Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿ ಬಿಗ್ ರಿಲೀಫ್ ನೀಡಿದೆ. ಶಾಸಕ ಉದಯ್ ಗರುಡಾಚಾರ್ ಅವರು ಚುನಾವಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ವಸೂಲಿ ಮಾಡಿದ್ದಂತ ದಂಡದ ಹಣವನ್ನು ಶಾಸಕರಿಗೆ ಹಿಂದಿರುಗಿಸುವಂತೆಯೂ ಹೈಕೋರ್ಟ್ ಆದೇಶಿಸಿದೆ. ಅಂದಹಾಗೇ ಶಾಸಕ ಉದಯ್ ಗರುಡಾಚಾರ್ ವಿರುದ್ಧ ವಿಚಾರಣಾ ನ್ಯಾಯಾಲಯವು 2 ತಿಂಗಳ ಶಿಕ್ಷೆಯನ್ನು ವಿಧಿಸಿತ್ತು. https://kannadanewsnow.com/kannada/shivamogga-mescom-complains-contact-these-numbers-for-suggestions/ https://kannadanewsnow.com/kannada/i-didnt-say-that-rahul-gandhi-on-wealth-redistribution-controversy/

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ/ಅಡಚಣೆಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಶಿವಮೊಗ್ಗ ಕಾ&ಪಾ ವೃತ್ತ. ಮ.ವಿ.ಸ.ಕಂ., ಅಧೀಕ್ಷಕ ಇಂಜಿನಿಯರ್ ಎಸ್.ಜಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912 ಮತ್ತು ಮೆಸ್ಕಾಂ ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ : 08182-225587/222369 ನ್ನು ಸಂಪರ್ಕಿಸಬಹುದಾಗಿದೆ. ಶಿವಮೊಗ್ಗ ನಗರ, ಗ್ರಾಮೀಣ, ತೀರ್ಥಹಳ್ಳಿ, ಕುಂಸಿ, ಹೊಳಲೂರು ವ್ಯಾಪ್ತಿ ಪ್ರದೇಶಕ್ಕೆ ಸಂಬಂಧಿಸಿದಂತೆ ವೀರೇಂದ್ರ ಹೆಚ್.ಆರ್. ಕಾ.ನಿ.ಇಂ.-9448289446. ಹರಿಗೆ, ವಿದ್ಯಾನಗರ, ಬಸವನಗುಡಿ, ನವುಲೆ ವ್ಯಾಪ್ತಿ ಪ್ರದೇಶಕ್ಕೆ ಸಂಬಂಧಿಸಿದಂತೆ ರವೀಂದ್ರ, ಸ.ಕಾ.ನಿ.ಇಂ.-9448289448. ಹರಿಗೆ, ವಿದ್ಯಾನಗರ, ಗಣಪತಿ ಲೇಔಟ್ – ನವೀನ್‍ಕುಮಾರ್-ಸ.ಇಂ.-9448289662. ಕುವೆಂಪುನಗರ, ಶಂಕರಮಠ ರಸ್ತೆ, ಬಸವನಗುಡಿ – ನಂದೀಶ್ ಕೆ.ಎಂ.-ಸ.ಇಂ.-9448289663. ನವುಲೆ, ಕೃಷ್ಣರಾಜನಗರ, ಎಲ್.ಬಿ.ಎಸ್.ನಗರ, ಜೆ.ಎನ್.ಎನ್.ಸಿ.ಇ., – ರವಿಕುಮಾರ್- ಸ.ಇಂ.-9448289675. ಕೋಟೆರಸ್ತೆ, ಗಾಂಧಿಬಜಾರ್, ಆರ್.ಎಂ.ಎಲ್.ನಗರ, ಮಂಡ್ಲಿ ವ್ಯಾಪ್ತಿ…

