Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು, ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ವರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ…
ನವದೆಹಲಿ: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶವನ್ನು ಉದ್ರಿಕ್ತರು ಹಾಕುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ನೇಪಾಳದ ಹಲವು ನಗರಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ನೇಪಾಳ ಸರ್ಕಾರದ ವಿರುದ್ಧ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದದಾರೆ. ನೇಪಾಳ ಸಂಸತ್, ರಾಷ್ಟ್ರಪತಿ ಭವನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ನೇಪಾಳದಲ್ಲಿ ಹಿಂಸಾಚಾರ ಹೆಚ್ಚಾದ ಹಿನ್ನಲೆಯಲ್ಲಿ ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದಂತ ವಿಮಾನಗಳ ಹಾರಾಟ ರದ್ದು ಪಡಿಸಲಾಗಿದೆ. ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟ ಬಂದ್ ಮಾಡಲಾಗಿದೆ. ಅಲ್ಲದೇ ನೇಪಾಳದಲ್ಲಿರುವ ಭಾರತೀಯರಿಗೆ ಹೆಲ್ಪ್ ಲೈನ್ ನಂಬರ್ ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. https://kannadanewsnow.com/kannada/court-order-to-provide-additional-bed-and-pillow-for-actor-darshan-permission-to-speak/ https://kannadanewsnow.com/kannada/do-you-know-what-the-karnataka-congress-said-about-5250-new-electric-buses-from-the-centre-to-the-state-soon/
ಬೆಂಗಳೂರು: ನಟ ದರ್ಶನ್ ಕೋರಿಕೆಯಂತೆ ಕೋರ್ಟ್ ಅವರಿಗೆ ಹೆಚ್ಚುವರಿ ದಿಂಬು ಹಾಗೂ ಹಾಸಿಗೆ ನೀಡಲು ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಜೈಲಿನ ಒಳಗಡೆ ವಾಕ್ ಮಾಡಲು ಅವಕಾಶವನ್ನು ಕೂಡ ನೀಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರಿಸಲು ಕೋರಿದ್ದನ್ನು ನಿರಾಕರಿಸಿತು. ಈ ನಿರ್ಧರವು ಜೈಲು ಕೈಪಿಡಿಯಂತೆ ಜೈಲಿನ ಡಿಜಿಗೆ ಸಂಬಂಧಪಟ್ಟಿತ್ತು. ಅವರು ತೀರ್ಮಾನ ಕೈಗೊಳ್ಳಲು ತಿಳಿಸಿತು. ಇನ್ನೂ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲಿನಲ್ಲಿ ಹೆಚ್ಚುವರಿ ದಿಂಬು, ಹಾಸಿಗೆ ನೀಡುವಂತೆ ಕೋರಿದ್ದಕ್ಕೆ ಸಮ್ಮತಿಸಿದೆ. ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳಿಗೆ ಕೊಲೆ ಆರೋಪಿ ನಟ ದರ್ಶನ್ ಗೆ ಹೆಚ್ಚುವರಿ ದಿಂಬು, ಹಾಸಿಗೆ ನೀಡುವಂತೆ ಸೂಚಿಸಿದೆ. https://kannadanewsnow.com/kannada/maddur-ganesh-riot-case-mandya-bjp-district-president-dr-indresh-said-we-will-not-go-to-the-peace-meeting/ https://kannadanewsnow.com/kannada/actor-darshans-appeal-against-the-transfer-to-ballari-jail-from-parappana-agrahara-jail-rejected-by-the-high-court/
ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿತ್ತು. ಈ ಹಿನ್ನಲೆಯಲ್ಲಿ ಬಂದ್ ಕೂಡ ನಡೆಸಲಾಗಿತ್ತು. ಹೀಗಾಗಿ ಇಂದು ಶಾಂತಿ ಸಭೆಯನ್ನು ಕರೆಯಲಾಗಿತ್ತು. ಆದರೇ ಈ ಶಾಂತಿ ಸಭೆಗೆ ನಾವು ಹೋಗುವುದಿಲ್ಲ ಎಂಬುದಾಗಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಹೇಳಿದ್ದಾರೆ. ಇಂದು ಮದ್ದೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಹೀಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಇದೇ ವೇಳೆ ನಿನ್ನೆ ಪ್ರತಿಭಟನಾಕಾರ ಮೇಲೆ ಎಫ್ಐಆರ್ ಗೆ ಖಂಡನೆ ವ್ಯಕ್ತ ಪಡಿಸಿದಂತ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಯನ್ನು ಖಂಡಿಸಿದರು. 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ…
ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟದ ಬೆನ್ನಲ್ಲೇ ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲು ನಿರ್ಧರಿಸಲಾಗಿದೆ. ಈ ಮೆರವಣಿಗೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಎಂಬುದಾಗಿ ಮದ್ದೂರಿನಲ್ಲಿ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/actor-darshans-appeal-against-the-transfer-to-ballari-jail-from-parappana-agrahara-jail-rejected-by-the-high-court/ https://kannadanewsnow.com/kannada/do-you-know-what-the-karnataka-congress-said-about-5250-new-electric-buses-from-the-centre-to-the-state-soon/
ಬೆಂಗಳೂರು: ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದಂತ ಅರ್ಜಿಗೆ ಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಹೀಗಾಗಿ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲೇ ಗತಿಯಾದಂತೆ ಆಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಅವರು, ಬಳ್ಳಾರಿ ಜೈಲಿಗೆ ವರ್ಗಾವಣೆ ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ನ್ಯಾಯಪೀಠವು ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಕ್ಕೆ ನಿರಾಕರಿಸಿದೆ. ಹೀಗಾಗಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾದಂತೆ ಆಗಿದೆ. ಇನ್ನೂ ನಟ ದರ್ಶನ್ ಅವರಿಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಜೈಲು ಕೈಪಿಡಿಯಂತೆ ಅನುಮತಿ ನೀಡಿದೆ. ಜೊತೆಗೆ ಜೈಲಿನ ಒಳಗಡೆ ಓಡಾಡಲು ಅನುಮತಿ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ…
ಬೆಂಗಳೂರು: ಕೇಂದ್ರದಿಂದ ಬಿಗ್ ಗಿಫ್ಟ್, ರಾಜ್ಯಕ್ಕೆ ಶೀಘ್ರ 5250 ಹೊಸ ಎಲೆಕ್ಟ್ರಿಕ್ ಬಸ್ ಎಂಬುದು ಸುಳ್ಳು. ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ, ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ. ಕೇಂದ್ರ ಸರ್ಕಾರದಿಂದ ಬಸ್ ಖರೀದಿ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ಬಸ್ ಬಾಡಿಗೆಗೆ ವ್ಯವಸ್ಥೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ತಿರುಗೇಟು ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು ‘ಬಿಜೆಪಿ ಕರ್ನಾಟಕ ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದಿದೆ. PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ…
