Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ. ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಅಂಚೆ ಕಚೇರಿಯಲ್ಲಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಕೆ ಕಾರಣ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು: ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಸಹಯೋಗ ನೀಡಿವೆ. 21ರಂದು ಬೆಳಿಗ್ಗೆ 11.30ಕ್ಕೆ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಸ್ಐಎಲ್ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಸಂಸದ ಸುನೀಲ್ ಬೋಸ್ ಭಾಗವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಶಿಲ್ಪನಾಗ್, ಎಸ್ಪಿ ಬಿ.ಟಿ.ಕವಿತಾ, ಜಿಪಂ ಸಿಇಒ ಮೋನಾ ರೋತ್,…
ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಆ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಪತ್ರಿಕಾ ಗೋಷ್ಠಿಯಲ್ಲಿ , ಬೆಂಗಳೂರು ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ನಡೆಯುತ್ತಿರುವ ರೈಲ್ವೆ ಮೂಲಸೌಕರ್ಯ ಯೋಜನೆಗಳು ಮತ್ತು ಅಂತಿಮ ಸ್ಥಳ ಸಮೀಕ್ಷೆಗೆ ಅನುಮೋದನೆ(Final Location Survey) ನೀಡಲಾದ ರೈಲ್ವೆ ಯೋಜನೆಗಳ ಕುರಿತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿವರ ನೀಡಿದರು. ಬೆಂಗಳೂರು ಕಂಟೋನ್ಮೆಂಟ್ ನಿಂದ ವೈಟ್ಫೀಲ್ಡ್ ಚತುಷ್ಪಥ ಹಳಿ ಯೋಜನೆಯು ಅಂದಾಜು ರೂ. 492.87 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಇದು 38 ಕಿಲೋಮೀಟರ್ ಒಳಗೊಂಡಿದೆ. ಇದರ ಸಂಪೂರ್ಣವನ್ನು ವೆಚ್ಚವನ್ನು ರೈಲ್ವೆ ಭರಿಸುತ್ತದೆ ಎಂದು ಅವರು ಮಾಹಿತಿ ನೀಡಿದರು. ಈ ಯೋಜನೆಯಲ್ಲಿ ಇದುವರೆಗೆ ಅರ್ಥ್ ವರ್ಕ್, ರೀಟೇನಿಂಗ್ ವಾಲ್ಸ್ ಮತ್ತು ಹಲವು ಸೇತುವೆ ವಿಸ್ತರಣೆ ಕಾಮಗಾರಿಗಳು ಸೇರಿದಂತೆ 75% ಕಾಮಗಾರಿಗಳು ಪೂರ್ಣಗೊಂಡಿವೆ. ಈ ಯೋಜನೆಯು ಈ…
ಬೆಂಗಳೂರು: ರಾಜ್ಯ ಸರ್ಕಾರವು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ನಡೆದಿದ್ದಂತ ಕಾಲ್ತುಳಿತ ದುರಂತದ ನಂತ್ರ ಎಚ್ಚೆತ್ತುಕೊಂಡಿದೆ. ಇಂತಹ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಹೊಸ ಕಾನೂನು ಜಾರಿಗೆ ತರಲು ಸಿದ್ಧವಾಗಿದೆ. ಈ ಕಾನೂನಿನ ಅನುಸಾರ ಕಾಲ್ತುಳಿತ ದುರಂತ ಸಂಭವಿದರೇ ಇನ್ಮುಂದೆ ಆಯೋಜಕರಿಗೆ 3 ವರ್ಷ ಜೈಲು, ಐದು ಲಕ್ಷದವರೆಗೆ ದಂಡ ವಿದಿಸುವಂತ ನಿಮಯವನ್ನು ಜಾರಿಗೆ ತರುತ್ತಿದೆ. ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ಕರ್ನಾಟಕ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025 ಎಂಬ ಹೊಸ ಶಾಸನವನ್ನು ಪ್ರಸ್ತಾಪಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾದ ಈ ಕರಡು ಮಸೂದೆಯು ದೊಡ್ಡ ಸಭೆಗಳನ್ನು ನಿಯಂತ್ರಿಸುವ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಕರಡು ಕಾನೂನು ಉಲ್ಲಂಘನೆಗಾಗಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳ ದಂಡ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಪ್ರಸ್ತಾಪಿಸುತ್ತದೆ. ರಾಜಕೀಯ ರ್ಯಾಲಿಗಳು ಮತ್ತು ಸಮ್ಮೇಳನಗಳಂತಹ ಕರ್ನಾಟಕದಲ್ಲಿ “ಪ್ರಾಯೋಜಿತ…
ಶಿವಮೊಗ್ಗ: ದಿನಾಂಕ:21-06-2025 ರಂದು 110/11ಕೆವಿ ಉಳವಿ ಸರಬರಾಜಾಗುವ ಕೇಂದ್ರದಿಂದ ವಿದ್ಯುತ್ ವಿದ್ಯುತ್ ಎಲ್ಲಾ ಫಿಡರ್ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು, 110/11ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ಅವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಎಫ್-1 ಬರಗಿ, ಎಫ್-2 ಕಾನಳ್ಳಿ, ಎಫ್-3 ಉಳವಿ, ಎಫ್-4 ಹೊಸಬಾಳ, ಎಫ್-5 ದೂಗೂರು ಫೀಡರ್ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/grow-more-trees-to-eliminate-the-shortage-of-pure-air-in-bengaluru-former-mlc-h-m-ramesh-gowda/ https://kannadanewsnow.com/kannada/breaking-the-state-government-has-moved-to-increase-the-reservation-for-muslims-in-the-housing-scheme-by-15/
ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಗಿಡವನ್ನು ನೆಡೋಣ ಮರವಾಗಿ ಬೆಳೆಸೋಣ’ ಎನ್ನುವ ಘೋಷವಾಕ್ಯದೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಸಸಿ ನೆಡುವ ಹಾಗೂ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಜಯನಗರ ಟಿ.ಬ್ಲಾಕ್ ನಲ್ಲಿರುವ ಚಾಮುಂಡಿ ಆಟದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೆ, ಈ ಸಂದರ್ಭದಲ್ಲಿ ಸಾವಿರಾರು ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ 2500ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅವುಗಳನ್ನು ಆರು ತಿಂಗಳ ಕಾಲ ಪೋಷಿಸುವ ಜವಾಬ್ದಾರಿಯನ್ನು ಜನತಾದಳ ಜಾತ್ಯತೀತ ಪಕ್ಷದ ನಗರ ಘಟಕದ ಕಾರ್ಯಕರ್ತರುಗಳು ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ಸಂಚಾರ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯದಿಂದ ತೀವ್ರ ಒತ್ತಡಕ್ಕೆ ತುತ್ತಾಗಿರುವ ಬೆಂಗಳೂರು ಮಹಾನಗರದಲ್ಲಿ ಶುದ್ಧ ಗಾಳಿಯ ಕೊರತೆ ಕಾಣಿಸುತ್ತಿದೆ. ಮುಂದಿನ ದಿನಗಳಲ್ಲಿ…