Read More

ನವದೆಹಲಿ: ನಾನು ಇಂದು ಲೋಕಸಭಾ ಚುನಾವಣಾ ಪ್ರಚಾರ ಭಾಷಣದ ವೇಳೆಯಲ್ಲಿ ಬಿಸಿಲ ಶಾಖದಿಂದ ಪ್ರಜ್ಞೆ ತಪ್ಪಿ ಬಿದ್ದು, ಅಸ್ವಸ್ಥಗೊಂಡಿದ್ದೆ. ಚಿಕಿತ್ಸೆ, ವಿಶ್ರಾಂತಿಯ ಬಳಿಕ ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಡಿ ಎಂಬುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಮಹಾರಾಷ್ಟ್ರದ ಪುಸಾದ್ನಲ್ಲಿ ನಡೆದ ರ್ಯಾಲಿಯಲ್ಲಿ, ಶಾಖದಿಂದಾಗಿ ನನಗೆ ಅಹಿತಕರ ಅನುಭವವಾಯಿತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಮುಂದಿನ ಸಭೆಯಲ್ಲಿ ಭಾಗವಹಿಸಲು ವರುದ್ ಗೆ ತೆರಳುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಅಂತ ಹೇಳಿದ್ದಾರೆ. https://twitter.com/nitin_gadkari/status/1783094371396817070 ಅಂದಹಾಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡ ನಿತಿನ್ ಗಡ್ಕರಿ ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಪ್ರಜ್ಞೆ ಕಳೆದುಕೊಂಡಿದ್ದರು. ಮೂಲಗಳು ಮತ್ತು ದೃಶ್ಯಗಳ ಪ್ರಕಾರ, ಗಡ್ಕರಿ ಭಾಷಣ ಮಾಡುವಾಗ ಇದ್ದಕ್ಕಿದ್ದಂತೆ ತಲೆತಿರುಗಲು ಪ್ರಾರಂಭಿಸಿದರು ಮತ್ತು ಕೆಳಗೆ ಬಿದ್ದರು.…

Read More

ಮುಂಬೈ : ರಿಲಯನ್ಸ್ ರೀಟೇಲ್ ನ ಸ್ಮಾರ್ಟ್- ಸ್ಮಾರ್ಟ್ ಬಜಾರ್ ಗೆ ಬರುವಂಥ ಗ್ರಾಹಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ ಎಂಬ ಅಂಶ ಇತ್ತೀಚಿನ ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಂಶದಿಂದ ತಿಳಿದುಬಂದಿದೆ. ರಿಲಯನ್ಸ್ ರೀಟೇಲ್ ದಿನಸಿ ಮೂಲಕ ಬರುವ ಆದಾಯ ಪ್ರಮಾಣ ಶೇ 31ರಷ್ಟು ಹೆಚ್ಚಾಗಿದೆ. ಸ್ಮಾರ್ಟ್- ಸ್ಮಾರ್ಟ್ ಬಜಾರ್ ನಿಂದ ನಡೆದ ಫುಲ್ ಪೈಸಾ ವಸೂಲ್ ಸೇಲ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 21ರಷ್ಟು ಮಾರಾಟ ಹೆಚ್ಚಾಗಿದೆ. ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಮಾರಾಟ ಬಹಳ ಹೆಚ್ಚಿರುತ್ತದೆ. ಆದರೆ ಹೋಳಿ ಹಬ್ಬದ ಮುಂಚಿನ ಮಾರಾಟವು ದೀಪಾವಳಿ ಸಂದರ್ಭವನ್ನು ಸಹ ಮೀರಿಸಿದೆ. ಅಂದ ಹಾಗೆ, ರಿಲಯನ್ಸ್ ಇಂಡಸ್ಟ್ರೀಸ್ ನಿಂದ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಈಚೆಗಷ್ಟೇ ಹೊರಬಂದಿದ್ದು, ಕಂಪನಿಯ ರೀಟೇಲ್ ವ್ಯವಹಾರದ ಅಂಗವಾದ ರಿಲಯನ್ಸ್ ರೀಟೇಲ್ ಬೆಳವಣಿಗೆ ಬಗ್ಗೆ ಹೂಡಿಕೆದಾರರಲ್ಲಿ ಹಾಗೂ ಗ್ರಾಹಕರಲ್ಲಿ ಕುತೂಹಲ ಮೂಡಿಸುವಂಥ ಬೆಳವಣಿಗೆಗಳು ಕಂಡುಬಂದಿವೆ. ಅವುಗಳ ಅಂಕಿ- ಅಂಶಗಳನ್ನು ನಿಮ್ಮೆದುರು ಇಡಲಾಗುತ್ತಿದೆ. ರಿಲಯನ್ಸ್ ರೀಟೇಲ್ ಇ-ಕಾಮರ್ಸ್ ಪ್ಲಾಟ್…

