಕುಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವಿಎಂ ಮಷಿನ್ ಮೇಲಿನ ವಿಶ್ವಾಸ ಹೋಗ್ತಿದೆ. ಜಗತ್ತಿನ ಪ್ರಜಾಪ್ರಭುತ್ವ ದೇಶಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಆಗ್ತಿದೆ. ಆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ಎಂಬುದಾಗಿ ತಿಳಿಸಿದರು. ಬ್ಯಾಲೆಟ್ ಮೂಲಕವೇ ಜಿಬಿಎ ಚುನಾವಣೆಯನ್ನು ಮಾಡುತ್ತೇವೆ. ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತೇವೆ ಎಂಬುದಾಗಿ ಗದಗ ತಾಲ್ಲೂಕಿನ ಲಕ್ಕುಂಡಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. https://kannadanewsnow.com/kannada/gandhi-was-assassinated-by-godse-then-today-gandhianism-is-being-assassinated-by-godse-supporters-minister-priyank-kharge/

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂತಾಪ ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ, ದೊಡ್ಡ ಬೊಮ್ಮಯ್ಯ, ಭೀಮಸೇನ ಪದಕಿ ಎಂ.ಎನ್.ಪಾಟೀಲ, ಸಕಲೇಶಪುರದ ಶಿವಕುಮಾರ್, ಕಲಬುರ್ಗಿ ಪ್ರಭುಲಿಂಗ ನೀಲೂರೆ, ಬಾವು ಪತ್ತಾರ, ರಾಯಚೂರು ನಹೀಮ್ ಅಶ್ರಫ್, ಮೈಸೂರಿನ ಸೂರಜ್ ಅವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಖಜಾಂಚಿ ಎಂ.ವಾಸುದೇವಹೊಳ್ಳ, ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಅಗಲಿದ ಪತ್ರಕರ್ತರ ಕೆಲ ಕುಟುಂಬದ ಸದಸ್ಯರು ಭಾಗವಹಿಸಿದ್ದರು. https://kannadanewsnow.com/kannada/gandhi-was-assassinated-by-godse-then-today-gandhianism-is-being-assassinated-by-godse-supporters-minister-priyank-kharge/

Read More

ಬೆಂಗಳೂರು: ಅಂದು ಗೋಡ್ಸೆಯಿಂದ ಗಾಂಧಿ ಹತ್ಯೆ: ಇಂದು ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಪ್ರಬಲವಾಗಿ ನೀಡಿದ್ದವರು ಮಹಾತ್ಮ ಗಾಂಧಿ. ಗಾಂಧಿ ಎಂದಿಗೂ ಅವರ ಕೈಲಿದ್ದ ಕೋಲನ್ನು ಎತ್ತಿ ಹಲ್ಲೆಗೆ ಬಳಸಿದವರಲ್ಲ, ಗಾಂಧಿ ಎಂದಿಗೂ ಸುಳ್ಳಿನ ಮಾರ್ಗ ತೋರಿದವರಲ್ಲ, ಆದರೆ, ಮಹಾತ್ಮನ ಮಹತ್ವ ಅರಿಯದ  ಆರ್ ಎಸ್ ಎಸ್ ಹಾಗು ಬಿಜೆಪಿ ಮಹಾತ್ಮ ಗಾಂಧಿಯವರನ್ನು ಹಿಂಸೆಯ ಪ್ರತಿಪಾದಕರನ್ನಾಗಿ ಚಿತ್ರಿಸಿ ಜಾಹೀರಾತು ನೀಡುವ ಮೂಲಕ ಮತ್ತೊಮ್ಮೆ ಮಹಾತ್ಮ ಗಾಂಧೀಜಿಗೆ ಅವಮಾನಿಸಿದೆ ಎಂದಿದ್ದಾರೆ. ಮಹಾತ್ಮ ಗಾಂಧಿಯವರನ್ನು ದೈಹಿಕವಾಗಿ ಮುಗಿಸಿಹಾಕಿದ್ದಲ್ಲದೆ ಈಗ ಅವರ ಸಿದ್ದಾಂತವನ್ನೂ ಮುಗಿಸಿಹಾಕುವ ಕೆಲಸಕ್ಕೆ ಕೈ ಹಾಕಿರುವ ಬಿಜೆಪಿಯಿಂದ ಗಾಂಧೀಜಿಯನ್ನು ಮತ್ತು ಅವರ ತತ್ವಗಳನ್ನು ನಾವು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ. https://twitter.com/priyankkharge/status/2019623918202712392 https://kannadanewsnow.com/kannada/dcm-d-k-shivakumar-condoles-the-death-of-bangalore-club-president-harish-padmanabha/

Read More

ಬೆಂಗಳೂರು : ಬೆಂಗಳೂರು ಕ್ಲಬ್ ಅಧ್ಯಕ್ಷರಾದ ಹರೀಶ್ ಪದ್ಮನಾಭ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಹರೀಶ್ ಅವರು ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ನನಗೆ ಆತ್ಮೀಯರು ಆಗಿದ್ದರು. ಅವರ ತಂದೆ ಸಿ.ಜೆ. ಪದ್ಮನಾಭ ಅವರು ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದು, ಬಿಡಿಎ ಮಾಜಿ ಮುಖ್ಯಸ್ಥರಾಗಿದ್ದರು. ಹರೀಶ್ ಅವರ ನಾಯಕತ್ವದಲ್ಲಿ ಬೆಂಗಳೂರು ಕ್ಲಬ್ ಸಾಕಷ್ಟು ಪ್ರಗತಿ ಸಾಧಿಸಿದೆ. ಹರೀಶ್ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಸ್ನೇಹಿತರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Read More