ತಾಯಿ ಮಹಾಲಕ್ಷ್ಮಿ ಹಣದ ಅಧಿಪತಿ. ಮಾತೆ ಮಹಾಲಕ್ಷ್ಮೀ ಯ ಕೃಪೆಗೆ ಪಾತ್ರರಾದರೆ ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ಹಣದ ವಿಚಾರದಲ್ಲಿ ಸಾಲವು ಒಂದು ದೊಡ್ಡ ಸಮಸ್ಯೆಯಾಗಿದೆ. ಆದಾಯದಲ್ಲಿ ಕೊರತೆಯಾದರೆ ಅದನ್ನು ಸರಿಪಡಿಸಿಕೊಳ್ಳಲು ಬೇರೆಯವರಿಂದ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಅಂತಹ ಸಾಲಗಳನ್ನು ಮರುಪಾವತಿಸಲು ನಗದು ಒಳಹರಿವು ಹೆಚ್ಚಾಗಬೇಕು. ಈ ಹಣದ ಹರಿವನ್ನು ಹೆಚ್ಚಿಸುವ ದೇವತೆ ತಾಯಿ ಮಹಾಲಕ್ಷ್ಮಿ. ನಾವು ಹೇಗೆ ನೋಡಿದರೂ, ಆರ್ಥಿಕವಾಗಿ ಏನೇ ಸಮಸ್ಯೆ ಇದ್ದರೂ ಜೀವನದಲ್ಲಿ ಒಳ್ಳೆಯ ಸ್ಥಾನಮಾನಕ್ಕೆ ಬರಬೇಕೆಂದು ಆಶೀರ್ವದಿಸುವ ದೇವತೆ ಮಾತೆ ಮಹಾಲಕ್ಷ್ಮೀ. ಅಂತಹ ಮಾತೆ ಮಹಾಲಕ್ಷ್ಮಿಯನ್ನು ಆಲೋಚಿಸಿ ಮಾಡಬಹುದಾದ ತಾಂತ್ರಿಕ ಪರಿಹಾರದ ಬಗ್ಗೆ ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ನೋಡಲಿದ್ದೇವೆ . ಅತ್ಯಂತ ಸರಳವಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ಮಾಡಬಹುದಾದ ಪರಿಹಾರವನ್ನು ತಾಂತ್ರಿಕ ಪರಿಹಾರ ಎಂದು ಕರೆಯಲಾಗುತ್ತದೆ. ಆ…
ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೃಥ್ವಿ.ಆರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತನಿಧಿ ಘಟಕ, ಸೊರಬ ತಾಲ್ಲೂಕು ಆರೋಗ್ಯಾಧಿಕಾರಿಗಳು, ದೂಗೂರು, ಉಳವಿ, ನಿಸರಾಣಿ, ಹೆಗ್ಗೋಡು ಗ್ರಾಮ ಪಂಚಾಯ್ತಿ, ಧರ್ಮಸ್ಥಳ ಸ್ವ ಸಹಾಯ ಸಂಘ, ಸ್ತ್ರೀಶಕ್ತಿ ಸಂಘ ಹಾಗೂ ಉಳವಿ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತರು ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಸರ್ಕಾರಿ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ, ಅವರ ಅವಲಂಬಿತರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ. ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಂತೋಷ್ ಸದ್ಗುರು ( Santhosh Sadguru ) ಸದಾ ಒಂದಿಲ್ಲೊಂದು ಹೊಸತಿನ ಪ್ರಯೋಗಕ್ಕಿಳಿಯುವ ಸೃಜನಶೀಲ ಕಲೆಗಾರ. ಆರ್ ಸಿ ಬಿ ತಂಡದ ಅಪ್ಪಟ ಅಭಿಮಾನಿ. ಅವರೀಗ ಮಲೆನಾಡಿನ ಹಸಿರ ಸೊಬಗನ್ನು ಪ್ರೇಕ್ಷಕರ ಮುಂದಿಡುವಂತ ಪ್ರಯತ್ನ ಮಾಡಿದ್ದಾರೆ. ಇದರ ಭಾಗವಾಗಿ ನಾಳೆ ಸಂಜೆ 7 ಗಂಟೆಗೆ ಅವರ ಮಲ್ನಾಡ್ ಯಾನ ಆಲ್ಬಂ ಸಾಂಗ್ ( Malnad Yana Alubum Song ) ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಬಗ್ಗೆ ಕನ್ನಡ ನ್ಯೂಸ್ ನೌ ಜೊತೆಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಮಲೆನಾಡಿಗೆ ತನ್ನದೇ ಆದಂತ ಭಾಷಣೆ, ಸಂಸ್ಕೃತಿ ಇದೆ. ಆ ಕಲ್ಚರ್ ಅನ್ನು ನೋಡುಗರಿಗೆ ಮಲ್ನಾಡ್ ಯಾನದ ಮೂಲಕ ತೋರಿಸುವಂತ ಪ್ರಯತ್ನವನ್ನು ಮಾಡಿದ್ದೇನೆ ಎಂದು ತಿಳಿಸಿದರು. ಮಲ್ನಾಡ್ ಯಾನ ಆಲ್ಬಂ ಸಾಂಗ್ ಅನ್ನು ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಶರಾವತಿ ಮುಳುಗಡೆ ಪ್ರದೇಶಗಳಲ್ಲಿ ಚಿತ್ರೀಕರಿಸಲಾಗಿದೆ. ಕಳೆದ ವರ್ಷ 2500 ಮಿಮೀ ಮಳೆಯಾಗಿತ್ತು. ಇದರ ನಡುವೆಯೂ ಚಿತ್ರೀಕರಿಸಿ, ಹಸಿರ ದೃಶ್ಯ…