Read More

ನವದೆಹಲಿ: ಬ್ಯಾಂಕಿಂಗ್ ವಲಯದ ನಿಯಂತ್ರಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೊಟಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿದೆ. ಆನ್ಲೈನ್ ಅಥವಾ ಮೊಬೈಲ್ ಬ್ಯಾಂಕಿಂಗ್ ಚಾನೆಲ್ಗಳ ಮೂಲಕ ಹೊಸ ಗ್ರಾಹಕರನ್ನು ಸೇರಿಸದಂತೆ ಕೋಟಕ್ ಮಹೀಂದ್ರಾ ಬ್ಯಾಂಕ್ ಅನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಿಷೇಧಿಸಿದೆ. ಇದಲ್ಲದೆ, ಕೋಟಕ್ ಬ್ಯಾಂಕಿನ ಹೊಸ ಕ್ರೆಡಿಟ್ ಕಾರ್ಡ್ಗಳನ್ನು ನೀಡುವುದನ್ನು ನಿಲ್ಲಿಸಲು ಆರ್ಬಿಐ ನಿರ್ಧರಿಸಿದೆ. ಆದಾಗ್ಯೂ, ಕೊಟಕ್ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಗ್ರಾಹಕರು ಸೇರಿದಂತೆ ತನ್ನ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಎಲ್ಲಾ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುತ್ತದೆ ಎಂದು ಆರ್ಬಿಐ ಹೇಳಿದೆ. ಒಟ್ಟಾರೆಯಾಗಿ ಕೊಟಕ್ ಮಹೀಂದ್ರಾ ಬ್ಯಾಂಕ್ ಹೊಸ ಗ್ರಾಹಕರನ್ನು ಆನ್ ಬೋರ್ಡ್ ಮಾಡುವಂತಿಲ್ಲ, ಕ್ರೆಡಿಟ್ ಕಾರ್ಡ್ ಗಳನ್ನು ನೀಡುವಂತಿಲ್ಲ ಎಂದು ಆರ್ ಬಿಐ ನಿರ್ಬಂಧ ಹೇರಿದೆ. https://kannadanewsnow.com/kannada/union-minister-nitin-gadkari-falls-unconscious-during-lok-sabha-election-campaign-speech/ https://kannadanewsnow.com/kannada/i-didnt-say-that-rahul-gandhi-on-wealth-redistribution-controversy/