ಕೊಯಮತ್ತೂರು: “ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರದಂದು ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ” ಎಂದು ಹೇಳಿದರು. ಸುಪ್ರೀಂ ಕೋರ್ಟ್ ಆಧಾರ್ ಗುರುತಿನ ಚೀಟಿ 12ನೇ ದಾಖಲೆ ಎಂದು ಪರಿಗಣಿಸಿರುವ ಬಗ್ಗೆ ಕೇಳಿದಾಗ, “ಹೌದು, ಆಧಾರ್ ಗುರುತಿನ ಚೀಟಿ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯವಾದ ದಾಖಲೆ. ಈ ಹಿಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಈ ಯೋಜನೆ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲ ಮಾಡಿದೆ” ಎಂದು ಹೇಳಿದರು. https://kannadanewsnow.com/kannada/nepal-pm-kp-sharma-oli-resigns-amid-protests-in-country/
ನೇಪಾಳ: ಭ್ರಷ್ಟಾಚಾರ ಆರೋಪದ ಮೇಲೆ ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳ ಮೇಲಿನ ನಿಷೇಧ ಮತ್ತು ನಂತರ ಭ್ರಷ್ಟಾಚಾರದ ವಿರುದ್ಧ ನಡೆದ ಬೃಹತ್ ಪ್ರತಿಭಟನೆಗಳು ಸತತ ಎರಡನೇ ದಿನವೂ ಕಠ್ಮಂಡುವನ್ನು ಅಲುಗಾಡಿಸುತ್ತಲೇ ಇದ್ದವು ಮತ್ತು ಕೆಲವು ಸಚಿವರು ಸಂಪುಟದಿಂದ ಹಿಂದೆ ಸರಿದರು. ಓಲಿ ಅವರ ರಾಜೀನಾಮೆಗೆ ಒತ್ತಾಯಿಸಿ, ಪ್ರತಿಭಟನಾಕಾರರು ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಧಿಕ್ಕರಿಸಿ ಕಲಂಕಿಯಲ್ಲಿ ಬೆಳಗಿನ ಜಾವದಿಂದಲೇ ರಸ್ತೆಗಳನ್ನು ನಿರ್ಬಂಧಿಸಲು ಟೈರ್ಗಳನ್ನು ಸುಟ್ಟು ಹಾಕಿದರು ಎಂದು ವರದಿಯಾಗಿದೆ. ಪ್ರತಿಭಟನಾಕಾರರು “ಕೆ ಪಿ ಚೋರ್, ದೇಶ್ ಛೋಡ್” (ಕೆ ಪಿ ಶರ್ಮಾ ಓಲಿ ಒಬ್ಬ ಕಳ್ಳ, ದೇಶ ತೊರೆಯಿರಿ), “ಭ್ರಷ್ಟ ನಾಯಕರ ವಿರುದ್ಧ ಕ್ರಮ ಕೈಗೊಳ್ಳಿ” ಮುಂತಾದ ಘೋಷಣೆಗಳನ್ನು ಕೂಗಿದರು. ಚಳವಳಿಗಾರರು ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರ ನಿವಾಸಗಳನ್ನು ಗುರಿಯಾಗಿಸಿಕೊಂಡರು ಮತ್ತು ಗುರುಂಗ್ ಸೇರಿದಂತೆ ಹಲವಾರು ಸಚಿವರ ಮನೆಗಳನ್ನು ಗುರಿಯಾಗಿಸಿಕೊಂಡರು. ಈ ಬೆನ್ನಲ್ಲೇ ಭ್ರಷ್ಟಾಚಾರ ಆರೋಪದ…
OpenAI ಹೊಸ ಉದ್ಯೋಗ ಮಾರುಕಟ್ಟೆಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಇದು ವ್ಯವಹಾರಗಳು ಮತ್ತು ಉದ್ಯೋಗಿಗಳನ್ನು ಕೃತಕ ಬುದ್ಧಿಮತ್ತೆಯಿಂದ ಹೊಂದಿಸುವ ಆನ್ಲೈನ್ ವೇದಿಕೆಯಾಗಿದೆ. ಕಂಪನಿಯ ಸಿಇಒ ಸ್ಯಾಮ್ ಆಲ್ಟ್ಮನ್, ಟೆಕ್ಕ್ರಂಚ್ಗೆ OpenAI ಜಾಬ್ಸ್ ಪ್ಲಾಟ್ಫಾರ್ಮ್ ಎಂದು ಹೆಸರಿಸಲಾದ ಈ ವೇದಿಕೆಯನ್ನು ಮುಂದಿನ ವರ್ಷದ ಒಂದು ಹಂತದಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. ಇದು ವಿಭಿನ್ನವಾಗಿರುವ ರೀತಿ ನೋಟದಲ್ಲಿ ಮಾತ್ರವಲ್ಲ, ಅದರ ಹಿಂದಿನ ಮೋಟರ್ನಲ್ಲಿಯೂ ಇದೆ, ಕಂಪನಿಗಳು ಏನು ಬಯಸುತ್ತವೆ ಮತ್ತು ಅರ್ಜಿದಾರರು ಏನು ಒದಗಿಸಬಹುದು ಎಂಬುದನ್ನು ಹೊಂದಿಸಲು ತರಬೇತಿ ಪಡೆದ ಅಲ್ಗಾರಿದಮ್ಗಳಲ್ಲಿಯೂ ಇದೆ. OpenAI ನ ಅಪ್ಲಿಕೇಶನ್ಗಳ ಸಿಇಒ ಫಿಡ್ಜಿ ಸಿಮೊ ಈ ವಿಚಾರವನ್ನು ಬ್ಲಾಗ್ ಪೋಸ್ಟ್ನಲ್ಲಿ ವಿವರಿಸಿದರು. ಗುರಿ ಸರಳವಾಗಿದೆ: ‘ಪರಿಪೂರ್ಣ ಹೊಂದಾಣಿಕೆಗಳನ್ನು ಕಂಡುಹಿಡಿಯಲು ಸಹಾಯ ಮಾಡಿ’ ಎಂದು ಅವರು ಹೇಳಿದರು. ಈ ಪದಗುಚ್ಛದ ಹಿಂದೆ ದೊಡ್ಡ ಬದಲಾವಣೆ ಇದೆ. ವೇದಿಕೆಯು ಕೇವಲ ತಂತ್ರಜ್ಞಾನ ದೈತ್ಯರು ಅಥವಾ ಸಲಹಾ ಸಂಸ್ಥೆಗಳಿಗೆ ಸೇವೆ ಸಲ್ಲಿಸುವುದಿಲ್ಲ. ಇದು ಸಣ್ಣ ವ್ಯವಹಾರಗಳು, ಸ್ಥಳೀಯ ಸರ್ಕಾರಗಳು ಮತ್ತು ಸಮುದಾಯ ಸಂಸ್ಥೆಗಳೊಂದಿಗೆ…













