Author: kannadanewsnow09

ಕೊಪ್ಪಳ: ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಕೊಪ್ಪಳದ ಕನಕಗಿರಿಯಲ್ಲಿ ನಡೆದಿದೆ. ಕೊಪ್ಪಳದ ಕನಕಗಿರಿಯ ನವಲಿ ಬಳಿಯಲ್ಲಿ ಮರಳು ತುಂಬಿದ್ದಂತ ಟಿಪ್ಪರ್ ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಮೇಶ್ ಜವಳಗೇರಿ (27) ಹಾಗೂ ಸಿದ್ದಪ್ಪ ಪ್ಯಾಟ್ಯಾಳ್ (34) ಎಂಬುದಾಗಿ ಗುರುತಿಸಲಾಗಿದೆ. ಯುವಕರು ಕನಕಗಿರಿ ತಾಲ್ಲೂಕಿನ ಗುಡೂರಿನ ನಿವಾಸಿಗಳು. ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಂತ ಟಿಪ್ಪರ್ ಲಾರಿಯಿಂದಲೇ ಇಬ್ಬರು ಯುವಕರು ಬಲಿಯಾಗುವಂತೆ ಆಗಿದೆ ಎಂಬುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಬೇಕು. ಪೊಲೀಸರು ಕೊಪ್ಪಳದ ಕನಕಗಿರಿಯಲ್ಲಿ ನಡೆಯುತ್ತಿರುವಂತ ಅಕ್ರಮ ಮರಳು ದಂಧೆಯನ್ನು ನಿಲ್ಲಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ಬೈಕ್ ಸವಾರರ ಸಾವಿನ ಸಂಬಂಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/registration-of-microfinance-institutions-mandatory-in-the-state-home-minister-g-parameshwara/

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಸುವುದು ಕಡ್ಡಾಯ ಎಂಬುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಕ್ರಮ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ ಎಂದರು. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1901992594948649451 https://kannadanewsnow.com/kannada/this-is-not-siddaramaiahs-guarantee-its-kannadigas-guarantee-cm-siddaramaiah/ https://kannadanewsnow.com/kannada/breaking-%e0%b2%a8%e0%b2%9f-%e0%b2%a6%e0%b2%b0%e0%b3%8d%e0%b2%b6%e0%b2%a8%e0%b3%8d-%e0%b2%97%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%8a%e0%b2%82%e0%b2%a6%e0%b3%81-%e0%b2%b8%e0%b2%82/

Read More

ಬೆಂಗಳೂರು: ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ, ಕನ್ನಡಿಗರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದರು.ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲಿಲ್ಲ ಎಂದರು. ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ ಎಂಬುದಾಗಿ ಸಿಎಂ ವ್ಯಂಗ್ಯ ಮಾಡಿದರು. ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ.…

Read More

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಟಿ ರನ್ಯಾ ರಾವ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ದೂರು ನೀಡಿದ ಕಾರಣ, ಎಫ್ಐಆರ್ ದಾಖಲಾಗಿದೆ. ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟಿ ರನ್ಯಾ ರಾವ್, ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರನ್ಯಾ ರಾವ್ ವಿರುದ್ಧ ಅವಾಚ್ಯ ಪದ ಬಳಸಿ ತೇಜೋವಧೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ ಪೊಲೀಸರಿಗೆ ಅನುರಾಧ ಎಂಬುವರು ದೂರು ನೀಡಿದ್ದಾರೆ. ಈ ದೂರು ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/karnataka-assembly-passes-karnataka-tax-on-professions-occupations-occupations-and-occupations-bill/ https://kannadanewsnow.com/kannada/karnataka-public-service-commission-amendment-bill-passed-in-assembly/

