Subscribe to Updates
Get the latest creative news from FooBar about art, design and business.
Author: kannadanewsnow09
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ 1,500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದರು. ಎಸ್ಡಿಆರ್ಎಫ್ ಮತ್ತು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಎರಡನೇ ಕಂತಿನ ಮುಂಗಡ ಬಿಡುಗಡೆ ಮಾಡಲಾಗುವುದು. ಇಡೀ ಪ್ರದೇಶ ಮತ್ತು ಜನರನ್ನು ಮತ್ತೆ ಮೊದಲಿನ ಸ್ಥಿತಿಗೆ ತರಲು ಬಹು ಆಯಾಮದ ದೃಷ್ಟಿಕೋನವನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ಮೋದಿ ಕೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆಗಳ ಪುನರ್ನಿರ್ಮಾಣ, ರಾಷ್ಟ್ರೀಯ ಹೆದ್ದಾರಿಗಳ ಪುನಃಸ್ಥಾಪನೆ, ಶಾಲೆಗಳ ಪುನರ್ನಿರ್ಮಾಣ, ಪಿಎಂಎನ್ಆರ್ಎಫ್ ಅಡಿಯಲ್ಲಿ ಪರಿಹಾರ ಒದಗಿಸುವುದು ಮತ್ತು ಜಾನುವಾರುಗಳಿಗೆ ಮಿನಿ ಕಿಟ್ಗಳ ಬಿಡುಗಡೆಯಂತಹ ಬಹು ಆಯಾಮಗಳ ಮೂಲಕ ಇವುಗಳನ್ನು ಮಾಡಲಾಗುತ್ತದೆ. https://twitter.com/ANI/status/1965356528778588413 https://kannadanewsnow.com/kannada/fir-registered-against-organizers-for-bursting-colored-paper-firecrackers-during-ganesh-procession-in-chitradurga/ https://kannadanewsnow.com/kannada/good-news-for-metro-passengers-in-bangalore-the-4th-train-set-is-operational-here-is-the-schedule/
ಚಿತ್ರದುರ್ಗ: ಗಣೇಶ ಮೆರವಣಿಗೆ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಪಟಾಕಿಗಳನ್ನು ಸಿಡಿಸಿದ್ದ ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಸಂಘಟಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳ ಆದೇಶ ಸಂಖ್ಯೆ ನಂ.ಎಂ.ಎ.ಜಿ(3)ಸಿಆರ್/808641/205-26 ದಿನಾಂಕ.31.08.2025 ರಲ್ಲಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ.27.08.2025 ರಿಂದ ದಿನಾಂಕ.15.09.2025 ರವರೆಗೆ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಮಯದಲ್ಲಿ ಯಾವುದೇ ರೀತಿಯ ಕಲರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿರುವ ಆದೇಶದ ಮಾಹಿತಿಯನ್ನು ದಿನಾಂಕ.08.09.2025 ರಂದು ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಅಧ್ಯಕ್ಷರು ಹಾಗೂ ಸಂಘಟಕರಿಗೆ ಮಾಹಿತಿಯನ್ನು ತಿಳಿಸಿ ನೊಟೀಸ್ ಜಾರಿ ಮಾಡಲಾಗಿತ್ತು ಎಂದಿದೆ. ಆದಾಗ್ಯೂ ಸಹಾ ದಿನಾಂಕ.08.09.2025 ರಂದು ವಿರಾಟ್ ಹಿಂದೂ ಮಹಾ ಸಾಗರ ಗಣಪತಿಯ ಮೆರವಣಿಗೆ ವೇಳೆಯಲ್ಲಿ ಮದ್ಯಾಹ್ನ 3.30 ಪಿ.