Read More

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡ ನಿತಿನ್ ಗಡ್ಕರಿ ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಪ್ರಜ್ಞೆ ಕಳೆದುಕೊಂಡಿದ್ದಾರೆ. ಮೂಲಗಳು ಮತ್ತು ದೃಶ್ಯಗಳ ಪ್ರಕಾರ, ಗಡ್ಕರಿ ಭಾಷಣ ಮಾಡುವಾಗ ಇದ್ದಕ್ಕಿದ್ದಂತೆ ತಲೆತಿರುಗಲು ಪ್ರಾರಂಭಿಸಿದರು ಮತ್ತು ಕೆಳಗೆ ಬಿದ್ದರು. ಅವರ ಪಕ್ಷದ ಕಾರ್ಯಕರ್ತರು ಅವರ ಮುಖದ ಮೇಲೆ ನೀರು ಚಿಮುಕಿಸಿ ವೇದಿಕೆಯಿಂದ ಕರೆದೊಯ್ದರು. ಮಹಾರಾಷ್ಟ್ರದ ಬುಲ್ಧಾನಾ, ಅಕೋಲಾ, ಅಮರಾವತಿ, ವಾರ್ಧಾ, ಹಿಂಗೋಲಿ, ನಾಂದೇಡ್ ಮತ್ತು ಪರ್ಭಾನಿ ಜೊತೆಗೆ ಏಪ್ರಿಲ್ 26 ರಂದು (ಶುಕ್ರವಾರ) ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಯವತ್ಮಾಲ್ನಲ್ಲಿ ಮತದಾನ ನಡೆಯಲಿದೆ. https://twitter.com/PTI_News/status/1783097091176153292 ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಮಹಾರಾಷ್ಟ್ರದ ಪುಸಾದ್ನಲ್ಲಿ ನಡೆದ ರ್ಯಾಲಿಯಲ್ಲಿ, ಶಾಖದಿಂದಾಗಿ ನನಗೆ ಅಹಿತಕರ ಅನುಭವವಾಯಿತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಮುಂದಿನ ಸಭೆಯಲ್ಲಿ ಭಾಗವಹಿಸಲು ವರುದ್…

Read More

ಬೆಂಗಳೂರು: ಏಪ್ರಿಲ್.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣ, ಉತ್ತರ ಅಂಕ ಗಳಿಸೋದಕ್ಕೆ ಪರೀಕ್ಷೆ ರಿಜೆಕ್ಟ್ ಮಾಡಿರೋರು, ಪರೀಕ್ಷೆ ಬರೆಯದೇ ಇರೋರು ಈಗ ಪರೀಕ್ಷೆ-2ಕ್ಕೆ ಹಾಜರಾಗಿ ಬರೆಯಬಹುದಾಗಿದೆ. ಈ ವಿದ್ಯಾರ್ಥಿಗಳಿಗಾಗಿ ಪ್ರವೇಶ ಪತ್ರವನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಶಾಲಾ ಪರೀಕ್ಷೆಗಳ ಇಲಾಖೆಯಿಂದ ಈ ಮಾಹಿತಿ ನೀಡಲಾಗಿದ್ದು, ಏಪ್ರಿಲ್.29ರಿಂದ ಆರಂಭಗೊಳ್ಳಲಿರುವಂತ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪ್ರವೇಶ ಪತ್ರವನ್ನು ಆನ್ ಲೈನ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ https://kseab.karnataka.gov.inಕ್ಕೆ ಭೇಟಿ ನೀಡಿ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಹೇಳಿದೆ. ಹೀಗೆ ಆನ್ ಲೈನ್ ನಲ್ಲೇ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಿ -ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿರುವಂತ ವಿದ್ಯಾರ್ಥಿಗಳು https://kseab.karnataka.gov.in ಜಾಲತಾಣಕ್ಕೆ ಭೇಟಿ ನೀಡಿ. -ಈ ಮೇಲ್ಕಂಡ ಲಿಂಕ್ ಗೆ ಭೇಟಿ ನೀಡಿ, ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರವೇಶ ಪತ್ರ ಡೌನ್ ಲೋಡ್ ಎನ್ನುವಲ್ಲಿ ಕ್ಲಿಕ್ ಮಾಡಿ. -ನೀವು ಈ ಬಳಿಕ ನಿಮಗೆ…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿಯೇ ಮಾಜಿ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು, ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ವಿಶ್ವಕರ್ಮ ಸಮುದಾಯದ ಪ್ರಬಲ ಮುಖಂಡ ಕೆ ಪಿ ನಂಜುಂಡಿ ಅವರು ಬಿಜೆಪಿ ಮತ್ತು ವಿಧಾನ ಪರಿಷತ್ ಸ್ಥಾನ ತೊರೆದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ತಿನ ಸದಸ್ಯ ದಿನೇಶ್ ಗೂಳಿಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಉಪಸ್ಥಿತರಿದ್ದರು. https://kannadanewsnow.com/kannada/i-didnt-say-that-rahul-gandhi-on-wealth-redistribution-controversy/ https://kannadanewsnow.com/kannada/western-media-thinks-of-themselves-as-part-of-indias-elections-jaishankar/