Read More

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸುಬುಗಳ, ಅಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ವಿಧೇಯಕವು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿವರು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಅಧಿನಿಯಮ 1959ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಪರೀಕ್ಷ ನಿಯಂತ್ರಕ ಮತ್ತು ಜಂಟಿ ಪರೀಕ್ಷ ನಿಯಂತ್ರಕ ಎಂಬ ಪದಗಳನ್ನು ಪರಿಭಾಷಿಸಲು, ಆಯೋಗವು ನಿರ್ಣಯ ತೆಗೆದುಕೊಳ್ಳುವಲ್ಲಿ ಆಗುವ ವಿಳಂಬವನ್ನು ತಡೆಯುವ ಸಂಬಂಧ, ಸುತ್ತೋಲೆಯ…

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿವರು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಅಧಿನಿಯಮ 1959ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಪರೀಕ್ಷ ನಿಯಂತ್ರಕ ಮತ್ತು ಜಂಟಿ ಪರೀಕ್ಷ ನಿಯಂತ್ರಕ ಎಂಬ ಪದಗಳನ್ನು ಪರಿಭಾಷಿಸಲು, ಆಯೋಗವು ನಿರ್ಣಯ ತೆಗೆದುಕೊಳ್ಳುವಲ್ಲಿ ಆಗುವ ವಿಳಂಬವನ್ನು ತಡೆಯುವ ಸಂಬಂಧ, ಸುತ್ತೋಲೆಯ ಮೂಲಕ ನಿರ್ಣಯಗಳನ್ನು ಕೈಗೊಳ್ಳುವುದಕ್ಕೆ ಸಂಬಂಧಿಸಿದ ಉಪಬಂಧವನ್ನು ತೆಗೆದು ಹಾಕುವುದು, ಆಯೋಗದ ಸಭೆಗಾಗಿ ಅಧ್ಯಕ್ಷರನ್ನು ಒಳಗೊಂಡು ಸೇವೆ ಸಲ್ಲಿಸುತ್ತಿರುವ ಸದಸ್ಯರುಗಳ ಶೇಕಡಾ ಐವತ್ತರಷ್ಟುನ್ನು ಕೋರಂ ಆಗಿ ನಿಗದಿಪಡಿಸುವುದು. ಆಯೋಗವು ಅಧಿಕೃತಗೊಳಿಸಿದ ಯಾರೇ ಒಬ್ಬ ಸದಸ್ಯನು ನೇಮಕಾತಿಗಾಗಿ ಅಭ್ಯರ್ಥಿಗಳ ಸಂದರ್ಶನವನ್ನು ಮಾಡಲು ಉಪಬಂಧ ಕಲ್ಪಿಸಬಹುದು ಮತ್ತು ಕೆಲವು ಇತರೆ ಅನುಷಂಗಿಕ ತಿದ್ದುಪಡಿಗಳನ್ನು ಸಹ ಮಾಡಲಾಗಿದೆ ಎಂದು ವಿಧೇಯಕದ ಕುರಿತು ಸದನಕ್ಕೆ…