ಎಂ ಸಮಯದಲ್ಲಿ ಹೊಸದುರ್ಗ ಪಟ್ಟಣದ ಜೂನಿಯರ್ ಕಾಲೇಜ್ ಮುಂಭಾಗದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮಾಡಿದ್ದು…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿ.ಎಂ.ಆರ್.ಸಿ.ಎಲ್) ದಿನಾಂಕ 10ನೇ ಸೆಪ್ಟೆಂಬರ್ 2025 ರಿಂದ ಜಾರಿಗೆ ಬರುವಂತೆ ಹಳದಿ ಮಾರ್ಗದಲ್ಲಿ 4ನೇ ರೈಲು ಸೆಟ್ ಅನ್ನು ಕಾರ್ಯಾಚರಣೆ ಸೇರಿಸಲಾಗಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪರಿಷ್ಕರಿಸ ಲಾಗಿದೆ: ರೈಲು ಆವರ್ತನ: ಎಲ್ಲಾ ದಿನಗಳಲ್ಲಿ ರೈಲುಗಳು ಈಗ 19 ನಿಮಿಷಗಳ ಮಧ್ಯಂತರದಲ್ಲಿ (ಈಗಿನ 25 ನಿಮಿಷಗಳ ಮಧ್ಯಂತರದ ಬದಲಿಗೆ) ಚಲಿಸುತ್ತವೆ. ಮೊದಲ ರೈಲು ಸಮಯ: ಸೋಮವಾರದಿಂದ ಶನಿವಾರದಂದು, ಮೊದಲ ವಾಣಿಜ್ಯ ಸೇವೆಯು ಬೆಳಿಗ್ಗೆ ಈಗಿನ 6.30 ಗಂಟೆಯ ಬದಲಿಗೆ ಬೆಳಿಗ್ಗೆ 06:00 ಗಂಟೆಗೆ ಪ್ರಾರಂಭವಾಗುತ್ತದೆ. ಭಾನುವಾರದಂದು, ಮೊದಲ ರೈಲು ಬೆಳಿಗ್ಗೆ 07:00 ಗಂಟೆಗೆ ಪ್ರಾರಂಭವಾಗಲಿದೆ. ಕೊನೆಯ ರೈಲು ಸಮಯ: ಆರ್.ವಿ. ರಸ್ತೆಯಿಂದ: ರಾತ್ರಿ 11:55 (ಬದಲಾವಣೆ ಇಲ್ಲ) ಬೊಮ್ಮಸಂದ್ರದಿಂದ: ರಾತ್ರಿ 10:42 (ಬದಲಾವಣೆ ಇಲ್ಲ) ಪ್ರಯಾಣಿಕರು ಈ ಬದಲಾವಣೆಗಳನ್ನು ಗಮನಿಸಿ ಸುಧಾರಿತ ಸೌಲಭ್ಯವನ್ನು ಪಡೆದುಕೊಳ್ಳಲು ವಿನಂತಿಸಲಾಗಿದೆ. ಈ ಮೂಲಕ ನಮ್ಮ ಮೆಟ್ರೋ ರೈಲ್ವೆ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಗುಡ್ ನ್ಯೂಸ್…
ಹಿಮಾಚಲ ಪ್ರದೇಶ: ಲಡಾಖ್ನ ಸಿಯಾಚಿನ್ ಹಿಮನದಿಯಲ್ಲಿ ಸಂಭವಿಸಿದ ಪ್ರಮುಖ ಹಿಮಪಾತದಲ್ಲಿ 3 ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. ಮಂಗಳವಾರ ಲಡಾಖ್ನ ಸಿಯಾಚಿನ್ ಹಿಮನದಿಯಲ್ಲಿ ಸಂಭವಿಸಿದ ಪ್ರಮುಖ ಹಿಮಪಾತದಲ್ಲಿ ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇತರ ಹಲವು ಸೈನಿಕರು ನಾಪತ್ತೆಯಾಗಿದ್ದು, ಅವರನ್ನು ಹುಡುಕುವ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಪ್ರದೇಶದಲ್ಲಿ ಉಳಿದಿರುವ ಸೈನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಕಠಿಣ ಹವಾಮಾನ ಪರಿಸ್ಥಿತಿಗಳು ಮತ್ತು ಕಷ್ಟಕರವಾದ ಭೂಪ್ರದೇಶವು ರಕ್ಷಣಾ ತಂಡಗಳು ಪೀಡಿತ ವಲಯವನ್ನು ತಲುಪಲು ಸಮಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿರುವುದರಿಂದ ಅವರಿಗೆ ಗಮನಾರ್ಹ ಸವಾಲುಗಳನ್ನು ಒಡ್ಡಿದೆ. https://kannadanewsnow.com/kannada/violence-erupted-in-nepal-advice-from-india-flights-canceled/ https://kannadanewsnow.com/kannada/tomorrow-there-will-be-a-collective-ganesh-immersion-in-maddur-minister-chaluvarayaswamy-directs-precautionary-measures/