Read More

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಏಪ್ರಿಲ್ 24 ರಂದು ಆಸ್ತಿ ಪುನರ್ನಿರ್ಮಾಣ ಕಂಪನಿಗಳಿಗೆ (ಎಆರ್ಸಿ) ಮಾಸ್ಟರ್ ನಿರ್ದೇಶನವನ್ನು ಬಿಡುಗಡೆ ಮಾಡಿದೆ. ತಕ್ಷಣದಿಂದ ಜಾರಿಗೆ ಬಂದ ಇತ್ತೀಚಿನ ನಿರ್ದೇಶನಗಳಲ್ಲಿ, ಆರ್ಬಿಐ ಎಆರ್ಸಿಗಳಿಗೆ ಭದ್ರತೆಯನ್ನು ಪ್ರಾರಂಭಿಸಲು ಕನಿಷ್ಠ ಬಂಡವಾಳದ ಅಗತ್ಯವನ್ನು 300 ಕೋಟಿ ರೂ.ಗೆ ಹೆಚ್ಚಿಸಿದೆ. ಇದು 2022 ರ ಅಕ್ಟೋಬರ್ 11 ರಂದು 100 ಕೋಟಿ ರೂ ಆಗಿದೆ. ನಿರ್ದೇಶನಗಳ ಪ್ರಕಾರ, ಕನಿಷ್ಠ ಅಗತ್ಯವಿರುವ ನಿವ್ವಳ ಮಾಲೀಕತ್ವದ ನಿಧಿ (ಎನ್ಒಎಫ್) 300 ಕೋಟಿ ರೂ.ಗಳನ್ನು ಸಾಧಿಸಲು ಆರ್ಬಿಐ ಎಆರ್ಸಿಗಳಿಗೆ ಒಂದು ಮಾರ್ಗವನ್ನು ಒದಗಿಸಿದೆ. ಅಕ್ಟೋಬರ್ 11, 2022 ರ ವೇಳೆಗೆ ಕನಿಷ್ಠ ಎನ್ಒಎಫ್ 100 ಕೋಟಿ ರೂ.ಗಳಾಗಿರುವುದರಿಂದ, ಎಆರ್ಸಿಗಳು ಈಗ ಅದನ್ನು ಮಾರ್ಚ್ 31, 2024 ರೊಳಗೆ 200 ಕೋಟಿ ರೂ.ಗೆ ಮತ್ತು ಮಾರ್ಚ್ 31, 2026 ರೊಳಗೆ 300 ಕೋಟಿ ರೂ.ಗೆ ಹೆಚ್ಚಿಸಬೇಕಾಗಿದೆ. “ಸೆಕ್ಯುರಿಟೈಸೇಶನ್ ಅಥವಾ ಆಸ್ತಿ ಪುನರ್ನಿರ್ಮಾಣದ ವ್ಯವಹಾರವನ್ನು ಪ್ರಾರಂಭಿಸಲು, ಎಆರ್ಸಿ ಕನಿಷ್ಠ 300 ಕೋಟಿ ರೂ.ಗಳ…

Read More

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಾರ್ಮಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದು,ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೇಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ದಿನಾಂಕ:26.04.2024 (ಶುಕ್ರವಾರ) ರಂದು ನಿಗಧಿಯಾಗಿರುತ್ತದೆ ಎಂದಿದೆ. ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪುಕಾರ ಮತ ಚಲಾಯಿಸಲು…

Read More