Read More

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಸತಿ ಬಡಾವಣೆ ರಚಿಸಲು ಉರಗಡೂರು ಗ್ರಾಮದಲ್ಲಿ ಒಟ್ಟು 60 ಎಕರೆ 30 ಗುಂಟೆ ಪ್ರದೇಶವನ್ನು 1985ರಲ್ಲಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶ ಪಡಿಸಿಕೊಳ್ಳಲಾದ ಜಮೀನಿಗೆ ಆಗಲೇ ಅಂದಿನ ದರದಂತೆ ಪರಿಹಾರವನ್ನು ನೀಡಲಾಗಿದೆ. ಸದರಿ ಭೂ ಮಾಲಿಕರಿಗೆ ವಸತಿ ಯೋಜನೆಗೆ ನೀಡಲಾದ ಭೂ ಪರಿಹಾರದ ಜೊತೆಗೆ ನಿವೇಶನಗಳನ್ನು ನೀಡಲು ಕರ್ನಾಟಕ ನಗರಾಭಿವೃದ್ಧಿಗಳ ಕಾಯ್ದೆ 1987ರನ್ವಯ ಅವಕಾಶ ಇಲ್ಲದ ಕಾರಣ ಪರಿಹಾರದ ರೂಪದಲ್ಲಿ ಪ್ರಾಧಿಕಾರದಿಂದ ಯಾವುದೇ ನಿವೇಶನಗಳನ್ನು ನೀಡಿರುವುದಿಲ್ಲ. ಆದರೂ ಸರ್ಕಾರವು ಈ ಬಗ್ಗೆ ಪರಿಶೀಲಸಿ ಮಾನವೀಯತೆಯ ಆಧಾರದಡಿ ಪರಿಗಣಿಸಿ ಸರ್ಕಾರದ ಆದೇಶ ಸಂ. ನಇ 345 ಬೆಂರೂಪ್ರಾ 2015 ದಿನಾಂಕ: 20-03-2018ರಲ್ಲಿ ಸದರಿ ಜಮೀನುಗಳ ಭೂ ಮಾಲಿಕರಿಗೆ ಹೆಚ್ಚುವರಿ ಪರಿಹಾರವನ್ನಾಗಿ ಪ್ರತಿ ಎಕರೆಗೆ 40×60 ಅಡಿ ಅಳತೆಯ ಒಂದು ನಿವೇಶನವನ್ನು ಸಾಮಾನ್ಯ ಜನರಿಗೆ ಹಂಚಿಕೆ ಮಾಡುವ ದರದಲ್ಲಿ ಹಂಚಿಕೆ ಮಾಡಲು ಆದೇಶಿಸಲಾಗಿರುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ತಿಳಿಸಿದರು. ಇಂದು…

Read More

ಬೆಂಗಳೂರು: ರಾಜ್ಯದಲ್ಲಿರುವ 11 ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ, ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ವಿಜಯಪುರ, ಹುಬ್ಬಳ್ಳಿ – ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಮೂಲಸೌಲಭ್ಯಗಳನ್ನು ಸಮರ್ಪವಾಗಿ ಕೈಗೊಳ್ಳಲಾಗಿದೆ. ಸ್ವಚ್ಚ ಭಾರತ್ ಮಿಷನ್ (ನ)2.0 ಯೋಜನೆಯು 2021 ರಿಂದ 2026ನೇ ಸಾಲಿನ ವರೆಗೆ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ಮಹಾನಗರ ಪಾಲಿಕೆಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ, ಘನ ತ್ಯಾಜ್ಯ ನಿರ್ವಹಣೆ, ಪಾರಂಪರಿಕ ತಾಜ್ಯ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಐ.ಇ.ಸಿ ಚಟುವಟಿಕೆಗಳು ಮತ್ತು ಸಾಮರ್ಥ್ಯಾಭಿವೃದ್ಧಿ ಅಡಿ ವಿವಿಧ ಹಿತಾಸಕ್ತಿದಾರರಿಗೆ…

Read More

ಬೆಂಗಳೂರು : ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ಭರವಸೆ ನೀಡಿದ್ದಾರೆ. ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರಾದ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಭಿಮಾ ಯೋಜನೆಯಲ್ಲಿ ರೂ 2 ಲಕ್ಷ ಪರಿಹಾರ ವಿತರಣೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯ ವಿಮಾ ಕಂತನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ರೂ 2 ಲಕ್ಷ ಗಳೊಂದಿಗೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ರೂ 3 ಲಕ್ಷ ಪರಿಹಾರ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಯೋಜನೆ ಜಾರಿಯಲ್ಲಿ ಇರುವುದಿಲ್ಲ್ಲ. ಆದರೆ ಕೋವಿಡ್ ಅವಧಿಯಲ್ಲಿ 25 ಮೃತ ನೇಕಾರರ ಕುಟುಂಬಗಳಿಗೆ ತಲಾ ರೂ 5 ಲಕ್ಷಗಳಂತೆ ರೂ 1.25 ಕೋಟಿ ಪರಿಹಾರ…

Read More

ಬೆಂಗಳೂರು : ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ. ರಾಜ್ಯದ 19 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ…

Read More