ಮಂಡ್ಯ: ನಾಳೆ ಮದ್ದೂರಲ್ಲಿ ಬರೋಬ್ಬರಿ 28 ಗಣೇಶ ಮೂರ್ತಿಗಳನ್ನು ಸಾಮೂಹಿಕವಾಗಿ ಒಂದೇ ಕಡೆಯಲ್ಲಿ ಸೇರಿಸಿ ವಿಸರ್ಜನೆ ಮಾಡಲಾಗುತ್ತಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಜಿಲ್ಲಾಡಳಿತ, ತಾಲ್ಲೂಕು ಆಡಳಿತಕ್ಕೆ ಸೂಚಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಶಾಂತಿ ಸಭೆ ನಡೆಸಿದ ಬಳಿ ಮಾತನಾಡಿದಂತ ಅವರು, ಘಟನೆಯಿಂದ ಇಡೀ ರಾಜ್ಯಾದ್ಯಂತ ಅಲ್ಲೋಲ ಕಲ್ಲೋಲ ಆಗಿದೆ. ಮಂಡ್ಯದಲ್ಲಿ ಕೋಮುಗಲಭೆ ಶುರುವಾಗಿದೆ. ಕೆರಗೋಡು, ನಾಗಮಂಗಲ, ಮದ್ದೂರಿನಲ್ಲಿ ಗಲಭೆಯಾಗಿದೆ. ಹಿಂದೂ ಮುಸ್ಲಿಂ ಒಟ್ಟಿಗೆ ಜೀವನ ನಡೆಸಬೇಕಾಗಿದೆ ಎಂದರು. ನಾಳೆ ಸಾಮೂಹಿಕ ಗಣಪತಿ ವಿಸರ್ಜನೆ ಇದೆ. ಈ ಘಟನೆ ನಡೆದಿದೆ ಅಂತ ಸಾಮೂಹಿಕ ವಿಸರ್ಜನೆ ಅಲ್ಲ. ನಾಳೆ ರಾಜ್ಯದ ವಿಪಕ್ಷ ನಾಯಕರು ಬರ್ತಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕಿದೆ. ನಾಳೆ ಮೈತ್ರಿ ನಾಯಕರು ಭಾಗಿಯಾಗಲಿದ್ದಾರೆ. ಮುಖಂಡರಿಗಿಂತ ಜನತೆಗೆ ಶಾಂತಿ ಬೇಕಾಗಿದೆ ಎಂದರು. ಬಿಜೆಪಿ ಜೆಡಿಎಸ್ ನವರು ಸಭೆಗೆ ಬಂದಿಲ್ಲ ಅವರನ್ನ ಗುರ್ತಿಸಿ…
ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೀಗಾಗಿ ಹಿಂದೂ-ಮುಸ್ಲಿಂ ಸಮುದಾಯದ ಸಭೆ ನಡೆಸಲಾಯಿತು. ಈ ಸಭೆಯಲ್ಲೇ ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದೇ ಕಲ್ಲು ತೂರಾಟಕ್ಕೂ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ಮುಸ್ಲೀಂ ಮುಖಂಡರೊಬ್ಬರು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಂತಿ ಸಭೆ ನಡೆಯಿತು. ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಕಾರಣ, ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳೀಯ ಮುಖಂಡರು ಸಾಥ್ ನೀಡಿದರು. ನಿರೀಕ್ಷೆಯಂತೆ ಸಭೆಗೆ ಬಿಜೆಪಿ, ಹಿಂದೂ ಮುಖಂಡರು, ಕಾರ್ಯಕರ್ತರು ಗೈರು ಹಾಜರಾಗಿದ್ದರು. ಆದರೇ ಮುಸ್ಲಿಂ ಸಮುದಾಯದ ಮುಖಂಡರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳಿಗಷ್ಟೇ ಸೀಮಿತವಾದ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗಿಯಾಗಿದ್ದಂತ ಮುಸ್ಲೀಂ ಮುಖಂಡ ಆಸೀಪ್…
ನವದೆಹಲಿ: ನೇಪಾಳದಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಭಾರತ ಸಲಹೆ ನೀಡಿದೆ. ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿವೆ. ರಾಜಕೀಯ ಅಶಾಂತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೇಪಾಳದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತುರ್ತು ಸಂಪರ್ಕ ಸಂಖ್ಯೆಗಳನ್ನು ಗಮನಿಸುವಂತೆ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಒತ್ತಾಯಿಸಿದೆ. ಯಾವುದೇ ತುರ್ತು ಪರಿಸ್ಥಿತಿ ಅಥವಾ ಸಹಾಯದ ಅಗತ್ಯವಿದ್ದಲ್ಲಿ, ಪ್ರಯಾಣಿಕರು +977-9808602881 ಅಥವಾ +977-9810326134 ನಲ್ಲಿ ರಾಯಭಾರ ಕಚೇರಿಯನ್ನು ಸಂಪರ್ಕಿಸಬಹುದು. ರಾಯಭಾರ ಕಚೇರಿಯಿಂದ ಸಲಹೆ: ‘ನೇಪಾಳದಲ್ಲಿ ಬೆಳೆಯುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪರಿಸ್ಥಿತಿ ಸ್ಥಿರವಾಗುವವರೆಗೆ ಭಾರತೀಯ ನಾಗರಿಕರು ಅಲ್ಲಿಗೆ ಪ್ರಯಾಣವನ್ನು ಮುಂದೂಡಲು ಸೂಚಿಸಲಾಗಿದೆ. ಪ್ರಸ್ತುತ ನೇಪಾಳದಲ್ಲಿರುವ ಭಾರತೀಯ ನಾಗರಿಕರು ತಮ್ಮ ಪ್ರಸ್ತುತ ವಾಸಸ್ಥಳಗಳಲ್ಲಿ ಆಶ್ರಯ ಪಡೆಯಲು, ಬೀದಿಗಳಿಗೆ ಹೋಗುವುದನ್ನು ತಪ್ಪಿಸಲು ಮತ್ತು ಎಲ್ಲಾ ರೀತಿಯ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ನೇಪಾಳ ಅಧಿಕಾರಿಗಳು ಮತ್ತು ಕಠ್ಮಂಡುವಿನಲ್ಲಿರುವ ಭಾರತದ ರಾಯಭಾರ ಕಚೇರಿಯ ಸ್ಥಳೀಯ ಸುರಕ್ಷತಾ ಸಲಹೆಗಳನ್ನು ಅನುಸರಿಸಲು ಅವರಿಗೆ ಸೂಚಿಸಲಾಗಿದೆ. https://twitter.com/ANI/status/1965356998368592310 ಯಾವುದೇ ಸಹಾಯದ ಅಗತ್ಯವಿದ್ದರೆ, ದಯವಿಟ್ಟು ಕಠ್ಮಂಡುವಿನಲ್ಲಿರುವ ಭಾರತದ ರಾಯಭಾರ ಕಚೇರಿಗೆ ಈ ಕೆಳಗಿನ ಸಹಾಯವಾಣಿ…
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವಂತ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು 2 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದಾರೆ. ಇಂತಹ ಅವರು ತಮ್ಮ ಪುತ್ರನ ಶಸ್ತ್ರ ಚಿಕಿತ್ಸೆಗೆ ಮೂರು ದಿನ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. https://kannadanewsnow.com/kannada/attention-to-students-of-9th-and-10th-grade-of-the-state-linking-aadhaar-to-student-scholarships-is-mandatory/ https://kannadanewsnow.com/kannada/state-government-publishes-revised-schedule-for-general-transfer-of-teachers-for-2024-25/













